Homeಕರ್ನಾಟಕಕುಡುಬಿ ಬುಡಕಟ್ಟಿನ ಬಡ ಕೂಲಿಕಾರರ ಹೆಣ್ಣು ಮಕ್ಕಳಿಗೆ ವಿಜ್ಞಾನ ರಾಷ್ಟ್ರ ಪ್ರಶಸ್ತಿ

ಕುಡುಬಿ ಬುಡಕಟ್ಟಿನ ಬಡ ಕೂಲಿಕಾರರ ಹೆಣ್ಣು ಮಕ್ಕಳಿಗೆ ವಿಜ್ಞಾನ ರಾಷ್ಟ್ರ ಪ್ರಶಸ್ತಿ

- Advertisement -
- Advertisement -

ಕುಂದಾಪುರದ ಅಲ್ಬಾಡಿ-ಆರ್ಡಿಯ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯ ಇಬ್ಬರು ಹೆಣ್ಣು ಮಕ್ಕಳು ರಾಷ್ಟ್ರ ಮಟ್ಟದ ವಿಜ್ಞಾನ ಪ್ರಶಸ್ತಿ ಪಡೆದು ಅಸಾಧಾರಾಣ ಪ್ರತಿಭಾವಂತರೆಂಬ ಪ್ರಶಂಸಗೆ ಪಾತ್ರರಾಗಿದ್ದಾರೆ!

10ನೇ ತರಗತಿಯ ವಿದ್ಯಾರ್ಥಿನಿಯರಾದ ರಕ್ಷಿತಾ ನಾಯ್ಕ್ ಮತ್ತು ಅನುಷಾ ನಾಯ್ಕ್ ರವರಿಗೆ ರಾಷ್ಟ್ರ ಮಟ್ಟದಲ್ಲಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ ನಡೆಸುವ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಕೌನ್ಸಿಲ್ [ಸಿಎಸ್‌ಐಆರ್] ರಾಷ್ಟ್ರೀಯ ನೂತನ ವಿಜ್ಞಾನ ಆವಿಷ್ಕಾರ ಸ್ಪರ್ಧೆಯ-ಅನ್ವೇ಼ಷಣಾ ಪ್ರಶಸ್ತಿ 2021 ಸಿಕ್ಕಿದೆ.

ಈ ಹುಡುಗಿಯರು ಸಂಶೋಧಿಸಿದ ಹೊಸ ವಿಜ್ಞಾನ ಆವಿಷ್ಕಾರ- ಗ್ಯಾಸ್ ಉಳಿತಾಯದ ಕಿಟ್ [ಜಿಎಸ್‌ಕೆ]ಗೆ ದೇಶದಲ್ಲಿ ನಾಲ್ಕನೇ ಸ್ಥಾನ ಬಂದಿದೆ. ಅನುಷಾ ಮತ್ತು ರಕ್ಷಿತಾ ಇಬ್ಬರೂ ಕಾಡಲ್ಲಿ ನೆಲೆ ಕಂಡುಕೊಂಡಿರುವ ತೀರಾ ಹಿಂದುಳಿದ ಕುಡುಬಿ ಸಮುದಯದ ಬಾಲಕಿಯರು. ಇವರು ವಾಸಿಸುವ ಹಳ್ಳಿ ಮಡಾಮಕ್ಕಿಯೂ ಹಿಂದುಳಿದ ಗ್ರಾಮೀಣ ಪ್ರದೇಶ. ಪಾಲಕರು ಕೂಲಿ ಕಾರ್ಮಿಕರು.

ಮಡಾಮಕ್ಕಿ ಗ್ರಾಮದ ಮಾರಾಡಿ ಮಾರ್ಕೈನ ಅನುಷಾ ತಂದೆ ಅಣ್ಣಯ್ಯ ನಾಯ್ಕ್, ತಾಯಿ ಪಾರ್ವತಿ ಗಾರೆ ಕೆಲಸ ಮಾಡಿ ಸಂಸಾರ ನಡೆಸಿಕೊಂಡಿದ್ದಾರೆ. ಮಡಾಮಕ್ಕಿಯ ಬಡಾ ಬೆಪ್ಪ ನಿವಾಸಿ ರಕ್ಷಿತಾ ತಂದೆ ರವಿ ನಾಯ್ಕ್- ತಾಯಿ ಜಲಜಾ ಶಾಮಿಯಾನ ಹಾಕುವುದು, ಗಾರೆ ಕೆಲಸಕ್ಕೆ ಹೋಗುತ್ತಾರೆ. ತಳ ಸಮುದಾಯದ ಈ ಮಕ್ಕಳು ರಾಷ್ಟ್ರ ಪ್ರಶಸ್ತಿ ತಂದಿರುವುದು ಪ್ರತಿಭಾವಂತಿಕೆ-ಹೆಮ್ಮೆಯ ಸಂಗತಿಯೆಂದು ಎಲ್ಲೆಡೆಯಿಂದ ಪ್ರಶಂಸೆ ಬರುತ್ತಿದೆ.

ಶಿಕ್ಷಣ ಇಲಾಖೆಯ ಆಯುಕ್ತರು ಅನುಷಾ ಮತ್ತು ರಕ್ಷತಾರಿಗೆ ತಲಾ 10 ಸಾವಿರ ರೂ. ಬಹುಮಾನ ಘೋಷಿಸಿದ್ದಾರೆ. ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮತ್ತು ಜಿಲ್ಲಾ ಶಿಕ್ಷಣಾಧಿಕಾರಿಗಳು ವಿಧ್ಯಾರ್ಥಿನಿಯರ ಮನೆಗೆ ಹೋಗಿ ಗೌರವಿಸಿ, ಪಾಲಕರಿಗೆ ಅಬಿನಂದಿಸಿದ್ದಾರೆ. ವಿದ್ಯಾರ್ಥಿನಿಯರ ಹೈಸ್ಕೂಲಿಗೆ ತೆರಳಿ ಶಿಕ್ಷಕ ಸಮುದಾಯವನ್ನು ಅಭಿನಂದಿಸಿದ್ದಾರೆ.

ಈ ಹಳ್ಳಿಗಾಡಿನ ಬುಡಕಟ್ಟು ಸಮುದಾಯದ ಜಾಣ ಹುಡುಗಿಯರು ಪಡೆದ ಪ್ರಶಸ್ತಿ ವಿಶೇಷವೂ ಹೌದು. ಸಿಎಸ್‌ಐಆರ್ ಪ್ರಶಸ್ತಿಗೆ ಆಯ್ಕೆಯಾಗಿರುವ ದೇಶದ ಒಟ್ಟು 14 ಶಾಲೆಗಳ ಸ್ಪರ್ಧಿಗಳಲ್ಲಿ ಸರಕಾರಿ ಶಾಲೆಯಿಂದ ಭಾಗವಹಿಸಿದ್ದ ಮಕ್ಕಳೆಂದರೆ ರಕ್ಷತಾ ಮತ್ತು ಅನುಷಾ ಮಾತ್ರ!

ಸಮಾಜಿಕ-ಶೈಕ್ಷಣಿಕವಾಗಿ ತೀರಾ ಹಿಂದುಳಿದ ಸಮುದಾಯ ಹೆಣ್ಣು ಮಕ್ಕಳು ವಿಜ್ಞಾನದಲ್ಲಿ ರಾಷ್ಟ್ರ ಪ್ರಶಸ್ತಿ ತಂದಿರುವುದು ಕರಾವಳಿಯ ಶೈಕ್ಷಣಿಕ ವಲಯದಲ್ಲಿ ಸಂಚಲನ ಮೂಡಿಸಿದೆ. ಅವರಿಗೆ ಅಭಿನಂದನೆಗಳು.


ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...