Homeಸಾಮಾಜಿಕವಿಜ್ಞಾನ ನಾಚುವಂತಹ ಪೂಜಾ, ಜ್ಯೋತಿಷ್ಯ ಆವಿಷ್ಕಾರಗಳು!

ವಿಜ್ಞಾನ ನಾಚುವಂತಹ ಪೂಜಾ, ಜ್ಯೋತಿಷ್ಯ ಆವಿಷ್ಕಾರಗಳು!

- Advertisement -
- Advertisement -

ಪ್ಪತ್ತನೆಯ ಶತಮಾನದ ಅದಿಭಾಗದಿಂದ ಹಿಡಿದು ಇತ್ತೀಚಿನವರೆಗೆ ವಿಶ್ವದಲ್ಲಿ ಸಾವಿರಾರು ಆವಿಷ್ಕಾರಗಳಾಗಿವೆ. ಇಂದು ಮಧ್ಯವಯಸ್ಸಿನಲ್ಲಿರುವವರು ಅದೃಷ್ಟಶಾಲಿಗಳೆಂದು ಹೇಳಬಹುದು!
ಚಿಮಣಿ ದೀಪಗಳಿದ್ದ ಮನೆಗಳಿಗೆ ವಿದ್ಯುತ್ ದೀಪಗಳು ಬಂದಿವೆ. ಟೆಂಟು ಬಂದರೆ ಮಾತ್ರ ನೋಡಲು ಸಾಧ್ಯವಾಗುತ್ತಿದ್ಧ ಸಿನಿಮಾ ಮನೆಯಲ್ಲೇ ಕುಳಿತು ನೋಡಬಹುದು. ಸಿನಿಮಾ, ಧಾರಾವಾಹಿಗಳೇ ಜೀವನ ಎಂದು ತಿಳಿದುಕೊಂಡವರೂ ನಮ್ಮ ನಡುವೆ ಇದ್ದಾರೆ.
ಸಂಪರ್ಕದ ಕೊಂಡಿಯಾಗಿದ್ದ ಅಂಚೆ ಇಂದು ಇತಿಹಾಸವಾಗುತ್ತಿದೆ. ಯಾರಾದರೂ ಸತ್ತರೆ ದೂರದ ಊರುಗಳಲ್ಲಿ ಇರುವ ಬಂಧುಗಳಿಗೆ “ಮದರ್ ಸೀರಿಯಸ್. ಸ್ಟಾರ್ಟ್ ಇಮ್ಮಿಡಿಯೆಟ್ಲಿ” ಎಂದು ‘ವಯರ್’ ಕಳಿಸುತ್ತಿದ್ದ- ಅಂದರೆ ಟೆಲಿಗ್ರಾಂ ಕಳಿಸುತ್ತಿದ್ದ ಕಾಲದಿಂದ ವಯರ್ ಇಲ್ಲದೇ ಹೆಣದ ಫೋಟೊ ತೆಗೆದು ಲೈವಾಗಿ ಸಂಬಂಧಿಕರಿಗೆ ತಿಳಿಸುವ ಯುಗವನ್ನು ಮುಟ್ಟಿದ್ದೇವೆ! ಕಂಪ್ಯೂಟರ್ ಬಂದಿದೆ! ಕ್ಯಾಷ್‍ಲೆಸ್ ಆಗಿದ್ದೇವೆ! ವಿಜ್ಞಾನದ ಆವಿಷ್ಕಾರಗಳ ಫಲವನ್ನು ಉಣ್ಣುತ್ತಾ ಬಂದಿದ್ದೇವೆ. ಮೂಷಿಕ, ಗರುಡ, ಸಿಂಹ, ನಂದಿ ವಾಹನರಾಗಿದ್ದ ನಾವು- ಬೈಕ್, ಸ್ಕೂಟರ್, ಕಾರು, ಬಸ್ಸು, ರೈಲು ವಿಮಾನ ವಾಹನರಾಗಿದ್ದೇವೆ! ಚಪ್ಪಡೆ ಭೂಮಿಯನ್ನು ದುಂಡಗೆ ಮಾಡಿದ್ದೇವೆ! ಸಾಮೂಹಿಕ ವಿನಾಶದ ಅಸ್ತ್ರಗಳನ್ನು ದಾಸ್ತಾನು ಇಟ್ಟಿದ್ದೇವೆ! … ವಿಷಗಳನ್ನು, ವಿಷಯಗಳನ್ನು ಉತ್ಪಾದಿಸುತ್ತಿದ್ದೇವೆ!
ಬರೆಯುತ್ತಾ ಹೋದರೆ ಸಾವಿರಾರಿವೆ! ನಮ್ಮ ಸುತ್ತಲೂ ಬೇಕೆಂದೋ ಬೇಡವೆಂದೋ ರಾಶಿಬಿದ್ದಿರುವ ಸಲಕರಣೆಗಳು ತಂತ್ರಜ್ಞಾನಗಳನ್ನು ಒಮ್ಮೆ ನೋಡಿದರೆ, ಇದನ್ನು ಕಂಡುಹಿಡಿದವರ ನೆನಪಾದರೂ ನಮಗಿದೆಯೆ?
ಅದರೆ, ನಮಗೆ ಕೋಟ್ಯಾಂತರ ದೇವರು, ದೈವಗಳ, ಅಂತರ, ಬೆಂತರ, ಕುಲೆ, ಪಿಶಾಚಿಗಳ ನೆನಪಿದೆ! ಯಾಕೆಂದರೆ ನಮಗೆ ಭಯವಿದೆ! ಅದನ್ನೇ ನಾವು ನಂಬಿಕೆ ಎಂದು ಕರೆಯುತ್ತೇವೆ!
ಇದೇ ಭಯವನ್ನು ಬಂಡವಾಳ ಮಾಡಿಕೊಂಡು ಸಾವಿರದ ಒಂದು, ಹನ್ನೊಂದು ಸಾವಿರದ ಒಂದು… ಹೀಗೆ ಜ್ಯೋತಿಷ್ಯ ಮತ್ತು ಪೂಜಾ ಕ್ಷೇತ್ರಗಳಲ್ಲಿ ಅವಿಷ್ಕಾರಗಳಾಗಿವೆ! ಹಿಂದೆ ಮನೆಯ ಒಂದು ಕೋಣೆಯೊಳಗಿನ ಅಥವಾ ಗೋಡೆಗಂಟಿದ ಹಲವಾರು ದೇವರುಗಳಿಗೆ ಊದುಬತ್ತಿ ಹಚ್ಚಿ, ಕೈಮುಗಿದು ಬೇಡಿಕೊಂಡರೆ ಸಾಕಿತ್ತು. ಹೆಚ್ಚು ಭಯವಾದರೆ ಮುಡಿಪು ಇಟ್ಟರೆ ಸಾಕಿತ್ತು! ಅದರೆ, ಈ ಕೋಮುವಾದಿ ವಿಷ ಧರ್ಮದಲ್ಲಿ ಇರಲಿಲ್ಲ! ಈಗ ಹೇಗೆ ಧರ್ಮವನ್ನು ಕೋಮುವಾದಿ ಬಿಸಿನೆಸ್ ಮಾಡುವಲ್ಲಿ ಎಷ್ಟೆಲ್ಲಾ ಅವಿಷ್ಕಾರಗಳನ್ನು ಮಾಡಲಾಗಿದೆ ಎಂಬುದನ್ನು ನೀವೇ ನೋಡಬಹುದು.
ಮಗುವಿಗೆ ಹೆಸರು ಇಡುವುದರಿಂದ ಹಿಡಿದು, ಹುಟ್ಟಿದ ಜಾತಕ, ತಗಲಿಕೊಂಡಿರುವ ರೋಗಗಳು, ಪೂರ್ವಜಾತ ದೋಷಗಳು, ನಕ್ಷತ್ರಗಳು, ಅವುಗಳ ಫಲಗಳು, ಯಮಗಂಡ, ರಾಹುಗಂಡ, ಕೇತುಗಂಡ, ನಾಗದೋಷ, ಶನಿಪ್ರಭಾವ ಮತ್ತು ಶಾಪ, ಹಿರಿಯರ ಶಾಪ, ಅಶಾಂತಿ… ಮತ್ತದಕ್ಕೆ ಪರಿಹಾರಗಳು! ಎಲ್ಲವಕ್ಕೂ ಮಹಾ ಸಂಶೋಧನೆಗಳು ಅಗಿವೆ- ವಿಜ್ಞಾನವನ್ನು ನಾಚಿಸುವಷ್ಟು! ನೀವೇ ಯೋಚಿಸಿದರೆ ಲೆಕ್ಕ ಹಾಕಬಹುದು! ಆದರೂ ಮುಂದಕ್ಕೆ ಎಲ್ಲಾ ಸಂಶೋಧನೆಗಳನ್ನೂ ಸಂಶೋಧಕರನ್ನು ವಿವರವಾಗಿ ನೋಡಿ! ಸಂಶೋಧನೆಯ ವಿವರಗಳು ಅನಂತವಾಗಿವೆ!
ಇಂದು ಬೆಳಗಾಗುತ್ತ ಎದ್ದಾಗ ನಾವು ನೋಡುವುದೇನು?! ಟಿವಿ, ಇಂಟರ್ನೆಟ್! ವಿಜ್ಞಾನದ ಉತ್ಪತ್ತಿಗಳಲ್ಲಿ ರಾರಾಜಿಸುವುದೇನು ಬ್ರಹ್ಮಾಂಡ ಜ್ಯೋತಿಷ್ಯದ ಮಹಾನ್ ಆವಿಷ್ಕಾರಗಳು! ಆ ಮಹಾನ್ ಸಂಶೋಧನೆಗಳು!
ಮಗು ಹುಟ್ಟಿದಾಗ ಏನು ಮಾಡಬೇಕು? ಬಾಲ ಕರ್ಮಗಳೇನು? ಜಾತದೋಷಗಳೇನು? ಭವಿಷ್ಯ ಏನು? ಗಂಡಗಳೇನು? ದೋಷಗಳೇನು? ಪರಿಹಾರಗಳೇನು?
ಹಾವು ಸತ್ತರೆ ಏನು ಮಾಡಬೇಕು? ಎಷ್ಟು ಜನ ಬ್ರಾಹ್ಮಣರಿಗೆ ಊಟ ಹಾಕಬೇಕು? ಗೋದಾನ, ಭೂದಾನ, ಸುವರ್ಣ ದಾನ ಇತ್ಯಾದಿಗಳ ಪುಣ್ಯ ಫಲವೇನು? ಗೋವು, ಸುವರ್ಣ ಇಲ್ಲದಿದ್ದಲ್ಲಿ ಪರಿಹಾರವೇನು? ಇಂಟರ್‍ನೆಟ್‍ನಿಂದ ಹೇಗೆ ಪೂಜೆ ಮಾಡಿಸಬಹುದು? ಪ್ರಸಾದ ಪಡೆಯಬಹುದು? ಇವೆಲ್ಲವುಗಳ ಬಗ್ಗೆ ಸಾವಿರಾರು ಸಂಶೋಧನೆಗಳು ಲಭ್ಯವಿವೆ! ಪೇಟೆಂಟ್ ಮಾಡಿಕೊಂಡಿರುವ ವಿಜ್ಞಾನಿಗಳೂ ಲಭ್ಯವಿದ್ದಾರೆ! ಅವರನ್ನೆಲ್ಲಾ ಮುಂದಿನ ವಾರ ಭೇಟಿಯಾಗೋಣ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...

‘ಸಿಎಂ ಹುದ್ದೆಗೆ 500 ಕೋಟಿ’ ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

"500 ಕೋಟಿ ರೂಪಾಯಿಯ ಸೂಟ್‌ಕೇಸ್ ನೀಡುವ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ" ಎಂದು ಹೇಳಿಕೆ ನೀಡಿದ ಎರಡು ದಿನಗಳ ನಂತರ, ಮಾಜಿ ಕ್ರಿಕೆಟಿಗ ಮತ್ತು ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್...

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಸೋಮವಾರ (ಡಿಸೆಂಬರ್ 8) ರಾತ್ರಿ (ಭಾರತೀಯ ಕಾಲಮಾನ ಸಂಜೆ 7.45) ಈಶಾನ್ಯ ಜಪಾನ್‌ನಲ್ಲಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 30 ಜನರು ಗಾಯಗೊಂಡಿದ್ದು, ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು...