Homeಮುಖಪುಟಬಾಂಗ್ಲಾದೇಶೀಯರೆಂದು ಬಂಗಾಳಿ ಮುಸ್ಲಿಂ ಕಾರ್ಮಿಕರ ಬಂಧನ ಆರೋಪ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ಬಾಂಗ್ಲಾದೇಶೀಯರೆಂದು ಬಂಗಾಳಿ ಮುಸ್ಲಿಂ ಕಾರ್ಮಿಕರ ಬಂಧನ ಆರೋಪ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ಬಾಂಗ್ಲಾದೇಶದ ಪ್ರಜೆಗಳೆಂಬ ಅನುಮಾನದ ಮೇಲೆ ಪಶ್ಚಿಮ ಬಂಗಾಳದಿಂದ ವಲಸೆ ಬಂದ ಮುಸ್ಲಿಂ ಕಾರ್ಮಿಕರನ್ನು ಹಲವು ರಾಜ್ಯಗಳಲ್ಲಿ ಬಂಧಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್‌) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ(ಆ.14) ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಪಿಐಎಲ್ ವಿಚಾರಣೆ ನಡೆಸಿ ಕೇಂದ್ರ ಸರ್ಕಾರ ಹಾಗೂ ಪ್ರತಿವಾದಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ (ಒಡಿಶಾ, ರಾಜಸ್ಥಾನ, ಮಹಾರಾಷ್ಟ್ರ, ದೆಹಲಿ, ಬಿಹಾರ, ಉತ್ತರ ಪ್ರದೇಶದ ಛತ್ತೀಸ್‌ಗಢ, ಹರಿಯಾಣ ಮತ್ತು ಪಶ್ಚಿಮ ಬಂಗಾಳ) ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಸಮಸ್ಯೆಯ ಪರಿಹಾರಕ್ಕೆ ದೇಶದಾದ್ಯಂತ (ಪ್ಯಾನ್-ಇಂಡಿಯಾ) ಏನು ಮಾಡಬಹುದು ಎಂದು ಪ್ರತಿವಾದಿಗಳ ಅಭಿಪ್ರಾಯ ಕೇಳಿದೆ.

ಪಶ್ಚಿಮ ಬಂಗಾಳ ವಲಸೆ ಕಾರ್ಮಿಕರ ಕಲ್ಯಾಣ ಮಂಡಳಿ ಸಲ್ಲಿಸಿರುವ ಪಿಐಎಲ್‌ನಲ್ಲಿ, “ಮೇ ತಿಂಗಳಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಸುತ್ತೋಲೆ ಕಳಿಸಿದ ಬಳಿಕ, ವಿವಿಧ ರಾಜ್ಯದ ಅಧಿಕಾರಿಗಳು ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರನ್ನು ಬಾಂಗ್ಲಾದೇಶದವರು ಎಂದು ಆರೋಪಿಸಿ ಏಕಾಏಕಿ ಬಂಧಿಸುತ್ತಿದ್ದಾರೆ” ಎಂದು ಆರೋಪಿಸಲಾಗಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್, “ಬಹುತೇಕ ಎಲ್ಲಾ ಪ್ರಕರಣಗಳಲ್ಲಿ ಮರು ಪರಿಶೀಲನೆ ನಡೆಸಿದಾಗ, ಅವರು ಭಾರತೀಯ ಪ್ರಜೆಗಳು ಎಂದು ಕಂಡು ಬಂದಿವೆ. ಕೆಲವು ಪ್ರಕರಣಗಳಲ್ಲಿ ಭಾರತೀಯ ಪ್ರಜೆಗಳನ್ನು ಗಡಿಯಾಚೆಗೆ ತಳ್ಳಿ, ಪರಿಶೀಲನೆಯ ಬಳಿಕ ಅವರನ್ನು ವಾಪಸ್ ಕರೆ ತರಲಾಗಿದೆ. ಅವರ ದಾಖಲೆಗಳು ಬಾಂಗ್ಲಾದೇಶಿ ಭಾಷೆಯಲ್ಲಿದೆ ಎಂದು ದೆಹಲಿ ಪೊಲೀಸರು ಹೇಳುತ್ತಾರೆ. ಬಾಂಗ್ಲಾದೇಶಿ ಭಾಷೆ ಎನ್ನುವುದು ಇಲ್ಲ. ಅದು ಬಂಗಾಳಿ (ಬೆಂಗಾಳಿ) ಭಾಷೆ ಎಂದಿದ್ದಾರೆ.

ವಲಸೆ ಕಾರ್ಮಿಕರನ್ನು ವಿದೇಶಿಗರು ಎಂದು ಶಂಕಿಸಿ ಬಂಧನ ಕೇಂದ್ರಗಳಲ್ಲಿ ಇಡಲಾಗುತ್ತಿದೆ. ಪೌರತ್ವದ ಕೊರತೆಯ ಕೇವಲ ಅನುಮಾನದ ಮೇಲೆ ಯಾರನ್ನಾದರೂ ಬಂಧಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲದಿದ್ದರೂ, ಇದು ದೇಶದಾದ್ಯಂತ ಭೀತಿಯನ್ನು ಸೃಷ್ಟಿಸುತ್ತಿದೆ ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ. ಅಧಿಕಾರಿಗಳು ಪರಿಶೀಲನೆ ನಡೆಸುವವರೆಗೆ ಬಂಧನದ ವಿರುದ್ಧ ಮಧ್ಯಂತರ ಪರಿಹಾರವನ್ನು ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.

ಅವರು (ಅಧಿಕಾರಿಗಳು) ಪರಿಶೀಲನೆ ನಡೆಸಲಿ, ಸಮಸ್ಯೆಯಿಲ್ಲ. ಆದರೆ, ಅವರು ಬಂಧಿಸುತ್ತಿದ್ದಾರೆ, ಇದು ಸಮಸ್ಯೆ. ಕೆಲವರಿಗೆ ಚಿತ್ರಹಿಂಸೆ ನೀಡಲಾಗಿದೆ. ಇದು ಆತಂಕಕ್ಕೆ ಕಾರಣವಾಗಿದೆ. ವಿದೇಶಿಯರ ಕಾಯ್ದೆ ವಿದೇಶಿಗರು ಎಂಬ ಶಂಕೆ ಮೇಲೆ ಜನರನ್ನು ಬಂಧಿಸಲು ಅವಕಾಶ ನೀಡುವುದಿಲ್ಲ ಎಂದು ಪ್ರಶಾಂತ್ ಭೂಷಣ್ ವಾದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್ ಅವರು,”ವಲಸೆ ಕಾರ್ಮಿಕರ ಮೂಲ ರಾಜ್ಯ ಮತ್ತು ಅವರು ಜೀವನೋಪಾಯ ಅರಸಿಕೊಂಡು ಹೋಗುವ ರಾಜ್ಯಗಳ ನಡುವೆ ಸಮನ್ವಯ ಸಾಧಿಸಲು ನೋಡಲು ಏಜೆನ್ಸಿಯೊಂದರ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದಕ್ಕೆ ಧ್ವನಿಗೂಡಿಸಿದ ನ್ಯಾಯಮೂರ್ತಿ ಬಾಗ್ಚಿ ಅವರು, ವಲಸೆ ಕಾರ್ಮಿಕರು ಕೆಲಸ ಮಾಡುತ್ತಿರುವ ರಾಜ್ಯ ಮತ್ತು ಅವರ ಮೂಲ ರಾಜ್ಯದ ನಡುವೆ ಸಮನ್ವಯ ಸಾಧಿಸಲು ಅಸ್ತಿತ್ವದಲ್ಲಿರುವ ಕಾನೂನಿನಡಿಯಲ್ಲಿ ಯಾವುದಾದರು ಪ್ರಾಧಿಕಾರವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ಯಾವುದೇ ಮಧ್ಯಂತರ ಆದೇಶ ನೀಡಿಲ್ಲ. ಬದಲಾಗಿ, ಪ್ರತಿವಾದಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ಕೇಳಿದೆ.

“ಯಾರಾದರೂ ಭಾರತಕ್ಕೆ ಅಕ್ರಮವಾಗಿ ಬಂದಿದ್ದಾರೆಂದು ಭಾವಿಸೋಣ, ಆ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುವುದು? ಅವರನ್ನು ಬಂಧಿಸದಿದ್ದರೆ, ತಪ್ಪಿಸಿಕೊಳ್ಳಬಹುದು. ಹಾಗಾಗಿ, ನಿಜವಾದ ವಲಸೆ ಕಾರ್ಮಿಕರಿಗೆ ಕೆಲವು ಕಾರ್ಯವಿಧಾನಗಳು ಅಗತ್ಯವಿದೆ. ಉದಾಹರಣೆಗೆ ವಲಸೆ ಕಾರ್ಮಿಕರ ಮೂಲ ರಾಜ್ಯ ಅಥವಾ ಅವರು ಕೆಲಸ ಅರಸಿಕೊಂಡು ಹೋಗುವ ರಾಜ್ಯ ಗುರುತಿನ ಕಾರ್ಡ್ ನೀಡಬಹುದು. ಇವರು ವಲಸೆ ಕಾರ್ಮಿಕರು, ಜೀವನೋಪಾಯಕ್ಕಾಗಿ ಇಲ್ಲಿಗೆ ಬಂದಿದ್ದಾರೆ ಎಂಬುವುದಕ್ಕೆ ಅದು ಪುರಾವೆಯಾಗಿರಬೇಕು. ಸ್ಥಳೀಯ ಪೊಲೀಸರು ಅದನ್ನು ಪರಿಶೀಲಿಸಿ ದೃಢೀಕರಿಸಬೇಕು” ಎಂದು ನ್ಯಾಯಮೂರ್ತಿ ಕಾಂತ್ ಹೇಳಿದ್ದಾರೆ.

ದೆಹಲಿ ಬೀದಿ ನಾಯಿ ಸಮಸ್ಯೆ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್; ಅಧಿಕಾರಿಗಳಿಗೆ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...