Homeಕರ್ನಾಟಕನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ...

ನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ ಡಾ. ಅನಂತಕೃಷ್ಣ ಭಟ್‌

ನಮ್ಮ ವರದಿ ಸಲ್ಲಿಸಿದ್ದು, ನಾನು ಇದಕ್ಕೆಲ್ಲಾ ಉತ್ತರಿಸಲೇ ಬೇಕು ಎಂಬುವುದು ನಿಮ್ಮ ‘ಉದ್ಧಟತನ’ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ, ನಾರಾಯಣ ಗುರುಗಳು ಮತ್ತು ಪೆರಿಯಾರ್‌ ಪಾಠಗಳನ್ನು ಕತ್ತರಿಸಿದ್ದೀರ ಎಂಬ ಪ್ರಶ್ನೆಗೆ, ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕವನ್ನು ಮರು ಪರಿಷ್ಕರಣೆ ಮಾಡಿರುವ ಸಮಿತಿಯ ಸದಸ್ಯ ಡಾ. ಅನಂತಕೃಷ್ಣ ಭಟ್‌ ಪ್ರತಿಕ್ರಿಯಿಸಿ, “ನನಗೆ ಅದು ನೆನಪಾಗುತ್ತಿಲ್ಲ” ಎಂದು ಹೇಳಿದರು.

ರಾಜ್ಯದ ಪಠ್ಯ ಪುಸ್ತಕ ಹಗರಣದ ಮತ್ತಷ್ಟು ಹುಳುಕುಗಳು ಹೊರಬೀಳುತ್ತಿವೆ. ಮಂಗಳವಾರದಂದು ಸುದ್ದಿ ಪೋರ್ಟಾಲ್‌ ‘ಈದಿನ.ಕಾಂ’ ಹೊರಗೆಡವಿದ ಮಾಹಿತಿಯಂತೆ, ಪರಿಷ್ಕರಣೆಗೆ ಸಮಿತಿ ಸದಸ್ಯರು ನೀಡಿದ್ದ ವರದಿ ಧಿಕ್ಕರಿಸಿ, ಸಮಿತಿ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥ ಅವರು ರಹಸ್ಯ ತಿದ್ದುಪಡಿ ಮಾಡಿದ್ದಾರೆ ಎಂದು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಮಂಗಳೂರಿನ ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಉಪನ್ಯಾಸಕರೂ ಆಗಿರುವ ಡಾ. ಅನಂತಕೃಷ್ಣ ಭಟ್‌ ಅವರು, “ಈ ಬಗ್ಗೆಗಿನ ಸುದ್ದಿಯನ್ನು ನಾನು ಇನ್ನೂ ನೋಡಿಲ್ಲ ಹಾಗೂ ಅದರ ವಾಸ್ತವಿಕತೆಯೂ ನನಗೆ ಗೊತ್ತಿಲ್ಲ. ಅಲ್ಲದೆ ಪರಿಷ್ಕೃತ ಪಾಠ ಪುಸ್ತಕಗಳು ನನ್ನ ಕೈಗೆ ಬಂದಿಲ್ಲ” ಎಂದು ತಿಳಿಸಿದ್ದಾರೆ. ವಾಸ್ತವದಲ್ಲಿ 80% ಪಠ್ಯ ಪುಸ್ತಕಗಳನ್ನು ಶಾಲೆಗಳಲ್ಲಿ ಹಂಚಿಕೆ ಮಾಡಿದ್ದಾಗಿ ರಾಜ್ಯದ ಬಿಜೆಪಿ ಸರ್ಕಾರವು ಹೇಳಿಕೊಂಡಿದೆ.

ಡಾ. ಅನಂತಕೃಷ್ಣ ಭಟ್‌ ಅವರು 2014ರಂದು ರಚಿತವಾಗಿದ್ದ ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕ ರಚನಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಈ ಪಠ್ಯ ಪುಸ್ತಕವನ್ನು ನಂತರದಲ್ಲಿ ಪ್ರೊಫೆಸರ್‌ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ಪರಿಷ್ಕರಿಸಲಾಗಿತ್ತು. ಆದರೆ ಇದೀಗ ಅದನ್ನು ಮತ್ತೆ ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ಮರು ಪರಿಷ್ಕರಣೆ ಮಾಡಿಸಲಾಗಿದೆ. ಈ ಸಮಿತಿಯಲ್ಲಿ ಇರುವ ಸದಸ್ಯರಲ್ಲಿ ಅನಂತಕೃಷ್ಣ ಭಟ್ ಅವರೂ ಒಬ್ಬರು.

ಪಠ್ಯ ಪುಸ್ತಕವನ್ನು ಮರು ಪರಿಷ್ಕರಣೆ ಮಾಡಿರುವ ಸಮಿತಿಯ ಯಾವ ಸದಸ್ಯರು ಕೂಡಾ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿಲ್ಲ, ಈ ಬಗ್ಗೆ ನಿಮಗೆ ಯಾರಾದರೂ ಬೆದರಿಕೆ ಹಾಕಿದ್ದಾರೆಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘‘ಆ ರೀತಿಯಾಗಿ ಏನೂ ಇಲ್ಲ’’ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಜನರಿಗಾಗಿ ಸರ್ಕಾರಿ ಸೇವೆಗಳನ್ನು ಮಾಡಿರುವವರು, ಅವುಗಳ ಬಗ್ಗೆ ಸಾರ್ವಜನಿಕರು ಕೇಳುವ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಬೇಕಲ್ಲವೆ ಎಂಬ ಪ್ರಶ್ನೆಗೆ ಅವರು,“ಉತ್ತರಿಸಲೇ ಬೇಕು ಎಂಬುವುದು ನಿಮ್ಮ ‘ಉದ್ಧಟತನ’. ನಾನು ತುಂಬಾ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಯಾವುದೇ ಶೈಕ್ಷಣಿಕ ಅರ್ಹತೆಯನ್ನು ಈ ವರೆಗೆ ಬಹಿರಂಗಪಡಿಸದ ವ್ಯಕ್ತಿಯನ್ನು ಪಠ್ಯ ಪುಸ್ತಕ ಪರಿಷ್ಕರಣೆಯ ಅಧ್ಯಕ್ಷರನ್ನಾಗಿ ಮಾಡಿದ್ದು, ಪಠ್ಯದಲ್ಲಿ ತಪ್ಪುಗಳಾಗಿವೆ ಎಂಬ ಆಕ್ಷೇಪಗಳಿಗೆ ವಿದ್ವಾಂಸರುಗಳಾದ ನೀವು ಯಾರೂ ಮಾತನಾಡುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ಇದಕ್ಕೆ ನಾನು ಏನು ಕಮೆಂಟ್ ಮಾಡಲಿ ಎಂದು ನೀವೇ ಹೇಳಿ. ನಮ್ಮ ಕೆಲಸಗಳನ್ನು ಮಾಡಿ ಮುಗಿಸಿ ನಾವು ಬಂದಿದ್ದೇವೆ. ಇದರ ನಂತರ ನಮ್ಮ ನಡುವೆ ಸಂವಹನ ನಡೆದಿಲ್ಲ. ಸಂವಹನವೇ ನಡೆಯದಿದ್ದರೆ ನಾವು ಏನು ಕಮೆಂಟ್ ಮಾಡಲಿ?” ಎಂದು ಅವರು ಹೇಳಿದ್ದಾರೆ.

“ನಿಜಾ ಹೇಳಬೇಕೆಂದರೆ, ಈ ವರದಿ ಕೊಟ್ಟು ನಾಲ್ಕು ತಿಂಗಳಾಗಿವೆ. ನಾವು ವರದಿ ಕೊಟ್ಟು ಬಂದೆವು. ಅದರ ನಂತರ ನಮ್ಮ ನಡುವೆ ಸಂವಹನ ನಡೆದಿಲ್ಲ. ನನ್ನ ಕೆಲಸವನ್ನು ನಾನು ಪ್ರಾಮಾಣಿಕವಾಗಿ ಮಾಡಿದ್ದೇವೆ. ಅದೂ ಅಲ್ಲದೆ ನಾನು ಮಾಡಿದ್ದು ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕವಾಗಿದೆ.” ಎಂದು ಹೇಳಿದರು.

ಅಲ್ಲದೆ, ಪಠ್ಯಪುಸ್ತಕವನ್ನು ಹೇಗೆ ಪರಿಷ್ಕರಣೆ ಮಾಡಬಹುದು ಎಂಬ ವರದಿಯನ್ನಷ್ಟೆ ಕೊಟ್ಟು ಬಂದಿದ್ದೇನೆ ಎಂಬ ಮಾಹಿತಿಯನ್ನು ಅವರು ನೀಡಿದ್ದಾರೆ. “ನಮ್ಮ ಕೆಲಸ ಇಷ್ಟೆ ಇದ್ದಿದ್ದು. ಉಳಿದಿದ್ದು ಸರ್ಕಾರಕ್ಕೆ ಬಿಟ್ಟಿದ್ದು. ಅದನ್ನು ಅವರು ಅಳವಡಿಸಿಕೊಂಡಿದ್ದಾರೆಯೆ ಎಂಬುವುದು ನನಗೆ ಗೊತ್ತಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ನಿಮ್ಮ ಸಮಿತಿಯಿಂದ ಆಗಿರುವ ತಪ್ಪಿಗೆ ನೀವು ಉತ್ತರ ಹೇಳಬೇಕಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ತಪ್ಪು ಆಗಿಲ್ಲ. ತಪ್ಪು ಎಂದು ಹೇಳುವವರು ಅವುಗಳನ್ನು ಅಧ್ಯಯನ ನಡೆಸಿ ಹೇಳಬೇಕು. ನನ್ನ ದೃಷ್ಟಿಯಲ್ಲಿ ಏನು ಸರಿ ಇದೆಯೋ ಅದನ್ನು ನಾನು ಮಾಡಿದ್ದೇನೆ”  ಎಂದು ತಿಳಿಸಿದರು.

“ಬರಗೂರು ರಾಮಚಂದ್ರಪ್ಪ ಎಲ್ಲವನ್ನೂ ಸತ್ಯನಾಶ ಮಾಡಿ ಹಾಕಿದ್ದಾರೆ. ಆರ್ಯರ ಪಾಠದಲ್ಲಿ, ‘ಸಂಸ್ಕೃತ ಎಂಬ ಭಾಷೆಯಿತ್ತು. ವೇದಗಳು ಸಂಸ್ಕೃತದಲ್ಲಿ ಇತ್ತು’ ಎಂದು ತಪ್ಪಿ ಕೂಡಾ ಹಾಕಿಲ್ಲ. ‘ಸಂಸ್ಕೃತ’ ಎಂಬ ಶಬ್ಧವನ್ನು ಇಡೀ ಪಾಠದಲ್ಲಿ ಉಪಯೋಗ ಮಾಡಿಲ್ಲ. ಅವರಿಗೆ ಭಾರತೀಯತೆಯ ಬಗ್ಗೆ ಅಷ್ಟೊಂದು ವಿರೋಧವಿದೆ.” ಎಂದು ಹೇಳಿದರು.

“ಏನಾಗಿದೆಯೆಂದರೆ, 1947 ರಿಂದ ಇವತ್ತಿನವರೆಗೆ ‘ಜಾತ್ಯಾತೀತ ಸಿದ್ದಾಂತದ ತುಂಬಿಸಬೇಕು’ ಎಂದು ಹೇಳಿ ತಪ್ಪು ದಾರಿಯಲ್ಲಿ ಹೋಗಿ ಈ ರೀತಿಯಲ್ಲಿ ಆಗಿದೆ. ಇನ್ನೊಂದು ವಿಷಯ ಏನೆಂದರೆ, ಈ ರೀತಿ ‘ತಪ್ಪು-ತಪ್ಪು’ ಎಂದು ತೀರ್ಪು ನೀಡಲು ಅವರು ಯಾರು? ಇದನ್ನು ಸುಪ್ರೀಂಕೋರ್ಟ್‌ನಲ್ಲಿ ತೀರ್ಪು ನೀಡಲಿ” ಎಂದು ತಿಳಿಸಿದರು.

ಬರಗೂರು ರಾಮಚಂದ್ರಪ್ಪ ಸಮಿತಿಯಿಂದ ತಪ್ಪಾಗಿದೆ ಎಂದು ನೀವು ಗುರುತಿಸಿದ ಹಾಗೆಯೆ, ನಿಮ್ಮ ಸಮಿತಿಯಿಂದ ತಪ್ಪಾಗಿದೆ ಎಂಬುವುದನ್ನು, ತಜ್ಞರು ಗುರುತಿಸಬಹುದಲ್ಲವೆ ಎಂಬ ಮಾತಿಗೆ ಪ್ರತಿಕ್ರಿಯಿಸಿದ ಅವರು, “ಪತ್ರಿಕೆಯವರಾಗಲಿ, ಟಿವಿ ಮಾಧ್ಯಮವಾಗಲಿ ಯಾರೂ ಕೂಡಾ ಅಧ್ಯಯನ ನಡೆಸದೆ ತಪ್ಪು-ತಪ್ಪು ಎಂದು ಹೇಳುವುದು ಸರಿಯೇ” ಎಂದು ಹೇಳಿದರು.

ಇದನ್ನೂ ಓದಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

“ನಿಜ ಇಷ್ಟೆ. ನಾವೆಲ್ಲಾ ಕೆಲಸ ಮುಗಿಸಿ ನಾಲ್ಕು ತಿಂಗಳು ಆ‌ಯ್ತು. ಅದನ್ನು ಕೊಟ್ಟು ಬಂದಿದ್ದೇವೆ. ಈಗ ನಮಗೆ ನಮ್ಮದೆ ಕೆಲಸಗಳು ಇವೆ. ನಾನು ಪರಿಷ್ಕರಣೆ ಮಾಡಿರುವ ಪಠ್ಯ ಪುಸ್ತಕ ಹತ್ತನೆ ತರಗತಿಯ ಸಮಾಜ ವಿಜ್ಞಾನ. ಈ ಪುಸ್ತಕವನ್ನು ನನ್ನ ಅಧ್ಯಕ್ಷತೆಯಲ್ಲಿ 2014ರಲ್ಲಿ ಪರಿಚಯಿಸಲಾಗಿತ್ತು. ಈಗಲೂ ಅದನ್ನೇ ಮುಂದುವರೆಸಲಾಗಿದೆ. ಇದನ್ನು ಆರೇಳು ಭಾಷೆಗಳಿಗೆ ತರ್ಜುಮೆ ಮಾಡಲಾಗಿದೆ. ಈ ನಡುವೆ ಬರಗೂರು ರಾಮಚಂದ್ರಪ್ಪ ಅವರು ಪರಿಷ್ಕರಣೆ ಮಾಡಿದ್ದಾರೆ” ಎಂದು ಅವರು ಹೇಳಿದರು.

“ನನಗೆ ನೆನಪಿರುವಂತೆ, ಹತ್ತನೇ ತರಗತಿ ಸಮಾಜ ವಿಜ್ಞಾನದ 6 ಅಥವಾ 7ನೇ ಅಧ್ಯಾಯವನ್ನು ಪರಿಷ್ಕರಿಸುವಂತೆ ನೀಡಲಾಗಿತ್ತು. ಅದನ್ನು ನಾನು ಅವರಿಗೆ ಸಲ್ಲಿಸಿದ್ದೇನೆ. ಈ ನಡುವೆ ಕೊರೊನಾ ಸಮಯದಲ್ಲಿ ಒಮ್ಮೆ ಕರೆ ಬಂದಿತ್ತು. ಆದರೆ ನಾನು ಮನೆಯಲ್ಲೇ ಕೂತು ಕೆಲಸ ಮಾಡುವುದಾಗಿ ಹೇಳಿದೆ. ಇವಿಷ್ಟು ಸತ್ಯ” ಎಂದು ಹೇಳಿದರು.

ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದ ಬಗ್ಗೆ ಅವರು ಕೊಟ್ಟಿರುವ ವರದಿ ಪ್ರಕಾರ ತಿದ್ದುಪಡಿ ಆಗಿದೆಯೆ ಅಥವಾ ಅಧ್ಯಕ್ಷರು ಅದನ್ನು ಬದಲಾಯಿಸಿ ಬೇರೆ ಬರೆದಿದ್ದಾರೆಯೆ ಎಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈ ಬಗ್ಗೆ ನನಗೆ ಗೊತ್ತಿಲ್ಲ. ಅವರಿಗೆ ಈಗಾಗಲೇ ಅವುಗಳನ್ನು ಕಳುಹಿಸಿದ್ದೇನೆ. ಇದಕ್ಕಿಂತ ಹೆಚ್ಚು ಏನೂ ಹೇಳಲು ಸಾಧ್ಯವಿಲ್ಲ” ಎಂದು ಹೇಳಿದರು. ಮರು ಪರಿಷ್ಕರಣೆ ಮಾಡಿರುವ ಹೊಸ ಪಠ್ಯ ಪುಸ್ತಕ ನನಗೆ ತಲುಪಿಲ್ಲ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಹತ್ತನೇ ತರಗತಿ ಸಮಾಜ ವಿಜ್ಞಾನದಲ್ಲಿ ನಾರಾಯಣ ಗುರುಗಳ ಬಗ್ಗೆ ಮತ್ತು ಪೆರಿಯಾರ್‌ ಪಾಠಗಳನ್ನು ನೀವು ಕತ್ತರಿಸಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಇದು ನನಗೆ ನೆನಪಾಗುತ್ತಿಲ್ಲ. ನಾರಾಯಣ ಗುರುಗಳ ವಿಚಾರಗಳನ್ನು ಅವರು ಹತ್ತನೇ ತರಗತಿಯ ಕನ್ನಡ ಪಠ್ಯ ಪುಸ್ತಕದಲ್ಲಿ ಹಾಕಿದ್ದಾರೆ ಎಂದು ಅವರು ಹೇಳುವುದನ್ನು ನಾನು ಕೇಳಿದ್ದೇನೆ. ಇದರ ಆಚೆಗೆ ಬೇರೆ ಯಾವ ವಿಚಾರವೂ ನನಗೆ ಗೊತ್ತಿಲ್ಲ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...