Homeಮುಖಪುಟಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

ಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

- Advertisement -
- Advertisement -

ಕೊರೊನಾ ಸಮಯದಲ್ಲಿ ಪ್ರೇಕ್ಷಕರಿಗೆ ಮನರಂಜನೆ ನೀಡುವ ವಿಚಾರದಲ್ಲಿ ಒಟಿಟಿ ಪ್ಲಾಟ್ ಫಾರ್ಮ್‌ಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಈಗ ಒಟಿಟಿ ಪ್ಲಾಟ್ ಫಾರ್ಮ್‌ಗಳಲ್ಲಿ ವೈಜ್ಞಾನಿಕ ಕಲ್ಪನೆಯ ಚಿತ್ರಗಳದ್ದೇ ಅಧಿಪತ್ಯ. ಮನರಂಜನೆ ಕ್ಷೇತ್ರದಲ್ಲಿ ಎಲ್ಲಾ ಭಾಷೆಯ ಮುಖ್ಯವಾಗಿ ಹಾಲಿವುಡ್ ವೈಜ್ಞಾನಿಕ ಶೈಲಿಯ ಸಿನಿಮಾ ಹಾಗೂ ವೆಬ್ ಸಿರೀಸ್‌ಗಳಿಗೆ ವೀಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಇದರಿಂದ ಭಾರತೀಯ ಸಿನಿಮಾ ನಿರ್ದೇಶಕರು ಹೆಚ್ಚು ವೈಜ್ಞಾನಿಕ ಕಥೆಗಳ ಕಡೆಗೆ ಉತ್ಸುಕರಾಗಿದ್ದಾರೆ. ಇತ್ತೀಚಿಗೆ ಬಿಡುಗಡೆಯಾದ ಈ ಶೈಲಿಯ ಸಿನಿಮಾಗಳು ಒಳ್ಳೆ ಪ್ರದರ್ಶನ ಪಡೆದಿವೆ.

ಇದಕ್ಕೆ ಸಾಕ್ಷಿಯಾಗಿ ನಟ ಟೋವಿನೋ ಥಾಮಸ್ ಅಭಿನಯದ ಮಲಯಾಳಂನ ‘ಮಿನಲ್ ಮುರಳಿ’ ಚಿತ್ರ ಸೇರ್ಪಡೆಯಾಗಿದೆ. ಇದರಲ್ಲಿ ಒಬ್ಬ ಬಟ್ಟೆ ಹೊಲಿಯುವ ಟೈಲರ್ ಅತಿಮಾನುಷ ಶಕ್ತಿಗಳನ್ನು ಪಡೆದು ಸೂಪರ್ ಹೀರೋ ಆಗುವ ಕಥೆಯನ್ನು ಹೊಂದಿದ್ದು, ಚಿತ್ರಕ್ಕೆ ಬೆಸಿಲ್ ಜೋಸೆಫ್ ಅವರ ನಿರ್ದೇಶನವಿದೆ. ಜಗತ್ತಿನಾದ್ಯಾಂತ 30 ದೇಶಗಳ ಒಟಿಟಿ ಪ್ಲಾಟ್ ಫಾರ್ಮ್‌ಗಳಲ್ಲಿ ‘ಮಿನಲ್ ಮುರಳಿ’ ಸಿನಿಮಾ ಟಾಪ್ 10 ರಲ್ಲಿ ಸ್ಥಾನ ಪಡೆದಿದೆ.

“ಸದ್ಯ ವಿಶ್ವಾದ್ಯಂತ ಸಿನಿಮಾ ನಿರ್ದೇಶಕರಿಗೆ ತಮ್ಮ ಚಿತ್ರವನ್ನು ಪ್ರಸ್ತುತ ಪಡಿಸಲು ಅನೇಕ ಅನಿರೀಕ್ಷಿತ ಅವಕಾಶಗಳು ಸಿಕ್ಕವೆ. ಅದಕ್ಕೆ ಉದಾಹರಣೆ ಎಂಬಂತೆ ‘ಮಿನಲ್ ಮುರಳಿ’ ಸಿನಿಮಾ ಮೂಡಿಬಂದಿದೆ” ಎಂದು ನಟ ಥಾಮಸ್ ತಿಳಿಸಿದ್ದಾರೆ.

2020 ರಲ್ಲಿ ತೆರೆ ಕಂಡ ‘ಕಾರ್ಗೋ’ ಸಿನಿಮಾದಲ್ಲಿ ಪುಷ್ಪಕ್ 634A ಎಂಬ ಹೆಸರಿನ ಬಾಹ್ಯಾಕಾಶ ನೌಕೆಯಲ್ಲಿ ನಡೆಯುವ ಕತೆಯಿದೆ. ವಿಜ್ಞಾನಿ ಪ್ರಹಸ್ತ ಮತ್ತು ಅವರ ಸಹಾಯಕಿಯಾಗಿರುವ ಮಹಿಳಾ ಗಗನಯಾತ್ರಿ ಸೇರಿ ಮರಣೋತ್ತರ ಸೇವೆ ನೀಡುವ ಕರ್ತವ್ಯ ನಿಭಾಯಿಸುತ್ತಾರೆ. ಸತ್ತವರನ್ನು ಬದುಕಿಸಿ ಪುನರ್ಜನ್ಮ ನೀಡುವ ಕತೆಯನ್ನು ಸಿನಿಮಾದಲ್ಲಿ ನಿರೂಪಿಸಲಾಗಿದೆ. ಈ ಸಿನಿಮಾಕ್ಕೆ ಆರತಿ ಕಡವ್ ನಿರ್ದೇಶನವಿದೆ. ಚಿತ್ರದಲ್ಲಿ ನಟ ವಿಕ್ರಾಂತ್ ಮಸ್ಸೆ ಮತ್ತು ನಟಿ ಶ್ವೇತಾ ತ್ರಿಪಾಠಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ಸದ್ಯ ಬಿಡುಗಡೆಯಾದ ‘ಜೆಎಲ್ 50’, ‘ಭನ್ವರ್’, ಮತ್ತು ‘ಓಕೆ ಕಂಪ್ಯೂಟರ್’ ಯೋಜನೆಗಳು ವೈಜ್ಙಾನಿಕ ಕಲ್ಪನೆಯ ಕಥಾಹಂದರವನ್ನು ಹೊಂದಿದ್ದು, ಈ ಚಿತ್ರಗಳಲ್ಲಿ ನಟ ಅಭಯ್ ಡಿಯೊಲ್, ನಟ ವಿಜಯ್ ವರ್ಮ ಮತ್ತು ನಟಿ ರಾಧಿಕಾ ಆಪ್ಟೇ ಅಭಿನಯಿಸಿದ್ದಾರೆ.

“ಇಂತಹ ಸಿನಿಮಾಗಳಲ್ಲಿ ನಟಿಸಲು ತುಂಬ ಕಾತುರನಾಗಿದ್ದೆ. ದೇಶದ ಅಪ್ರತಿಮ ನಿರ್ದೇಶಕರು ಮತ್ತು ಬರಹಗಾರರ ಜೊತೆಗೆ ಕೆಲಸ ಮಾಡಿರುವುದು ಖುಷಿ ತಂದಿದೆ. ಈ ರೀತಿಯ ವೈಜ್ಞಾನಿಕ ಚಿತ್ರಗಳು ದೇಶದಲ್ಲಿ ಹೊಸ ಆರಂಭಕ್ಕೆ ಮುನ್ನುಡಿಯಾಗಲಿವೆ” ಎಂದು ನಟ ವಿಜಯ್ ವರ್ಮ ಹೇಳಿದ್ಧಾರೆ.

ಇದೇ ಸಾಲಿಗೆ ಸೇರಲಿರುವ ತೆಲುಗಿನ ಯೋಜನೆ ‘ಕುಡಿ ಯೆಡಮೈಥೆ’ ವೆಬ್ ಸಿರೀಸ್ ಬಂದಿದೆ. ಇದರಲ್ಲಿ ಅಪಹರಣ ದಂಧೆಯನ್ನು ಪತ್ತೆಹಚ್ಚುವ ಇಬ್ಬರು ನಾಯಕರ ಕತೆಯಿದೆ. ಸಿನಿಮಾಗೆ ಪವನ್ ಕುಮಾರ್ ನಿರ್ದೇಶನವಿದೆ. ಈ ವೆಬ್ ಸಿರೀಸ್‌ನಲ್ಲಿ ನಟ ರಾಹುಲ್ ವಿಜಯ್ ಮತ್ತು ನಟಿ ಅಮಲಾ ಪೌಲ್ ಅಭಿನಯಿಸಿದ್ದಾರೆ.

“ಪ್ರೇಕ್ಷಕರನ್ನು ಕುತೂಹಲದಿಂದ ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಕೇವಲ ವೈಜ್ಞಾನಿಕ ಕಥಾ ಹಂದರದ ಸಿನಿಮಾ, ವೆಬ್ ಸಿರೀಸ್‌ಗಳಿಗೆ ಮಾತ್ರ ಇದೆ. ಇಂತಹವುಗಳಲ್ಲಿ ಪ್ರೇಕ್ಷಕ ಅದರೊಳಗೆ ಪ್ರಯಾಣಿಸಿ ಆನಂದಿಸುತ್ತಾನೆ. ಈ ರೀತಿಯ ಕಥೆಗಳನ್ನು ತೆರೆ ಮೇಲೆ ತರಲು ತುಂಬ ಶ್ರಮ ಅಗತ್ಯವಿದೆ” ಎಂದು ನಿರ್ದೇಶಕ ಪವನ್ ಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...