Homeಸಾಮಾಜಿಕವಿಜ್ಞಾನ ನಾಚುವಂತಹ ಪೂಜಾ, ಜ್ಯೋತಿಷ್ಯ ಆವಿಷ್ಕಾರಗಳು!

ವಿಜ್ಞಾನ ನಾಚುವಂತಹ ಪೂಜಾ, ಜ್ಯೋತಿಷ್ಯ ಆವಿಷ್ಕಾರಗಳು!

- Advertisement -
- Advertisement -

ಪ್ಪತ್ತನೆಯ ಶತಮಾನದ ಅದಿಭಾಗದಿಂದ ಹಿಡಿದು ಇತ್ತೀಚಿನವರೆಗೆ ವಿಶ್ವದಲ್ಲಿ ಸಾವಿರಾರು ಆವಿಷ್ಕಾರಗಳಾಗಿವೆ. ಇಂದು ಮಧ್ಯವಯಸ್ಸಿನಲ್ಲಿರುವವರು ಅದೃಷ್ಟಶಾಲಿಗಳೆಂದು ಹೇಳಬಹುದು!
ಚಿಮಣಿ ದೀಪಗಳಿದ್ದ ಮನೆಗಳಿಗೆ ವಿದ್ಯುತ್ ದೀಪಗಳು ಬಂದಿವೆ. ಟೆಂಟು ಬಂದರೆ ಮಾತ್ರ ನೋಡಲು ಸಾಧ್ಯವಾಗುತ್ತಿದ್ಧ ಸಿನಿಮಾ ಮನೆಯಲ್ಲೇ ಕುಳಿತು ನೋಡಬಹುದು. ಸಿನಿಮಾ, ಧಾರಾವಾಹಿಗಳೇ ಜೀವನ ಎಂದು ತಿಳಿದುಕೊಂಡವರೂ ನಮ್ಮ ನಡುವೆ ಇದ್ದಾರೆ.
ಸಂಪರ್ಕದ ಕೊಂಡಿಯಾಗಿದ್ದ ಅಂಚೆ ಇಂದು ಇತಿಹಾಸವಾಗುತ್ತಿದೆ. ಯಾರಾದರೂ ಸತ್ತರೆ ದೂರದ ಊರುಗಳಲ್ಲಿ ಇರುವ ಬಂಧುಗಳಿಗೆ “ಮದರ್ ಸೀರಿಯಸ್. ಸ್ಟಾರ್ಟ್ ಇಮ್ಮಿಡಿಯೆಟ್ಲಿ” ಎಂದು ‘ವಯರ್’ ಕಳಿಸುತ್ತಿದ್ದ- ಅಂದರೆ ಟೆಲಿಗ್ರಾಂ ಕಳಿಸುತ್ತಿದ್ದ ಕಾಲದಿಂದ ವಯರ್ ಇಲ್ಲದೇ ಹೆಣದ ಫೋಟೊ ತೆಗೆದು ಲೈವಾಗಿ ಸಂಬಂಧಿಕರಿಗೆ ತಿಳಿಸುವ ಯುಗವನ್ನು ಮುಟ್ಟಿದ್ದೇವೆ! ಕಂಪ್ಯೂಟರ್ ಬಂದಿದೆ! ಕ್ಯಾಷ್‍ಲೆಸ್ ಆಗಿದ್ದೇವೆ! ವಿಜ್ಞಾನದ ಆವಿಷ್ಕಾರಗಳ ಫಲವನ್ನು ಉಣ್ಣುತ್ತಾ ಬಂದಿದ್ದೇವೆ. ಮೂಷಿಕ, ಗರುಡ, ಸಿಂಹ, ನಂದಿ ವಾಹನರಾಗಿದ್ದ ನಾವು- ಬೈಕ್, ಸ್ಕೂಟರ್, ಕಾರು, ಬಸ್ಸು, ರೈಲು ವಿಮಾನ ವಾಹನರಾಗಿದ್ದೇವೆ! ಚಪ್ಪಡೆ ಭೂಮಿಯನ್ನು ದುಂಡಗೆ ಮಾಡಿದ್ದೇವೆ! ಸಾಮೂಹಿಕ ವಿನಾಶದ ಅಸ್ತ್ರಗಳನ್ನು ದಾಸ್ತಾನು ಇಟ್ಟಿದ್ದೇವೆ! … ವಿಷಗಳನ್ನು, ವಿಷಯಗಳನ್ನು ಉತ್ಪಾದಿಸುತ್ತಿದ್ದೇವೆ!
ಬರೆಯುತ್ತಾ ಹೋದರೆ ಸಾವಿರಾರಿವೆ! ನಮ್ಮ ಸುತ್ತಲೂ ಬೇಕೆಂದೋ ಬೇಡವೆಂದೋ ರಾಶಿಬಿದ್ದಿರುವ ಸಲಕರಣೆಗಳು ತಂತ್ರಜ್ಞಾನಗಳನ್ನು ಒಮ್ಮೆ ನೋಡಿದರೆ, ಇದನ್ನು ಕಂಡುಹಿಡಿದವರ ನೆನಪಾದರೂ ನಮಗಿದೆಯೆ?
ಅದರೆ, ನಮಗೆ ಕೋಟ್ಯಾಂತರ ದೇವರು, ದೈವಗಳ, ಅಂತರ, ಬೆಂತರ, ಕುಲೆ, ಪಿಶಾಚಿಗಳ ನೆನಪಿದೆ! ಯಾಕೆಂದರೆ ನಮಗೆ ಭಯವಿದೆ! ಅದನ್ನೇ ನಾವು ನಂಬಿಕೆ ಎಂದು ಕರೆಯುತ್ತೇವೆ!
ಇದೇ ಭಯವನ್ನು ಬಂಡವಾಳ ಮಾಡಿಕೊಂಡು ಸಾವಿರದ ಒಂದು, ಹನ್ನೊಂದು ಸಾವಿರದ ಒಂದು… ಹೀಗೆ ಜ್ಯೋತಿಷ್ಯ ಮತ್ತು ಪೂಜಾ ಕ್ಷೇತ್ರಗಳಲ್ಲಿ ಅವಿಷ್ಕಾರಗಳಾಗಿವೆ! ಹಿಂದೆ ಮನೆಯ ಒಂದು ಕೋಣೆಯೊಳಗಿನ ಅಥವಾ ಗೋಡೆಗಂಟಿದ ಹಲವಾರು ದೇವರುಗಳಿಗೆ ಊದುಬತ್ತಿ ಹಚ್ಚಿ, ಕೈಮುಗಿದು ಬೇಡಿಕೊಂಡರೆ ಸಾಕಿತ್ತು. ಹೆಚ್ಚು ಭಯವಾದರೆ ಮುಡಿಪು ಇಟ್ಟರೆ ಸಾಕಿತ್ತು! ಅದರೆ, ಈ ಕೋಮುವಾದಿ ವಿಷ ಧರ್ಮದಲ್ಲಿ ಇರಲಿಲ್ಲ! ಈಗ ಹೇಗೆ ಧರ್ಮವನ್ನು ಕೋಮುವಾದಿ ಬಿಸಿನೆಸ್ ಮಾಡುವಲ್ಲಿ ಎಷ್ಟೆಲ್ಲಾ ಅವಿಷ್ಕಾರಗಳನ್ನು ಮಾಡಲಾಗಿದೆ ಎಂಬುದನ್ನು ನೀವೇ ನೋಡಬಹುದು.
ಮಗುವಿಗೆ ಹೆಸರು ಇಡುವುದರಿಂದ ಹಿಡಿದು, ಹುಟ್ಟಿದ ಜಾತಕ, ತಗಲಿಕೊಂಡಿರುವ ರೋಗಗಳು, ಪೂರ್ವಜಾತ ದೋಷಗಳು, ನಕ್ಷತ್ರಗಳು, ಅವುಗಳ ಫಲಗಳು, ಯಮಗಂಡ, ರಾಹುಗಂಡ, ಕೇತುಗಂಡ, ನಾಗದೋಷ, ಶನಿಪ್ರಭಾವ ಮತ್ತು ಶಾಪ, ಹಿರಿಯರ ಶಾಪ, ಅಶಾಂತಿ… ಮತ್ತದಕ್ಕೆ ಪರಿಹಾರಗಳು! ಎಲ್ಲವಕ್ಕೂ ಮಹಾ ಸಂಶೋಧನೆಗಳು ಅಗಿವೆ- ವಿಜ್ಞಾನವನ್ನು ನಾಚಿಸುವಷ್ಟು! ನೀವೇ ಯೋಚಿಸಿದರೆ ಲೆಕ್ಕ ಹಾಕಬಹುದು! ಆದರೂ ಮುಂದಕ್ಕೆ ಎಲ್ಲಾ ಸಂಶೋಧನೆಗಳನ್ನೂ ಸಂಶೋಧಕರನ್ನು ವಿವರವಾಗಿ ನೋಡಿ! ಸಂಶೋಧನೆಯ ವಿವರಗಳು ಅನಂತವಾಗಿವೆ!
ಇಂದು ಬೆಳಗಾಗುತ್ತ ಎದ್ದಾಗ ನಾವು ನೋಡುವುದೇನು?! ಟಿವಿ, ಇಂಟರ್ನೆಟ್! ವಿಜ್ಞಾನದ ಉತ್ಪತ್ತಿಗಳಲ್ಲಿ ರಾರಾಜಿಸುವುದೇನು ಬ್ರಹ್ಮಾಂಡ ಜ್ಯೋತಿಷ್ಯದ ಮಹಾನ್ ಆವಿಷ್ಕಾರಗಳು! ಆ ಮಹಾನ್ ಸಂಶೋಧನೆಗಳು!
ಮಗು ಹುಟ್ಟಿದಾಗ ಏನು ಮಾಡಬೇಕು? ಬಾಲ ಕರ್ಮಗಳೇನು? ಜಾತದೋಷಗಳೇನು? ಭವಿಷ್ಯ ಏನು? ಗಂಡಗಳೇನು? ದೋಷಗಳೇನು? ಪರಿಹಾರಗಳೇನು?
ಹಾವು ಸತ್ತರೆ ಏನು ಮಾಡಬೇಕು? ಎಷ್ಟು ಜನ ಬ್ರಾಹ್ಮಣರಿಗೆ ಊಟ ಹಾಕಬೇಕು? ಗೋದಾನ, ಭೂದಾನ, ಸುವರ್ಣ ದಾನ ಇತ್ಯಾದಿಗಳ ಪುಣ್ಯ ಫಲವೇನು? ಗೋವು, ಸುವರ್ಣ ಇಲ್ಲದಿದ್ದಲ್ಲಿ ಪರಿಹಾರವೇನು? ಇಂಟರ್‍ನೆಟ್‍ನಿಂದ ಹೇಗೆ ಪೂಜೆ ಮಾಡಿಸಬಹುದು? ಪ್ರಸಾದ ಪಡೆಯಬಹುದು? ಇವೆಲ್ಲವುಗಳ ಬಗ್ಗೆ ಸಾವಿರಾರು ಸಂಶೋಧನೆಗಳು ಲಭ್ಯವಿವೆ! ಪೇಟೆಂಟ್ ಮಾಡಿಕೊಂಡಿರುವ ವಿಜ್ಞಾನಿಗಳೂ ಲಭ್ಯವಿದ್ದಾರೆ! ಅವರನ್ನೆಲ್ಲಾ ಮುಂದಿನ ವಾರ ಭೇಟಿಯಾಗೋಣ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...