Homeಕರ್ನಾಟಕನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ...

ನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ ಡಾ. ಅನಂತಕೃಷ್ಣ ಭಟ್‌

ನಮ್ಮ ವರದಿ ಸಲ್ಲಿಸಿದ್ದು, ನಾನು ಇದಕ್ಕೆಲ್ಲಾ ಉತ್ತರಿಸಲೇ ಬೇಕು ಎಂಬುವುದು ನಿಮ್ಮ ‘ಉದ್ಧಟತನ’ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ, ನಾರಾಯಣ ಗುರುಗಳು ಮತ್ತು ಪೆರಿಯಾರ್‌ ಪಾಠಗಳನ್ನು ಕತ್ತರಿಸಿದ್ದೀರ ಎಂಬ ಪ್ರಶ್ನೆಗೆ, ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕವನ್ನು ಮರು ಪರಿಷ್ಕರಣೆ ಮಾಡಿರುವ ಸಮಿತಿಯ ಸದಸ್ಯ ಡಾ. ಅನಂತಕೃಷ್ಣ ಭಟ್‌ ಪ್ರತಿಕ್ರಿಯಿಸಿ, “ನನಗೆ ಅದು ನೆನಪಾಗುತ್ತಿಲ್ಲ” ಎಂದು ಹೇಳಿದರು.

ರಾಜ್ಯದ ಪಠ್ಯ ಪುಸ್ತಕ ಹಗರಣದ ಮತ್ತಷ್ಟು ಹುಳುಕುಗಳು ಹೊರಬೀಳುತ್ತಿವೆ. ಮಂಗಳವಾರದಂದು ಸುದ್ದಿ ಪೋರ್ಟಾಲ್‌ ‘ಈದಿನ.ಕಾಂ’ ಹೊರಗೆಡವಿದ ಮಾಹಿತಿಯಂತೆ, ಪರಿಷ್ಕರಣೆಗೆ ಸಮಿತಿ ಸದಸ್ಯರು ನೀಡಿದ್ದ ವರದಿ ಧಿಕ್ಕರಿಸಿ, ಸಮಿತಿ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥ ಅವರು ರಹಸ್ಯ ತಿದ್ದುಪಡಿ ಮಾಡಿದ್ದಾರೆ ಎಂದು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಮಂಗಳೂರಿನ ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಉಪನ್ಯಾಸಕರೂ ಆಗಿರುವ ಡಾ. ಅನಂತಕೃಷ್ಣ ಭಟ್‌ ಅವರು, “ಈ ಬಗ್ಗೆಗಿನ ಸುದ್ದಿಯನ್ನು ನಾನು ಇನ್ನೂ ನೋಡಿಲ್ಲ ಹಾಗೂ ಅದರ ವಾಸ್ತವಿಕತೆಯೂ ನನಗೆ ಗೊತ್ತಿಲ್ಲ. ಅಲ್ಲದೆ ಪರಿಷ್ಕೃತ ಪಾಠ ಪುಸ್ತಕಗಳು ನನ್ನ ಕೈಗೆ ಬಂದಿಲ್ಲ” ಎಂದು ತಿಳಿಸಿದ್ದಾರೆ. ವಾಸ್ತವದಲ್ಲಿ 80% ಪಠ್ಯ ಪುಸ್ತಕಗಳನ್ನು ಶಾಲೆಗಳಲ್ಲಿ ಹಂಚಿಕೆ ಮಾಡಿದ್ದಾಗಿ ರಾಜ್ಯದ ಬಿಜೆಪಿ ಸರ್ಕಾರವು ಹೇಳಿಕೊಂಡಿದೆ.

ಡಾ. ಅನಂತಕೃಷ್ಣ ಭಟ್‌ ಅವರು 2014ರಂದು ರಚಿತವಾಗಿದ್ದ ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕ ರಚನಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಈ ಪಠ್ಯ ಪುಸ್ತಕವನ್ನು ನಂತರದಲ್ಲಿ ಪ್ರೊಫೆಸರ್‌ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ಪರಿಷ್ಕರಿಸಲಾಗಿತ್ತು. ಆದರೆ ಇದೀಗ ಅದನ್ನು ಮತ್ತೆ ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ಮರು ಪರಿಷ್ಕರಣೆ ಮಾಡಿಸಲಾಗಿದೆ. ಈ ಸಮಿತಿಯಲ್ಲಿ ಇರುವ ಸದಸ್ಯರಲ್ಲಿ ಅನಂತಕೃಷ್ಣ ಭಟ್ ಅವರೂ ಒಬ್ಬರು.

ಪಠ್ಯ ಪುಸ್ತಕವನ್ನು ಮರು ಪರಿಷ್ಕರಣೆ ಮಾಡಿರುವ ಸಮಿತಿಯ ಯಾವ ಸದಸ್ಯರು ಕೂಡಾ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿಲ್ಲ, ಈ ಬಗ್ಗೆ ನಿಮಗೆ ಯಾರಾದರೂ ಬೆದರಿಕೆ ಹಾಕಿದ್ದಾರೆಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘‘ಆ ರೀತಿಯಾಗಿ ಏನೂ ಇಲ್ಲ’’ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಜನರಿಗಾಗಿ ಸರ್ಕಾರಿ ಸೇವೆಗಳನ್ನು ಮಾಡಿರುವವರು, ಅವುಗಳ ಬಗ್ಗೆ ಸಾರ್ವಜನಿಕರು ಕೇಳುವ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಬೇಕಲ್ಲವೆ ಎಂಬ ಪ್ರಶ್ನೆಗೆ ಅವರು,“ಉತ್ತರಿಸಲೇ ಬೇಕು ಎಂಬುವುದು ನಿಮ್ಮ ‘ಉದ್ಧಟತನ’. ನಾನು ತುಂಬಾ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಯಾವುದೇ ಶೈಕ್ಷಣಿಕ ಅರ್ಹತೆಯನ್ನು ಈ ವರೆಗೆ ಬಹಿರಂಗಪಡಿಸದ ವ್ಯಕ್ತಿಯನ್ನು ಪಠ್ಯ ಪುಸ್ತಕ ಪರಿಷ್ಕರಣೆಯ ಅಧ್ಯಕ್ಷರನ್ನಾಗಿ ಮಾಡಿದ್ದು, ಪಠ್ಯದಲ್ಲಿ ತಪ್ಪುಗಳಾಗಿವೆ ಎಂಬ ಆಕ್ಷೇಪಗಳಿಗೆ ವಿದ್ವಾಂಸರುಗಳಾದ ನೀವು ಯಾರೂ ಮಾತನಾಡುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ಇದಕ್ಕೆ ನಾನು ಏನು ಕಮೆಂಟ್ ಮಾಡಲಿ ಎಂದು ನೀವೇ ಹೇಳಿ. ನಮ್ಮ ಕೆಲಸಗಳನ್ನು ಮಾಡಿ ಮುಗಿಸಿ ನಾವು ಬಂದಿದ್ದೇವೆ. ಇದರ ನಂತರ ನಮ್ಮ ನಡುವೆ ಸಂವಹನ ನಡೆದಿಲ್ಲ. ಸಂವಹನವೇ ನಡೆಯದಿದ್ದರೆ ನಾವು ಏನು ಕಮೆಂಟ್ ಮಾಡಲಿ?” ಎಂದು ಅವರು ಹೇಳಿದ್ದಾರೆ.

“ನಿಜಾ ಹೇಳಬೇಕೆಂದರೆ, ಈ ವರದಿ ಕೊಟ್ಟು ನಾಲ್ಕು ತಿಂಗಳಾಗಿವೆ. ನಾವು ವರದಿ ಕೊಟ್ಟು ಬಂದೆವು. ಅದರ ನಂತರ ನಮ್ಮ ನಡುವೆ ಸಂವಹನ ನಡೆದಿಲ್ಲ. ನನ್ನ ಕೆಲಸವನ್ನು ನಾನು ಪ್ರಾಮಾಣಿಕವಾಗಿ ಮಾಡಿದ್ದೇವೆ. ಅದೂ ಅಲ್ಲದೆ ನಾನು ಮಾಡಿದ್ದು ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕವಾಗಿದೆ.” ಎಂದು ಹೇಳಿದರು.

ಅಲ್ಲದೆ, ಪಠ್ಯಪುಸ್ತಕವನ್ನು ಹೇಗೆ ಪರಿಷ್ಕರಣೆ ಮಾಡಬಹುದು ಎಂಬ ವರದಿಯನ್ನಷ್ಟೆ ಕೊಟ್ಟು ಬಂದಿದ್ದೇನೆ ಎಂಬ ಮಾಹಿತಿಯನ್ನು ಅವರು ನೀಡಿದ್ದಾರೆ. “ನಮ್ಮ ಕೆಲಸ ಇಷ್ಟೆ ಇದ್ದಿದ್ದು. ಉಳಿದಿದ್ದು ಸರ್ಕಾರಕ್ಕೆ ಬಿಟ್ಟಿದ್ದು. ಅದನ್ನು ಅವರು ಅಳವಡಿಸಿಕೊಂಡಿದ್ದಾರೆಯೆ ಎಂಬುವುದು ನನಗೆ ಗೊತ್ತಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ನಿಮ್ಮ ಸಮಿತಿಯಿಂದ ಆಗಿರುವ ತಪ್ಪಿಗೆ ನೀವು ಉತ್ತರ ಹೇಳಬೇಕಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ತಪ್ಪು ಆಗಿಲ್ಲ. ತಪ್ಪು ಎಂದು ಹೇಳುವವರು ಅವುಗಳನ್ನು ಅಧ್ಯಯನ ನಡೆಸಿ ಹೇಳಬೇಕು. ನನ್ನ ದೃಷ್ಟಿಯಲ್ಲಿ ಏನು ಸರಿ ಇದೆಯೋ ಅದನ್ನು ನಾನು ಮಾಡಿದ್ದೇನೆ”  ಎಂದು ತಿಳಿಸಿದರು.

“ಬರಗೂರು ರಾಮಚಂದ್ರಪ್ಪ ಎಲ್ಲವನ್ನೂ ಸತ್ಯನಾಶ ಮಾಡಿ ಹಾಕಿದ್ದಾರೆ. ಆರ್ಯರ ಪಾಠದಲ್ಲಿ, ‘ಸಂಸ್ಕೃತ ಎಂಬ ಭಾಷೆಯಿತ್ತು. ವೇದಗಳು ಸಂಸ್ಕೃತದಲ್ಲಿ ಇತ್ತು’ ಎಂದು ತಪ್ಪಿ ಕೂಡಾ ಹಾಕಿಲ್ಲ. ‘ಸಂಸ್ಕೃತ’ ಎಂಬ ಶಬ್ಧವನ್ನು ಇಡೀ ಪಾಠದಲ್ಲಿ ಉಪಯೋಗ ಮಾಡಿಲ್ಲ. ಅವರಿಗೆ ಭಾರತೀಯತೆಯ ಬಗ್ಗೆ ಅಷ್ಟೊಂದು ವಿರೋಧವಿದೆ.” ಎಂದು ಹೇಳಿದರು.

“ಏನಾಗಿದೆಯೆಂದರೆ, 1947 ರಿಂದ ಇವತ್ತಿನವರೆಗೆ ‘ಜಾತ್ಯಾತೀತ ಸಿದ್ದಾಂತದ ತುಂಬಿಸಬೇಕು’ ಎಂದು ಹೇಳಿ ತಪ್ಪು ದಾರಿಯಲ್ಲಿ ಹೋಗಿ ಈ ರೀತಿಯಲ್ಲಿ ಆಗಿದೆ. ಇನ್ನೊಂದು ವಿಷಯ ಏನೆಂದರೆ, ಈ ರೀತಿ ‘ತಪ್ಪು-ತಪ್ಪು’ ಎಂದು ತೀರ್ಪು ನೀಡಲು ಅವರು ಯಾರು? ಇದನ್ನು ಸುಪ್ರೀಂಕೋರ್ಟ್‌ನಲ್ಲಿ ತೀರ್ಪು ನೀಡಲಿ” ಎಂದು ತಿಳಿಸಿದರು.

ಬರಗೂರು ರಾಮಚಂದ್ರಪ್ಪ ಸಮಿತಿಯಿಂದ ತಪ್ಪಾಗಿದೆ ಎಂದು ನೀವು ಗುರುತಿಸಿದ ಹಾಗೆಯೆ, ನಿಮ್ಮ ಸಮಿತಿಯಿಂದ ತಪ್ಪಾಗಿದೆ ಎಂಬುವುದನ್ನು, ತಜ್ಞರು ಗುರುತಿಸಬಹುದಲ್ಲವೆ ಎಂಬ ಮಾತಿಗೆ ಪ್ರತಿಕ್ರಿಯಿಸಿದ ಅವರು, “ಪತ್ರಿಕೆಯವರಾಗಲಿ, ಟಿವಿ ಮಾಧ್ಯಮವಾಗಲಿ ಯಾರೂ ಕೂಡಾ ಅಧ್ಯಯನ ನಡೆಸದೆ ತಪ್ಪು-ತಪ್ಪು ಎಂದು ಹೇಳುವುದು ಸರಿಯೇ” ಎಂದು ಹೇಳಿದರು.

ಇದನ್ನೂ ಓದಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

“ನಿಜ ಇಷ್ಟೆ. ನಾವೆಲ್ಲಾ ಕೆಲಸ ಮುಗಿಸಿ ನಾಲ್ಕು ತಿಂಗಳು ಆ‌ಯ್ತು. ಅದನ್ನು ಕೊಟ್ಟು ಬಂದಿದ್ದೇವೆ. ಈಗ ನಮಗೆ ನಮ್ಮದೆ ಕೆಲಸಗಳು ಇವೆ. ನಾನು ಪರಿಷ್ಕರಣೆ ಮಾಡಿರುವ ಪಠ್ಯ ಪುಸ್ತಕ ಹತ್ತನೆ ತರಗತಿಯ ಸಮಾಜ ವಿಜ್ಞಾನ. ಈ ಪುಸ್ತಕವನ್ನು ನನ್ನ ಅಧ್ಯಕ್ಷತೆಯಲ್ಲಿ 2014ರಲ್ಲಿ ಪರಿಚಯಿಸಲಾಗಿತ್ತು. ಈಗಲೂ ಅದನ್ನೇ ಮುಂದುವರೆಸಲಾಗಿದೆ. ಇದನ್ನು ಆರೇಳು ಭಾಷೆಗಳಿಗೆ ತರ್ಜುಮೆ ಮಾಡಲಾಗಿದೆ. ಈ ನಡುವೆ ಬರಗೂರು ರಾಮಚಂದ್ರಪ್ಪ ಅವರು ಪರಿಷ್ಕರಣೆ ಮಾಡಿದ್ದಾರೆ” ಎಂದು ಅವರು ಹೇಳಿದರು.

“ನನಗೆ ನೆನಪಿರುವಂತೆ, ಹತ್ತನೇ ತರಗತಿ ಸಮಾಜ ವಿಜ್ಞಾನದ 6 ಅಥವಾ 7ನೇ ಅಧ್ಯಾಯವನ್ನು ಪರಿಷ್ಕರಿಸುವಂತೆ ನೀಡಲಾಗಿತ್ತು. ಅದನ್ನು ನಾನು ಅವರಿಗೆ ಸಲ್ಲಿಸಿದ್ದೇನೆ. ಈ ನಡುವೆ ಕೊರೊನಾ ಸಮಯದಲ್ಲಿ ಒಮ್ಮೆ ಕರೆ ಬಂದಿತ್ತು. ಆದರೆ ನಾನು ಮನೆಯಲ್ಲೇ ಕೂತು ಕೆಲಸ ಮಾಡುವುದಾಗಿ ಹೇಳಿದೆ. ಇವಿಷ್ಟು ಸತ್ಯ” ಎಂದು ಹೇಳಿದರು.

ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದ ಬಗ್ಗೆ ಅವರು ಕೊಟ್ಟಿರುವ ವರದಿ ಪ್ರಕಾರ ತಿದ್ದುಪಡಿ ಆಗಿದೆಯೆ ಅಥವಾ ಅಧ್ಯಕ್ಷರು ಅದನ್ನು ಬದಲಾಯಿಸಿ ಬೇರೆ ಬರೆದಿದ್ದಾರೆಯೆ ಎಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈ ಬಗ್ಗೆ ನನಗೆ ಗೊತ್ತಿಲ್ಲ. ಅವರಿಗೆ ಈಗಾಗಲೇ ಅವುಗಳನ್ನು ಕಳುಹಿಸಿದ್ದೇನೆ. ಇದಕ್ಕಿಂತ ಹೆಚ್ಚು ಏನೂ ಹೇಳಲು ಸಾಧ್ಯವಿಲ್ಲ” ಎಂದು ಹೇಳಿದರು. ಮರು ಪರಿಷ್ಕರಣೆ ಮಾಡಿರುವ ಹೊಸ ಪಠ್ಯ ಪುಸ್ತಕ ನನಗೆ ತಲುಪಿಲ್ಲ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಹತ್ತನೇ ತರಗತಿ ಸಮಾಜ ವಿಜ್ಞಾನದಲ್ಲಿ ನಾರಾಯಣ ಗುರುಗಳ ಬಗ್ಗೆ ಮತ್ತು ಪೆರಿಯಾರ್‌ ಪಾಠಗಳನ್ನು ನೀವು ಕತ್ತರಿಸಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಇದು ನನಗೆ ನೆನಪಾಗುತ್ತಿಲ್ಲ. ನಾರಾಯಣ ಗುರುಗಳ ವಿಚಾರಗಳನ್ನು ಅವರು ಹತ್ತನೇ ತರಗತಿಯ ಕನ್ನಡ ಪಠ್ಯ ಪುಸ್ತಕದಲ್ಲಿ ಹಾಕಿದ್ದಾರೆ ಎಂದು ಅವರು ಹೇಳುವುದನ್ನು ನಾನು ಕೇಳಿದ್ದೇನೆ. ಇದರ ಆಚೆಗೆ ಬೇರೆ ಯಾವ ವಿಚಾರವೂ ನನಗೆ ಗೊತ್ತಿಲ್ಲ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...