Homeಮುಖಪುಟವಿಜ್ಞಾನಿಗಳು, ಶಿಕ್ಷಣತಜ್ಞರ ಆಕ್ಷೇಪ: ವೆಬಿನಾರ್ ನಿರ್ಬಂಧ ಹಿಂಪಡೆದ ಕೇಂದ್ರ ಸರ್ಕಾರ

ವಿಜ್ಞಾನಿಗಳು, ಶಿಕ್ಷಣತಜ್ಞರ ಆಕ್ಷೇಪ: ವೆಬಿನಾರ್ ನಿರ್ಬಂಧ ಹಿಂಪಡೆದ ಕೇಂದ್ರ ಸರ್ಕಾರ

- Advertisement -
- Advertisement -

ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರು ಎತ್ತಿದ ಆಕ್ಷೇಪಣೆಯನ್ನು ಅನುಸರಿಸಿ, ಸರ್ಕಾರವು 2020 ರ ‘ಅಂತಾರಾಷ್ಟ್ರೀಯ ವೆಬಿನಾರ್ ನಡೆಸಲು ಪೂರ್ವಾನುಮತಿ ಅಗತ್ಯ’ ಎಂಬ ನವೆಂಬರ್ ಆದೇಶವನ್ನು ಹಿಂತೆಗೆದುಕೊಂಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆ ಆದೇಶವು, ಆನ್‌ಲೈನ್ ಸಮಾವೇಶಗಳು ಅಥವಾ ಸೆಮಿನಾರ್‌ಗಳನ್ನು “ಅಂತರರಾಷ್ಟ್ರೀಯ” ಭಾಗವಹಿಸುವಿಕೆಯೊಂದಿಗೆ ಆಯೋಜಿಸಲು ಪೂರ್ವ ರಾಜಕೀಯ ಅನುಮತಿಯನ್ನು ಕಡ್ಡಾಯಗೊಳಿಸಿತ್ತು.

ಸಾಂಕ್ರಾಮಿಕ ರೋಗಕ್ಕೆ ಮುಂಚಿತವಾಗಿ ಅಸ್ತಿತ್ವದಲ್ಲಿದ್ದ ನಿಯಮಗಳು ಮತ್ತೆ ಅನ್ವಯವಾಗುತ್ತವೆ ಎಂದು ಹೊಸ ಆದೇಶ ಹೇಳಿದೆ.

‘ಅಂತಹ ಎಲ್ಲಾ ವೆಬಿನಾರ್ ಇವೆಂಟ್‌ಗಳು ಕೋವಿಡ್ -19 ಸಾಂಕ್ರಾಮಿಕಕ್ಕೆ ಮುಂಚಿತವಾಗಿ ರಾಜಕೀಯ ಅನುಮತಿಗಳಿಗೆ ಅನ್ವಯವಾಗುವ ಅದೇ ನಿಯಮಗಳು ಮತ್ತು ನಿಬಂಧನೆಗಳಿಗೆ ಒಳಪಟ್ಟಿವೆ”ಎಂದು ಅದು ಹೇಳಿದೆ.

ಈ ನವೆಂಬರ್ 25, 2020ರ ವಿದೇಶಾಂಗ ಇಲಾಖೆಯ ಆದೇಶವನ್ನು ಶಿಕ್ಷಣ ಸಚಿವಾಲಯವು ಈ ವರ್ಷದ ಜನವರಿ 15 ರಂದು ಪುನರುಚ್ಚರಿಸಿತು. ಸಾರ್ವಜನಿಕವಾಗಿ ಧನಸಹಾಯ ಪಡೆದ ಸಂಸ್ಥೆಗಳು ಸೇರಿದಂತೆ ಎಲ್ಲಾ ಸರ್ಕಾರಿ ಸಂಸ್ಥೆಗಳು ಆನ್‌ಲೈನ್ ಈವೆಂಟ್‌ಗಳನ್ನು ನಡೆಸಲು “ಆಡಳಿತ ಕಾರ್ಯದರ್ಶಿ” ಯಿಂದ ಪೂರ್ವಾನುಮತಿ ಪಡೆಯುವಂತೆ ಇಲಾಖೆ ತಿಳಿಸಿತ್ತು.

ನವೆಂಬರ್ 2020 ರ ಆದೇಶದಲ್ಲಿ, ಈ ವೆಬಿನಾರ್ ಇವೆಂಟ್‌ಗಳ ವಿಷಯವು “ರಾಜ್ಯ, ಗಡಿ, ಈಶಾನ್ಯ ರಾಜ್ಯಗಳ ಸುರಕ್ಷತೆ, ಜಮ್ಮು-ಕಾಶ್ಮೀರದ ಲಡಾಖ್‌ದೊಂದಿಗೆ ಸಂಬಂಧ ಹೊಂದಿಲ್ಲ ಮತ್ತು ಭಾರತದ ಇತರ ಆಂತರಿಕ ವಿಷಯಗಳಿಗೆ ಸಂಬಂಧಿಸಿಲ್ಲ ಎಂದು ಖಚಿತಪಡಿಸಲು ಅನುಮತಿ ಅಗತ್ಯ ಎಂದು ಹೇಳಿತ್ತು.

1,500 ಕ್ಕೂ ಹೆಚ್ಚು ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರನ್ನು ಪ್ರತಿನಿಧಿಸುವ ದೇಶದ ಎರಡು ಉನ್ನತ ವಿಜ್ಞಾನ ಅಕಾಡೆಮಿಗಳು ಈ ನಿರ್ದೇಶನದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು ಮತ್ತು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು, ಅಂತಹ ನಿರ್ದೇಶನದಿಂದ ಯಾವುದೇ ಮುಕ್ತ ವೈಜ್ಞಾನಿಕ ಚರ್ಚೆಯನ್ನು ನಡೆಸುವುದು ಕಷ್ಟಕರವಾಗಲಿದೆ. ಈ ಆದೇಶವು “ಭಾರತದಲ್ಲಿ ವಿಜ್ಞಾನದ ಪ್ರಗತಿಯನ್ನು ನಿರ್ಬಂಧಿಸುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದವು.

ವಿಜ್ಞಾನಿಗಳು ಗಮನಿಸಿದಂತೆ, ಪೂರ್ವಾನುಮತಿ ಪಡೆಯುವ ಅವಶ್ಯಕತೆಯು, ಅನುಮತಿಗಳಲ್ಲಿನ ವಿಳಂಬದ ಕಾರಣಕ್ಕೆ ಇವೆಂಟ್‌ಗಳನ್ನು ಆಯೋಜಿಸುವಲ್ಲಿ ಅನಿಶ್ಚಿತತೆಗಳಿಗೆ ದಾರಿ ಮಾಡುತ್ತದೆ. ಸರ್ಕಾರಕ್ಕೆ, ಎಲ್ಲಾ ವರ್ಚುವಲ್ ಸೆಮಿನಾರ್‌ಗಳು ಮತ್ತು ಸಮ್ಮೇಳನಗಳ ವಿಚಾರಣೆಯನ್ನು ಮೇಲ್ವಿಚಾರಣೆ ಮಾಡುವುದು ಪ್ರಾಯೋಗಿಕವಾಗಿ ಅಸಾಧ್ಯವಾಗಿದೆ.


ಇದನ್ನೂ ಓದಿ; ಟ್ರಂಪ್ ವೀಸಾ ನಿಷೇಧ ಆದೇಶ ರದ್ದು ಮಾಡಿದ ನೂತನ ಅಧ್ಯಕ್ಷ ಜೋ ಬೈಡನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...