Homeಮುಖಪುಟಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭ; ಭಾರಿ ಬಿಗಿ ಭದ್ರತೆ

ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭ; ಭಾರಿ ಬಿಗಿ ಭದ್ರತೆ

- Advertisement -
- Advertisement -

ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯು, ದೇವಾಲಯದ ಮೇಲೆ ನಿರ್ಮಾಣವಾಗಿದೆಯೇ ಎಂಬುದರ ನಿರ್ಣಯಕ್ಕಾಗಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಸೋಮವಾರ ಬೆಳಿಗ್ಗೆ ವೈಜ್ಞಾನಿಕ ಸಮೀಕ್ಷೆ ಆರಂಭವಾಗಿದೆ. ಮಸೀದಿ ಸಂಕೀರ್ಣದೊಳಗೆ ತಮ್ಮ ದೇವರನ್ನು ಪೂಜಿಸಲು ಹಕ್ಕು ಕೋರಿ ಹಿಂದೂ ಅರ್ಜಿದಾರರ ಪ್ರಕರಣದಲ್ಲಿ ವಾರಣಾಸಿ ನ್ಯಾಯಾಲಯವು ಶುಕ್ರವಾರ ಸಮೀಕ್ಷೆಗೆ ಆದೇಶ ನೀಡಿತ್ತು.

ಭಾರತೀಯ ಪುರಾತತ್ವ ಇಲಾಖೆಯ 40 ಅಧಿಕಾರಿಗಳು ಬೆಳಿಗ್ಗೆ 7 ರಿಂದ ಸಮೀಕ್ಷೆ ಆರಂಭಿಸಿದ್ದಾರೆ. ಸಮೀಕ್ಷೆ ಹಿನ್ನೆಲೆಯಲ್ಲಿ ಮಸೀದಿಗೆ ಹಾಗೂ ಮಸೀದಿ ಸುತ್ತಮುತ್ತ ಭಾರಿ ಭದ್ರತೆಯನ್ನು ಒದಗಿಸಲಾಗಿದೆ. ಸ್ಥಳದಲ್ಲಿ ಪ್ರಕರಣದ ಅರ್ಜಿದಾರರೆಲ್ಲರ ವಕೀಲರು ಹಾಜರಿದ್ದಾರೆ. ಹಿಂದೂಗಳ ಪರ ವಕೀಲ ಮದನ್‌ ಮೋಹನ್ ಯಾದವ್ ವಾದ ಮಂಡಿಸುತ್ತಿದ್ದಾರೆ.

ಇದು ಐತಿಹಾಸಿಕ ದಿನ, ವಿಜ್ಞಾನವು ನಮ್ಮ ನಂಬಿಕೆಯನ್ನು ಒಗ್ಗೂಡಿಸುತ್ತದೆ ಎಂದು ಹಿಂದೂಗಳ ಪರವಾಗಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವ ಹಾಗೂ ಸಮೀಕ್ಷೆ ನಡೆಯುವ ಸ್ಥಳದಲ್ಲಿದ್ದ ಸೀತಾ ಸಾಹು ಪಿಟಿಐಗೆ ತಿಳಿಸಿದ್ದಾರೆ.

ವಾರಣಾಸಿ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ ಅವರು ಹಿಂದೂ ಅರ್ಜಿದಾರರು ಪ್ರತಿಪಾದಿಸಿದಂತೆ ದೇವಸ್ಥಾನದ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಅಗತ್ಯವಿದ್ದರೆ ಉತ್ಖನನ ಸೇರಿದಂತೆ ಸಮೀಕ್ಷೆಗೆ ಆದೇಶಿಸಿದರು. ಸಮೀಕ್ಷೆಯ ಸಮಯದಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವುದನ್ನು ನಿರ್ಬಂಧಿಸಬಾರದು ಮತ್ತು ಮಸೀದಿಗೆ ಯಾವುದೇ ಹಾನಿ ಮಾಡಬಾರದು ಎಂದು ನ್ಯಾಯಾಲಯವು ಅಧಿಕಾರಿಗಳಿಗೆ ಸೂಚಿಸಿದೆ.

ಮಸೀದಿಯ ‘ವಝುಖಾನಾ’ದಲ್ಲಿ ‘ಶಿವಲಿಂಗ’ದಂಥ ರಚನೆ ಇದೆ ಎಂದು ಹೇಳಲಾಗಿದ್ದು, ಆ ಸ್ಥಳದ ಸಂರಕ್ಷಣೆಗೆ ಸುಪ್ರೀಂಕೋರ್ಟ್ ಈಗಾಗಲೇ ಆದೇಶಿಸಿದೆ. ಹೀಗಾಗಿ ನಿರ್ದಿಷ್ಟ ಜಾಗದಲ್ಲಿ ಸಮೀಕ್ಷೆ ನಡೆಯುತ್ತಿಲ್ಲ.

ಮಸೀದಿ ಆವರಣದಲ್ಲಿ ಕಂಡುಬರುವ ಅಂಡಾಕಾರದ ವಸ್ತುವಿನ ವೈಜ್ಞಾನಿಕ ಸಮೀಕ್ಷೆಯನ್ನು ಮಾಡಬಹುದು ಎಂದು ಅಲಹಾಬಾದ್ ಹೈಕೋರ್ಟ್ ಮೇ ತಿಂಗಳಲ್ಲಿ ಸಲ್ಲಿಸಿದ ಅರ್ಜಿಯ ನಂತರ ಈ ನಿರ್ಧಾರವು ಬಂದಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ವಾರಣಾಸಿಯ ಸಿವಿಲ್ ಕೋರ್ಟ್ ಆದೇಶದ ಮೇರೆಗೆ ಮಸೀದಿ ಆವರಣದ ಸಮೀಕ್ಷೆ ವೇಳೆ ಅಂಡಾಕಾರದ ಆಕಾರದ ವಸ್ತು ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಹಿಂದೂ ದಾವೆದಾರರು ಆ ವಸ್ತುವು ಶಿವಲಿಂಗವಾಗಿದೆ – ಇದು ಹಿಂದೂ ದೇವತೆ ಶಿವನ ಪ್ರಾತಿನಿಧ್ಯ ಎಂದು ಪ್ರತಿಪಾದಿಸಿದರು. ಆದಾಗ್ಯೂ, ಮಸೀದಿಯ ಉಸ್ತುವಾರಿ ಸಮಿತಿಯು ವಸ್ತುವು ವಾಜು ಖಾನಾ ಅಥವಾ ತೊಟ್ಟಿಯಲ್ಲಿ ನಿಷ್ಕ್ರಿಯವಾದ ಕಾರಂಜಿ ಎಂದು ಪ್ರತಿಪಾದಿಸಿತು.

ಅಂಡಾಕಾರದ ಆಕಾರದ ವಸ್ತುವಿನ ಸಮೀಕ್ಷೆಗೆ ಅನುಮತಿ ನೀಡಿದ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿ, ಹಿಂದೂ ದಾವೆದಾರರು ಇಡೀ ಮಸೀದಿಯ ಸಮೀಕ್ಷೆಯನ್ನು ಕೇಳಲು ಹೊಸ ಅರ್ಜಿಯನ್ನು ಸಲ್ಲಿಸಿದರು. ಅನೇಕ ವರ್ಷಗಳಿಂದ ಈ ಸ್ಥಳದಲ್ಲಿ “ಶಿವಲಿಂಗ” ಅಸ್ತಿತ್ವದಲ್ಲಿದೆ ಮತ್ತು “ನಾಸ್ತಿಕರು ಮತ್ತು ವಿಗ್ರಹಾರಾಧಕರ ವಿರುದ್ಧ ದ್ವೇಷ” ಹೊಂದಿರುವ ಮುಸ್ಲಿಂ ಆಕ್ರಮಣಕಾರರಿಂದ ಹಲವಾರು ಬಾರಿ ಹಾನಿಗೊಳಗಾಗಿದೆ ಎಂದು ಅವರು ಹೇಳಿದ್ದಾರೆ.

ಮಸೀದಿಯ ರಚನೆಯು ಹಳೆಯ ಹಿಂದೂ ದೇವಾಲಯದ ಅವಶೇಷಗಳನ್ನು ಸೂಚಿಸುತ್ತದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.

”ಕಟ್ಟಡದೊಳಗೆ ಇರುವ ನೈಜ ಸಂಗತಿಗಳನ್ನು ಮೌಖಿಕ ಸಾಕ್ಷ್ಯದಿಂದ ಸಾಬೀತುಪಡಿಸಲಾಗುವುದಿಲ್ಲ ಮತ್ತು ನಿರ್ಮಾಣದ ಸ್ವರೂಪ, ರಚನೆಯ ಕಾಲ ತಿಳಿಯಲು ಭಾರತೀಯ ಪುರಾತತ್ವ ಸಮೀಕ್ಷೆ  ನಡೆಸಬೇಕು. ಆ ಬಳಿಕ ತಜ್ಞರ ಅಭಿಪ್ರಾಯದ ಆಧಾರದ ಮೇಲೆ ನ್ಯಾಯಾಲಯದ ಮುಂದೆ ಸಾಬೀತುಪಡಿಸಬಹುದು” ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣ: ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಮುಖ್ಯ ದಾವೆದಾರರಾದ ರಾಖಿ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...