Homeಮುಖಪುಟವಿಜ್ಞಾನಿಗಳು, ಶಿಕ್ಷಣತಜ್ಞರ ಆಕ್ಷೇಪ: ವೆಬಿನಾರ್ ನಿರ್ಬಂಧ ಹಿಂಪಡೆದ ಕೇಂದ್ರ ಸರ್ಕಾರ

ವಿಜ್ಞಾನಿಗಳು, ಶಿಕ್ಷಣತಜ್ಞರ ಆಕ್ಷೇಪ: ವೆಬಿನಾರ್ ನಿರ್ಬಂಧ ಹಿಂಪಡೆದ ಕೇಂದ್ರ ಸರ್ಕಾರ

- Advertisement -
- Advertisement -

ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರು ಎತ್ತಿದ ಆಕ್ಷೇಪಣೆಯನ್ನು ಅನುಸರಿಸಿ, ಸರ್ಕಾರವು 2020 ರ ‘ಅಂತಾರಾಷ್ಟ್ರೀಯ ವೆಬಿನಾರ್ ನಡೆಸಲು ಪೂರ್ವಾನುಮತಿ ಅಗತ್ಯ’ ಎಂಬ ನವೆಂಬರ್ ಆದೇಶವನ್ನು ಹಿಂತೆಗೆದುಕೊಂಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆ ಆದೇಶವು, ಆನ್‌ಲೈನ್ ಸಮಾವೇಶಗಳು ಅಥವಾ ಸೆಮಿನಾರ್‌ಗಳನ್ನು “ಅಂತರರಾಷ್ಟ್ರೀಯ” ಭಾಗವಹಿಸುವಿಕೆಯೊಂದಿಗೆ ಆಯೋಜಿಸಲು ಪೂರ್ವ ರಾಜಕೀಯ ಅನುಮತಿಯನ್ನು ಕಡ್ಡಾಯಗೊಳಿಸಿತ್ತು.

ಸಾಂಕ್ರಾಮಿಕ ರೋಗಕ್ಕೆ ಮುಂಚಿತವಾಗಿ ಅಸ್ತಿತ್ವದಲ್ಲಿದ್ದ ನಿಯಮಗಳು ಮತ್ತೆ ಅನ್ವಯವಾಗುತ್ತವೆ ಎಂದು ಹೊಸ ಆದೇಶ ಹೇಳಿದೆ.

‘ಅಂತಹ ಎಲ್ಲಾ ವೆಬಿನಾರ್ ಇವೆಂಟ್‌ಗಳು ಕೋವಿಡ್ -19 ಸಾಂಕ್ರಾಮಿಕಕ್ಕೆ ಮುಂಚಿತವಾಗಿ ರಾಜಕೀಯ ಅನುಮತಿಗಳಿಗೆ ಅನ್ವಯವಾಗುವ ಅದೇ ನಿಯಮಗಳು ಮತ್ತು ನಿಬಂಧನೆಗಳಿಗೆ ಒಳಪಟ್ಟಿವೆ”ಎಂದು ಅದು ಹೇಳಿದೆ.

ಈ ನವೆಂಬರ್ 25, 2020ರ ವಿದೇಶಾಂಗ ಇಲಾಖೆಯ ಆದೇಶವನ್ನು ಶಿಕ್ಷಣ ಸಚಿವಾಲಯವು ಈ ವರ್ಷದ ಜನವರಿ 15 ರಂದು ಪುನರುಚ್ಚರಿಸಿತು. ಸಾರ್ವಜನಿಕವಾಗಿ ಧನಸಹಾಯ ಪಡೆದ ಸಂಸ್ಥೆಗಳು ಸೇರಿದಂತೆ ಎಲ್ಲಾ ಸರ್ಕಾರಿ ಸಂಸ್ಥೆಗಳು ಆನ್‌ಲೈನ್ ಈವೆಂಟ್‌ಗಳನ್ನು ನಡೆಸಲು “ಆಡಳಿತ ಕಾರ್ಯದರ್ಶಿ” ಯಿಂದ ಪೂರ್ವಾನುಮತಿ ಪಡೆಯುವಂತೆ ಇಲಾಖೆ ತಿಳಿಸಿತ್ತು.

ನವೆಂಬರ್ 2020 ರ ಆದೇಶದಲ್ಲಿ, ಈ ವೆಬಿನಾರ್ ಇವೆಂಟ್‌ಗಳ ವಿಷಯವು “ರಾಜ್ಯ, ಗಡಿ, ಈಶಾನ್ಯ ರಾಜ್ಯಗಳ ಸುರಕ್ಷತೆ, ಜಮ್ಮು-ಕಾಶ್ಮೀರದ ಲಡಾಖ್‌ದೊಂದಿಗೆ ಸಂಬಂಧ ಹೊಂದಿಲ್ಲ ಮತ್ತು ಭಾರತದ ಇತರ ಆಂತರಿಕ ವಿಷಯಗಳಿಗೆ ಸಂಬಂಧಿಸಿಲ್ಲ ಎಂದು ಖಚಿತಪಡಿಸಲು ಅನುಮತಿ ಅಗತ್ಯ ಎಂದು ಹೇಳಿತ್ತು.

1,500 ಕ್ಕೂ ಹೆಚ್ಚು ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರನ್ನು ಪ್ರತಿನಿಧಿಸುವ ದೇಶದ ಎರಡು ಉನ್ನತ ವಿಜ್ಞಾನ ಅಕಾಡೆಮಿಗಳು ಈ ನಿರ್ದೇಶನದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು ಮತ್ತು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು, ಅಂತಹ ನಿರ್ದೇಶನದಿಂದ ಯಾವುದೇ ಮುಕ್ತ ವೈಜ್ಞಾನಿಕ ಚರ್ಚೆಯನ್ನು ನಡೆಸುವುದು ಕಷ್ಟಕರವಾಗಲಿದೆ. ಈ ಆದೇಶವು “ಭಾರತದಲ್ಲಿ ವಿಜ್ಞಾನದ ಪ್ರಗತಿಯನ್ನು ನಿರ್ಬಂಧಿಸುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದವು.

ವಿಜ್ಞಾನಿಗಳು ಗಮನಿಸಿದಂತೆ, ಪೂರ್ವಾನುಮತಿ ಪಡೆಯುವ ಅವಶ್ಯಕತೆಯು, ಅನುಮತಿಗಳಲ್ಲಿನ ವಿಳಂಬದ ಕಾರಣಕ್ಕೆ ಇವೆಂಟ್‌ಗಳನ್ನು ಆಯೋಜಿಸುವಲ್ಲಿ ಅನಿಶ್ಚಿತತೆಗಳಿಗೆ ದಾರಿ ಮಾಡುತ್ತದೆ. ಸರ್ಕಾರಕ್ಕೆ, ಎಲ್ಲಾ ವರ್ಚುವಲ್ ಸೆಮಿನಾರ್‌ಗಳು ಮತ್ತು ಸಮ್ಮೇಳನಗಳ ವಿಚಾರಣೆಯನ್ನು ಮೇಲ್ವಿಚಾರಣೆ ಮಾಡುವುದು ಪ್ರಾಯೋಗಿಕವಾಗಿ ಅಸಾಧ್ಯವಾಗಿದೆ.


ಇದನ್ನೂ ಓದಿ; ಟ್ರಂಪ್ ವೀಸಾ ನಿಷೇಧ ಆದೇಶ ರದ್ದು ಮಾಡಿದ ನೂತನ ಅಧ್ಯಕ್ಷ ಜೋ ಬೈಡನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...