Homeಸಾಮಾಜಿಕವಿಜ್ಞಾನ ನಾಚುವಂತಹ ಪೂಜಾ, ಜ್ಯೋತಿಷ್ಯ ಆವಿಷ್ಕಾರಗಳು!

ವಿಜ್ಞಾನ ನಾಚುವಂತಹ ಪೂಜಾ, ಜ್ಯೋತಿಷ್ಯ ಆವಿಷ್ಕಾರಗಳು!

- Advertisement -
- Advertisement -

ಪ್ಪತ್ತನೆಯ ಶತಮಾನದ ಅದಿಭಾಗದಿಂದ ಹಿಡಿದು ಇತ್ತೀಚಿನವರೆಗೆ ವಿಶ್ವದಲ್ಲಿ ಸಾವಿರಾರು ಆವಿಷ್ಕಾರಗಳಾಗಿವೆ. ಇಂದು ಮಧ್ಯವಯಸ್ಸಿನಲ್ಲಿರುವವರು ಅದೃಷ್ಟಶಾಲಿಗಳೆಂದು ಹೇಳಬಹುದು!
ಚಿಮಣಿ ದೀಪಗಳಿದ್ದ ಮನೆಗಳಿಗೆ ವಿದ್ಯುತ್ ದೀಪಗಳು ಬಂದಿವೆ. ಟೆಂಟು ಬಂದರೆ ಮಾತ್ರ ನೋಡಲು ಸಾಧ್ಯವಾಗುತ್ತಿದ್ಧ ಸಿನಿಮಾ ಮನೆಯಲ್ಲೇ ಕುಳಿತು ನೋಡಬಹುದು. ಸಿನಿಮಾ, ಧಾರಾವಾಹಿಗಳೇ ಜೀವನ ಎಂದು ತಿಳಿದುಕೊಂಡವರೂ ನಮ್ಮ ನಡುವೆ ಇದ್ದಾರೆ.
ಸಂಪರ್ಕದ ಕೊಂಡಿಯಾಗಿದ್ದ ಅಂಚೆ ಇಂದು ಇತಿಹಾಸವಾಗುತ್ತಿದೆ. ಯಾರಾದರೂ ಸತ್ತರೆ ದೂರದ ಊರುಗಳಲ್ಲಿ ಇರುವ ಬಂಧುಗಳಿಗೆ “ಮದರ್ ಸೀರಿಯಸ್. ಸ್ಟಾರ್ಟ್ ಇಮ್ಮಿಡಿಯೆಟ್ಲಿ” ಎಂದು ‘ವಯರ್’ ಕಳಿಸುತ್ತಿದ್ದ- ಅಂದರೆ ಟೆಲಿಗ್ರಾಂ ಕಳಿಸುತ್ತಿದ್ದ ಕಾಲದಿಂದ ವಯರ್ ಇಲ್ಲದೇ ಹೆಣದ ಫೋಟೊ ತೆಗೆದು ಲೈವಾಗಿ ಸಂಬಂಧಿಕರಿಗೆ ತಿಳಿಸುವ ಯುಗವನ್ನು ಮುಟ್ಟಿದ್ದೇವೆ! ಕಂಪ್ಯೂಟರ್ ಬಂದಿದೆ! ಕ್ಯಾಷ್‍ಲೆಸ್ ಆಗಿದ್ದೇವೆ! ವಿಜ್ಞಾನದ ಆವಿಷ್ಕಾರಗಳ ಫಲವನ್ನು ಉಣ್ಣುತ್ತಾ ಬಂದಿದ್ದೇವೆ. ಮೂಷಿಕ, ಗರುಡ, ಸಿಂಹ, ನಂದಿ ವಾಹನರಾಗಿದ್ದ ನಾವು- ಬೈಕ್, ಸ್ಕೂಟರ್, ಕಾರು, ಬಸ್ಸು, ರೈಲು ವಿಮಾನ ವಾಹನರಾಗಿದ್ದೇವೆ! ಚಪ್ಪಡೆ ಭೂಮಿಯನ್ನು ದುಂಡಗೆ ಮಾಡಿದ್ದೇವೆ! ಸಾಮೂಹಿಕ ವಿನಾಶದ ಅಸ್ತ್ರಗಳನ್ನು ದಾಸ್ತಾನು ಇಟ್ಟಿದ್ದೇವೆ! … ವಿಷಗಳನ್ನು, ವಿಷಯಗಳನ್ನು ಉತ್ಪಾದಿಸುತ್ತಿದ್ದೇವೆ!
ಬರೆಯುತ್ತಾ ಹೋದರೆ ಸಾವಿರಾರಿವೆ! ನಮ್ಮ ಸುತ್ತಲೂ ಬೇಕೆಂದೋ ಬೇಡವೆಂದೋ ರಾಶಿಬಿದ್ದಿರುವ ಸಲಕರಣೆಗಳು ತಂತ್ರಜ್ಞಾನಗಳನ್ನು ಒಮ್ಮೆ ನೋಡಿದರೆ, ಇದನ್ನು ಕಂಡುಹಿಡಿದವರ ನೆನಪಾದರೂ ನಮಗಿದೆಯೆ?
ಅದರೆ, ನಮಗೆ ಕೋಟ್ಯಾಂತರ ದೇವರು, ದೈವಗಳ, ಅಂತರ, ಬೆಂತರ, ಕುಲೆ, ಪಿಶಾಚಿಗಳ ನೆನಪಿದೆ! ಯಾಕೆಂದರೆ ನಮಗೆ ಭಯವಿದೆ! ಅದನ್ನೇ ನಾವು ನಂಬಿಕೆ ಎಂದು ಕರೆಯುತ್ತೇವೆ!
ಇದೇ ಭಯವನ್ನು ಬಂಡವಾಳ ಮಾಡಿಕೊಂಡು ಸಾವಿರದ ಒಂದು, ಹನ್ನೊಂದು ಸಾವಿರದ ಒಂದು… ಹೀಗೆ ಜ್ಯೋತಿಷ್ಯ ಮತ್ತು ಪೂಜಾ ಕ್ಷೇತ್ರಗಳಲ್ಲಿ ಅವಿಷ್ಕಾರಗಳಾಗಿವೆ! ಹಿಂದೆ ಮನೆಯ ಒಂದು ಕೋಣೆಯೊಳಗಿನ ಅಥವಾ ಗೋಡೆಗಂಟಿದ ಹಲವಾರು ದೇವರುಗಳಿಗೆ ಊದುಬತ್ತಿ ಹಚ್ಚಿ, ಕೈಮುಗಿದು ಬೇಡಿಕೊಂಡರೆ ಸಾಕಿತ್ತು. ಹೆಚ್ಚು ಭಯವಾದರೆ ಮುಡಿಪು ಇಟ್ಟರೆ ಸಾಕಿತ್ತು! ಅದರೆ, ಈ ಕೋಮುವಾದಿ ವಿಷ ಧರ್ಮದಲ್ಲಿ ಇರಲಿಲ್ಲ! ಈಗ ಹೇಗೆ ಧರ್ಮವನ್ನು ಕೋಮುವಾದಿ ಬಿಸಿನೆಸ್ ಮಾಡುವಲ್ಲಿ ಎಷ್ಟೆಲ್ಲಾ ಅವಿಷ್ಕಾರಗಳನ್ನು ಮಾಡಲಾಗಿದೆ ಎಂಬುದನ್ನು ನೀವೇ ನೋಡಬಹುದು.
ಮಗುವಿಗೆ ಹೆಸರು ಇಡುವುದರಿಂದ ಹಿಡಿದು, ಹುಟ್ಟಿದ ಜಾತಕ, ತಗಲಿಕೊಂಡಿರುವ ರೋಗಗಳು, ಪೂರ್ವಜಾತ ದೋಷಗಳು, ನಕ್ಷತ್ರಗಳು, ಅವುಗಳ ಫಲಗಳು, ಯಮಗಂಡ, ರಾಹುಗಂಡ, ಕೇತುಗಂಡ, ನಾಗದೋಷ, ಶನಿಪ್ರಭಾವ ಮತ್ತು ಶಾಪ, ಹಿರಿಯರ ಶಾಪ, ಅಶಾಂತಿ… ಮತ್ತದಕ್ಕೆ ಪರಿಹಾರಗಳು! ಎಲ್ಲವಕ್ಕೂ ಮಹಾ ಸಂಶೋಧನೆಗಳು ಅಗಿವೆ- ವಿಜ್ಞಾನವನ್ನು ನಾಚಿಸುವಷ್ಟು! ನೀವೇ ಯೋಚಿಸಿದರೆ ಲೆಕ್ಕ ಹಾಕಬಹುದು! ಆದರೂ ಮುಂದಕ್ಕೆ ಎಲ್ಲಾ ಸಂಶೋಧನೆಗಳನ್ನೂ ಸಂಶೋಧಕರನ್ನು ವಿವರವಾಗಿ ನೋಡಿ! ಸಂಶೋಧನೆಯ ವಿವರಗಳು ಅನಂತವಾಗಿವೆ!
ಇಂದು ಬೆಳಗಾಗುತ್ತ ಎದ್ದಾಗ ನಾವು ನೋಡುವುದೇನು?! ಟಿವಿ, ಇಂಟರ್ನೆಟ್! ವಿಜ್ಞಾನದ ಉತ್ಪತ್ತಿಗಳಲ್ಲಿ ರಾರಾಜಿಸುವುದೇನು ಬ್ರಹ್ಮಾಂಡ ಜ್ಯೋತಿಷ್ಯದ ಮಹಾನ್ ಆವಿಷ್ಕಾರಗಳು! ಆ ಮಹಾನ್ ಸಂಶೋಧನೆಗಳು!
ಮಗು ಹುಟ್ಟಿದಾಗ ಏನು ಮಾಡಬೇಕು? ಬಾಲ ಕರ್ಮಗಳೇನು? ಜಾತದೋಷಗಳೇನು? ಭವಿಷ್ಯ ಏನು? ಗಂಡಗಳೇನು? ದೋಷಗಳೇನು? ಪರಿಹಾರಗಳೇನು?
ಹಾವು ಸತ್ತರೆ ಏನು ಮಾಡಬೇಕು? ಎಷ್ಟು ಜನ ಬ್ರಾಹ್ಮಣರಿಗೆ ಊಟ ಹಾಕಬೇಕು? ಗೋದಾನ, ಭೂದಾನ, ಸುವರ್ಣ ದಾನ ಇತ್ಯಾದಿಗಳ ಪುಣ್ಯ ಫಲವೇನು? ಗೋವು, ಸುವರ್ಣ ಇಲ್ಲದಿದ್ದಲ್ಲಿ ಪರಿಹಾರವೇನು? ಇಂಟರ್‍ನೆಟ್‍ನಿಂದ ಹೇಗೆ ಪೂಜೆ ಮಾಡಿಸಬಹುದು? ಪ್ರಸಾದ ಪಡೆಯಬಹುದು? ಇವೆಲ್ಲವುಗಳ ಬಗ್ಗೆ ಸಾವಿರಾರು ಸಂಶೋಧನೆಗಳು ಲಭ್ಯವಿವೆ! ಪೇಟೆಂಟ್ ಮಾಡಿಕೊಂಡಿರುವ ವಿಜ್ಞಾನಿಗಳೂ ಲಭ್ಯವಿದ್ದಾರೆ! ಅವರನ್ನೆಲ್ಲಾ ಮುಂದಿನ ವಾರ ಭೇಟಿಯಾಗೋಣ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...