Homeಮುಖಪುಟಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

ಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

- Advertisement -
- Advertisement -

ಕೊರೊನಾ ಸಮಯದಲ್ಲಿ ಪ್ರೇಕ್ಷಕರಿಗೆ ಮನರಂಜನೆ ನೀಡುವ ವಿಚಾರದಲ್ಲಿ ಒಟಿಟಿ ಪ್ಲಾಟ್ ಫಾರ್ಮ್‌ಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಈಗ ಒಟಿಟಿ ಪ್ಲಾಟ್ ಫಾರ್ಮ್‌ಗಳಲ್ಲಿ ವೈಜ್ಞಾನಿಕ ಕಲ್ಪನೆಯ ಚಿತ್ರಗಳದ್ದೇ ಅಧಿಪತ್ಯ. ಮನರಂಜನೆ ಕ್ಷೇತ್ರದಲ್ಲಿ ಎಲ್ಲಾ ಭಾಷೆಯ ಮುಖ್ಯವಾಗಿ ಹಾಲಿವುಡ್ ವೈಜ್ಞಾನಿಕ ಶೈಲಿಯ ಸಿನಿಮಾ ಹಾಗೂ ವೆಬ್ ಸಿರೀಸ್‌ಗಳಿಗೆ ವೀಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಇದರಿಂದ ಭಾರತೀಯ ಸಿನಿಮಾ ನಿರ್ದೇಶಕರು ಹೆಚ್ಚು ವೈಜ್ಞಾನಿಕ ಕಥೆಗಳ ಕಡೆಗೆ ಉತ್ಸುಕರಾಗಿದ್ದಾರೆ. ಇತ್ತೀಚಿಗೆ ಬಿಡುಗಡೆಯಾದ ಈ ಶೈಲಿಯ ಸಿನಿಮಾಗಳು ಒಳ್ಳೆ ಪ್ರದರ್ಶನ ಪಡೆದಿವೆ.

ಇದಕ್ಕೆ ಸಾಕ್ಷಿಯಾಗಿ ನಟ ಟೋವಿನೋ ಥಾಮಸ್ ಅಭಿನಯದ ಮಲಯಾಳಂನ ‘ಮಿನಲ್ ಮುರಳಿ’ ಚಿತ್ರ ಸೇರ್ಪಡೆಯಾಗಿದೆ. ಇದರಲ್ಲಿ ಒಬ್ಬ ಬಟ್ಟೆ ಹೊಲಿಯುವ ಟೈಲರ್ ಅತಿಮಾನುಷ ಶಕ್ತಿಗಳನ್ನು ಪಡೆದು ಸೂಪರ್ ಹೀರೋ ಆಗುವ ಕಥೆಯನ್ನು ಹೊಂದಿದ್ದು, ಚಿತ್ರಕ್ಕೆ ಬೆಸಿಲ್ ಜೋಸೆಫ್ ಅವರ ನಿರ್ದೇಶನವಿದೆ. ಜಗತ್ತಿನಾದ್ಯಾಂತ 30 ದೇಶಗಳ ಒಟಿಟಿ ಪ್ಲಾಟ್ ಫಾರ್ಮ್‌ಗಳಲ್ಲಿ ‘ಮಿನಲ್ ಮುರಳಿ’ ಸಿನಿಮಾ ಟಾಪ್ 10 ರಲ್ಲಿ ಸ್ಥಾನ ಪಡೆದಿದೆ.

“ಸದ್ಯ ವಿಶ್ವಾದ್ಯಂತ ಸಿನಿಮಾ ನಿರ್ದೇಶಕರಿಗೆ ತಮ್ಮ ಚಿತ್ರವನ್ನು ಪ್ರಸ್ತುತ ಪಡಿಸಲು ಅನೇಕ ಅನಿರೀಕ್ಷಿತ ಅವಕಾಶಗಳು ಸಿಕ್ಕವೆ. ಅದಕ್ಕೆ ಉದಾಹರಣೆ ಎಂಬಂತೆ ‘ಮಿನಲ್ ಮುರಳಿ’ ಸಿನಿಮಾ ಮೂಡಿಬಂದಿದೆ” ಎಂದು ನಟ ಥಾಮಸ್ ತಿಳಿಸಿದ್ದಾರೆ.

2020 ರಲ್ಲಿ ತೆರೆ ಕಂಡ ‘ಕಾರ್ಗೋ’ ಸಿನಿಮಾದಲ್ಲಿ ಪುಷ್ಪಕ್ 634A ಎಂಬ ಹೆಸರಿನ ಬಾಹ್ಯಾಕಾಶ ನೌಕೆಯಲ್ಲಿ ನಡೆಯುವ ಕತೆಯಿದೆ. ವಿಜ್ಞಾನಿ ಪ್ರಹಸ್ತ ಮತ್ತು ಅವರ ಸಹಾಯಕಿಯಾಗಿರುವ ಮಹಿಳಾ ಗಗನಯಾತ್ರಿ ಸೇರಿ ಮರಣೋತ್ತರ ಸೇವೆ ನೀಡುವ ಕರ್ತವ್ಯ ನಿಭಾಯಿಸುತ್ತಾರೆ. ಸತ್ತವರನ್ನು ಬದುಕಿಸಿ ಪುನರ್ಜನ್ಮ ನೀಡುವ ಕತೆಯನ್ನು ಸಿನಿಮಾದಲ್ಲಿ ನಿರೂಪಿಸಲಾಗಿದೆ. ಈ ಸಿನಿಮಾಕ್ಕೆ ಆರತಿ ಕಡವ್ ನಿರ್ದೇಶನವಿದೆ. ಚಿತ್ರದಲ್ಲಿ ನಟ ವಿಕ್ರಾಂತ್ ಮಸ್ಸೆ ಮತ್ತು ನಟಿ ಶ್ವೇತಾ ತ್ರಿಪಾಠಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ಸದ್ಯ ಬಿಡುಗಡೆಯಾದ ‘ಜೆಎಲ್ 50’, ‘ಭನ್ವರ್’, ಮತ್ತು ‘ಓಕೆ ಕಂಪ್ಯೂಟರ್’ ಯೋಜನೆಗಳು ವೈಜ್ಙಾನಿಕ ಕಲ್ಪನೆಯ ಕಥಾಹಂದರವನ್ನು ಹೊಂದಿದ್ದು, ಈ ಚಿತ್ರಗಳಲ್ಲಿ ನಟ ಅಭಯ್ ಡಿಯೊಲ್, ನಟ ವಿಜಯ್ ವರ್ಮ ಮತ್ತು ನಟಿ ರಾಧಿಕಾ ಆಪ್ಟೇ ಅಭಿನಯಿಸಿದ್ದಾರೆ.

“ಇಂತಹ ಸಿನಿಮಾಗಳಲ್ಲಿ ನಟಿಸಲು ತುಂಬ ಕಾತುರನಾಗಿದ್ದೆ. ದೇಶದ ಅಪ್ರತಿಮ ನಿರ್ದೇಶಕರು ಮತ್ತು ಬರಹಗಾರರ ಜೊತೆಗೆ ಕೆಲಸ ಮಾಡಿರುವುದು ಖುಷಿ ತಂದಿದೆ. ಈ ರೀತಿಯ ವೈಜ್ಞಾನಿಕ ಚಿತ್ರಗಳು ದೇಶದಲ್ಲಿ ಹೊಸ ಆರಂಭಕ್ಕೆ ಮುನ್ನುಡಿಯಾಗಲಿವೆ” ಎಂದು ನಟ ವಿಜಯ್ ವರ್ಮ ಹೇಳಿದ್ಧಾರೆ.

ಇದೇ ಸಾಲಿಗೆ ಸೇರಲಿರುವ ತೆಲುಗಿನ ಯೋಜನೆ ‘ಕುಡಿ ಯೆಡಮೈಥೆ’ ವೆಬ್ ಸಿರೀಸ್ ಬಂದಿದೆ. ಇದರಲ್ಲಿ ಅಪಹರಣ ದಂಧೆಯನ್ನು ಪತ್ತೆಹಚ್ಚುವ ಇಬ್ಬರು ನಾಯಕರ ಕತೆಯಿದೆ. ಸಿನಿಮಾಗೆ ಪವನ್ ಕುಮಾರ್ ನಿರ್ದೇಶನವಿದೆ. ಈ ವೆಬ್ ಸಿರೀಸ್‌ನಲ್ಲಿ ನಟ ರಾಹುಲ್ ವಿಜಯ್ ಮತ್ತು ನಟಿ ಅಮಲಾ ಪೌಲ್ ಅಭಿನಯಿಸಿದ್ದಾರೆ.

“ಪ್ರೇಕ್ಷಕರನ್ನು ಕುತೂಹಲದಿಂದ ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಕೇವಲ ವೈಜ್ಞಾನಿಕ ಕಥಾ ಹಂದರದ ಸಿನಿಮಾ, ವೆಬ್ ಸಿರೀಸ್‌ಗಳಿಗೆ ಮಾತ್ರ ಇದೆ. ಇಂತಹವುಗಳಲ್ಲಿ ಪ್ರೇಕ್ಷಕ ಅದರೊಳಗೆ ಪ್ರಯಾಣಿಸಿ ಆನಂದಿಸುತ್ತಾನೆ. ಈ ರೀತಿಯ ಕಥೆಗಳನ್ನು ತೆರೆ ಮೇಲೆ ತರಲು ತುಂಬ ಶ್ರಮ ಅಗತ್ಯವಿದೆ” ಎಂದು ನಿರ್ದೇಶಕ ಪವನ್ ಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...