Homeಸಾಮಾಜಿಕವಿಜ್ಞಾನ ನಾಚುವಂತಹ ಪೂಜಾ, ಜ್ಯೋತಿಷ್ಯ ಆವಿಷ್ಕಾರಗಳು!

ವಿಜ್ಞಾನ ನಾಚುವಂತಹ ಪೂಜಾ, ಜ್ಯೋತಿಷ್ಯ ಆವಿಷ್ಕಾರಗಳು!

- Advertisement -
- Advertisement -

ಪ್ಪತ್ತನೆಯ ಶತಮಾನದ ಅದಿಭಾಗದಿಂದ ಹಿಡಿದು ಇತ್ತೀಚಿನವರೆಗೆ ವಿಶ್ವದಲ್ಲಿ ಸಾವಿರಾರು ಆವಿಷ್ಕಾರಗಳಾಗಿವೆ. ಇಂದು ಮಧ್ಯವಯಸ್ಸಿನಲ್ಲಿರುವವರು ಅದೃಷ್ಟಶಾಲಿಗಳೆಂದು ಹೇಳಬಹುದು!
ಚಿಮಣಿ ದೀಪಗಳಿದ್ದ ಮನೆಗಳಿಗೆ ವಿದ್ಯುತ್ ದೀಪಗಳು ಬಂದಿವೆ. ಟೆಂಟು ಬಂದರೆ ಮಾತ್ರ ನೋಡಲು ಸಾಧ್ಯವಾಗುತ್ತಿದ್ಧ ಸಿನಿಮಾ ಮನೆಯಲ್ಲೇ ಕುಳಿತು ನೋಡಬಹುದು. ಸಿನಿಮಾ, ಧಾರಾವಾಹಿಗಳೇ ಜೀವನ ಎಂದು ತಿಳಿದುಕೊಂಡವರೂ ನಮ್ಮ ನಡುವೆ ಇದ್ದಾರೆ.
ಸಂಪರ್ಕದ ಕೊಂಡಿಯಾಗಿದ್ದ ಅಂಚೆ ಇಂದು ಇತಿಹಾಸವಾಗುತ್ತಿದೆ. ಯಾರಾದರೂ ಸತ್ತರೆ ದೂರದ ಊರುಗಳಲ್ಲಿ ಇರುವ ಬಂಧುಗಳಿಗೆ “ಮದರ್ ಸೀರಿಯಸ್. ಸ್ಟಾರ್ಟ್ ಇಮ್ಮಿಡಿಯೆಟ್ಲಿ” ಎಂದು ‘ವಯರ್’ ಕಳಿಸುತ್ತಿದ್ದ- ಅಂದರೆ ಟೆಲಿಗ್ರಾಂ ಕಳಿಸುತ್ತಿದ್ದ ಕಾಲದಿಂದ ವಯರ್ ಇಲ್ಲದೇ ಹೆಣದ ಫೋಟೊ ತೆಗೆದು ಲೈವಾಗಿ ಸಂಬಂಧಿಕರಿಗೆ ತಿಳಿಸುವ ಯುಗವನ್ನು ಮುಟ್ಟಿದ್ದೇವೆ! ಕಂಪ್ಯೂಟರ್ ಬಂದಿದೆ! ಕ್ಯಾಷ್‍ಲೆಸ್ ಆಗಿದ್ದೇವೆ! ವಿಜ್ಞಾನದ ಆವಿಷ್ಕಾರಗಳ ಫಲವನ್ನು ಉಣ್ಣುತ್ತಾ ಬಂದಿದ್ದೇವೆ. ಮೂಷಿಕ, ಗರುಡ, ಸಿಂಹ, ನಂದಿ ವಾಹನರಾಗಿದ್ದ ನಾವು- ಬೈಕ್, ಸ್ಕೂಟರ್, ಕಾರು, ಬಸ್ಸು, ರೈಲು ವಿಮಾನ ವಾಹನರಾಗಿದ್ದೇವೆ! ಚಪ್ಪಡೆ ಭೂಮಿಯನ್ನು ದುಂಡಗೆ ಮಾಡಿದ್ದೇವೆ! ಸಾಮೂಹಿಕ ವಿನಾಶದ ಅಸ್ತ್ರಗಳನ್ನು ದಾಸ್ತಾನು ಇಟ್ಟಿದ್ದೇವೆ! … ವಿಷಗಳನ್ನು, ವಿಷಯಗಳನ್ನು ಉತ್ಪಾದಿಸುತ್ತಿದ್ದೇವೆ!
ಬರೆಯುತ್ತಾ ಹೋದರೆ ಸಾವಿರಾರಿವೆ! ನಮ್ಮ ಸುತ್ತಲೂ ಬೇಕೆಂದೋ ಬೇಡವೆಂದೋ ರಾಶಿಬಿದ್ದಿರುವ ಸಲಕರಣೆಗಳು ತಂತ್ರಜ್ಞಾನಗಳನ್ನು ಒಮ್ಮೆ ನೋಡಿದರೆ, ಇದನ್ನು ಕಂಡುಹಿಡಿದವರ ನೆನಪಾದರೂ ನಮಗಿದೆಯೆ?
ಅದರೆ, ನಮಗೆ ಕೋಟ್ಯಾಂತರ ದೇವರು, ದೈವಗಳ, ಅಂತರ, ಬೆಂತರ, ಕುಲೆ, ಪಿಶಾಚಿಗಳ ನೆನಪಿದೆ! ಯಾಕೆಂದರೆ ನಮಗೆ ಭಯವಿದೆ! ಅದನ್ನೇ ನಾವು ನಂಬಿಕೆ ಎಂದು ಕರೆಯುತ್ತೇವೆ!
ಇದೇ ಭಯವನ್ನು ಬಂಡವಾಳ ಮಾಡಿಕೊಂಡು ಸಾವಿರದ ಒಂದು, ಹನ್ನೊಂದು ಸಾವಿರದ ಒಂದು… ಹೀಗೆ ಜ್ಯೋತಿಷ್ಯ ಮತ್ತು ಪೂಜಾ ಕ್ಷೇತ್ರಗಳಲ್ಲಿ ಅವಿಷ್ಕಾರಗಳಾಗಿವೆ! ಹಿಂದೆ ಮನೆಯ ಒಂದು ಕೋಣೆಯೊಳಗಿನ ಅಥವಾ ಗೋಡೆಗಂಟಿದ ಹಲವಾರು ದೇವರುಗಳಿಗೆ ಊದುಬತ್ತಿ ಹಚ್ಚಿ, ಕೈಮುಗಿದು ಬೇಡಿಕೊಂಡರೆ ಸಾಕಿತ್ತು. ಹೆಚ್ಚು ಭಯವಾದರೆ ಮುಡಿಪು ಇಟ್ಟರೆ ಸಾಕಿತ್ತು! ಅದರೆ, ಈ ಕೋಮುವಾದಿ ವಿಷ ಧರ್ಮದಲ್ಲಿ ಇರಲಿಲ್ಲ! ಈಗ ಹೇಗೆ ಧರ್ಮವನ್ನು ಕೋಮುವಾದಿ ಬಿಸಿನೆಸ್ ಮಾಡುವಲ್ಲಿ ಎಷ್ಟೆಲ್ಲಾ ಅವಿಷ್ಕಾರಗಳನ್ನು ಮಾಡಲಾಗಿದೆ ಎಂಬುದನ್ನು ನೀವೇ ನೋಡಬಹುದು.
ಮಗುವಿಗೆ ಹೆಸರು ಇಡುವುದರಿಂದ ಹಿಡಿದು, ಹುಟ್ಟಿದ ಜಾತಕ, ತಗಲಿಕೊಂಡಿರುವ ರೋಗಗಳು, ಪೂರ್ವಜಾತ ದೋಷಗಳು, ನಕ್ಷತ್ರಗಳು, ಅವುಗಳ ಫಲಗಳು, ಯಮಗಂಡ, ರಾಹುಗಂಡ, ಕೇತುಗಂಡ, ನಾಗದೋಷ, ಶನಿಪ್ರಭಾವ ಮತ್ತು ಶಾಪ, ಹಿರಿಯರ ಶಾಪ, ಅಶಾಂತಿ… ಮತ್ತದಕ್ಕೆ ಪರಿಹಾರಗಳು! ಎಲ್ಲವಕ್ಕೂ ಮಹಾ ಸಂಶೋಧನೆಗಳು ಅಗಿವೆ- ವಿಜ್ಞಾನವನ್ನು ನಾಚಿಸುವಷ್ಟು! ನೀವೇ ಯೋಚಿಸಿದರೆ ಲೆಕ್ಕ ಹಾಕಬಹುದು! ಆದರೂ ಮುಂದಕ್ಕೆ ಎಲ್ಲಾ ಸಂಶೋಧನೆಗಳನ್ನೂ ಸಂಶೋಧಕರನ್ನು ವಿವರವಾಗಿ ನೋಡಿ! ಸಂಶೋಧನೆಯ ವಿವರಗಳು ಅನಂತವಾಗಿವೆ!
ಇಂದು ಬೆಳಗಾಗುತ್ತ ಎದ್ದಾಗ ನಾವು ನೋಡುವುದೇನು?! ಟಿವಿ, ಇಂಟರ್ನೆಟ್! ವಿಜ್ಞಾನದ ಉತ್ಪತ್ತಿಗಳಲ್ಲಿ ರಾರಾಜಿಸುವುದೇನು ಬ್ರಹ್ಮಾಂಡ ಜ್ಯೋತಿಷ್ಯದ ಮಹಾನ್ ಆವಿಷ್ಕಾರಗಳು! ಆ ಮಹಾನ್ ಸಂಶೋಧನೆಗಳು!
ಮಗು ಹುಟ್ಟಿದಾಗ ಏನು ಮಾಡಬೇಕು? ಬಾಲ ಕರ್ಮಗಳೇನು? ಜಾತದೋಷಗಳೇನು? ಭವಿಷ್ಯ ಏನು? ಗಂಡಗಳೇನು? ದೋಷಗಳೇನು? ಪರಿಹಾರಗಳೇನು?
ಹಾವು ಸತ್ತರೆ ಏನು ಮಾಡಬೇಕು? ಎಷ್ಟು ಜನ ಬ್ರಾಹ್ಮಣರಿಗೆ ಊಟ ಹಾಕಬೇಕು? ಗೋದಾನ, ಭೂದಾನ, ಸುವರ್ಣ ದಾನ ಇತ್ಯಾದಿಗಳ ಪುಣ್ಯ ಫಲವೇನು? ಗೋವು, ಸುವರ್ಣ ಇಲ್ಲದಿದ್ದಲ್ಲಿ ಪರಿಹಾರವೇನು? ಇಂಟರ್‍ನೆಟ್‍ನಿಂದ ಹೇಗೆ ಪೂಜೆ ಮಾಡಿಸಬಹುದು? ಪ್ರಸಾದ ಪಡೆಯಬಹುದು? ಇವೆಲ್ಲವುಗಳ ಬಗ್ಗೆ ಸಾವಿರಾರು ಸಂಶೋಧನೆಗಳು ಲಭ್ಯವಿವೆ! ಪೇಟೆಂಟ್ ಮಾಡಿಕೊಂಡಿರುವ ವಿಜ್ಞಾನಿಗಳೂ ಲಭ್ಯವಿದ್ದಾರೆ! ಅವರನ್ನೆಲ್ಲಾ ಮುಂದಿನ ವಾರ ಭೇಟಿಯಾಗೋಣ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...