Homeಮುಖಪುಟಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ತನ್ನ ಘನತೆಯನ್ನು ಕಾಪಾಡುವ ಜವಾಬ್ದಾರಿಯಿದೆ: ಕಪಿಲ್‌ ಸಿಬಲ್

ಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ತನ್ನ ಘನತೆಯನ್ನು ಕಾಪಾಡುವ ಜವಾಬ್ದಾರಿಯಿದೆ: ಕಪಿಲ್‌ ಸಿಬಲ್

- Advertisement -
- Advertisement -

ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಪಡಿಸಲು ಎಸ್‌ಬಿಐ ಕಾಲಾವಕಾಶವನ್ನು ಕೋರಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯಸಭಾ ಸಂಸದ, ಹಿರಿಯ ವಕೀಲ ಕಪಿಲ್ ಸಿಬಲ್, ತನ್ನ ಘನತೆಯನ್ನು ಕಾಪಾಡುವುದು ಸುಪ್ರೀಂ ಕೋರ್ಟ್‌ನ ಜವಾಬ್ದಾರಿಯಾಗಿದೆ ಮತ್ತು ಬ್ಯಾಂಕ್‌ನ ಮನವಿಯನ್ನು ಸ್ವೀಕರಿಸುವುದು ಅಷ್ಟೊಂದು ಸುಲಭವಲ್ಲ ಎಂದು ಹೇಳಿದ್ದಾರೆ.

ಚುನಾವಣಾ ಬಾಂಡ್ ವಿರುದ್ಧದ ಪ್ರಕರಣದಲ್ಲಿ ಅರ್ಜಿದಾರರ ಪರ ವಾದ ಮಂಡಿಸಿದ್ದ ಕಪಿಲ್‌ ಸಿಬಲ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಡೇಟಾವನ್ನು ಸಾರ್ವಜನಿಕಗೊಳಿಸಲು ಹಲವಾರು ವಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದೆ. ಇದು ಯಾರೋ ಯಾರನ್ನೋ ರಕ್ಷಿಸಲು ಬಯಸಿದಂತಿದೆ ಎಂದು ಹೇಳಿದ್ದಾರೆ.

ಪಿಟಿಐಗೆ ನೀಡಿದ ವೀಡಿಯೊ ಸಂದರ್ಶನದಲ್ಲಿ ಮಾತನಾಡಿದ ಕಪಿಲ್‌ ಸಿಬಲ್‌, ಸರ್ಕಾರವನ್ನು ರಕ್ಷಿಸಲು ಎಸ್‌ಬಿಐ ಉದ್ದೇಶಿಸಿದೆ. ಇಲ್ಲವಾದರೆ ಏಪ್ರಿಲ್-ಮೇನಲ್ಲಿ ಚುನಾವಣೆಗಳು ನಡೆಯುವಾಗ ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಪಡಿಸಲು ಜೂನ್ 30ರವರೆಗೆ ವಿಸ್ತರಣೆ ಕೋರಿ ಬ್ಯಾಂಕ್ ಅರ್ಜಿ ಸಲ್ಲಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಕಳೆದ ತಿಂಗಳು ಯೋಜನೆಯನ್ನು ರದ್ದುಪಡಿಸಿದ್ದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಲು ವಿಸ್ತರಣೆಯನ್ನು ಕೋರಿ ಎಸ್‌ಬಿಐ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಂವಿಧಾನ ಪೀಠದ ವಿಚಾರಣೆ ಬಾಕಿ ಇರವಾಗ ಹಿರಿಯ ವಕೀಲರ ಈ ಹೇಳಿಕೆ ಮಹತ್ವವನ್ನು ಪಡೆದುಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು, ಚುನಾವಣಾ ಬಾಂಡ್‌ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ದೇಣಿಗೆಯ ವಿವರಗಳನ್ನು ಸಲ್ಲಿಸಲು ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ್ದಕ್ಕಾಗಿ ಬ್ಯಾಂಕ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿದ್ದ ಪ್ರತ್ಯೇಕ ಅರ್ಜಿಯನ್ನು ಆಲಿಸಲಿದೆ. ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳನ್ನು ಸಲ್ಲಿಸಬೇಕು ಎಂದು ಈ ಮೊದಲು ಸುಪ್ರೀಂಕೋರ್ಟ್‌ ಎಸ್‌ಬಿಐಗೆ ಹೇಳಿತ್ತು.

ಎಸ್‌ಬಿಐಗೆ ಚುನಾವಣೆಗಳು ಏಪ್ರಿಲ್-ಮೇ ತಿಂಗಳಲ್ಲಿ ಎಂದು ತಿಳಿದಿದೆ. ಚುನಾವಣಾ ಬಾಂಡ್‌ಗಳ ವಿವರಗಳನ್ನು ಸಾರ್ವಜನಿಕಗೊಳಿಸಿದರೆ ಅದು ಸಾರ್ವಜನಿಕ ಚರ್ಚೆಯ ವಿಷಯವಾಗಲಿದೆ ಎಂದು ಎಸ್‌ಬಿಐಗೆ ಗೊತ್ತಿದೆ. ಅವರು ಸಮಯವನ್ನು ಕೇಳುತ್ತಿದ್ದಾರೆ. ನ್ಯಾಯಾಲಯವು ಇದನ್ನು ಪರಿಗಣಿಸಲಿದೆ ಎಂದು ನಾನು ಬಯಸುತ್ತೇನೆ, ಯಾರು ಯಾರಿಗೆ ಹಣ ಕೊಟ್ಟಿದ್ದಾರೆ ಎಂಬುವುದನ್ನು ಪತ್ತೆ ಹಚ್ಚಲು ನಾವು ಮಾಹಿತಿಗಳನ್ನು ಒಟ್ಟುಗೂಡಿಸಬೇಕು, ಫೈಲ್‌ಗಳನ್ನು ಸಂಗ್ರಹಿಸಬೇಕು ಎಂದು ಎಸ್‌ಬಿಐ ಹೇಳುವುದು ಪುರಾತನವಾಗಿದೆ. ಇದು 21ನೇ ಶತಮಾನ ಮತ್ತು ನಮ್ಮ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿ ಎಲ್ಲವನ್ನೂ ಡಿಜಿಟಲೀಕರಣದ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

ಎಸ್‌ಬಿಐ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಕೇಳಲಾದ ಪ್ರಶ್ನೆಗೆ ಸಿಬಲ್, ಇವುಗಳು ನ್ಯಾಯಾಂಗ ನಿಂದನೆ ವಿಷಯಗಳಾಗಿವೆ. ಇದು ನ್ಯಾಯಾಲಯದ ಘನತೆಯ ಮೇಲೆ ಪರಿಣಾಮ ಬೀರುತ್ತದೆ. ಅದರ ಘನತೆಯನ್ನು ಕಾಪಾಡುವ ಜವಾಬ್ದಾರಿ ನ್ಯಾಯಾಲಯದ ಮೇಲಿದೆ. ಎಸ್‌ಬಿಐ ನೀಡಿದ ಈ ವಿಶೇಷವಾದ ವಿವರಣೆಯನ್ನು ನ್ಯಾಯಾಲಯವು ಒಪ್ಪಿಕೊಳ್ಳುತ್ತಿದೆ ಎಂದಾದರೆ, ಇದು ನಗುವ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಎಸ್‌ಬಿಐ ಸ್ವತಃ ಅರ್ಜಿಯನ್ನು ಸಲ್ಲಿಸಿರುವುದು ಬಹುಶಃ ನ್ಯಾಯಾಲಯವು ಮನವಿ ಸ್ವೀಕರಿಸುತ್ತದೆ ಎಂಬ ಭರವಸೆಯ ಕಾರಣದಿಂದಾಗಿರಬಹುದು, ಆದರೆ ನನ್ನ ತಿಳುವಳಿಕೆ ಏನೆಂದರೆ, ಒಮ್ಮೆ ಸಾಂವಿಧಾನಿಕ ಪೀಠವು ತೀರ್ಪು ನೀಡಿದ ನಂತರ, ನ್ಯಾಯಾಲಯವು ಆ ರೀತಿ ಹೇಳುವುದು ಸುಲಭವಲ್ಲ ಎಂದು ಸಿಬಲ್ ಹೇಳಿದ್ದಾರೆ.

ಇಡೀ ಯೋಜನೆಯನ್ನು ಬಿಜೆಪಿಯ ಆಸ್ತಿಯನ್ನು ಹೆಚ್ಚಿಸುವ ಮತ್ತು ವಿಶ್ವದ ಶ್ರೀಮಂತ ಪಕ್ಷವನ್ನಾಗಿ ಮಾಡುವ ರಾಜಕೀಯ ಉದ್ದೇಶದಿಂದ ರೂಪಿಸಲಾಗಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ಬೊಕ್ಕಸಕ್ಕೆ ಹಣ ಬರುವಂತೆ ನೋಡಿಕೊಳ್ಳುವುದು 2017ರಲ್ಲಿ ನಿಗದಿಪಡಿಸಿದ ಯೋಜನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳು ಕಳೆದ ಕೆಲವು ವರ್ಷಗಳಲ್ಲಿ ನಡೆದುಕೊಂಡ ರೀತಿಯಲ್ಲಿಯೇ ನಡೆದುಕೊಳ್ಳುತ್ತಿದೆ, ಜೂನ್‌ಗಿಂತ ಮೊದಲು ಚುನಾವಣಾ ಬಾಂಡ್‌ಗಳ ವಿವರಗಳು ಹೊರಬಂದ ನಂತರ ಅವರು ವಿರೋಧ ಪಕ್ಷಗಳು ಮತ್ತು ನಾಯಕರನ್ನು ಗುರಿಯಾಗಿಸುತ್ತಾರೆ ಎಂದು ಸಿಬಲ್ ಹೇಳಿದರು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ ವಿರೋಧ ಪಕ್ಷಗಳು ಒಟ್ಟಾಗಿ ಚುನಾವಣಾ ಬಾಂಡ್‌ಗಳ ವಿಷಯದ ಬಗ್ಗೆ ಧ್ವನಿ ಎತ್ತಬೇಕು ಎಂದು ಸಿಬಲ್ ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿಯಿಂದ ಸ್ಪರ್ಧಿಸಲು ಗೋಯಲ್‌ ರಾಜೀನಾಮೆ ನೀಡಿರಬಹುದು: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...