Homeಮುಖಪುಟನೌಕಾಪಡೆಗೆ ಸ್ವದೇಶಿ ನಿರ್ಮಿತ ಸ್ಕಾರ್ಪಿಯನ್‌ ಕ್ಲಾಸ್‌‌ ‘ಐಎನ್‌ಎಸ್‌ ಕಾರಂಜ್‌‌’ ಜಲಾಂತರ್ಗಾಮಿ ನಿಯೋಜನೆ!

ನೌಕಾಪಡೆಗೆ ಸ್ವದೇಶಿ ನಿರ್ಮಿತ ಸ್ಕಾರ್ಪಿಯನ್‌ ಕ್ಲಾಸ್‌‌ ‘ಐಎನ್‌ಎಸ್‌ ಕಾರಂಜ್‌‌’ ಜಲಾಂತರ್ಗಾಮಿ ನಿಯೋಜನೆ!

- Advertisement -
- Advertisement -

ಸ್ವದೇಶಿ ನಿರ್ಮಿತ ಸ್ಕಾರ್ಪಿಯಾನ್ ವರ್ಗದ ಜಲಾಂತರ್ಗಾಮಿ ನೌಕೆಯಾದ ‘ಐಎನ್‌ಎಸ್ ಕಾರಂಜ್’ ಅನ್ನು ಭಾರತೀಯ ನೌಕಾಪಡೆಗೆ ನಿಯೋಜಿಸಲಾಗಿದೆ. ಮುಂಬೈನ ಮಜಾಗನ್ ಶಿಪ್‌ಯಾರ್ಡ್‌ನಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಮತ್ತು ಮಾಜಿ ನೌಕಾಪಡೆಯ ಮುಖ್ಯಸ್ಥ ವಿ.ಎಸ್. ಶೇಖಾವತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಳೆದ ಏಳು ದಶಕಗಳಿಂದ ನೌಕಾಪಡೆಯು ಸ್ವದೇಶಿಕರಣ ಮತ್ತು ರಕ್ಷಣಾ ಸ್ವಾವಲಂಬನೆಗೆ ಬದ್ಧವಾಗಿದೆ ಎಂದು ಮುಖ್ಯ ಅಡ್ಮಿರಲ್ ಕರಂಬೀರ್ ಸಿಂಗ್ ಹೇಳಿದ್ದಾರೆ. ಪ್ರಸ್ತುತ, 42 ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳಿವೆ ಮತ್ತು ಅವುಗಳಲ್ಲಿ 40 ದೇಶಾದ್ಯಂತ ಹಡಗುಕಟ್ಟೆಗಳಲ್ಲಿ ನಿರ್ಮಾಣ ಹಂತದಲ್ಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸೀಟು ಹಂಚಿಕೆಯಲ್ಲಿ ಭಿನ್ನಮತ: AIADMK-BJP ಮೈತ್ರಿ ತೊರೆದ ವಿಜಯಕಾಂತ್‌ರ DMDK

ಫ್ರೆಂಚ್ ಕಂಪನಿ ಡಿಸಿಎನ್‌ಎಸ್‌ನೊಂದಿಗಿನ 2005 ರ ಒಪ್ಪಂದದಡಿಯಲ್ಲಿ ನಿರ್ಮಿಸಲಾಗುವ ಆರು ಕ್ಯಾಲ್ವರಿ ವರ್ಗದ ಜಲಾಂತರ್ಗಾಮಿ ನೌಕೆಗಳಲ್ಲಿ ಐಎನ್‌ಎಸ್ ಕಾರಂಜ್ ಮೂರನೆಯದಾಗಿದೆ. ಸಮುದ್ರದಲ್ಲಿ ಜಲಾಂತರ್ಗಾಮಿ ಪ್ರಯೋಗಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ.

ಸಮುದ್ರ ಮತ್ತು ಒಳನಾಡಿನ ಮೇಲೆ ಒಂದೇ ರೀತಿಯಲ್ಲಿ ಆಕ್ರಮಣ ಮಾಡಬಹುದು ಎಂಬುದಾಗಿದೆ ಸ್ಕಾರ್ಪಿಯಾನ್ ವರ್ಗದ ಜಲಾಂತರ್ಗಾಮಿ ನೌಕೆಯ ವೈಶಿಷ್ಟ್ಯ. ಇದಲ್ಲದೆ, ಇದು ಇತರ ಜಲಾಂತರ್ಗಾಮಿ ನೌಕೆಗಳನ್ನು ನಾಶಪಡಿಸಲು ಮತ್ತು ಸ್ಪೋಟಕಗಳನ್ನು ಬಳಸಿ ದಾಳಿ ಕೂಡಾ ಮಾಡುತ್ತದೆ. 220 ಅಡಿ ಉದ್ದ ಮತ್ತು 40 ಅಡಿ ಎತ್ತರವಿರುವ ಈ ಜಲಾಂತರ್ಗಾಮಿಯು ಸಮುದ್ರದ ಮೇಲಿನಿಂದ 11 ನಾಟಿಕಲ್ ಮೈಲಿ ಮತ್ತು ಸಮುದ್ರದೊಳಗಿನಿಂದ 20 ನಾಟಿಕಲ್ ಮೈಲುಗಳಷ್ಟು ವೇಗದಲ್ಲಿ ಪ್ರಯಾಣಿಸುತ್ತದೆ.

ಇದನ್ನು ಡಿಸೆಂಬರ್ 2017 ರಲ್ಲಿ ಐಎನ್ಎಸ್ ಕ್ಯಾಲ್ವರಿ ಮತ್ತು ಸೆಪ್ಟೆಂಬರ್ 2019 ರಲ್ಲಿ ಐಎನ್ಎಸ್ ಖಂಡೇರಿ ನಿಯೋಜಿಸಲಾಗಿತ್ತು. ನಾಲ್ಕು ಮತ್ತು ಐದನೇ ಜಲಾಂತರ್ಗಾಮಿ ನೌಕೆಗಳಾದ ಐಎನ್‌ಎಸ್ ವೆಲಾ ಮತ್ತು ಐಎನ್‌ಎಸ್ ವ್ಯಾಗ್ಮೀರ್ ಸಮುದ್ರದಲ್ಲಿ ಪರೀಕ್ಷೆಯಲ್ಲಿದ್ದು ಹಾಗೂ ಆರನೆಯ ಐಎನ್‌ಎಸ್ ವಾಗ್‌ಶೀರ್ ನಿರ್ಮಾಣ ಹಂತದಲ್ಲಿದೆ.

ಇದನ್ನೂ ಓದಿ: ವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ – ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...