Homeಮುಖಪುಟಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

ಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

- Advertisement -
- Advertisement -

ಕೊರೊನಾ ಸಮಯದಲ್ಲಿ ಪ್ರೇಕ್ಷಕರಿಗೆ ಮನರಂಜನೆ ನೀಡುವ ವಿಚಾರದಲ್ಲಿ ಒಟಿಟಿ ಪ್ಲಾಟ್ ಫಾರ್ಮ್‌ಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಈಗ ಒಟಿಟಿ ಪ್ಲಾಟ್ ಫಾರ್ಮ್‌ಗಳಲ್ಲಿ ವೈಜ್ಞಾನಿಕ ಕಲ್ಪನೆಯ ಚಿತ್ರಗಳದ್ದೇ ಅಧಿಪತ್ಯ. ಮನರಂಜನೆ ಕ್ಷೇತ್ರದಲ್ಲಿ ಎಲ್ಲಾ ಭಾಷೆಯ ಮುಖ್ಯವಾಗಿ ಹಾಲಿವುಡ್ ವೈಜ್ಞಾನಿಕ ಶೈಲಿಯ ಸಿನಿಮಾ ಹಾಗೂ ವೆಬ್ ಸಿರೀಸ್‌ಗಳಿಗೆ ವೀಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಇದರಿಂದ ಭಾರತೀಯ ಸಿನಿಮಾ ನಿರ್ದೇಶಕರು ಹೆಚ್ಚು ವೈಜ್ಞಾನಿಕ ಕಥೆಗಳ ಕಡೆಗೆ ಉತ್ಸುಕರಾಗಿದ್ದಾರೆ. ಇತ್ತೀಚಿಗೆ ಬಿಡುಗಡೆಯಾದ ಈ ಶೈಲಿಯ ಸಿನಿಮಾಗಳು ಒಳ್ಳೆ ಪ್ರದರ್ಶನ ಪಡೆದಿವೆ.

ಇದಕ್ಕೆ ಸಾಕ್ಷಿಯಾಗಿ ನಟ ಟೋವಿನೋ ಥಾಮಸ್ ಅಭಿನಯದ ಮಲಯಾಳಂನ ‘ಮಿನಲ್ ಮುರಳಿ’ ಚಿತ್ರ ಸೇರ್ಪಡೆಯಾಗಿದೆ. ಇದರಲ್ಲಿ ಒಬ್ಬ ಬಟ್ಟೆ ಹೊಲಿಯುವ ಟೈಲರ್ ಅತಿಮಾನುಷ ಶಕ್ತಿಗಳನ್ನು ಪಡೆದು ಸೂಪರ್ ಹೀರೋ ಆಗುವ ಕಥೆಯನ್ನು ಹೊಂದಿದ್ದು, ಚಿತ್ರಕ್ಕೆ ಬೆಸಿಲ್ ಜೋಸೆಫ್ ಅವರ ನಿರ್ದೇಶನವಿದೆ. ಜಗತ್ತಿನಾದ್ಯಾಂತ 30 ದೇಶಗಳ ಒಟಿಟಿ ಪ್ಲಾಟ್ ಫಾರ್ಮ್‌ಗಳಲ್ಲಿ ‘ಮಿನಲ್ ಮುರಳಿ’ ಸಿನಿಮಾ ಟಾಪ್ 10 ರಲ್ಲಿ ಸ್ಥಾನ ಪಡೆದಿದೆ.

“ಸದ್ಯ ವಿಶ್ವಾದ್ಯಂತ ಸಿನಿಮಾ ನಿರ್ದೇಶಕರಿಗೆ ತಮ್ಮ ಚಿತ್ರವನ್ನು ಪ್ರಸ್ತುತ ಪಡಿಸಲು ಅನೇಕ ಅನಿರೀಕ್ಷಿತ ಅವಕಾಶಗಳು ಸಿಕ್ಕವೆ. ಅದಕ್ಕೆ ಉದಾಹರಣೆ ಎಂಬಂತೆ ‘ಮಿನಲ್ ಮುರಳಿ’ ಸಿನಿಮಾ ಮೂಡಿಬಂದಿದೆ” ಎಂದು ನಟ ಥಾಮಸ್ ತಿಳಿಸಿದ್ದಾರೆ.

2020 ರಲ್ಲಿ ತೆರೆ ಕಂಡ ‘ಕಾರ್ಗೋ’ ಸಿನಿಮಾದಲ್ಲಿ ಪುಷ್ಪಕ್ 634A ಎಂಬ ಹೆಸರಿನ ಬಾಹ್ಯಾಕಾಶ ನೌಕೆಯಲ್ಲಿ ನಡೆಯುವ ಕತೆಯಿದೆ. ವಿಜ್ಞಾನಿ ಪ್ರಹಸ್ತ ಮತ್ತು ಅವರ ಸಹಾಯಕಿಯಾಗಿರುವ ಮಹಿಳಾ ಗಗನಯಾತ್ರಿ ಸೇರಿ ಮರಣೋತ್ತರ ಸೇವೆ ನೀಡುವ ಕರ್ತವ್ಯ ನಿಭಾಯಿಸುತ್ತಾರೆ. ಸತ್ತವರನ್ನು ಬದುಕಿಸಿ ಪುನರ್ಜನ್ಮ ನೀಡುವ ಕತೆಯನ್ನು ಸಿನಿಮಾದಲ್ಲಿ ನಿರೂಪಿಸಲಾಗಿದೆ. ಈ ಸಿನಿಮಾಕ್ಕೆ ಆರತಿ ಕಡವ್ ನಿರ್ದೇಶನವಿದೆ. ಚಿತ್ರದಲ್ಲಿ ನಟ ವಿಕ್ರಾಂತ್ ಮಸ್ಸೆ ಮತ್ತು ನಟಿ ಶ್ವೇತಾ ತ್ರಿಪಾಠಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ಸದ್ಯ ಬಿಡುಗಡೆಯಾದ ‘ಜೆಎಲ್ 50’, ‘ಭನ್ವರ್’, ಮತ್ತು ‘ಓಕೆ ಕಂಪ್ಯೂಟರ್’ ಯೋಜನೆಗಳು ವೈಜ್ಙಾನಿಕ ಕಲ್ಪನೆಯ ಕಥಾಹಂದರವನ್ನು ಹೊಂದಿದ್ದು, ಈ ಚಿತ್ರಗಳಲ್ಲಿ ನಟ ಅಭಯ್ ಡಿಯೊಲ್, ನಟ ವಿಜಯ್ ವರ್ಮ ಮತ್ತು ನಟಿ ರಾಧಿಕಾ ಆಪ್ಟೇ ಅಭಿನಯಿಸಿದ್ದಾರೆ.

“ಇಂತಹ ಸಿನಿಮಾಗಳಲ್ಲಿ ನಟಿಸಲು ತುಂಬ ಕಾತುರನಾಗಿದ್ದೆ. ದೇಶದ ಅಪ್ರತಿಮ ನಿರ್ದೇಶಕರು ಮತ್ತು ಬರಹಗಾರರ ಜೊತೆಗೆ ಕೆಲಸ ಮಾಡಿರುವುದು ಖುಷಿ ತಂದಿದೆ. ಈ ರೀತಿಯ ವೈಜ್ಞಾನಿಕ ಚಿತ್ರಗಳು ದೇಶದಲ್ಲಿ ಹೊಸ ಆರಂಭಕ್ಕೆ ಮುನ್ನುಡಿಯಾಗಲಿವೆ” ಎಂದು ನಟ ವಿಜಯ್ ವರ್ಮ ಹೇಳಿದ್ಧಾರೆ.

ಇದೇ ಸಾಲಿಗೆ ಸೇರಲಿರುವ ತೆಲುಗಿನ ಯೋಜನೆ ‘ಕುಡಿ ಯೆಡಮೈಥೆ’ ವೆಬ್ ಸಿರೀಸ್ ಬಂದಿದೆ. ಇದರಲ್ಲಿ ಅಪಹರಣ ದಂಧೆಯನ್ನು ಪತ್ತೆಹಚ್ಚುವ ಇಬ್ಬರು ನಾಯಕರ ಕತೆಯಿದೆ. ಸಿನಿಮಾಗೆ ಪವನ್ ಕುಮಾರ್ ನಿರ್ದೇಶನವಿದೆ. ಈ ವೆಬ್ ಸಿರೀಸ್‌ನಲ್ಲಿ ನಟ ರಾಹುಲ್ ವಿಜಯ್ ಮತ್ತು ನಟಿ ಅಮಲಾ ಪೌಲ್ ಅಭಿನಯಿಸಿದ್ದಾರೆ.

“ಪ್ರೇಕ್ಷಕರನ್ನು ಕುತೂಹಲದಿಂದ ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಕೇವಲ ವೈಜ್ಞಾನಿಕ ಕಥಾ ಹಂದರದ ಸಿನಿಮಾ, ವೆಬ್ ಸಿರೀಸ್‌ಗಳಿಗೆ ಮಾತ್ರ ಇದೆ. ಇಂತಹವುಗಳಲ್ಲಿ ಪ್ರೇಕ್ಷಕ ಅದರೊಳಗೆ ಪ್ರಯಾಣಿಸಿ ಆನಂದಿಸುತ್ತಾನೆ. ಈ ರೀತಿಯ ಕಥೆಗಳನ್ನು ತೆರೆ ಮೇಲೆ ತರಲು ತುಂಬ ಶ್ರಮ ಅಗತ್ಯವಿದೆ” ಎಂದು ನಿರ್ದೇಶಕ ಪವನ್ ಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...