Homeಮುಖಪುಟಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭ; ಭಾರಿ ಬಿಗಿ ಭದ್ರತೆ

ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭ; ಭಾರಿ ಬಿಗಿ ಭದ್ರತೆ

- Advertisement -
- Advertisement -

ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯು, ದೇವಾಲಯದ ಮೇಲೆ ನಿರ್ಮಾಣವಾಗಿದೆಯೇ ಎಂಬುದರ ನಿರ್ಣಯಕ್ಕಾಗಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಸೋಮವಾರ ಬೆಳಿಗ್ಗೆ ವೈಜ್ಞಾನಿಕ ಸಮೀಕ್ಷೆ ಆರಂಭವಾಗಿದೆ. ಮಸೀದಿ ಸಂಕೀರ್ಣದೊಳಗೆ ತಮ್ಮ ದೇವರನ್ನು ಪೂಜಿಸಲು ಹಕ್ಕು ಕೋರಿ ಹಿಂದೂ ಅರ್ಜಿದಾರರ ಪ್ರಕರಣದಲ್ಲಿ ವಾರಣಾಸಿ ನ್ಯಾಯಾಲಯವು ಶುಕ್ರವಾರ ಸಮೀಕ್ಷೆಗೆ ಆದೇಶ ನೀಡಿತ್ತು.

ಭಾರತೀಯ ಪುರಾತತ್ವ ಇಲಾಖೆಯ 40 ಅಧಿಕಾರಿಗಳು ಬೆಳಿಗ್ಗೆ 7 ರಿಂದ ಸಮೀಕ್ಷೆ ಆರಂಭಿಸಿದ್ದಾರೆ. ಸಮೀಕ್ಷೆ ಹಿನ್ನೆಲೆಯಲ್ಲಿ ಮಸೀದಿಗೆ ಹಾಗೂ ಮಸೀದಿ ಸುತ್ತಮುತ್ತ ಭಾರಿ ಭದ್ರತೆಯನ್ನು ಒದಗಿಸಲಾಗಿದೆ. ಸ್ಥಳದಲ್ಲಿ ಪ್ರಕರಣದ ಅರ್ಜಿದಾರರೆಲ್ಲರ ವಕೀಲರು ಹಾಜರಿದ್ದಾರೆ. ಹಿಂದೂಗಳ ಪರ ವಕೀಲ ಮದನ್‌ ಮೋಹನ್ ಯಾದವ್ ವಾದ ಮಂಡಿಸುತ್ತಿದ್ದಾರೆ.

ಇದು ಐತಿಹಾಸಿಕ ದಿನ, ವಿಜ್ಞಾನವು ನಮ್ಮ ನಂಬಿಕೆಯನ್ನು ಒಗ್ಗೂಡಿಸುತ್ತದೆ ಎಂದು ಹಿಂದೂಗಳ ಪರವಾಗಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವ ಹಾಗೂ ಸಮೀಕ್ಷೆ ನಡೆಯುವ ಸ್ಥಳದಲ್ಲಿದ್ದ ಸೀತಾ ಸಾಹು ಪಿಟಿಐಗೆ ತಿಳಿಸಿದ್ದಾರೆ.

ವಾರಣಾಸಿ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ ಅವರು ಹಿಂದೂ ಅರ್ಜಿದಾರರು ಪ್ರತಿಪಾದಿಸಿದಂತೆ ದೇವಸ್ಥಾನದ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಅಗತ್ಯವಿದ್ದರೆ ಉತ್ಖನನ ಸೇರಿದಂತೆ ಸಮೀಕ್ಷೆಗೆ ಆದೇಶಿಸಿದರು. ಸಮೀಕ್ಷೆಯ ಸಮಯದಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವುದನ್ನು ನಿರ್ಬಂಧಿಸಬಾರದು ಮತ್ತು ಮಸೀದಿಗೆ ಯಾವುದೇ ಹಾನಿ ಮಾಡಬಾರದು ಎಂದು ನ್ಯಾಯಾಲಯವು ಅಧಿಕಾರಿಗಳಿಗೆ ಸೂಚಿಸಿದೆ.

ಮಸೀದಿಯ ‘ವಝುಖಾನಾ’ದಲ್ಲಿ ‘ಶಿವಲಿಂಗ’ದಂಥ ರಚನೆ ಇದೆ ಎಂದು ಹೇಳಲಾಗಿದ್ದು, ಆ ಸ್ಥಳದ ಸಂರಕ್ಷಣೆಗೆ ಸುಪ್ರೀಂಕೋರ್ಟ್ ಈಗಾಗಲೇ ಆದೇಶಿಸಿದೆ. ಹೀಗಾಗಿ ನಿರ್ದಿಷ್ಟ ಜಾಗದಲ್ಲಿ ಸಮೀಕ್ಷೆ ನಡೆಯುತ್ತಿಲ್ಲ.

ಮಸೀದಿ ಆವರಣದಲ್ಲಿ ಕಂಡುಬರುವ ಅಂಡಾಕಾರದ ವಸ್ತುವಿನ ವೈಜ್ಞಾನಿಕ ಸಮೀಕ್ಷೆಯನ್ನು ಮಾಡಬಹುದು ಎಂದು ಅಲಹಾಬಾದ್ ಹೈಕೋರ್ಟ್ ಮೇ ತಿಂಗಳಲ್ಲಿ ಸಲ್ಲಿಸಿದ ಅರ್ಜಿಯ ನಂತರ ಈ ನಿರ್ಧಾರವು ಬಂದಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ವಾರಣಾಸಿಯ ಸಿವಿಲ್ ಕೋರ್ಟ್ ಆದೇಶದ ಮೇರೆಗೆ ಮಸೀದಿ ಆವರಣದ ಸಮೀಕ್ಷೆ ವೇಳೆ ಅಂಡಾಕಾರದ ಆಕಾರದ ವಸ್ತು ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಹಿಂದೂ ದಾವೆದಾರರು ಆ ವಸ್ತುವು ಶಿವಲಿಂಗವಾಗಿದೆ – ಇದು ಹಿಂದೂ ದೇವತೆ ಶಿವನ ಪ್ರಾತಿನಿಧ್ಯ ಎಂದು ಪ್ರತಿಪಾದಿಸಿದರು. ಆದಾಗ್ಯೂ, ಮಸೀದಿಯ ಉಸ್ತುವಾರಿ ಸಮಿತಿಯು ವಸ್ತುವು ವಾಜು ಖಾನಾ ಅಥವಾ ತೊಟ್ಟಿಯಲ್ಲಿ ನಿಷ್ಕ್ರಿಯವಾದ ಕಾರಂಜಿ ಎಂದು ಪ್ರತಿಪಾದಿಸಿತು.

ಅಂಡಾಕಾರದ ಆಕಾರದ ವಸ್ತುವಿನ ಸಮೀಕ್ಷೆಗೆ ಅನುಮತಿ ನೀಡಿದ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿ, ಹಿಂದೂ ದಾವೆದಾರರು ಇಡೀ ಮಸೀದಿಯ ಸಮೀಕ್ಷೆಯನ್ನು ಕೇಳಲು ಹೊಸ ಅರ್ಜಿಯನ್ನು ಸಲ್ಲಿಸಿದರು. ಅನೇಕ ವರ್ಷಗಳಿಂದ ಈ ಸ್ಥಳದಲ್ಲಿ “ಶಿವಲಿಂಗ” ಅಸ್ತಿತ್ವದಲ್ಲಿದೆ ಮತ್ತು “ನಾಸ್ತಿಕರು ಮತ್ತು ವಿಗ್ರಹಾರಾಧಕರ ವಿರುದ್ಧ ದ್ವೇಷ” ಹೊಂದಿರುವ ಮುಸ್ಲಿಂ ಆಕ್ರಮಣಕಾರರಿಂದ ಹಲವಾರು ಬಾರಿ ಹಾನಿಗೊಳಗಾಗಿದೆ ಎಂದು ಅವರು ಹೇಳಿದ್ದಾರೆ.

ಮಸೀದಿಯ ರಚನೆಯು ಹಳೆಯ ಹಿಂದೂ ದೇವಾಲಯದ ಅವಶೇಷಗಳನ್ನು ಸೂಚಿಸುತ್ತದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.

”ಕಟ್ಟಡದೊಳಗೆ ಇರುವ ನೈಜ ಸಂಗತಿಗಳನ್ನು ಮೌಖಿಕ ಸಾಕ್ಷ್ಯದಿಂದ ಸಾಬೀತುಪಡಿಸಲಾಗುವುದಿಲ್ಲ ಮತ್ತು ನಿರ್ಮಾಣದ ಸ್ವರೂಪ, ರಚನೆಯ ಕಾಲ ತಿಳಿಯಲು ಭಾರತೀಯ ಪುರಾತತ್ವ ಸಮೀಕ್ಷೆ  ನಡೆಸಬೇಕು. ಆ ಬಳಿಕ ತಜ್ಞರ ಅಭಿಪ್ರಾಯದ ಆಧಾರದ ಮೇಲೆ ನ್ಯಾಯಾಲಯದ ಮುಂದೆ ಸಾಬೀತುಪಡಿಸಬಹುದು” ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣ: ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಮುಖ್ಯ ದಾವೆದಾರರಾದ ರಾಖಿ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...