Homeಅಂತರಾಷ್ಟ್ರೀಯಯುದ್ಧ ಪೀಡಿತ ಗಾಝಾದ ನಿರಾಶ್ರಿತರಿಗೆ ಆಶ್ರಯ ನೀಡುವುದಾಗಿ ಘೋಷಿಸಿದ ಸ್ಕಾಟ್ಲೆಂಡ್

ಯುದ್ಧ ಪೀಡಿತ ಗಾಝಾದ ನಿರಾಶ್ರಿತರಿಗೆ ಆಶ್ರಯ ನೀಡುವುದಾಗಿ ಘೋಷಿಸಿದ ಸ್ಕಾಟ್ಲೆಂಡ್

- Advertisement -
- Advertisement -

ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ನಿರಾಶ್ರಿತರಾದ ಗಾಝಾದ ಜನರಿಗೆ ಆಶ್ರಯ ನೀಡಲು ತಮ್ಮ ದೇಶ ಸಿದ್ಧವಾಗಿದೆ ಎಂದು ಸ್ಕಾಟ್ಲೆಂಡ್‌ನ ಸಚಿವ ಹುಮ್ಜಾ ಯೂಸಫ್ ಹೇಳಿದ್ದಾರೆ.

ಯೂಸಫ್ ಅವರ ಪ್ರಕಟಣೆಯಿಂದ ಸ್ಕಾಟ್ಲೆಂಡ್ ಯುದ್ಧ ಪೀಡಿತ ಪ್ಯಾಲೆಸ್ತೀನ್‌ ಜನರನ್ನು ಸ್ವಾಗತಿಸಿದ ಮೊದಲ ದೇಶವಾಗಿದೆ. ಯೂಸಫ್ ಅವರು ಸ್ಕಾಟ್ಲೆಂಡ್‌ನಲ್ಲಿ ಮೊದಲ ಮಂತ್ರಿಯಾಗಿದ್ದು, ಇವರು ಕ್ಯಾಬಿನೆಟ್‌ನ್ನು ಮುಂದುವರಿಸುವವರಾಗಿದ್ದಾರೆ. ಇದು ಪ್ರಧಾನ ಮಂತ್ರಿಯ ಹುದ್ದೆಗೆ ಸಮಾನವಾದ ಹುದ್ದೆಯಾಗಿದೆ.

ಯೂಸಫ್ ಅವರ ಮಾವ ಗಾಝಾದಲ್ಲಿದ್ದಾರೆ. ಹಮಾಸ್ ನಿಯಂತ್ರಿತ ಪ್ಯಾಲೇಸ್ತೀನ್‌ ಪ್ರಾಂತ್ಯದಲ್ಲಿ ಅವರ ಸಂಬಂಧಿಕರು ಕೂಡ ಇದ್ದಾರೆ. ಯೂಸಫ್ ಗಾಝಾದಲ್ಲಿ ಕಷ್ಟಕರ ಪರಿಸ್ಥಿತಿ ಇದೆ ಎಂದು ಹೇಳಿದ್ದಾರೆ.

ನಾವು ಸಿರಿಯಾದಿಂದ, ಉಕ್ರೇನ್‌ನಿಂದ ಮತ್ತು ಇತರ ಹಲವು ದೇಶಗಳಿಂದ ಬಂದವರನ್ನು ಸ್ವಾಗತಿಸಿದ್ದೇವೆ ಮತ್ತು ನಾವು ಅದನ್ನು ಮತ್ತೆ ಮಾಡಬೇಕು ಎಂದು ಯೂಸಫ್ ಹೇಳಿದರು. ಈ ಭೀಕರ ದಾಳಿಗಳಲ್ಲಿ ತತ್ತರಿಸಿದವರಿಗೆ ಸುರಕ್ಷತೆ ಮತ್ತು ಅಭಯವನ್ನು ನೀಡುವ ಮೊದಲ ದೇಶವಾಗಲು ಸ್ಕಾಟ್ಲೆಂಡ್ ಸಿದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಒಂದು ಮಿಲಿಯನ್ ಜನರಿಗೆ ಆಶ್ರಯ ಒದಗಿಸಲು ಅವರು ಅಂತರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದು, ಎರಡು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಯುಕೆ ಸರ್ಕಾರವನ್ನು ಒತ್ತಾಯಿಸಿದರು. ಮೊದಲನೆಯದಾಗಿ ಗಾಝಾದ ಜನಿರಾಶ್ರಿತರಿಗೆ ಪುನರ್ವಸತಿ ಯೋಜನೆಯನ್ನು ತಕ್ಷಣವೇ ಪ್ರಾರಂಭಿಸಬೇಕು. ಎರಡನೆಯದಾಗಿ ಗಾಝಾದಲ್ಲಿ ಗಾಯಗೊಂಡ ನಾಗರಿಕರಿಗೆ ವೈದ್ಯಕೀಯ ನೆರವಿಗೆ ಒತ್ತಾಯಿಸಿದ್ದಾರೆ.

ನಾನು ಸ್ಪಷ್ಟವಾಗಿ ಹೇಳುತ್ತೇನೆ, ಸ್ಕಾಟ್ಲೆಂಡ್ ತನ್ನ ಪಾತ್ರವನ್ನು ನಿರ್ವಹಿಸಲು ಸಿದ್ಧವಾಗಿದೆ. ನಮ್ಮ ಆಸ್ಪತ್ರೆಗಳು ಗಾಝಾದ ಗಾಯಗೊಂಡ ಪುರುಷರು, ಮಹಿಳೆಯರು ಮತ್ತು ಮಕ್ಕಳಿಗೆ ಚಿಕಿತ್ಸೆ ನೀಡುತ್ತವೆ ಎಂದು ಹೇಳಿದ್ದಾರೆ.

ನನ್ನ ಸೋದರಮಾವ ಗಾಝಾದಲ್ಲಿ ವೈದ್ಯರಾಗಿದ್ದಾರೆ. ನಾವು ಅವರನ್ನು ಫೋನ್‌ನಲ್ಲಿ ಸಂಪರ್ಕಿಸಿದಾಗ ಅವರು ಸಂಪೂರ್ಣ ಹತ್ಯಾಕಾಂಡದ ಬಗ್ಗೆ ಹೇಳುತ್ತಾರೆ. ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಾಮಗ್ರಿಗಳು ಖಾಲಿಯಾಗುತ್ತಿವೆ. ವೈದ್ಯರು ಮತ್ತು ದಾದಿಯರು ಯಾರಿಗೆ ಚಿಕಿತ್ಸೆ ನೀಡಬೇಕು ಮತ್ತು ಯಾರನ್ನು ಸಾಯಲು ಬಿಡಬೇಕು ಎಂದು ಯೋಚಿಸುವಂತಹ ಭೀಕರ ಪರಿಸ್ಥಿತಿ ಇದೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ಮಾಜಿ IPS ಬೋರ್ವಾಂಕರ್ ಆತ್ಮಚರಿತ್ರೆಯಲ್ಲಿ ಬರೆದ ಅಂಶ ಸೃಷ್ಟಿಸಿದ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...