Homeಸಾಮಾಜಿಕವಿಜ್ಞಾನ ನಾಚುವಂತಹ ಪೂಜಾ, ಜ್ಯೋತಿಷ್ಯ ಆವಿಷ್ಕಾರಗಳು!

ವಿಜ್ಞಾನ ನಾಚುವಂತಹ ಪೂಜಾ, ಜ್ಯೋತಿಷ್ಯ ಆವಿಷ್ಕಾರಗಳು!

- Advertisement -
- Advertisement -

ಪ್ಪತ್ತನೆಯ ಶತಮಾನದ ಅದಿಭಾಗದಿಂದ ಹಿಡಿದು ಇತ್ತೀಚಿನವರೆಗೆ ವಿಶ್ವದಲ್ಲಿ ಸಾವಿರಾರು ಆವಿಷ್ಕಾರಗಳಾಗಿವೆ. ಇಂದು ಮಧ್ಯವಯಸ್ಸಿನಲ್ಲಿರುವವರು ಅದೃಷ್ಟಶಾಲಿಗಳೆಂದು ಹೇಳಬಹುದು!
ಚಿಮಣಿ ದೀಪಗಳಿದ್ದ ಮನೆಗಳಿಗೆ ವಿದ್ಯುತ್ ದೀಪಗಳು ಬಂದಿವೆ. ಟೆಂಟು ಬಂದರೆ ಮಾತ್ರ ನೋಡಲು ಸಾಧ್ಯವಾಗುತ್ತಿದ್ಧ ಸಿನಿಮಾ ಮನೆಯಲ್ಲೇ ಕುಳಿತು ನೋಡಬಹುದು. ಸಿನಿಮಾ, ಧಾರಾವಾಹಿಗಳೇ ಜೀವನ ಎಂದು ತಿಳಿದುಕೊಂಡವರೂ ನಮ್ಮ ನಡುವೆ ಇದ್ದಾರೆ.
ಸಂಪರ್ಕದ ಕೊಂಡಿಯಾಗಿದ್ದ ಅಂಚೆ ಇಂದು ಇತಿಹಾಸವಾಗುತ್ತಿದೆ. ಯಾರಾದರೂ ಸತ್ತರೆ ದೂರದ ಊರುಗಳಲ್ಲಿ ಇರುವ ಬಂಧುಗಳಿಗೆ “ಮದರ್ ಸೀರಿಯಸ್. ಸ್ಟಾರ್ಟ್ ಇಮ್ಮಿಡಿಯೆಟ್ಲಿ” ಎಂದು ‘ವಯರ್’ ಕಳಿಸುತ್ತಿದ್ದ- ಅಂದರೆ ಟೆಲಿಗ್ರಾಂ ಕಳಿಸುತ್ತಿದ್ದ ಕಾಲದಿಂದ ವಯರ್ ಇಲ್ಲದೇ ಹೆಣದ ಫೋಟೊ ತೆಗೆದು ಲೈವಾಗಿ ಸಂಬಂಧಿಕರಿಗೆ ತಿಳಿಸುವ ಯುಗವನ್ನು ಮುಟ್ಟಿದ್ದೇವೆ! ಕಂಪ್ಯೂಟರ್ ಬಂದಿದೆ! ಕ್ಯಾಷ್‍ಲೆಸ್ ಆಗಿದ್ದೇವೆ! ವಿಜ್ಞಾನದ ಆವಿಷ್ಕಾರಗಳ ಫಲವನ್ನು ಉಣ್ಣುತ್ತಾ ಬಂದಿದ್ದೇವೆ. ಮೂಷಿಕ, ಗರುಡ, ಸಿಂಹ, ನಂದಿ ವಾಹನರಾಗಿದ್ದ ನಾವು- ಬೈಕ್, ಸ್ಕೂಟರ್, ಕಾರು, ಬಸ್ಸು, ರೈಲು ವಿಮಾನ ವಾಹನರಾಗಿದ್ದೇವೆ! ಚಪ್ಪಡೆ ಭೂಮಿಯನ್ನು ದುಂಡಗೆ ಮಾಡಿದ್ದೇವೆ! ಸಾಮೂಹಿಕ ವಿನಾಶದ ಅಸ್ತ್ರಗಳನ್ನು ದಾಸ್ತಾನು ಇಟ್ಟಿದ್ದೇವೆ! … ವಿಷಗಳನ್ನು, ವಿಷಯಗಳನ್ನು ಉತ್ಪಾದಿಸುತ್ತಿದ್ದೇವೆ!
ಬರೆಯುತ್ತಾ ಹೋದರೆ ಸಾವಿರಾರಿವೆ! ನಮ್ಮ ಸುತ್ತಲೂ ಬೇಕೆಂದೋ ಬೇಡವೆಂದೋ ರಾಶಿಬಿದ್ದಿರುವ ಸಲಕರಣೆಗಳು ತಂತ್ರಜ್ಞಾನಗಳನ್ನು ಒಮ್ಮೆ ನೋಡಿದರೆ, ಇದನ್ನು ಕಂಡುಹಿಡಿದವರ ನೆನಪಾದರೂ ನಮಗಿದೆಯೆ?
ಅದರೆ, ನಮಗೆ ಕೋಟ್ಯಾಂತರ ದೇವರು, ದೈವಗಳ, ಅಂತರ, ಬೆಂತರ, ಕುಲೆ, ಪಿಶಾಚಿಗಳ ನೆನಪಿದೆ! ಯಾಕೆಂದರೆ ನಮಗೆ ಭಯವಿದೆ! ಅದನ್ನೇ ನಾವು ನಂಬಿಕೆ ಎಂದು ಕರೆಯುತ್ತೇವೆ!
ಇದೇ ಭಯವನ್ನು ಬಂಡವಾಳ ಮಾಡಿಕೊಂಡು ಸಾವಿರದ ಒಂದು, ಹನ್ನೊಂದು ಸಾವಿರದ ಒಂದು… ಹೀಗೆ ಜ್ಯೋತಿಷ್ಯ ಮತ್ತು ಪೂಜಾ ಕ್ಷೇತ್ರಗಳಲ್ಲಿ ಅವಿಷ್ಕಾರಗಳಾಗಿವೆ! ಹಿಂದೆ ಮನೆಯ ಒಂದು ಕೋಣೆಯೊಳಗಿನ ಅಥವಾ ಗೋಡೆಗಂಟಿದ ಹಲವಾರು ದೇವರುಗಳಿಗೆ ಊದುಬತ್ತಿ ಹಚ್ಚಿ, ಕೈಮುಗಿದು ಬೇಡಿಕೊಂಡರೆ ಸಾಕಿತ್ತು. ಹೆಚ್ಚು ಭಯವಾದರೆ ಮುಡಿಪು ಇಟ್ಟರೆ ಸಾಕಿತ್ತು! ಅದರೆ, ಈ ಕೋಮುವಾದಿ ವಿಷ ಧರ್ಮದಲ್ಲಿ ಇರಲಿಲ್ಲ! ಈಗ ಹೇಗೆ ಧರ್ಮವನ್ನು ಕೋಮುವಾದಿ ಬಿಸಿನೆಸ್ ಮಾಡುವಲ್ಲಿ ಎಷ್ಟೆಲ್ಲಾ ಅವಿಷ್ಕಾರಗಳನ್ನು ಮಾಡಲಾಗಿದೆ ಎಂಬುದನ್ನು ನೀವೇ ನೋಡಬಹುದು.
ಮಗುವಿಗೆ ಹೆಸರು ಇಡುವುದರಿಂದ ಹಿಡಿದು, ಹುಟ್ಟಿದ ಜಾತಕ, ತಗಲಿಕೊಂಡಿರುವ ರೋಗಗಳು, ಪೂರ್ವಜಾತ ದೋಷಗಳು, ನಕ್ಷತ್ರಗಳು, ಅವುಗಳ ಫಲಗಳು, ಯಮಗಂಡ, ರಾಹುಗಂಡ, ಕೇತುಗಂಡ, ನಾಗದೋಷ, ಶನಿಪ್ರಭಾವ ಮತ್ತು ಶಾಪ, ಹಿರಿಯರ ಶಾಪ, ಅಶಾಂತಿ… ಮತ್ತದಕ್ಕೆ ಪರಿಹಾರಗಳು! ಎಲ್ಲವಕ್ಕೂ ಮಹಾ ಸಂಶೋಧನೆಗಳು ಅಗಿವೆ- ವಿಜ್ಞಾನವನ್ನು ನಾಚಿಸುವಷ್ಟು! ನೀವೇ ಯೋಚಿಸಿದರೆ ಲೆಕ್ಕ ಹಾಕಬಹುದು! ಆದರೂ ಮುಂದಕ್ಕೆ ಎಲ್ಲಾ ಸಂಶೋಧನೆಗಳನ್ನೂ ಸಂಶೋಧಕರನ್ನು ವಿವರವಾಗಿ ನೋಡಿ! ಸಂಶೋಧನೆಯ ವಿವರಗಳು ಅನಂತವಾಗಿವೆ!
ಇಂದು ಬೆಳಗಾಗುತ್ತ ಎದ್ದಾಗ ನಾವು ನೋಡುವುದೇನು?! ಟಿವಿ, ಇಂಟರ್ನೆಟ್! ವಿಜ್ಞಾನದ ಉತ್ಪತ್ತಿಗಳಲ್ಲಿ ರಾರಾಜಿಸುವುದೇನು ಬ್ರಹ್ಮಾಂಡ ಜ್ಯೋತಿಷ್ಯದ ಮಹಾನ್ ಆವಿಷ್ಕಾರಗಳು! ಆ ಮಹಾನ್ ಸಂಶೋಧನೆಗಳು!
ಮಗು ಹುಟ್ಟಿದಾಗ ಏನು ಮಾಡಬೇಕು? ಬಾಲ ಕರ್ಮಗಳೇನು? ಜಾತದೋಷಗಳೇನು? ಭವಿಷ್ಯ ಏನು? ಗಂಡಗಳೇನು? ದೋಷಗಳೇನು? ಪರಿಹಾರಗಳೇನು?
ಹಾವು ಸತ್ತರೆ ಏನು ಮಾಡಬೇಕು? ಎಷ್ಟು ಜನ ಬ್ರಾಹ್ಮಣರಿಗೆ ಊಟ ಹಾಕಬೇಕು? ಗೋದಾನ, ಭೂದಾನ, ಸುವರ್ಣ ದಾನ ಇತ್ಯಾದಿಗಳ ಪುಣ್ಯ ಫಲವೇನು? ಗೋವು, ಸುವರ್ಣ ಇಲ್ಲದಿದ್ದಲ್ಲಿ ಪರಿಹಾರವೇನು? ಇಂಟರ್‍ನೆಟ್‍ನಿಂದ ಹೇಗೆ ಪೂಜೆ ಮಾಡಿಸಬಹುದು? ಪ್ರಸಾದ ಪಡೆಯಬಹುದು? ಇವೆಲ್ಲವುಗಳ ಬಗ್ಗೆ ಸಾವಿರಾರು ಸಂಶೋಧನೆಗಳು ಲಭ್ಯವಿವೆ! ಪೇಟೆಂಟ್ ಮಾಡಿಕೊಂಡಿರುವ ವಿಜ್ಞಾನಿಗಳೂ ಲಭ್ಯವಿದ್ದಾರೆ! ಅವರನ್ನೆಲ್ಲಾ ಮುಂದಿನ ವಾರ ಭೇಟಿಯಾಗೋಣ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...