Homeಮುಖಪುಟನೌಕಾಪಡೆಗೆ ಸ್ವದೇಶಿ ನಿರ್ಮಿತ ಸ್ಕಾರ್ಪಿಯನ್‌ ಕ್ಲಾಸ್‌‌ ‘ಐಎನ್‌ಎಸ್‌ ಕಾರಂಜ್‌‌’ ಜಲಾಂತರ್ಗಾಮಿ ನಿಯೋಜನೆ!

ನೌಕಾಪಡೆಗೆ ಸ್ವದೇಶಿ ನಿರ್ಮಿತ ಸ್ಕಾರ್ಪಿಯನ್‌ ಕ್ಲಾಸ್‌‌ ‘ಐಎನ್‌ಎಸ್‌ ಕಾರಂಜ್‌‌’ ಜಲಾಂತರ್ಗಾಮಿ ನಿಯೋಜನೆ!

- Advertisement -
- Advertisement -

ಸ್ವದೇಶಿ ನಿರ್ಮಿತ ಸ್ಕಾರ್ಪಿಯಾನ್ ವರ್ಗದ ಜಲಾಂತರ್ಗಾಮಿ ನೌಕೆಯಾದ ‘ಐಎನ್‌ಎಸ್ ಕಾರಂಜ್’ ಅನ್ನು ಭಾರತೀಯ ನೌಕಾಪಡೆಗೆ ನಿಯೋಜಿಸಲಾಗಿದೆ. ಮುಂಬೈನ ಮಜಾಗನ್ ಶಿಪ್‌ಯಾರ್ಡ್‌ನಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಮತ್ತು ಮಾಜಿ ನೌಕಾಪಡೆಯ ಮುಖ್ಯಸ್ಥ ವಿ.ಎಸ್. ಶೇಖಾವತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಳೆದ ಏಳು ದಶಕಗಳಿಂದ ನೌಕಾಪಡೆಯು ಸ್ವದೇಶಿಕರಣ ಮತ್ತು ರಕ್ಷಣಾ ಸ್ವಾವಲಂಬನೆಗೆ ಬದ್ಧವಾಗಿದೆ ಎಂದು ಮುಖ್ಯ ಅಡ್ಮಿರಲ್ ಕರಂಬೀರ್ ಸಿಂಗ್ ಹೇಳಿದ್ದಾರೆ. ಪ್ರಸ್ತುತ, 42 ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳಿವೆ ಮತ್ತು ಅವುಗಳಲ್ಲಿ 40 ದೇಶಾದ್ಯಂತ ಹಡಗುಕಟ್ಟೆಗಳಲ್ಲಿ ನಿರ್ಮಾಣ ಹಂತದಲ್ಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸೀಟು ಹಂಚಿಕೆಯಲ್ಲಿ ಭಿನ್ನಮತ: AIADMK-BJP ಮೈತ್ರಿ ತೊರೆದ ವಿಜಯಕಾಂತ್‌ರ DMDK

ಫ್ರೆಂಚ್ ಕಂಪನಿ ಡಿಸಿಎನ್‌ಎಸ್‌ನೊಂದಿಗಿನ 2005 ರ ಒಪ್ಪಂದದಡಿಯಲ್ಲಿ ನಿರ್ಮಿಸಲಾಗುವ ಆರು ಕ್ಯಾಲ್ವರಿ ವರ್ಗದ ಜಲಾಂತರ್ಗಾಮಿ ನೌಕೆಗಳಲ್ಲಿ ಐಎನ್‌ಎಸ್ ಕಾರಂಜ್ ಮೂರನೆಯದಾಗಿದೆ. ಸಮುದ್ರದಲ್ಲಿ ಜಲಾಂತರ್ಗಾಮಿ ಪ್ರಯೋಗಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ.

ಸಮುದ್ರ ಮತ್ತು ಒಳನಾಡಿನ ಮೇಲೆ ಒಂದೇ ರೀತಿಯಲ್ಲಿ ಆಕ್ರಮಣ ಮಾಡಬಹುದು ಎಂಬುದಾಗಿದೆ ಸ್ಕಾರ್ಪಿಯಾನ್ ವರ್ಗದ ಜಲಾಂತರ್ಗಾಮಿ ನೌಕೆಯ ವೈಶಿಷ್ಟ್ಯ. ಇದಲ್ಲದೆ, ಇದು ಇತರ ಜಲಾಂತರ್ಗಾಮಿ ನೌಕೆಗಳನ್ನು ನಾಶಪಡಿಸಲು ಮತ್ತು ಸ್ಪೋಟಕಗಳನ್ನು ಬಳಸಿ ದಾಳಿ ಕೂಡಾ ಮಾಡುತ್ತದೆ. 220 ಅಡಿ ಉದ್ದ ಮತ್ತು 40 ಅಡಿ ಎತ್ತರವಿರುವ ಈ ಜಲಾಂತರ್ಗಾಮಿಯು ಸಮುದ್ರದ ಮೇಲಿನಿಂದ 11 ನಾಟಿಕಲ್ ಮೈಲಿ ಮತ್ತು ಸಮುದ್ರದೊಳಗಿನಿಂದ 20 ನಾಟಿಕಲ್ ಮೈಲುಗಳಷ್ಟು ವೇಗದಲ್ಲಿ ಪ್ರಯಾಣಿಸುತ್ತದೆ.

ಇದನ್ನು ಡಿಸೆಂಬರ್ 2017 ರಲ್ಲಿ ಐಎನ್ಎಸ್ ಕ್ಯಾಲ್ವರಿ ಮತ್ತು ಸೆಪ್ಟೆಂಬರ್ 2019 ರಲ್ಲಿ ಐಎನ್ಎಸ್ ಖಂಡೇರಿ ನಿಯೋಜಿಸಲಾಗಿತ್ತು. ನಾಲ್ಕು ಮತ್ತು ಐದನೇ ಜಲಾಂತರ್ಗಾಮಿ ನೌಕೆಗಳಾದ ಐಎನ್‌ಎಸ್ ವೆಲಾ ಮತ್ತು ಐಎನ್‌ಎಸ್ ವ್ಯಾಗ್ಮೀರ್ ಸಮುದ್ರದಲ್ಲಿ ಪರೀಕ್ಷೆಯಲ್ಲಿದ್ದು ಹಾಗೂ ಆರನೆಯ ಐಎನ್‌ಎಸ್ ವಾಗ್‌ಶೀರ್ ನಿರ್ಮಾಣ ಹಂತದಲ್ಲಿದೆ.

ಇದನ್ನೂ ಓದಿ: ವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ – ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...