Homeಸಾಮಾಜಿಕವಿಜ್ಞಾನ ನಾಚುವಂತಹ ಪೂಜಾ, ಜ್ಯೋತಿಷ್ಯ ಆವಿಷ್ಕಾರಗಳು!

ವಿಜ್ಞಾನ ನಾಚುವಂತಹ ಪೂಜಾ, ಜ್ಯೋತಿಷ್ಯ ಆವಿಷ್ಕಾರಗಳು!

- Advertisement -
- Advertisement -

ಪ್ಪತ್ತನೆಯ ಶತಮಾನದ ಅದಿಭಾಗದಿಂದ ಹಿಡಿದು ಇತ್ತೀಚಿನವರೆಗೆ ವಿಶ್ವದಲ್ಲಿ ಸಾವಿರಾರು ಆವಿಷ್ಕಾರಗಳಾಗಿವೆ. ಇಂದು ಮಧ್ಯವಯಸ್ಸಿನಲ್ಲಿರುವವರು ಅದೃಷ್ಟಶಾಲಿಗಳೆಂದು ಹೇಳಬಹುದು!
ಚಿಮಣಿ ದೀಪಗಳಿದ್ದ ಮನೆಗಳಿಗೆ ವಿದ್ಯುತ್ ದೀಪಗಳು ಬಂದಿವೆ. ಟೆಂಟು ಬಂದರೆ ಮಾತ್ರ ನೋಡಲು ಸಾಧ್ಯವಾಗುತ್ತಿದ್ಧ ಸಿನಿಮಾ ಮನೆಯಲ್ಲೇ ಕುಳಿತು ನೋಡಬಹುದು. ಸಿನಿಮಾ, ಧಾರಾವಾಹಿಗಳೇ ಜೀವನ ಎಂದು ತಿಳಿದುಕೊಂಡವರೂ ನಮ್ಮ ನಡುವೆ ಇದ್ದಾರೆ.
ಸಂಪರ್ಕದ ಕೊಂಡಿಯಾಗಿದ್ದ ಅಂಚೆ ಇಂದು ಇತಿಹಾಸವಾಗುತ್ತಿದೆ. ಯಾರಾದರೂ ಸತ್ತರೆ ದೂರದ ಊರುಗಳಲ್ಲಿ ಇರುವ ಬಂಧುಗಳಿಗೆ “ಮದರ್ ಸೀರಿಯಸ್. ಸ್ಟಾರ್ಟ್ ಇಮ್ಮಿಡಿಯೆಟ್ಲಿ” ಎಂದು ‘ವಯರ್’ ಕಳಿಸುತ್ತಿದ್ದ- ಅಂದರೆ ಟೆಲಿಗ್ರಾಂ ಕಳಿಸುತ್ತಿದ್ದ ಕಾಲದಿಂದ ವಯರ್ ಇಲ್ಲದೇ ಹೆಣದ ಫೋಟೊ ತೆಗೆದು ಲೈವಾಗಿ ಸಂಬಂಧಿಕರಿಗೆ ತಿಳಿಸುವ ಯುಗವನ್ನು ಮುಟ್ಟಿದ್ದೇವೆ! ಕಂಪ್ಯೂಟರ್ ಬಂದಿದೆ! ಕ್ಯಾಷ್‍ಲೆಸ್ ಆಗಿದ್ದೇವೆ! ವಿಜ್ಞಾನದ ಆವಿಷ್ಕಾರಗಳ ಫಲವನ್ನು ಉಣ್ಣುತ್ತಾ ಬಂದಿದ್ದೇವೆ. ಮೂಷಿಕ, ಗರುಡ, ಸಿಂಹ, ನಂದಿ ವಾಹನರಾಗಿದ್ದ ನಾವು- ಬೈಕ್, ಸ್ಕೂಟರ್, ಕಾರು, ಬಸ್ಸು, ರೈಲು ವಿಮಾನ ವಾಹನರಾಗಿದ್ದೇವೆ! ಚಪ್ಪಡೆ ಭೂಮಿಯನ್ನು ದುಂಡಗೆ ಮಾಡಿದ್ದೇವೆ! ಸಾಮೂಹಿಕ ವಿನಾಶದ ಅಸ್ತ್ರಗಳನ್ನು ದಾಸ್ತಾನು ಇಟ್ಟಿದ್ದೇವೆ! … ವಿಷಗಳನ್ನು, ವಿಷಯಗಳನ್ನು ಉತ್ಪಾದಿಸುತ್ತಿದ್ದೇವೆ!
ಬರೆಯುತ್ತಾ ಹೋದರೆ ಸಾವಿರಾರಿವೆ! ನಮ್ಮ ಸುತ್ತಲೂ ಬೇಕೆಂದೋ ಬೇಡವೆಂದೋ ರಾಶಿಬಿದ್ದಿರುವ ಸಲಕರಣೆಗಳು ತಂತ್ರಜ್ಞಾನಗಳನ್ನು ಒಮ್ಮೆ ನೋಡಿದರೆ, ಇದನ್ನು ಕಂಡುಹಿಡಿದವರ ನೆನಪಾದರೂ ನಮಗಿದೆಯೆ?
ಅದರೆ, ನಮಗೆ ಕೋಟ್ಯಾಂತರ ದೇವರು, ದೈವಗಳ, ಅಂತರ, ಬೆಂತರ, ಕುಲೆ, ಪಿಶಾಚಿಗಳ ನೆನಪಿದೆ! ಯಾಕೆಂದರೆ ನಮಗೆ ಭಯವಿದೆ! ಅದನ್ನೇ ನಾವು ನಂಬಿಕೆ ಎಂದು ಕರೆಯುತ್ತೇವೆ!
ಇದೇ ಭಯವನ್ನು ಬಂಡವಾಳ ಮಾಡಿಕೊಂಡು ಸಾವಿರದ ಒಂದು, ಹನ್ನೊಂದು ಸಾವಿರದ ಒಂದು… ಹೀಗೆ ಜ್ಯೋತಿಷ್ಯ ಮತ್ತು ಪೂಜಾ ಕ್ಷೇತ್ರಗಳಲ್ಲಿ ಅವಿಷ್ಕಾರಗಳಾಗಿವೆ! ಹಿಂದೆ ಮನೆಯ ಒಂದು ಕೋಣೆಯೊಳಗಿನ ಅಥವಾ ಗೋಡೆಗಂಟಿದ ಹಲವಾರು ದೇವರುಗಳಿಗೆ ಊದುಬತ್ತಿ ಹಚ್ಚಿ, ಕೈಮುಗಿದು ಬೇಡಿಕೊಂಡರೆ ಸಾಕಿತ್ತು. ಹೆಚ್ಚು ಭಯವಾದರೆ ಮುಡಿಪು ಇಟ್ಟರೆ ಸಾಕಿತ್ತು! ಅದರೆ, ಈ ಕೋಮುವಾದಿ ವಿಷ ಧರ್ಮದಲ್ಲಿ ಇರಲಿಲ್ಲ! ಈಗ ಹೇಗೆ ಧರ್ಮವನ್ನು ಕೋಮುವಾದಿ ಬಿಸಿನೆಸ್ ಮಾಡುವಲ್ಲಿ ಎಷ್ಟೆಲ್ಲಾ ಅವಿಷ್ಕಾರಗಳನ್ನು ಮಾಡಲಾಗಿದೆ ಎಂಬುದನ್ನು ನೀವೇ ನೋಡಬಹುದು.
ಮಗುವಿಗೆ ಹೆಸರು ಇಡುವುದರಿಂದ ಹಿಡಿದು, ಹುಟ್ಟಿದ ಜಾತಕ, ತಗಲಿಕೊಂಡಿರುವ ರೋಗಗಳು, ಪೂರ್ವಜಾತ ದೋಷಗಳು, ನಕ್ಷತ್ರಗಳು, ಅವುಗಳ ಫಲಗಳು, ಯಮಗಂಡ, ರಾಹುಗಂಡ, ಕೇತುಗಂಡ, ನಾಗದೋಷ, ಶನಿಪ್ರಭಾವ ಮತ್ತು ಶಾಪ, ಹಿರಿಯರ ಶಾಪ, ಅಶಾಂತಿ… ಮತ್ತದಕ್ಕೆ ಪರಿಹಾರಗಳು! ಎಲ್ಲವಕ್ಕೂ ಮಹಾ ಸಂಶೋಧನೆಗಳು ಅಗಿವೆ- ವಿಜ್ಞಾನವನ್ನು ನಾಚಿಸುವಷ್ಟು! ನೀವೇ ಯೋಚಿಸಿದರೆ ಲೆಕ್ಕ ಹಾಕಬಹುದು! ಆದರೂ ಮುಂದಕ್ಕೆ ಎಲ್ಲಾ ಸಂಶೋಧನೆಗಳನ್ನೂ ಸಂಶೋಧಕರನ್ನು ವಿವರವಾಗಿ ನೋಡಿ! ಸಂಶೋಧನೆಯ ವಿವರಗಳು ಅನಂತವಾಗಿವೆ!
ಇಂದು ಬೆಳಗಾಗುತ್ತ ಎದ್ದಾಗ ನಾವು ನೋಡುವುದೇನು?! ಟಿವಿ, ಇಂಟರ್ನೆಟ್! ವಿಜ್ಞಾನದ ಉತ್ಪತ್ತಿಗಳಲ್ಲಿ ರಾರಾಜಿಸುವುದೇನು ಬ್ರಹ್ಮಾಂಡ ಜ್ಯೋತಿಷ್ಯದ ಮಹಾನ್ ಆವಿಷ್ಕಾರಗಳು! ಆ ಮಹಾನ್ ಸಂಶೋಧನೆಗಳು!
ಮಗು ಹುಟ್ಟಿದಾಗ ಏನು ಮಾಡಬೇಕು? ಬಾಲ ಕರ್ಮಗಳೇನು? ಜಾತದೋಷಗಳೇನು? ಭವಿಷ್ಯ ಏನು? ಗಂಡಗಳೇನು? ದೋಷಗಳೇನು? ಪರಿಹಾರಗಳೇನು?
ಹಾವು ಸತ್ತರೆ ಏನು ಮಾಡಬೇಕು? ಎಷ್ಟು ಜನ ಬ್ರಾಹ್ಮಣರಿಗೆ ಊಟ ಹಾಕಬೇಕು? ಗೋದಾನ, ಭೂದಾನ, ಸುವರ್ಣ ದಾನ ಇತ್ಯಾದಿಗಳ ಪುಣ್ಯ ಫಲವೇನು? ಗೋವು, ಸುವರ್ಣ ಇಲ್ಲದಿದ್ದಲ್ಲಿ ಪರಿಹಾರವೇನು? ಇಂಟರ್‍ನೆಟ್‍ನಿಂದ ಹೇಗೆ ಪೂಜೆ ಮಾಡಿಸಬಹುದು? ಪ್ರಸಾದ ಪಡೆಯಬಹುದು? ಇವೆಲ್ಲವುಗಳ ಬಗ್ಗೆ ಸಾವಿರಾರು ಸಂಶೋಧನೆಗಳು ಲಭ್ಯವಿವೆ! ಪೇಟೆಂಟ್ ಮಾಡಿಕೊಂಡಿರುವ ವಿಜ್ಞಾನಿಗಳೂ ಲಭ್ಯವಿದ್ದಾರೆ! ಅವರನ್ನೆಲ್ಲಾ ಮುಂದಿನ ವಾರ ಭೇಟಿಯಾಗೋಣ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...