Homeಮುಖಪುಟಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

ಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

- Advertisement -
- Advertisement -

ಕೊರೊನಾ ಸಮಯದಲ್ಲಿ ಪ್ರೇಕ್ಷಕರಿಗೆ ಮನರಂಜನೆ ನೀಡುವ ವಿಚಾರದಲ್ಲಿ ಒಟಿಟಿ ಪ್ಲಾಟ್ ಫಾರ್ಮ್‌ಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಈಗ ಒಟಿಟಿ ಪ್ಲಾಟ್ ಫಾರ್ಮ್‌ಗಳಲ್ಲಿ ವೈಜ್ಞಾನಿಕ ಕಲ್ಪನೆಯ ಚಿತ್ರಗಳದ್ದೇ ಅಧಿಪತ್ಯ. ಮನರಂಜನೆ ಕ್ಷೇತ್ರದಲ್ಲಿ ಎಲ್ಲಾ ಭಾಷೆಯ ಮುಖ್ಯವಾಗಿ ಹಾಲಿವುಡ್ ವೈಜ್ಞಾನಿಕ ಶೈಲಿಯ ಸಿನಿಮಾ ಹಾಗೂ ವೆಬ್ ಸಿರೀಸ್‌ಗಳಿಗೆ ವೀಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಇದರಿಂದ ಭಾರತೀಯ ಸಿನಿಮಾ ನಿರ್ದೇಶಕರು ಹೆಚ್ಚು ವೈಜ್ಞಾನಿಕ ಕಥೆಗಳ ಕಡೆಗೆ ಉತ್ಸುಕರಾಗಿದ್ದಾರೆ. ಇತ್ತೀಚಿಗೆ ಬಿಡುಗಡೆಯಾದ ಈ ಶೈಲಿಯ ಸಿನಿಮಾಗಳು ಒಳ್ಳೆ ಪ್ರದರ್ಶನ ಪಡೆದಿವೆ.

ಇದಕ್ಕೆ ಸಾಕ್ಷಿಯಾಗಿ ನಟ ಟೋವಿನೋ ಥಾಮಸ್ ಅಭಿನಯದ ಮಲಯಾಳಂನ ‘ಮಿನಲ್ ಮುರಳಿ’ ಚಿತ್ರ ಸೇರ್ಪಡೆಯಾಗಿದೆ. ಇದರಲ್ಲಿ ಒಬ್ಬ ಬಟ್ಟೆ ಹೊಲಿಯುವ ಟೈಲರ್ ಅತಿಮಾನುಷ ಶಕ್ತಿಗಳನ್ನು ಪಡೆದು ಸೂಪರ್ ಹೀರೋ ಆಗುವ ಕಥೆಯನ್ನು ಹೊಂದಿದ್ದು, ಚಿತ್ರಕ್ಕೆ ಬೆಸಿಲ್ ಜೋಸೆಫ್ ಅವರ ನಿರ್ದೇಶನವಿದೆ. ಜಗತ್ತಿನಾದ್ಯಾಂತ 30 ದೇಶಗಳ ಒಟಿಟಿ ಪ್ಲಾಟ್ ಫಾರ್ಮ್‌ಗಳಲ್ಲಿ ‘ಮಿನಲ್ ಮುರಳಿ’ ಸಿನಿಮಾ ಟಾಪ್ 10 ರಲ್ಲಿ ಸ್ಥಾನ ಪಡೆದಿದೆ.

“ಸದ್ಯ ವಿಶ್ವಾದ್ಯಂತ ಸಿನಿಮಾ ನಿರ್ದೇಶಕರಿಗೆ ತಮ್ಮ ಚಿತ್ರವನ್ನು ಪ್ರಸ್ತುತ ಪಡಿಸಲು ಅನೇಕ ಅನಿರೀಕ್ಷಿತ ಅವಕಾಶಗಳು ಸಿಕ್ಕವೆ. ಅದಕ್ಕೆ ಉದಾಹರಣೆ ಎಂಬಂತೆ ‘ಮಿನಲ್ ಮುರಳಿ’ ಸಿನಿಮಾ ಮೂಡಿಬಂದಿದೆ” ಎಂದು ನಟ ಥಾಮಸ್ ತಿಳಿಸಿದ್ದಾರೆ.

2020 ರಲ್ಲಿ ತೆರೆ ಕಂಡ ‘ಕಾರ್ಗೋ’ ಸಿನಿಮಾದಲ್ಲಿ ಪುಷ್ಪಕ್ 634A ಎಂಬ ಹೆಸರಿನ ಬಾಹ್ಯಾಕಾಶ ನೌಕೆಯಲ್ಲಿ ನಡೆಯುವ ಕತೆಯಿದೆ. ವಿಜ್ಞಾನಿ ಪ್ರಹಸ್ತ ಮತ್ತು ಅವರ ಸಹಾಯಕಿಯಾಗಿರುವ ಮಹಿಳಾ ಗಗನಯಾತ್ರಿ ಸೇರಿ ಮರಣೋತ್ತರ ಸೇವೆ ನೀಡುವ ಕರ್ತವ್ಯ ನಿಭಾಯಿಸುತ್ತಾರೆ. ಸತ್ತವರನ್ನು ಬದುಕಿಸಿ ಪುನರ್ಜನ್ಮ ನೀಡುವ ಕತೆಯನ್ನು ಸಿನಿಮಾದಲ್ಲಿ ನಿರೂಪಿಸಲಾಗಿದೆ. ಈ ಸಿನಿಮಾಕ್ಕೆ ಆರತಿ ಕಡವ್ ನಿರ್ದೇಶನವಿದೆ. ಚಿತ್ರದಲ್ಲಿ ನಟ ವಿಕ್ರಾಂತ್ ಮಸ್ಸೆ ಮತ್ತು ನಟಿ ಶ್ವೇತಾ ತ್ರಿಪಾಠಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ಸದ್ಯ ಬಿಡುಗಡೆಯಾದ ‘ಜೆಎಲ್ 50’, ‘ಭನ್ವರ್’, ಮತ್ತು ‘ಓಕೆ ಕಂಪ್ಯೂಟರ್’ ಯೋಜನೆಗಳು ವೈಜ್ಙಾನಿಕ ಕಲ್ಪನೆಯ ಕಥಾಹಂದರವನ್ನು ಹೊಂದಿದ್ದು, ಈ ಚಿತ್ರಗಳಲ್ಲಿ ನಟ ಅಭಯ್ ಡಿಯೊಲ್, ನಟ ವಿಜಯ್ ವರ್ಮ ಮತ್ತು ನಟಿ ರಾಧಿಕಾ ಆಪ್ಟೇ ಅಭಿನಯಿಸಿದ್ದಾರೆ.

“ಇಂತಹ ಸಿನಿಮಾಗಳಲ್ಲಿ ನಟಿಸಲು ತುಂಬ ಕಾತುರನಾಗಿದ್ದೆ. ದೇಶದ ಅಪ್ರತಿಮ ನಿರ್ದೇಶಕರು ಮತ್ತು ಬರಹಗಾರರ ಜೊತೆಗೆ ಕೆಲಸ ಮಾಡಿರುವುದು ಖುಷಿ ತಂದಿದೆ. ಈ ರೀತಿಯ ವೈಜ್ಞಾನಿಕ ಚಿತ್ರಗಳು ದೇಶದಲ್ಲಿ ಹೊಸ ಆರಂಭಕ್ಕೆ ಮುನ್ನುಡಿಯಾಗಲಿವೆ” ಎಂದು ನಟ ವಿಜಯ್ ವರ್ಮ ಹೇಳಿದ್ಧಾರೆ.

ಇದೇ ಸಾಲಿಗೆ ಸೇರಲಿರುವ ತೆಲುಗಿನ ಯೋಜನೆ ‘ಕುಡಿ ಯೆಡಮೈಥೆ’ ವೆಬ್ ಸಿರೀಸ್ ಬಂದಿದೆ. ಇದರಲ್ಲಿ ಅಪಹರಣ ದಂಧೆಯನ್ನು ಪತ್ತೆಹಚ್ಚುವ ಇಬ್ಬರು ನಾಯಕರ ಕತೆಯಿದೆ. ಸಿನಿಮಾಗೆ ಪವನ್ ಕುಮಾರ್ ನಿರ್ದೇಶನವಿದೆ. ಈ ವೆಬ್ ಸಿರೀಸ್‌ನಲ್ಲಿ ನಟ ರಾಹುಲ್ ವಿಜಯ್ ಮತ್ತು ನಟಿ ಅಮಲಾ ಪೌಲ್ ಅಭಿನಯಿಸಿದ್ದಾರೆ.

“ಪ್ರೇಕ್ಷಕರನ್ನು ಕುತೂಹಲದಿಂದ ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಕೇವಲ ವೈಜ್ಞಾನಿಕ ಕಥಾ ಹಂದರದ ಸಿನಿಮಾ, ವೆಬ್ ಸಿರೀಸ್‌ಗಳಿಗೆ ಮಾತ್ರ ಇದೆ. ಇಂತಹವುಗಳಲ್ಲಿ ಪ್ರೇಕ್ಷಕ ಅದರೊಳಗೆ ಪ್ರಯಾಣಿಸಿ ಆನಂದಿಸುತ್ತಾನೆ. ಈ ರೀತಿಯ ಕಥೆಗಳನ್ನು ತೆರೆ ಮೇಲೆ ತರಲು ತುಂಬ ಶ್ರಮ ಅಗತ್ಯವಿದೆ” ಎಂದು ನಿರ್ದೇಶಕ ಪವನ್ ಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...