Homeಮುಖಪುಟಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

ಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

- Advertisement -
- Advertisement -

ಕೊರೊನಾ ಸಮಯದಲ್ಲಿ ಪ್ರೇಕ್ಷಕರಿಗೆ ಮನರಂಜನೆ ನೀಡುವ ವಿಚಾರದಲ್ಲಿ ಒಟಿಟಿ ಪ್ಲಾಟ್ ಫಾರ್ಮ್‌ಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಈಗ ಒಟಿಟಿ ಪ್ಲಾಟ್ ಫಾರ್ಮ್‌ಗಳಲ್ಲಿ ವೈಜ್ಞಾನಿಕ ಕಲ್ಪನೆಯ ಚಿತ್ರಗಳದ್ದೇ ಅಧಿಪತ್ಯ. ಮನರಂಜನೆ ಕ್ಷೇತ್ರದಲ್ಲಿ ಎಲ್ಲಾ ಭಾಷೆಯ ಮುಖ್ಯವಾಗಿ ಹಾಲಿವುಡ್ ವೈಜ್ಞಾನಿಕ ಶೈಲಿಯ ಸಿನಿಮಾ ಹಾಗೂ ವೆಬ್ ಸಿರೀಸ್‌ಗಳಿಗೆ ವೀಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಇದರಿಂದ ಭಾರತೀಯ ಸಿನಿಮಾ ನಿರ್ದೇಶಕರು ಹೆಚ್ಚು ವೈಜ್ಞಾನಿಕ ಕಥೆಗಳ ಕಡೆಗೆ ಉತ್ಸುಕರಾಗಿದ್ದಾರೆ. ಇತ್ತೀಚಿಗೆ ಬಿಡುಗಡೆಯಾದ ಈ ಶೈಲಿಯ ಸಿನಿಮಾಗಳು ಒಳ್ಳೆ ಪ್ರದರ್ಶನ ಪಡೆದಿವೆ.

ಇದಕ್ಕೆ ಸಾಕ್ಷಿಯಾಗಿ ನಟ ಟೋವಿನೋ ಥಾಮಸ್ ಅಭಿನಯದ ಮಲಯಾಳಂನ ‘ಮಿನಲ್ ಮುರಳಿ’ ಚಿತ್ರ ಸೇರ್ಪಡೆಯಾಗಿದೆ. ಇದರಲ್ಲಿ ಒಬ್ಬ ಬಟ್ಟೆ ಹೊಲಿಯುವ ಟೈಲರ್ ಅತಿಮಾನುಷ ಶಕ್ತಿಗಳನ್ನು ಪಡೆದು ಸೂಪರ್ ಹೀರೋ ಆಗುವ ಕಥೆಯನ್ನು ಹೊಂದಿದ್ದು, ಚಿತ್ರಕ್ಕೆ ಬೆಸಿಲ್ ಜೋಸೆಫ್ ಅವರ ನಿರ್ದೇಶನವಿದೆ. ಜಗತ್ತಿನಾದ್ಯಾಂತ 30 ದೇಶಗಳ ಒಟಿಟಿ ಪ್ಲಾಟ್ ಫಾರ್ಮ್‌ಗಳಲ್ಲಿ ‘ಮಿನಲ್ ಮುರಳಿ’ ಸಿನಿಮಾ ಟಾಪ್ 10 ರಲ್ಲಿ ಸ್ಥಾನ ಪಡೆದಿದೆ.

“ಸದ್ಯ ವಿಶ್ವಾದ್ಯಂತ ಸಿನಿಮಾ ನಿರ್ದೇಶಕರಿಗೆ ತಮ್ಮ ಚಿತ್ರವನ್ನು ಪ್ರಸ್ತುತ ಪಡಿಸಲು ಅನೇಕ ಅನಿರೀಕ್ಷಿತ ಅವಕಾಶಗಳು ಸಿಕ್ಕವೆ. ಅದಕ್ಕೆ ಉದಾಹರಣೆ ಎಂಬಂತೆ ‘ಮಿನಲ್ ಮುರಳಿ’ ಸಿನಿಮಾ ಮೂಡಿಬಂದಿದೆ” ಎಂದು ನಟ ಥಾಮಸ್ ತಿಳಿಸಿದ್ದಾರೆ.

2020 ರಲ್ಲಿ ತೆರೆ ಕಂಡ ‘ಕಾರ್ಗೋ’ ಸಿನಿಮಾದಲ್ಲಿ ಪುಷ್ಪಕ್ 634A ಎಂಬ ಹೆಸರಿನ ಬಾಹ್ಯಾಕಾಶ ನೌಕೆಯಲ್ಲಿ ನಡೆಯುವ ಕತೆಯಿದೆ. ವಿಜ್ಞಾನಿ ಪ್ರಹಸ್ತ ಮತ್ತು ಅವರ ಸಹಾಯಕಿಯಾಗಿರುವ ಮಹಿಳಾ ಗಗನಯಾತ್ರಿ ಸೇರಿ ಮರಣೋತ್ತರ ಸೇವೆ ನೀಡುವ ಕರ್ತವ್ಯ ನಿಭಾಯಿಸುತ್ತಾರೆ. ಸತ್ತವರನ್ನು ಬದುಕಿಸಿ ಪುನರ್ಜನ್ಮ ನೀಡುವ ಕತೆಯನ್ನು ಸಿನಿಮಾದಲ್ಲಿ ನಿರೂಪಿಸಲಾಗಿದೆ. ಈ ಸಿನಿಮಾಕ್ಕೆ ಆರತಿ ಕಡವ್ ನಿರ್ದೇಶನವಿದೆ. ಚಿತ್ರದಲ್ಲಿ ನಟ ವಿಕ್ರಾಂತ್ ಮಸ್ಸೆ ಮತ್ತು ನಟಿ ಶ್ವೇತಾ ತ್ರಿಪಾಠಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ಸದ್ಯ ಬಿಡುಗಡೆಯಾದ ‘ಜೆಎಲ್ 50’, ‘ಭನ್ವರ್’, ಮತ್ತು ‘ಓಕೆ ಕಂಪ್ಯೂಟರ್’ ಯೋಜನೆಗಳು ವೈಜ್ಙಾನಿಕ ಕಲ್ಪನೆಯ ಕಥಾಹಂದರವನ್ನು ಹೊಂದಿದ್ದು, ಈ ಚಿತ್ರಗಳಲ್ಲಿ ನಟ ಅಭಯ್ ಡಿಯೊಲ್, ನಟ ವಿಜಯ್ ವರ್ಮ ಮತ್ತು ನಟಿ ರಾಧಿಕಾ ಆಪ್ಟೇ ಅಭಿನಯಿಸಿದ್ದಾರೆ.

“ಇಂತಹ ಸಿನಿಮಾಗಳಲ್ಲಿ ನಟಿಸಲು ತುಂಬ ಕಾತುರನಾಗಿದ್ದೆ. ದೇಶದ ಅಪ್ರತಿಮ ನಿರ್ದೇಶಕರು ಮತ್ತು ಬರಹಗಾರರ ಜೊತೆಗೆ ಕೆಲಸ ಮಾಡಿರುವುದು ಖುಷಿ ತಂದಿದೆ. ಈ ರೀತಿಯ ವೈಜ್ಞಾನಿಕ ಚಿತ್ರಗಳು ದೇಶದಲ್ಲಿ ಹೊಸ ಆರಂಭಕ್ಕೆ ಮುನ್ನುಡಿಯಾಗಲಿವೆ” ಎಂದು ನಟ ವಿಜಯ್ ವರ್ಮ ಹೇಳಿದ್ಧಾರೆ.

ಇದೇ ಸಾಲಿಗೆ ಸೇರಲಿರುವ ತೆಲುಗಿನ ಯೋಜನೆ ‘ಕುಡಿ ಯೆಡಮೈಥೆ’ ವೆಬ್ ಸಿರೀಸ್ ಬಂದಿದೆ. ಇದರಲ್ಲಿ ಅಪಹರಣ ದಂಧೆಯನ್ನು ಪತ್ತೆಹಚ್ಚುವ ಇಬ್ಬರು ನಾಯಕರ ಕತೆಯಿದೆ. ಸಿನಿಮಾಗೆ ಪವನ್ ಕುಮಾರ್ ನಿರ್ದೇಶನವಿದೆ. ಈ ವೆಬ್ ಸಿರೀಸ್‌ನಲ್ಲಿ ನಟ ರಾಹುಲ್ ವಿಜಯ್ ಮತ್ತು ನಟಿ ಅಮಲಾ ಪೌಲ್ ಅಭಿನಯಿಸಿದ್ದಾರೆ.

“ಪ್ರೇಕ್ಷಕರನ್ನು ಕುತೂಹಲದಿಂದ ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಕೇವಲ ವೈಜ್ಞಾನಿಕ ಕಥಾ ಹಂದರದ ಸಿನಿಮಾ, ವೆಬ್ ಸಿರೀಸ್‌ಗಳಿಗೆ ಮಾತ್ರ ಇದೆ. ಇಂತಹವುಗಳಲ್ಲಿ ಪ್ರೇಕ್ಷಕ ಅದರೊಳಗೆ ಪ್ರಯಾಣಿಸಿ ಆನಂದಿಸುತ್ತಾನೆ. ಈ ರೀತಿಯ ಕಥೆಗಳನ್ನು ತೆರೆ ಮೇಲೆ ತರಲು ತುಂಬ ಶ್ರಮ ಅಗತ್ಯವಿದೆ” ಎಂದು ನಿರ್ದೇಶಕ ಪವನ್ ಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....