Homeಮುಖಪುಟಬಾಂಗ್ಲಾದೇಶೀಯರೆಂದು ಬಂಗಾಳಿ ಮುಸ್ಲಿಂ ಕಾರ್ಮಿಕರ ಬಂಧನ ಆರೋಪ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ಬಾಂಗ್ಲಾದೇಶೀಯರೆಂದು ಬಂಗಾಳಿ ಮುಸ್ಲಿಂ ಕಾರ್ಮಿಕರ ಬಂಧನ ಆರೋಪ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ಬಾಂಗ್ಲಾದೇಶದ ಪ್ರಜೆಗಳೆಂಬ ಅನುಮಾನದ ಮೇಲೆ ಪಶ್ಚಿಮ ಬಂಗಾಳದಿಂದ ವಲಸೆ ಬಂದ ಮುಸ್ಲಿಂ ಕಾರ್ಮಿಕರನ್ನು ಹಲವು ರಾಜ್ಯಗಳಲ್ಲಿ ಬಂಧಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್‌) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ(ಆ.14) ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಪಿಐಎಲ್ ವಿಚಾರಣೆ ನಡೆಸಿ ಕೇಂದ್ರ ಸರ್ಕಾರ ಹಾಗೂ ಪ್ರತಿವಾದಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ (ಒಡಿಶಾ, ರಾಜಸ್ಥಾನ, ಮಹಾರಾಷ್ಟ್ರ, ದೆಹಲಿ, ಬಿಹಾರ, ಉತ್ತರ ಪ್ರದೇಶದ ಛತ್ತೀಸ್‌ಗಢ, ಹರಿಯಾಣ ಮತ್ತು ಪಶ್ಚಿಮ ಬಂಗಾಳ) ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಸಮಸ್ಯೆಯ ಪರಿಹಾರಕ್ಕೆ ದೇಶದಾದ್ಯಂತ (ಪ್ಯಾನ್-ಇಂಡಿಯಾ) ಏನು ಮಾಡಬಹುದು ಎಂದು ಪ್ರತಿವಾದಿಗಳ ಅಭಿಪ್ರಾಯ ಕೇಳಿದೆ.

ಪಶ್ಚಿಮ ಬಂಗಾಳ ವಲಸೆ ಕಾರ್ಮಿಕರ ಕಲ್ಯಾಣ ಮಂಡಳಿ ಸಲ್ಲಿಸಿರುವ ಪಿಐಎಲ್‌ನಲ್ಲಿ, “ಮೇ ತಿಂಗಳಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಸುತ್ತೋಲೆ ಕಳಿಸಿದ ಬಳಿಕ, ವಿವಿಧ ರಾಜ್ಯದ ಅಧಿಕಾರಿಗಳು ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರನ್ನು ಬಾಂಗ್ಲಾದೇಶದವರು ಎಂದು ಆರೋಪಿಸಿ ಏಕಾಏಕಿ ಬಂಧಿಸುತ್ತಿದ್ದಾರೆ” ಎಂದು ಆರೋಪಿಸಲಾಗಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್, “ಬಹುತೇಕ ಎಲ್ಲಾ ಪ್ರಕರಣಗಳಲ್ಲಿ ಮರು ಪರಿಶೀಲನೆ ನಡೆಸಿದಾಗ, ಅವರು ಭಾರತೀಯ ಪ್ರಜೆಗಳು ಎಂದು ಕಂಡು ಬಂದಿವೆ. ಕೆಲವು ಪ್ರಕರಣಗಳಲ್ಲಿ ಭಾರತೀಯ ಪ್ರಜೆಗಳನ್ನು ಗಡಿಯಾಚೆಗೆ ತಳ್ಳಿ, ಪರಿಶೀಲನೆಯ ಬಳಿಕ ಅವರನ್ನು ವಾಪಸ್ ಕರೆ ತರಲಾಗಿದೆ. ಅವರ ದಾಖಲೆಗಳು ಬಾಂಗ್ಲಾದೇಶಿ ಭಾಷೆಯಲ್ಲಿದೆ ಎಂದು ದೆಹಲಿ ಪೊಲೀಸರು ಹೇಳುತ್ತಾರೆ. ಬಾಂಗ್ಲಾದೇಶಿ ಭಾಷೆ ಎನ್ನುವುದು ಇಲ್ಲ. ಅದು ಬಂಗಾಳಿ (ಬೆಂಗಾಳಿ) ಭಾಷೆ ಎಂದಿದ್ದಾರೆ.

ವಲಸೆ ಕಾರ್ಮಿಕರನ್ನು ವಿದೇಶಿಗರು ಎಂದು ಶಂಕಿಸಿ ಬಂಧನ ಕೇಂದ್ರಗಳಲ್ಲಿ ಇಡಲಾಗುತ್ತಿದೆ. ಪೌರತ್ವದ ಕೊರತೆಯ ಕೇವಲ ಅನುಮಾನದ ಮೇಲೆ ಯಾರನ್ನಾದರೂ ಬಂಧಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲದಿದ್ದರೂ, ಇದು ದೇಶದಾದ್ಯಂತ ಭೀತಿಯನ್ನು ಸೃಷ್ಟಿಸುತ್ತಿದೆ ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ. ಅಧಿಕಾರಿಗಳು ಪರಿಶೀಲನೆ ನಡೆಸುವವರೆಗೆ ಬಂಧನದ ವಿರುದ್ಧ ಮಧ್ಯಂತರ ಪರಿಹಾರವನ್ನು ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.

ಅವರು (ಅಧಿಕಾರಿಗಳು) ಪರಿಶೀಲನೆ ನಡೆಸಲಿ, ಸಮಸ್ಯೆಯಿಲ್ಲ. ಆದರೆ, ಅವರು ಬಂಧಿಸುತ್ತಿದ್ದಾರೆ, ಇದು ಸಮಸ್ಯೆ. ಕೆಲವರಿಗೆ ಚಿತ್ರಹಿಂಸೆ ನೀಡಲಾಗಿದೆ. ಇದು ಆತಂಕಕ್ಕೆ ಕಾರಣವಾಗಿದೆ. ವಿದೇಶಿಯರ ಕಾಯ್ದೆ ವಿದೇಶಿಗರು ಎಂಬ ಶಂಕೆ ಮೇಲೆ ಜನರನ್ನು ಬಂಧಿಸಲು ಅವಕಾಶ ನೀಡುವುದಿಲ್ಲ ಎಂದು ಪ್ರಶಾಂತ್ ಭೂಷಣ್ ವಾದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್ ಅವರು,”ವಲಸೆ ಕಾರ್ಮಿಕರ ಮೂಲ ರಾಜ್ಯ ಮತ್ತು ಅವರು ಜೀವನೋಪಾಯ ಅರಸಿಕೊಂಡು ಹೋಗುವ ರಾಜ್ಯಗಳ ನಡುವೆ ಸಮನ್ವಯ ಸಾಧಿಸಲು ನೋಡಲು ಏಜೆನ್ಸಿಯೊಂದರ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದಕ್ಕೆ ಧ್ವನಿಗೂಡಿಸಿದ ನ್ಯಾಯಮೂರ್ತಿ ಬಾಗ್ಚಿ ಅವರು, ವಲಸೆ ಕಾರ್ಮಿಕರು ಕೆಲಸ ಮಾಡುತ್ತಿರುವ ರಾಜ್ಯ ಮತ್ತು ಅವರ ಮೂಲ ರಾಜ್ಯದ ನಡುವೆ ಸಮನ್ವಯ ಸಾಧಿಸಲು ಅಸ್ತಿತ್ವದಲ್ಲಿರುವ ಕಾನೂನಿನಡಿಯಲ್ಲಿ ಯಾವುದಾದರು ಪ್ರಾಧಿಕಾರವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ಯಾವುದೇ ಮಧ್ಯಂತರ ಆದೇಶ ನೀಡಿಲ್ಲ. ಬದಲಾಗಿ, ಪ್ರತಿವಾದಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ಕೇಳಿದೆ.

“ಯಾರಾದರೂ ಭಾರತಕ್ಕೆ ಅಕ್ರಮವಾಗಿ ಬಂದಿದ್ದಾರೆಂದು ಭಾವಿಸೋಣ, ಆ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುವುದು? ಅವರನ್ನು ಬಂಧಿಸದಿದ್ದರೆ, ತಪ್ಪಿಸಿಕೊಳ್ಳಬಹುದು. ಹಾಗಾಗಿ, ನಿಜವಾದ ವಲಸೆ ಕಾರ್ಮಿಕರಿಗೆ ಕೆಲವು ಕಾರ್ಯವಿಧಾನಗಳು ಅಗತ್ಯವಿದೆ. ಉದಾಹರಣೆಗೆ ವಲಸೆ ಕಾರ್ಮಿಕರ ಮೂಲ ರಾಜ್ಯ ಅಥವಾ ಅವರು ಕೆಲಸ ಅರಸಿಕೊಂಡು ಹೋಗುವ ರಾಜ್ಯ ಗುರುತಿನ ಕಾರ್ಡ್ ನೀಡಬಹುದು. ಇವರು ವಲಸೆ ಕಾರ್ಮಿಕರು, ಜೀವನೋಪಾಯಕ್ಕಾಗಿ ಇಲ್ಲಿಗೆ ಬಂದಿದ್ದಾರೆ ಎಂಬುವುದಕ್ಕೆ ಅದು ಪುರಾವೆಯಾಗಿರಬೇಕು. ಸ್ಥಳೀಯ ಪೊಲೀಸರು ಅದನ್ನು ಪರಿಶೀಲಿಸಿ ದೃಢೀಕರಿಸಬೇಕು” ಎಂದು ನ್ಯಾಯಮೂರ್ತಿ ಕಾಂತ್ ಹೇಳಿದ್ದಾರೆ.

ದೆಹಲಿ ಬೀದಿ ನಾಯಿ ಸಮಸ್ಯೆ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್; ಅಧಿಕಾರಿಗಳಿಗೆ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...