Homeಮುಖಪುಟಬಾಂಗ್ಲಾದೇಶೀಯರೆಂದು ಬಂಗಾಳಿ ಮುಸ್ಲಿಂ ಕಾರ್ಮಿಕರ ಬಂಧನ ಆರೋಪ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ಬಾಂಗ್ಲಾದೇಶೀಯರೆಂದು ಬಂಗಾಳಿ ಮುಸ್ಲಿಂ ಕಾರ್ಮಿಕರ ಬಂಧನ ಆರೋಪ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ಬಾಂಗ್ಲಾದೇಶದ ಪ್ರಜೆಗಳೆಂಬ ಅನುಮಾನದ ಮೇಲೆ ಪಶ್ಚಿಮ ಬಂಗಾಳದಿಂದ ವಲಸೆ ಬಂದ ಮುಸ್ಲಿಂ ಕಾರ್ಮಿಕರನ್ನು ಹಲವು ರಾಜ್ಯಗಳಲ್ಲಿ ಬಂಧಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್‌) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ(ಆ.14) ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಪಿಐಎಲ್ ವಿಚಾರಣೆ ನಡೆಸಿ ಕೇಂದ್ರ ಸರ್ಕಾರ ಹಾಗೂ ಪ್ರತಿವಾದಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ (ಒಡಿಶಾ, ರಾಜಸ್ಥಾನ, ಮಹಾರಾಷ್ಟ್ರ, ದೆಹಲಿ, ಬಿಹಾರ, ಉತ್ತರ ಪ್ರದೇಶದ ಛತ್ತೀಸ್‌ಗಢ, ಹರಿಯಾಣ ಮತ್ತು ಪಶ್ಚಿಮ ಬಂಗಾಳ) ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಸಮಸ್ಯೆಯ ಪರಿಹಾರಕ್ಕೆ ದೇಶದಾದ್ಯಂತ (ಪ್ಯಾನ್-ಇಂಡಿಯಾ) ಏನು ಮಾಡಬಹುದು ಎಂದು ಪ್ರತಿವಾದಿಗಳ ಅಭಿಪ್ರಾಯ ಕೇಳಿದೆ.

ಪಶ್ಚಿಮ ಬಂಗಾಳ ವಲಸೆ ಕಾರ್ಮಿಕರ ಕಲ್ಯಾಣ ಮಂಡಳಿ ಸಲ್ಲಿಸಿರುವ ಪಿಐಎಲ್‌ನಲ್ಲಿ, “ಮೇ ತಿಂಗಳಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಸುತ್ತೋಲೆ ಕಳಿಸಿದ ಬಳಿಕ, ವಿವಿಧ ರಾಜ್ಯದ ಅಧಿಕಾರಿಗಳು ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರನ್ನು ಬಾಂಗ್ಲಾದೇಶದವರು ಎಂದು ಆರೋಪಿಸಿ ಏಕಾಏಕಿ ಬಂಧಿಸುತ್ತಿದ್ದಾರೆ” ಎಂದು ಆರೋಪಿಸಲಾಗಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್, “ಬಹುತೇಕ ಎಲ್ಲಾ ಪ್ರಕರಣಗಳಲ್ಲಿ ಮರು ಪರಿಶೀಲನೆ ನಡೆಸಿದಾಗ, ಅವರು ಭಾರತೀಯ ಪ್ರಜೆಗಳು ಎಂದು ಕಂಡು ಬಂದಿವೆ. ಕೆಲವು ಪ್ರಕರಣಗಳಲ್ಲಿ ಭಾರತೀಯ ಪ್ರಜೆಗಳನ್ನು ಗಡಿಯಾಚೆಗೆ ತಳ್ಳಿ, ಪರಿಶೀಲನೆಯ ಬಳಿಕ ಅವರನ್ನು ವಾಪಸ್ ಕರೆ ತರಲಾಗಿದೆ. ಅವರ ದಾಖಲೆಗಳು ಬಾಂಗ್ಲಾದೇಶಿ ಭಾಷೆಯಲ್ಲಿದೆ ಎಂದು ದೆಹಲಿ ಪೊಲೀಸರು ಹೇಳುತ್ತಾರೆ. ಬಾಂಗ್ಲಾದೇಶಿ ಭಾಷೆ ಎನ್ನುವುದು ಇಲ್ಲ. ಅದು ಬಂಗಾಳಿ (ಬೆಂಗಾಳಿ) ಭಾಷೆ ಎಂದಿದ್ದಾರೆ.

ವಲಸೆ ಕಾರ್ಮಿಕರನ್ನು ವಿದೇಶಿಗರು ಎಂದು ಶಂಕಿಸಿ ಬಂಧನ ಕೇಂದ್ರಗಳಲ್ಲಿ ಇಡಲಾಗುತ್ತಿದೆ. ಪೌರತ್ವದ ಕೊರತೆಯ ಕೇವಲ ಅನುಮಾನದ ಮೇಲೆ ಯಾರನ್ನಾದರೂ ಬಂಧಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲದಿದ್ದರೂ, ಇದು ದೇಶದಾದ್ಯಂತ ಭೀತಿಯನ್ನು ಸೃಷ್ಟಿಸುತ್ತಿದೆ ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ. ಅಧಿಕಾರಿಗಳು ಪರಿಶೀಲನೆ ನಡೆಸುವವರೆಗೆ ಬಂಧನದ ವಿರುದ್ಧ ಮಧ್ಯಂತರ ಪರಿಹಾರವನ್ನು ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.

ಅವರು (ಅಧಿಕಾರಿಗಳು) ಪರಿಶೀಲನೆ ನಡೆಸಲಿ, ಸಮಸ್ಯೆಯಿಲ್ಲ. ಆದರೆ, ಅವರು ಬಂಧಿಸುತ್ತಿದ್ದಾರೆ, ಇದು ಸಮಸ್ಯೆ. ಕೆಲವರಿಗೆ ಚಿತ್ರಹಿಂಸೆ ನೀಡಲಾಗಿದೆ. ಇದು ಆತಂಕಕ್ಕೆ ಕಾರಣವಾಗಿದೆ. ವಿದೇಶಿಯರ ಕಾಯ್ದೆ ವಿದೇಶಿಗರು ಎಂಬ ಶಂಕೆ ಮೇಲೆ ಜನರನ್ನು ಬಂಧಿಸಲು ಅವಕಾಶ ನೀಡುವುದಿಲ್ಲ ಎಂದು ಪ್ರಶಾಂತ್ ಭೂಷಣ್ ವಾದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್ ಅವರು,”ವಲಸೆ ಕಾರ್ಮಿಕರ ಮೂಲ ರಾಜ್ಯ ಮತ್ತು ಅವರು ಜೀವನೋಪಾಯ ಅರಸಿಕೊಂಡು ಹೋಗುವ ರಾಜ್ಯಗಳ ನಡುವೆ ಸಮನ್ವಯ ಸಾಧಿಸಲು ನೋಡಲು ಏಜೆನ್ಸಿಯೊಂದರ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದಕ್ಕೆ ಧ್ವನಿಗೂಡಿಸಿದ ನ್ಯಾಯಮೂರ್ತಿ ಬಾಗ್ಚಿ ಅವರು, ವಲಸೆ ಕಾರ್ಮಿಕರು ಕೆಲಸ ಮಾಡುತ್ತಿರುವ ರಾಜ್ಯ ಮತ್ತು ಅವರ ಮೂಲ ರಾಜ್ಯದ ನಡುವೆ ಸಮನ್ವಯ ಸಾಧಿಸಲು ಅಸ್ತಿತ್ವದಲ್ಲಿರುವ ಕಾನೂನಿನಡಿಯಲ್ಲಿ ಯಾವುದಾದರು ಪ್ರಾಧಿಕಾರವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ಯಾವುದೇ ಮಧ್ಯಂತರ ಆದೇಶ ನೀಡಿಲ್ಲ. ಬದಲಾಗಿ, ಪ್ರತಿವಾದಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ಕೇಳಿದೆ.

“ಯಾರಾದರೂ ಭಾರತಕ್ಕೆ ಅಕ್ರಮವಾಗಿ ಬಂದಿದ್ದಾರೆಂದು ಭಾವಿಸೋಣ, ಆ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುವುದು? ಅವರನ್ನು ಬಂಧಿಸದಿದ್ದರೆ, ತಪ್ಪಿಸಿಕೊಳ್ಳಬಹುದು. ಹಾಗಾಗಿ, ನಿಜವಾದ ವಲಸೆ ಕಾರ್ಮಿಕರಿಗೆ ಕೆಲವು ಕಾರ್ಯವಿಧಾನಗಳು ಅಗತ್ಯವಿದೆ. ಉದಾಹರಣೆಗೆ ವಲಸೆ ಕಾರ್ಮಿಕರ ಮೂಲ ರಾಜ್ಯ ಅಥವಾ ಅವರು ಕೆಲಸ ಅರಸಿಕೊಂಡು ಹೋಗುವ ರಾಜ್ಯ ಗುರುತಿನ ಕಾರ್ಡ್ ನೀಡಬಹುದು. ಇವರು ವಲಸೆ ಕಾರ್ಮಿಕರು, ಜೀವನೋಪಾಯಕ್ಕಾಗಿ ಇಲ್ಲಿಗೆ ಬಂದಿದ್ದಾರೆ ಎಂಬುವುದಕ್ಕೆ ಅದು ಪುರಾವೆಯಾಗಿರಬೇಕು. ಸ್ಥಳೀಯ ಪೊಲೀಸರು ಅದನ್ನು ಪರಿಶೀಲಿಸಿ ದೃಢೀಕರಿಸಬೇಕು” ಎಂದು ನ್ಯಾಯಮೂರ್ತಿ ಕಾಂತ್ ಹೇಳಿದ್ದಾರೆ.

ದೆಹಲಿ ಬೀದಿ ನಾಯಿ ಸಮಸ್ಯೆ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್; ಅಧಿಕಾರಿಗಳಿಗೆ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...