Homeಮುಖಪುಟಬಾಂಗ್ಲಾದೇಶೀಯರೆಂದು ಬಂಗಾಳಿ ಮುಸ್ಲಿಂ ಕಾರ್ಮಿಕರ ಬಂಧನ ಆರೋಪ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ಬಾಂಗ್ಲಾದೇಶೀಯರೆಂದು ಬಂಗಾಳಿ ಮುಸ್ಲಿಂ ಕಾರ್ಮಿಕರ ಬಂಧನ ಆರೋಪ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ಬಾಂಗ್ಲಾದೇಶದ ಪ್ರಜೆಗಳೆಂಬ ಅನುಮಾನದ ಮೇಲೆ ಪಶ್ಚಿಮ ಬಂಗಾಳದಿಂದ ವಲಸೆ ಬಂದ ಮುಸ್ಲಿಂ ಕಾರ್ಮಿಕರನ್ನು ಹಲವು ರಾಜ್ಯಗಳಲ್ಲಿ ಬಂಧಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್‌) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ(ಆ.14) ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಪಿಐಎಲ್ ವಿಚಾರಣೆ ನಡೆಸಿ ಕೇಂದ್ರ ಸರ್ಕಾರ ಹಾಗೂ ಪ್ರತಿವಾದಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ (ಒಡಿಶಾ, ರಾಜಸ್ಥಾನ, ಮಹಾರಾಷ್ಟ್ರ, ದೆಹಲಿ, ಬಿಹಾರ, ಉತ್ತರ ಪ್ರದೇಶದ ಛತ್ತೀಸ್‌ಗಢ, ಹರಿಯಾಣ ಮತ್ತು ಪಶ್ಚಿಮ ಬಂಗಾಳ) ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಸಮಸ್ಯೆಯ ಪರಿಹಾರಕ್ಕೆ ದೇಶದಾದ್ಯಂತ (ಪ್ಯಾನ್-ಇಂಡಿಯಾ) ಏನು ಮಾಡಬಹುದು ಎಂದು ಪ್ರತಿವಾದಿಗಳ ಅಭಿಪ್ರಾಯ ಕೇಳಿದೆ.

ಪಶ್ಚಿಮ ಬಂಗಾಳ ವಲಸೆ ಕಾರ್ಮಿಕರ ಕಲ್ಯಾಣ ಮಂಡಳಿ ಸಲ್ಲಿಸಿರುವ ಪಿಐಎಲ್‌ನಲ್ಲಿ, “ಮೇ ತಿಂಗಳಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಸುತ್ತೋಲೆ ಕಳಿಸಿದ ಬಳಿಕ, ವಿವಿಧ ರಾಜ್ಯದ ಅಧಿಕಾರಿಗಳು ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರನ್ನು ಬಾಂಗ್ಲಾದೇಶದವರು ಎಂದು ಆರೋಪಿಸಿ ಏಕಾಏಕಿ ಬಂಧಿಸುತ್ತಿದ್ದಾರೆ” ಎಂದು ಆರೋಪಿಸಲಾಗಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್, “ಬಹುತೇಕ ಎಲ್ಲಾ ಪ್ರಕರಣಗಳಲ್ಲಿ ಮರು ಪರಿಶೀಲನೆ ನಡೆಸಿದಾಗ, ಅವರು ಭಾರತೀಯ ಪ್ರಜೆಗಳು ಎಂದು ಕಂಡು ಬಂದಿವೆ. ಕೆಲವು ಪ್ರಕರಣಗಳಲ್ಲಿ ಭಾರತೀಯ ಪ್ರಜೆಗಳನ್ನು ಗಡಿಯಾಚೆಗೆ ತಳ್ಳಿ, ಪರಿಶೀಲನೆಯ ಬಳಿಕ ಅವರನ್ನು ವಾಪಸ್ ಕರೆ ತರಲಾಗಿದೆ. ಅವರ ದಾಖಲೆಗಳು ಬಾಂಗ್ಲಾದೇಶಿ ಭಾಷೆಯಲ್ಲಿದೆ ಎಂದು ದೆಹಲಿ ಪೊಲೀಸರು ಹೇಳುತ್ತಾರೆ. ಬಾಂಗ್ಲಾದೇಶಿ ಭಾಷೆ ಎನ್ನುವುದು ಇಲ್ಲ. ಅದು ಬಂಗಾಳಿ (ಬೆಂಗಾಳಿ) ಭಾಷೆ ಎಂದಿದ್ದಾರೆ.

ವಲಸೆ ಕಾರ್ಮಿಕರನ್ನು ವಿದೇಶಿಗರು ಎಂದು ಶಂಕಿಸಿ ಬಂಧನ ಕೇಂದ್ರಗಳಲ್ಲಿ ಇಡಲಾಗುತ್ತಿದೆ. ಪೌರತ್ವದ ಕೊರತೆಯ ಕೇವಲ ಅನುಮಾನದ ಮೇಲೆ ಯಾರನ್ನಾದರೂ ಬಂಧಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲದಿದ್ದರೂ, ಇದು ದೇಶದಾದ್ಯಂತ ಭೀತಿಯನ್ನು ಸೃಷ್ಟಿಸುತ್ತಿದೆ ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ. ಅಧಿಕಾರಿಗಳು ಪರಿಶೀಲನೆ ನಡೆಸುವವರೆಗೆ ಬಂಧನದ ವಿರುದ್ಧ ಮಧ್ಯಂತರ ಪರಿಹಾರವನ್ನು ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.

ಅವರು (ಅಧಿಕಾರಿಗಳು) ಪರಿಶೀಲನೆ ನಡೆಸಲಿ, ಸಮಸ್ಯೆಯಿಲ್ಲ. ಆದರೆ, ಅವರು ಬಂಧಿಸುತ್ತಿದ್ದಾರೆ, ಇದು ಸಮಸ್ಯೆ. ಕೆಲವರಿಗೆ ಚಿತ್ರಹಿಂಸೆ ನೀಡಲಾಗಿದೆ. ಇದು ಆತಂಕಕ್ಕೆ ಕಾರಣವಾಗಿದೆ. ವಿದೇಶಿಯರ ಕಾಯ್ದೆ ವಿದೇಶಿಗರು ಎಂಬ ಶಂಕೆ ಮೇಲೆ ಜನರನ್ನು ಬಂಧಿಸಲು ಅವಕಾಶ ನೀಡುವುದಿಲ್ಲ ಎಂದು ಪ್ರಶಾಂತ್ ಭೂಷಣ್ ವಾದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್ ಅವರು,”ವಲಸೆ ಕಾರ್ಮಿಕರ ಮೂಲ ರಾಜ್ಯ ಮತ್ತು ಅವರು ಜೀವನೋಪಾಯ ಅರಸಿಕೊಂಡು ಹೋಗುವ ರಾಜ್ಯಗಳ ನಡುವೆ ಸಮನ್ವಯ ಸಾಧಿಸಲು ನೋಡಲು ಏಜೆನ್ಸಿಯೊಂದರ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದಕ್ಕೆ ಧ್ವನಿಗೂಡಿಸಿದ ನ್ಯಾಯಮೂರ್ತಿ ಬಾಗ್ಚಿ ಅವರು, ವಲಸೆ ಕಾರ್ಮಿಕರು ಕೆಲಸ ಮಾಡುತ್ತಿರುವ ರಾಜ್ಯ ಮತ್ತು ಅವರ ಮೂಲ ರಾಜ್ಯದ ನಡುವೆ ಸಮನ್ವಯ ಸಾಧಿಸಲು ಅಸ್ತಿತ್ವದಲ್ಲಿರುವ ಕಾನೂನಿನಡಿಯಲ್ಲಿ ಯಾವುದಾದರು ಪ್ರಾಧಿಕಾರವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ಯಾವುದೇ ಮಧ್ಯಂತರ ಆದೇಶ ನೀಡಿಲ್ಲ. ಬದಲಾಗಿ, ಪ್ರತಿವಾದಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ಕೇಳಿದೆ.

“ಯಾರಾದರೂ ಭಾರತಕ್ಕೆ ಅಕ್ರಮವಾಗಿ ಬಂದಿದ್ದಾರೆಂದು ಭಾವಿಸೋಣ, ಆ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುವುದು? ಅವರನ್ನು ಬಂಧಿಸದಿದ್ದರೆ, ತಪ್ಪಿಸಿಕೊಳ್ಳಬಹುದು. ಹಾಗಾಗಿ, ನಿಜವಾದ ವಲಸೆ ಕಾರ್ಮಿಕರಿಗೆ ಕೆಲವು ಕಾರ್ಯವಿಧಾನಗಳು ಅಗತ್ಯವಿದೆ. ಉದಾಹರಣೆಗೆ ವಲಸೆ ಕಾರ್ಮಿಕರ ಮೂಲ ರಾಜ್ಯ ಅಥವಾ ಅವರು ಕೆಲಸ ಅರಸಿಕೊಂಡು ಹೋಗುವ ರಾಜ್ಯ ಗುರುತಿನ ಕಾರ್ಡ್ ನೀಡಬಹುದು. ಇವರು ವಲಸೆ ಕಾರ್ಮಿಕರು, ಜೀವನೋಪಾಯಕ್ಕಾಗಿ ಇಲ್ಲಿಗೆ ಬಂದಿದ್ದಾರೆ ಎಂಬುವುದಕ್ಕೆ ಅದು ಪುರಾವೆಯಾಗಿರಬೇಕು. ಸ್ಥಳೀಯ ಪೊಲೀಸರು ಅದನ್ನು ಪರಿಶೀಲಿಸಿ ದೃಢೀಕರಿಸಬೇಕು” ಎಂದು ನ್ಯಾಯಮೂರ್ತಿ ಕಾಂತ್ ಹೇಳಿದ್ದಾರೆ.

ದೆಹಲಿ ಬೀದಿ ನಾಯಿ ಸಮಸ್ಯೆ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್; ಅಧಿಕಾರಿಗಳಿಗೆ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...

ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. "ನನ್ನ ಸಂಸದೀಯ...

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...