Homeಮುಖಪುಟವಿಜ್ಞಾನಿಗಳು, ಶಿಕ್ಷಣತಜ್ಞರ ಆಕ್ಷೇಪ: ವೆಬಿನಾರ್ ನಿರ್ಬಂಧ ಹಿಂಪಡೆದ ಕೇಂದ್ರ ಸರ್ಕಾರ

ವಿಜ್ಞಾನಿಗಳು, ಶಿಕ್ಷಣತಜ್ಞರ ಆಕ್ಷೇಪ: ವೆಬಿನಾರ್ ನಿರ್ಬಂಧ ಹಿಂಪಡೆದ ಕೇಂದ್ರ ಸರ್ಕಾರ

- Advertisement -
- Advertisement -

ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರು ಎತ್ತಿದ ಆಕ್ಷೇಪಣೆಯನ್ನು ಅನುಸರಿಸಿ, ಸರ್ಕಾರವು 2020 ರ ‘ಅಂತಾರಾಷ್ಟ್ರೀಯ ವೆಬಿನಾರ್ ನಡೆಸಲು ಪೂರ್ವಾನುಮತಿ ಅಗತ್ಯ’ ಎಂಬ ನವೆಂಬರ್ ಆದೇಶವನ್ನು ಹಿಂತೆಗೆದುಕೊಂಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆ ಆದೇಶವು, ಆನ್‌ಲೈನ್ ಸಮಾವೇಶಗಳು ಅಥವಾ ಸೆಮಿನಾರ್‌ಗಳನ್ನು “ಅಂತರರಾಷ್ಟ್ರೀಯ” ಭಾಗವಹಿಸುವಿಕೆಯೊಂದಿಗೆ ಆಯೋಜಿಸಲು ಪೂರ್ವ ರಾಜಕೀಯ ಅನುಮತಿಯನ್ನು ಕಡ್ಡಾಯಗೊಳಿಸಿತ್ತು.

ಸಾಂಕ್ರಾಮಿಕ ರೋಗಕ್ಕೆ ಮುಂಚಿತವಾಗಿ ಅಸ್ತಿತ್ವದಲ್ಲಿದ್ದ ನಿಯಮಗಳು ಮತ್ತೆ ಅನ್ವಯವಾಗುತ್ತವೆ ಎಂದು ಹೊಸ ಆದೇಶ ಹೇಳಿದೆ.

‘ಅಂತಹ ಎಲ್ಲಾ ವೆಬಿನಾರ್ ಇವೆಂಟ್‌ಗಳು ಕೋವಿಡ್ -19 ಸಾಂಕ್ರಾಮಿಕಕ್ಕೆ ಮುಂಚಿತವಾಗಿ ರಾಜಕೀಯ ಅನುಮತಿಗಳಿಗೆ ಅನ್ವಯವಾಗುವ ಅದೇ ನಿಯಮಗಳು ಮತ್ತು ನಿಬಂಧನೆಗಳಿಗೆ ಒಳಪಟ್ಟಿವೆ”ಎಂದು ಅದು ಹೇಳಿದೆ.

ಈ ನವೆಂಬರ್ 25, 2020ರ ವಿದೇಶಾಂಗ ಇಲಾಖೆಯ ಆದೇಶವನ್ನು ಶಿಕ್ಷಣ ಸಚಿವಾಲಯವು ಈ ವರ್ಷದ ಜನವರಿ 15 ರಂದು ಪುನರುಚ್ಚರಿಸಿತು. ಸಾರ್ವಜನಿಕವಾಗಿ ಧನಸಹಾಯ ಪಡೆದ ಸಂಸ್ಥೆಗಳು ಸೇರಿದಂತೆ ಎಲ್ಲಾ ಸರ್ಕಾರಿ ಸಂಸ್ಥೆಗಳು ಆನ್‌ಲೈನ್ ಈವೆಂಟ್‌ಗಳನ್ನು ನಡೆಸಲು “ಆಡಳಿತ ಕಾರ್ಯದರ್ಶಿ” ಯಿಂದ ಪೂರ್ವಾನುಮತಿ ಪಡೆಯುವಂತೆ ಇಲಾಖೆ ತಿಳಿಸಿತ್ತು.

ನವೆಂಬರ್ 2020 ರ ಆದೇಶದಲ್ಲಿ, ಈ ವೆಬಿನಾರ್ ಇವೆಂಟ್‌ಗಳ ವಿಷಯವು “ರಾಜ್ಯ, ಗಡಿ, ಈಶಾನ್ಯ ರಾಜ್ಯಗಳ ಸುರಕ್ಷತೆ, ಜಮ್ಮು-ಕಾಶ್ಮೀರದ ಲಡಾಖ್‌ದೊಂದಿಗೆ ಸಂಬಂಧ ಹೊಂದಿಲ್ಲ ಮತ್ತು ಭಾರತದ ಇತರ ಆಂತರಿಕ ವಿಷಯಗಳಿಗೆ ಸಂಬಂಧಿಸಿಲ್ಲ ಎಂದು ಖಚಿತಪಡಿಸಲು ಅನುಮತಿ ಅಗತ್ಯ ಎಂದು ಹೇಳಿತ್ತು.

1,500 ಕ್ಕೂ ಹೆಚ್ಚು ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರನ್ನು ಪ್ರತಿನಿಧಿಸುವ ದೇಶದ ಎರಡು ಉನ್ನತ ವಿಜ್ಞಾನ ಅಕಾಡೆಮಿಗಳು ಈ ನಿರ್ದೇಶನದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು ಮತ್ತು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು, ಅಂತಹ ನಿರ್ದೇಶನದಿಂದ ಯಾವುದೇ ಮುಕ್ತ ವೈಜ್ಞಾನಿಕ ಚರ್ಚೆಯನ್ನು ನಡೆಸುವುದು ಕಷ್ಟಕರವಾಗಲಿದೆ. ಈ ಆದೇಶವು “ಭಾರತದಲ್ಲಿ ವಿಜ್ಞಾನದ ಪ್ರಗತಿಯನ್ನು ನಿರ್ಬಂಧಿಸುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದವು.

ವಿಜ್ಞಾನಿಗಳು ಗಮನಿಸಿದಂತೆ, ಪೂರ್ವಾನುಮತಿ ಪಡೆಯುವ ಅವಶ್ಯಕತೆಯು, ಅನುಮತಿಗಳಲ್ಲಿನ ವಿಳಂಬದ ಕಾರಣಕ್ಕೆ ಇವೆಂಟ್‌ಗಳನ್ನು ಆಯೋಜಿಸುವಲ್ಲಿ ಅನಿಶ್ಚಿತತೆಗಳಿಗೆ ದಾರಿ ಮಾಡುತ್ತದೆ. ಸರ್ಕಾರಕ್ಕೆ, ಎಲ್ಲಾ ವರ್ಚುವಲ್ ಸೆಮಿನಾರ್‌ಗಳು ಮತ್ತು ಸಮ್ಮೇಳನಗಳ ವಿಚಾರಣೆಯನ್ನು ಮೇಲ್ವಿಚಾರಣೆ ಮಾಡುವುದು ಪ್ರಾಯೋಗಿಕವಾಗಿ ಅಸಾಧ್ಯವಾಗಿದೆ.


ಇದನ್ನೂ ಓದಿ; ಟ್ರಂಪ್ ವೀಸಾ ನಿಷೇಧ ಆದೇಶ ರದ್ದು ಮಾಡಿದ ನೂತನ ಅಧ್ಯಕ್ಷ ಜೋ ಬೈಡನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...