Homeಮುಖಪುಟಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

ಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

- Advertisement -
- Advertisement -

ಕೊರೊನಾ ಸಮಯದಲ್ಲಿ ಪ್ರೇಕ್ಷಕರಿಗೆ ಮನರಂಜನೆ ನೀಡುವ ವಿಚಾರದಲ್ಲಿ ಒಟಿಟಿ ಪ್ಲಾಟ್ ಫಾರ್ಮ್‌ಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಈಗ ಒಟಿಟಿ ಪ್ಲಾಟ್ ಫಾರ್ಮ್‌ಗಳಲ್ಲಿ ವೈಜ್ಞಾನಿಕ ಕಲ್ಪನೆಯ ಚಿತ್ರಗಳದ್ದೇ ಅಧಿಪತ್ಯ. ಮನರಂಜನೆ ಕ್ಷೇತ್ರದಲ್ಲಿ ಎಲ್ಲಾ ಭಾಷೆಯ ಮುಖ್ಯವಾಗಿ ಹಾಲಿವುಡ್ ವೈಜ್ಞಾನಿಕ ಶೈಲಿಯ ಸಿನಿಮಾ ಹಾಗೂ ವೆಬ್ ಸಿರೀಸ್‌ಗಳಿಗೆ ವೀಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಇದರಿಂದ ಭಾರತೀಯ ಸಿನಿಮಾ ನಿರ್ದೇಶಕರು ಹೆಚ್ಚು ವೈಜ್ಞಾನಿಕ ಕಥೆಗಳ ಕಡೆಗೆ ಉತ್ಸುಕರಾಗಿದ್ದಾರೆ. ಇತ್ತೀಚಿಗೆ ಬಿಡುಗಡೆಯಾದ ಈ ಶೈಲಿಯ ಸಿನಿಮಾಗಳು ಒಳ್ಳೆ ಪ್ರದರ್ಶನ ಪಡೆದಿವೆ.

ಇದಕ್ಕೆ ಸಾಕ್ಷಿಯಾಗಿ ನಟ ಟೋವಿನೋ ಥಾಮಸ್ ಅಭಿನಯದ ಮಲಯಾಳಂನ ‘ಮಿನಲ್ ಮುರಳಿ’ ಚಿತ್ರ ಸೇರ್ಪಡೆಯಾಗಿದೆ. ಇದರಲ್ಲಿ ಒಬ್ಬ ಬಟ್ಟೆ ಹೊಲಿಯುವ ಟೈಲರ್ ಅತಿಮಾನುಷ ಶಕ್ತಿಗಳನ್ನು ಪಡೆದು ಸೂಪರ್ ಹೀರೋ ಆಗುವ ಕಥೆಯನ್ನು ಹೊಂದಿದ್ದು, ಚಿತ್ರಕ್ಕೆ ಬೆಸಿಲ್ ಜೋಸೆಫ್ ಅವರ ನಿರ್ದೇಶನವಿದೆ. ಜಗತ್ತಿನಾದ್ಯಾಂತ 30 ದೇಶಗಳ ಒಟಿಟಿ ಪ್ಲಾಟ್ ಫಾರ್ಮ್‌ಗಳಲ್ಲಿ ‘ಮಿನಲ್ ಮುರಳಿ’ ಸಿನಿಮಾ ಟಾಪ್ 10 ರಲ್ಲಿ ಸ್ಥಾನ ಪಡೆದಿದೆ.

“ಸದ್ಯ ವಿಶ್ವಾದ್ಯಂತ ಸಿನಿಮಾ ನಿರ್ದೇಶಕರಿಗೆ ತಮ್ಮ ಚಿತ್ರವನ್ನು ಪ್ರಸ್ತುತ ಪಡಿಸಲು ಅನೇಕ ಅನಿರೀಕ್ಷಿತ ಅವಕಾಶಗಳು ಸಿಕ್ಕವೆ. ಅದಕ್ಕೆ ಉದಾಹರಣೆ ಎಂಬಂತೆ ‘ಮಿನಲ್ ಮುರಳಿ’ ಸಿನಿಮಾ ಮೂಡಿಬಂದಿದೆ” ಎಂದು ನಟ ಥಾಮಸ್ ತಿಳಿಸಿದ್ದಾರೆ.

2020 ರಲ್ಲಿ ತೆರೆ ಕಂಡ ‘ಕಾರ್ಗೋ’ ಸಿನಿಮಾದಲ್ಲಿ ಪುಷ್ಪಕ್ 634A ಎಂಬ ಹೆಸರಿನ ಬಾಹ್ಯಾಕಾಶ ನೌಕೆಯಲ್ಲಿ ನಡೆಯುವ ಕತೆಯಿದೆ. ವಿಜ್ಞಾನಿ ಪ್ರಹಸ್ತ ಮತ್ತು ಅವರ ಸಹಾಯಕಿಯಾಗಿರುವ ಮಹಿಳಾ ಗಗನಯಾತ್ರಿ ಸೇರಿ ಮರಣೋತ್ತರ ಸೇವೆ ನೀಡುವ ಕರ್ತವ್ಯ ನಿಭಾಯಿಸುತ್ತಾರೆ. ಸತ್ತವರನ್ನು ಬದುಕಿಸಿ ಪುನರ್ಜನ್ಮ ನೀಡುವ ಕತೆಯನ್ನು ಸಿನಿಮಾದಲ್ಲಿ ನಿರೂಪಿಸಲಾಗಿದೆ. ಈ ಸಿನಿಮಾಕ್ಕೆ ಆರತಿ ಕಡವ್ ನಿರ್ದೇಶನವಿದೆ. ಚಿತ್ರದಲ್ಲಿ ನಟ ವಿಕ್ರಾಂತ್ ಮಸ್ಸೆ ಮತ್ತು ನಟಿ ಶ್ವೇತಾ ತ್ರಿಪಾಠಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ಸದ್ಯ ಬಿಡುಗಡೆಯಾದ ‘ಜೆಎಲ್ 50’, ‘ಭನ್ವರ್’, ಮತ್ತು ‘ಓಕೆ ಕಂಪ್ಯೂಟರ್’ ಯೋಜನೆಗಳು ವೈಜ್ಙಾನಿಕ ಕಲ್ಪನೆಯ ಕಥಾಹಂದರವನ್ನು ಹೊಂದಿದ್ದು, ಈ ಚಿತ್ರಗಳಲ್ಲಿ ನಟ ಅಭಯ್ ಡಿಯೊಲ್, ನಟ ವಿಜಯ್ ವರ್ಮ ಮತ್ತು ನಟಿ ರಾಧಿಕಾ ಆಪ್ಟೇ ಅಭಿನಯಿಸಿದ್ದಾರೆ.

“ಇಂತಹ ಸಿನಿಮಾಗಳಲ್ಲಿ ನಟಿಸಲು ತುಂಬ ಕಾತುರನಾಗಿದ್ದೆ. ದೇಶದ ಅಪ್ರತಿಮ ನಿರ್ದೇಶಕರು ಮತ್ತು ಬರಹಗಾರರ ಜೊತೆಗೆ ಕೆಲಸ ಮಾಡಿರುವುದು ಖುಷಿ ತಂದಿದೆ. ಈ ರೀತಿಯ ವೈಜ್ಞಾನಿಕ ಚಿತ್ರಗಳು ದೇಶದಲ್ಲಿ ಹೊಸ ಆರಂಭಕ್ಕೆ ಮುನ್ನುಡಿಯಾಗಲಿವೆ” ಎಂದು ನಟ ವಿಜಯ್ ವರ್ಮ ಹೇಳಿದ್ಧಾರೆ.

ಇದೇ ಸಾಲಿಗೆ ಸೇರಲಿರುವ ತೆಲುಗಿನ ಯೋಜನೆ ‘ಕುಡಿ ಯೆಡಮೈಥೆ’ ವೆಬ್ ಸಿರೀಸ್ ಬಂದಿದೆ. ಇದರಲ್ಲಿ ಅಪಹರಣ ದಂಧೆಯನ್ನು ಪತ್ತೆಹಚ್ಚುವ ಇಬ್ಬರು ನಾಯಕರ ಕತೆಯಿದೆ. ಸಿನಿಮಾಗೆ ಪವನ್ ಕುಮಾರ್ ನಿರ್ದೇಶನವಿದೆ. ಈ ವೆಬ್ ಸಿರೀಸ್‌ನಲ್ಲಿ ನಟ ರಾಹುಲ್ ವಿಜಯ್ ಮತ್ತು ನಟಿ ಅಮಲಾ ಪೌಲ್ ಅಭಿನಯಿಸಿದ್ದಾರೆ.

“ಪ್ರೇಕ್ಷಕರನ್ನು ಕುತೂಹಲದಿಂದ ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಕೇವಲ ವೈಜ್ಞಾನಿಕ ಕಥಾ ಹಂದರದ ಸಿನಿಮಾ, ವೆಬ್ ಸಿರೀಸ್‌ಗಳಿಗೆ ಮಾತ್ರ ಇದೆ. ಇಂತಹವುಗಳಲ್ಲಿ ಪ್ರೇಕ್ಷಕ ಅದರೊಳಗೆ ಪ್ರಯಾಣಿಸಿ ಆನಂದಿಸುತ್ತಾನೆ. ಈ ರೀತಿಯ ಕಥೆಗಳನ್ನು ತೆರೆ ಮೇಲೆ ತರಲು ತುಂಬ ಶ್ರಮ ಅಗತ್ಯವಿದೆ” ಎಂದು ನಿರ್ದೇಶಕ ಪವನ್ ಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...