Homeಮುಖಪುಟಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

ಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

- Advertisement -
- Advertisement -

ಕೊರೊನಾ ಸಮಯದಲ್ಲಿ ಪ್ರೇಕ್ಷಕರಿಗೆ ಮನರಂಜನೆ ನೀಡುವ ವಿಚಾರದಲ್ಲಿ ಒಟಿಟಿ ಪ್ಲಾಟ್ ಫಾರ್ಮ್‌ಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಈಗ ಒಟಿಟಿ ಪ್ಲಾಟ್ ಫಾರ್ಮ್‌ಗಳಲ್ಲಿ ವೈಜ್ಞಾನಿಕ ಕಲ್ಪನೆಯ ಚಿತ್ರಗಳದ್ದೇ ಅಧಿಪತ್ಯ. ಮನರಂಜನೆ ಕ್ಷೇತ್ರದಲ್ಲಿ ಎಲ್ಲಾ ಭಾಷೆಯ ಮುಖ್ಯವಾಗಿ ಹಾಲಿವುಡ್ ವೈಜ್ಞಾನಿಕ ಶೈಲಿಯ ಸಿನಿಮಾ ಹಾಗೂ ವೆಬ್ ಸಿರೀಸ್‌ಗಳಿಗೆ ವೀಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಇದರಿಂದ ಭಾರತೀಯ ಸಿನಿಮಾ ನಿರ್ದೇಶಕರು ಹೆಚ್ಚು ವೈಜ್ಞಾನಿಕ ಕಥೆಗಳ ಕಡೆಗೆ ಉತ್ಸುಕರಾಗಿದ್ದಾರೆ. ಇತ್ತೀಚಿಗೆ ಬಿಡುಗಡೆಯಾದ ಈ ಶೈಲಿಯ ಸಿನಿಮಾಗಳು ಒಳ್ಳೆ ಪ್ರದರ್ಶನ ಪಡೆದಿವೆ.

ಇದಕ್ಕೆ ಸಾಕ್ಷಿಯಾಗಿ ನಟ ಟೋವಿನೋ ಥಾಮಸ್ ಅಭಿನಯದ ಮಲಯಾಳಂನ ‘ಮಿನಲ್ ಮುರಳಿ’ ಚಿತ್ರ ಸೇರ್ಪಡೆಯಾಗಿದೆ. ಇದರಲ್ಲಿ ಒಬ್ಬ ಬಟ್ಟೆ ಹೊಲಿಯುವ ಟೈಲರ್ ಅತಿಮಾನುಷ ಶಕ್ತಿಗಳನ್ನು ಪಡೆದು ಸೂಪರ್ ಹೀರೋ ಆಗುವ ಕಥೆಯನ್ನು ಹೊಂದಿದ್ದು, ಚಿತ್ರಕ್ಕೆ ಬೆಸಿಲ್ ಜೋಸೆಫ್ ಅವರ ನಿರ್ದೇಶನವಿದೆ. ಜಗತ್ತಿನಾದ್ಯಾಂತ 30 ದೇಶಗಳ ಒಟಿಟಿ ಪ್ಲಾಟ್ ಫಾರ್ಮ್‌ಗಳಲ್ಲಿ ‘ಮಿನಲ್ ಮುರಳಿ’ ಸಿನಿಮಾ ಟಾಪ್ 10 ರಲ್ಲಿ ಸ್ಥಾನ ಪಡೆದಿದೆ.

“ಸದ್ಯ ವಿಶ್ವಾದ್ಯಂತ ಸಿನಿಮಾ ನಿರ್ದೇಶಕರಿಗೆ ತಮ್ಮ ಚಿತ್ರವನ್ನು ಪ್ರಸ್ತುತ ಪಡಿಸಲು ಅನೇಕ ಅನಿರೀಕ್ಷಿತ ಅವಕಾಶಗಳು ಸಿಕ್ಕವೆ. ಅದಕ್ಕೆ ಉದಾಹರಣೆ ಎಂಬಂತೆ ‘ಮಿನಲ್ ಮುರಳಿ’ ಸಿನಿಮಾ ಮೂಡಿಬಂದಿದೆ” ಎಂದು ನಟ ಥಾಮಸ್ ತಿಳಿಸಿದ್ದಾರೆ.

2020 ರಲ್ಲಿ ತೆರೆ ಕಂಡ ‘ಕಾರ್ಗೋ’ ಸಿನಿಮಾದಲ್ಲಿ ಪುಷ್ಪಕ್ 634A ಎಂಬ ಹೆಸರಿನ ಬಾಹ್ಯಾಕಾಶ ನೌಕೆಯಲ್ಲಿ ನಡೆಯುವ ಕತೆಯಿದೆ. ವಿಜ್ಞಾನಿ ಪ್ರಹಸ್ತ ಮತ್ತು ಅವರ ಸಹಾಯಕಿಯಾಗಿರುವ ಮಹಿಳಾ ಗಗನಯಾತ್ರಿ ಸೇರಿ ಮರಣೋತ್ತರ ಸೇವೆ ನೀಡುವ ಕರ್ತವ್ಯ ನಿಭಾಯಿಸುತ್ತಾರೆ. ಸತ್ತವರನ್ನು ಬದುಕಿಸಿ ಪುನರ್ಜನ್ಮ ನೀಡುವ ಕತೆಯನ್ನು ಸಿನಿಮಾದಲ್ಲಿ ನಿರೂಪಿಸಲಾಗಿದೆ. ಈ ಸಿನಿಮಾಕ್ಕೆ ಆರತಿ ಕಡವ್ ನಿರ್ದೇಶನವಿದೆ. ಚಿತ್ರದಲ್ಲಿ ನಟ ವಿಕ್ರಾಂತ್ ಮಸ್ಸೆ ಮತ್ತು ನಟಿ ಶ್ವೇತಾ ತ್ರಿಪಾಠಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ಸದ್ಯ ಬಿಡುಗಡೆಯಾದ ‘ಜೆಎಲ್ 50’, ‘ಭನ್ವರ್’, ಮತ್ತು ‘ಓಕೆ ಕಂಪ್ಯೂಟರ್’ ಯೋಜನೆಗಳು ವೈಜ್ಙಾನಿಕ ಕಲ್ಪನೆಯ ಕಥಾಹಂದರವನ್ನು ಹೊಂದಿದ್ದು, ಈ ಚಿತ್ರಗಳಲ್ಲಿ ನಟ ಅಭಯ್ ಡಿಯೊಲ್, ನಟ ವಿಜಯ್ ವರ್ಮ ಮತ್ತು ನಟಿ ರಾಧಿಕಾ ಆಪ್ಟೇ ಅಭಿನಯಿಸಿದ್ದಾರೆ.

“ಇಂತಹ ಸಿನಿಮಾಗಳಲ್ಲಿ ನಟಿಸಲು ತುಂಬ ಕಾತುರನಾಗಿದ್ದೆ. ದೇಶದ ಅಪ್ರತಿಮ ನಿರ್ದೇಶಕರು ಮತ್ತು ಬರಹಗಾರರ ಜೊತೆಗೆ ಕೆಲಸ ಮಾಡಿರುವುದು ಖುಷಿ ತಂದಿದೆ. ಈ ರೀತಿಯ ವೈಜ್ಞಾನಿಕ ಚಿತ್ರಗಳು ದೇಶದಲ್ಲಿ ಹೊಸ ಆರಂಭಕ್ಕೆ ಮುನ್ನುಡಿಯಾಗಲಿವೆ” ಎಂದು ನಟ ವಿಜಯ್ ವರ್ಮ ಹೇಳಿದ್ಧಾರೆ.

ಇದೇ ಸಾಲಿಗೆ ಸೇರಲಿರುವ ತೆಲುಗಿನ ಯೋಜನೆ ‘ಕುಡಿ ಯೆಡಮೈಥೆ’ ವೆಬ್ ಸಿರೀಸ್ ಬಂದಿದೆ. ಇದರಲ್ಲಿ ಅಪಹರಣ ದಂಧೆಯನ್ನು ಪತ್ತೆಹಚ್ಚುವ ಇಬ್ಬರು ನಾಯಕರ ಕತೆಯಿದೆ. ಸಿನಿಮಾಗೆ ಪವನ್ ಕುಮಾರ್ ನಿರ್ದೇಶನವಿದೆ. ಈ ವೆಬ್ ಸಿರೀಸ್‌ನಲ್ಲಿ ನಟ ರಾಹುಲ್ ವಿಜಯ್ ಮತ್ತು ನಟಿ ಅಮಲಾ ಪೌಲ್ ಅಭಿನಯಿಸಿದ್ದಾರೆ.

“ಪ್ರೇಕ್ಷಕರನ್ನು ಕುತೂಹಲದಿಂದ ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಕೇವಲ ವೈಜ್ಞಾನಿಕ ಕಥಾ ಹಂದರದ ಸಿನಿಮಾ, ವೆಬ್ ಸಿರೀಸ್‌ಗಳಿಗೆ ಮಾತ್ರ ಇದೆ. ಇಂತಹವುಗಳಲ್ಲಿ ಪ್ರೇಕ್ಷಕ ಅದರೊಳಗೆ ಪ್ರಯಾಣಿಸಿ ಆನಂದಿಸುತ್ತಾನೆ. ಈ ರೀತಿಯ ಕಥೆಗಳನ್ನು ತೆರೆ ಮೇಲೆ ತರಲು ತುಂಬ ಶ್ರಮ ಅಗತ್ಯವಿದೆ” ಎಂದು ನಿರ್ದೇಶಕ ಪವನ್ ಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...