Homeಮುಖಪುಟಬಾಂಗ್ಲಾದೇಶೀಯರೆಂದು ಬಂಗಾಳಿ ಮುಸ್ಲಿಂ ಕಾರ್ಮಿಕರ ಬಂಧನ ಆರೋಪ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ಬಾಂಗ್ಲಾದೇಶೀಯರೆಂದು ಬಂಗಾಳಿ ಮುಸ್ಲಿಂ ಕಾರ್ಮಿಕರ ಬಂಧನ ಆರೋಪ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ಬಾಂಗ್ಲಾದೇಶದ ಪ್ರಜೆಗಳೆಂಬ ಅನುಮಾನದ ಮೇಲೆ ಪಶ್ಚಿಮ ಬಂಗಾಳದಿಂದ ವಲಸೆ ಬಂದ ಮುಸ್ಲಿಂ ಕಾರ್ಮಿಕರನ್ನು ಹಲವು ರಾಜ್ಯಗಳಲ್ಲಿ ಬಂಧಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್‌) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ(ಆ.14) ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಪಿಐಎಲ್ ವಿಚಾರಣೆ ನಡೆಸಿ ಕೇಂದ್ರ ಸರ್ಕಾರ ಹಾಗೂ ಪ್ರತಿವಾದಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ (ಒಡಿಶಾ, ರಾಜಸ್ಥಾನ, ಮಹಾರಾಷ್ಟ್ರ, ದೆಹಲಿ, ಬಿಹಾರ, ಉತ್ತರ ಪ್ರದೇಶದ ಛತ್ತೀಸ್‌ಗಢ, ಹರಿಯಾಣ ಮತ್ತು ಪಶ್ಚಿಮ ಬಂಗಾಳ) ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಸಮಸ್ಯೆಯ ಪರಿಹಾರಕ್ಕೆ ದೇಶದಾದ್ಯಂತ (ಪ್ಯಾನ್-ಇಂಡಿಯಾ) ಏನು ಮಾಡಬಹುದು ಎಂದು ಪ್ರತಿವಾದಿಗಳ ಅಭಿಪ್ರಾಯ ಕೇಳಿದೆ.

ಪಶ್ಚಿಮ ಬಂಗಾಳ ವಲಸೆ ಕಾರ್ಮಿಕರ ಕಲ್ಯಾಣ ಮಂಡಳಿ ಸಲ್ಲಿಸಿರುವ ಪಿಐಎಲ್‌ನಲ್ಲಿ, “ಮೇ ತಿಂಗಳಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಸುತ್ತೋಲೆ ಕಳಿಸಿದ ಬಳಿಕ, ವಿವಿಧ ರಾಜ್ಯದ ಅಧಿಕಾರಿಗಳು ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರನ್ನು ಬಾಂಗ್ಲಾದೇಶದವರು ಎಂದು ಆರೋಪಿಸಿ ಏಕಾಏಕಿ ಬಂಧಿಸುತ್ತಿದ್ದಾರೆ” ಎಂದು ಆರೋಪಿಸಲಾಗಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್, “ಬಹುತೇಕ ಎಲ್ಲಾ ಪ್ರಕರಣಗಳಲ್ಲಿ ಮರು ಪರಿಶೀಲನೆ ನಡೆಸಿದಾಗ, ಅವರು ಭಾರತೀಯ ಪ್ರಜೆಗಳು ಎಂದು ಕಂಡು ಬಂದಿವೆ. ಕೆಲವು ಪ್ರಕರಣಗಳಲ್ಲಿ ಭಾರತೀಯ ಪ್ರಜೆಗಳನ್ನು ಗಡಿಯಾಚೆಗೆ ತಳ್ಳಿ, ಪರಿಶೀಲನೆಯ ಬಳಿಕ ಅವರನ್ನು ವಾಪಸ್ ಕರೆ ತರಲಾಗಿದೆ. ಅವರ ದಾಖಲೆಗಳು ಬಾಂಗ್ಲಾದೇಶಿ ಭಾಷೆಯಲ್ಲಿದೆ ಎಂದು ದೆಹಲಿ ಪೊಲೀಸರು ಹೇಳುತ್ತಾರೆ. ಬಾಂಗ್ಲಾದೇಶಿ ಭಾಷೆ ಎನ್ನುವುದು ಇಲ್ಲ. ಅದು ಬಂಗಾಳಿ (ಬೆಂಗಾಳಿ) ಭಾಷೆ ಎಂದಿದ್ದಾರೆ.

ವಲಸೆ ಕಾರ್ಮಿಕರನ್ನು ವಿದೇಶಿಗರು ಎಂದು ಶಂಕಿಸಿ ಬಂಧನ ಕೇಂದ್ರಗಳಲ್ಲಿ ಇಡಲಾಗುತ್ತಿದೆ. ಪೌರತ್ವದ ಕೊರತೆಯ ಕೇವಲ ಅನುಮಾನದ ಮೇಲೆ ಯಾರನ್ನಾದರೂ ಬಂಧಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲದಿದ್ದರೂ, ಇದು ದೇಶದಾದ್ಯಂತ ಭೀತಿಯನ್ನು ಸೃಷ್ಟಿಸುತ್ತಿದೆ ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ. ಅಧಿಕಾರಿಗಳು ಪರಿಶೀಲನೆ ನಡೆಸುವವರೆಗೆ ಬಂಧನದ ವಿರುದ್ಧ ಮಧ್ಯಂತರ ಪರಿಹಾರವನ್ನು ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.

ಅವರು (ಅಧಿಕಾರಿಗಳು) ಪರಿಶೀಲನೆ ನಡೆಸಲಿ, ಸಮಸ್ಯೆಯಿಲ್ಲ. ಆದರೆ, ಅವರು ಬಂಧಿಸುತ್ತಿದ್ದಾರೆ, ಇದು ಸಮಸ್ಯೆ. ಕೆಲವರಿಗೆ ಚಿತ್ರಹಿಂಸೆ ನೀಡಲಾಗಿದೆ. ಇದು ಆತಂಕಕ್ಕೆ ಕಾರಣವಾಗಿದೆ. ವಿದೇಶಿಯರ ಕಾಯ್ದೆ ವಿದೇಶಿಗರು ಎಂಬ ಶಂಕೆ ಮೇಲೆ ಜನರನ್ನು ಬಂಧಿಸಲು ಅವಕಾಶ ನೀಡುವುದಿಲ್ಲ ಎಂದು ಪ್ರಶಾಂತ್ ಭೂಷಣ್ ವಾದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್ ಅವರು,”ವಲಸೆ ಕಾರ್ಮಿಕರ ಮೂಲ ರಾಜ್ಯ ಮತ್ತು ಅವರು ಜೀವನೋಪಾಯ ಅರಸಿಕೊಂಡು ಹೋಗುವ ರಾಜ್ಯಗಳ ನಡುವೆ ಸಮನ್ವಯ ಸಾಧಿಸಲು ನೋಡಲು ಏಜೆನ್ಸಿಯೊಂದರ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದಕ್ಕೆ ಧ್ವನಿಗೂಡಿಸಿದ ನ್ಯಾಯಮೂರ್ತಿ ಬಾಗ್ಚಿ ಅವರು, ವಲಸೆ ಕಾರ್ಮಿಕರು ಕೆಲಸ ಮಾಡುತ್ತಿರುವ ರಾಜ್ಯ ಮತ್ತು ಅವರ ಮೂಲ ರಾಜ್ಯದ ನಡುವೆ ಸಮನ್ವಯ ಸಾಧಿಸಲು ಅಸ್ತಿತ್ವದಲ್ಲಿರುವ ಕಾನೂನಿನಡಿಯಲ್ಲಿ ಯಾವುದಾದರು ಪ್ರಾಧಿಕಾರವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ಯಾವುದೇ ಮಧ್ಯಂತರ ಆದೇಶ ನೀಡಿಲ್ಲ. ಬದಲಾಗಿ, ಪ್ರತಿವಾದಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ಕೇಳಿದೆ.

“ಯಾರಾದರೂ ಭಾರತಕ್ಕೆ ಅಕ್ರಮವಾಗಿ ಬಂದಿದ್ದಾರೆಂದು ಭಾವಿಸೋಣ, ಆ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುವುದು? ಅವರನ್ನು ಬಂಧಿಸದಿದ್ದರೆ, ತಪ್ಪಿಸಿಕೊಳ್ಳಬಹುದು. ಹಾಗಾಗಿ, ನಿಜವಾದ ವಲಸೆ ಕಾರ್ಮಿಕರಿಗೆ ಕೆಲವು ಕಾರ್ಯವಿಧಾನಗಳು ಅಗತ್ಯವಿದೆ. ಉದಾಹರಣೆಗೆ ವಲಸೆ ಕಾರ್ಮಿಕರ ಮೂಲ ರಾಜ್ಯ ಅಥವಾ ಅವರು ಕೆಲಸ ಅರಸಿಕೊಂಡು ಹೋಗುವ ರಾಜ್ಯ ಗುರುತಿನ ಕಾರ್ಡ್ ನೀಡಬಹುದು. ಇವರು ವಲಸೆ ಕಾರ್ಮಿಕರು, ಜೀವನೋಪಾಯಕ್ಕಾಗಿ ಇಲ್ಲಿಗೆ ಬಂದಿದ್ದಾರೆ ಎಂಬುವುದಕ್ಕೆ ಅದು ಪುರಾವೆಯಾಗಿರಬೇಕು. ಸ್ಥಳೀಯ ಪೊಲೀಸರು ಅದನ್ನು ಪರಿಶೀಲಿಸಿ ದೃಢೀಕರಿಸಬೇಕು” ಎಂದು ನ್ಯಾಯಮೂರ್ತಿ ಕಾಂತ್ ಹೇಳಿದ್ದಾರೆ.

ದೆಹಲಿ ಬೀದಿ ನಾಯಿ ಸಮಸ್ಯೆ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್; ಅಧಿಕಾರಿಗಳಿಗೆ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...