Homeಮುಖಪುಟಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ತನ್ನ ಘನತೆಯನ್ನು ಕಾಪಾಡುವ ಜವಾಬ್ದಾರಿಯಿದೆ: ಕಪಿಲ್‌ ಸಿಬಲ್

ಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ತನ್ನ ಘನತೆಯನ್ನು ಕಾಪಾಡುವ ಜವಾಬ್ದಾರಿಯಿದೆ: ಕಪಿಲ್‌ ಸಿಬಲ್

- Advertisement -
- Advertisement -

ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಪಡಿಸಲು ಎಸ್‌ಬಿಐ ಕಾಲಾವಕಾಶವನ್ನು ಕೋರಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯಸಭಾ ಸಂಸದ, ಹಿರಿಯ ವಕೀಲ ಕಪಿಲ್ ಸಿಬಲ್, ತನ್ನ ಘನತೆಯನ್ನು ಕಾಪಾಡುವುದು ಸುಪ್ರೀಂ ಕೋರ್ಟ್‌ನ ಜವಾಬ್ದಾರಿಯಾಗಿದೆ ಮತ್ತು ಬ್ಯಾಂಕ್‌ನ ಮನವಿಯನ್ನು ಸ್ವೀಕರಿಸುವುದು ಅಷ್ಟೊಂದು ಸುಲಭವಲ್ಲ ಎಂದು ಹೇಳಿದ್ದಾರೆ.

ಚುನಾವಣಾ ಬಾಂಡ್ ವಿರುದ್ಧದ ಪ್ರಕರಣದಲ್ಲಿ ಅರ್ಜಿದಾರರ ಪರ ವಾದ ಮಂಡಿಸಿದ್ದ ಕಪಿಲ್‌ ಸಿಬಲ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಡೇಟಾವನ್ನು ಸಾರ್ವಜನಿಕಗೊಳಿಸಲು ಹಲವಾರು ವಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದೆ. ಇದು ಯಾರೋ ಯಾರನ್ನೋ ರಕ್ಷಿಸಲು ಬಯಸಿದಂತಿದೆ ಎಂದು ಹೇಳಿದ್ದಾರೆ.

ಪಿಟಿಐಗೆ ನೀಡಿದ ವೀಡಿಯೊ ಸಂದರ್ಶನದಲ್ಲಿ ಮಾತನಾಡಿದ ಕಪಿಲ್‌ ಸಿಬಲ್‌, ಸರ್ಕಾರವನ್ನು ರಕ್ಷಿಸಲು ಎಸ್‌ಬಿಐ ಉದ್ದೇಶಿಸಿದೆ. ಇಲ್ಲವಾದರೆ ಏಪ್ರಿಲ್-ಮೇನಲ್ಲಿ ಚುನಾವಣೆಗಳು ನಡೆಯುವಾಗ ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಪಡಿಸಲು ಜೂನ್ 30ರವರೆಗೆ ವಿಸ್ತರಣೆ ಕೋರಿ ಬ್ಯಾಂಕ್ ಅರ್ಜಿ ಸಲ್ಲಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಕಳೆದ ತಿಂಗಳು ಯೋಜನೆಯನ್ನು ರದ್ದುಪಡಿಸಿದ್ದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಲು ವಿಸ್ತರಣೆಯನ್ನು ಕೋರಿ ಎಸ್‌ಬಿಐ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಂವಿಧಾನ ಪೀಠದ ವಿಚಾರಣೆ ಬಾಕಿ ಇರವಾಗ ಹಿರಿಯ ವಕೀಲರ ಈ ಹೇಳಿಕೆ ಮಹತ್ವವನ್ನು ಪಡೆದುಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು, ಚುನಾವಣಾ ಬಾಂಡ್‌ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ದೇಣಿಗೆಯ ವಿವರಗಳನ್ನು ಸಲ್ಲಿಸಲು ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ್ದಕ್ಕಾಗಿ ಬ್ಯಾಂಕ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿದ್ದ ಪ್ರತ್ಯೇಕ ಅರ್ಜಿಯನ್ನು ಆಲಿಸಲಿದೆ. ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳನ್ನು ಸಲ್ಲಿಸಬೇಕು ಎಂದು ಈ ಮೊದಲು ಸುಪ್ರೀಂಕೋರ್ಟ್‌ ಎಸ್‌ಬಿಐಗೆ ಹೇಳಿತ್ತು.

ಎಸ್‌ಬಿಐಗೆ ಚುನಾವಣೆಗಳು ಏಪ್ರಿಲ್-ಮೇ ತಿಂಗಳಲ್ಲಿ ಎಂದು ತಿಳಿದಿದೆ. ಚುನಾವಣಾ ಬಾಂಡ್‌ಗಳ ವಿವರಗಳನ್ನು ಸಾರ್ವಜನಿಕಗೊಳಿಸಿದರೆ ಅದು ಸಾರ್ವಜನಿಕ ಚರ್ಚೆಯ ವಿಷಯವಾಗಲಿದೆ ಎಂದು ಎಸ್‌ಬಿಐಗೆ ಗೊತ್ತಿದೆ. ಅವರು ಸಮಯವನ್ನು ಕೇಳುತ್ತಿದ್ದಾರೆ. ನ್ಯಾಯಾಲಯವು ಇದನ್ನು ಪರಿಗಣಿಸಲಿದೆ ಎಂದು ನಾನು ಬಯಸುತ್ತೇನೆ, ಯಾರು ಯಾರಿಗೆ ಹಣ ಕೊಟ್ಟಿದ್ದಾರೆ ಎಂಬುವುದನ್ನು ಪತ್ತೆ ಹಚ್ಚಲು ನಾವು ಮಾಹಿತಿಗಳನ್ನು ಒಟ್ಟುಗೂಡಿಸಬೇಕು, ಫೈಲ್‌ಗಳನ್ನು ಸಂಗ್ರಹಿಸಬೇಕು ಎಂದು ಎಸ್‌ಬಿಐ ಹೇಳುವುದು ಪುರಾತನವಾಗಿದೆ. ಇದು 21ನೇ ಶತಮಾನ ಮತ್ತು ನಮ್ಮ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿ ಎಲ್ಲವನ್ನೂ ಡಿಜಿಟಲೀಕರಣದ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

ಎಸ್‌ಬಿಐ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಕೇಳಲಾದ ಪ್ರಶ್ನೆಗೆ ಸಿಬಲ್, ಇವುಗಳು ನ್ಯಾಯಾಂಗ ನಿಂದನೆ ವಿಷಯಗಳಾಗಿವೆ. ಇದು ನ್ಯಾಯಾಲಯದ ಘನತೆಯ ಮೇಲೆ ಪರಿಣಾಮ ಬೀರುತ್ತದೆ. ಅದರ ಘನತೆಯನ್ನು ಕಾಪಾಡುವ ಜವಾಬ್ದಾರಿ ನ್ಯಾಯಾಲಯದ ಮೇಲಿದೆ. ಎಸ್‌ಬಿಐ ನೀಡಿದ ಈ ವಿಶೇಷವಾದ ವಿವರಣೆಯನ್ನು ನ್ಯಾಯಾಲಯವು ಒಪ್ಪಿಕೊಳ್ಳುತ್ತಿದೆ ಎಂದಾದರೆ, ಇದು ನಗುವ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಎಸ್‌ಬಿಐ ಸ್ವತಃ ಅರ್ಜಿಯನ್ನು ಸಲ್ಲಿಸಿರುವುದು ಬಹುಶಃ ನ್ಯಾಯಾಲಯವು ಮನವಿ ಸ್ವೀಕರಿಸುತ್ತದೆ ಎಂಬ ಭರವಸೆಯ ಕಾರಣದಿಂದಾಗಿರಬಹುದು, ಆದರೆ ನನ್ನ ತಿಳುವಳಿಕೆ ಏನೆಂದರೆ, ಒಮ್ಮೆ ಸಾಂವಿಧಾನಿಕ ಪೀಠವು ತೀರ್ಪು ನೀಡಿದ ನಂತರ, ನ್ಯಾಯಾಲಯವು ಆ ರೀತಿ ಹೇಳುವುದು ಸುಲಭವಲ್ಲ ಎಂದು ಸಿಬಲ್ ಹೇಳಿದ್ದಾರೆ.

ಇಡೀ ಯೋಜನೆಯನ್ನು ಬಿಜೆಪಿಯ ಆಸ್ತಿಯನ್ನು ಹೆಚ್ಚಿಸುವ ಮತ್ತು ವಿಶ್ವದ ಶ್ರೀಮಂತ ಪಕ್ಷವನ್ನಾಗಿ ಮಾಡುವ ರಾಜಕೀಯ ಉದ್ದೇಶದಿಂದ ರೂಪಿಸಲಾಗಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ಬೊಕ್ಕಸಕ್ಕೆ ಹಣ ಬರುವಂತೆ ನೋಡಿಕೊಳ್ಳುವುದು 2017ರಲ್ಲಿ ನಿಗದಿಪಡಿಸಿದ ಯೋಜನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳು ಕಳೆದ ಕೆಲವು ವರ್ಷಗಳಲ್ಲಿ ನಡೆದುಕೊಂಡ ರೀತಿಯಲ್ಲಿಯೇ ನಡೆದುಕೊಳ್ಳುತ್ತಿದೆ, ಜೂನ್‌ಗಿಂತ ಮೊದಲು ಚುನಾವಣಾ ಬಾಂಡ್‌ಗಳ ವಿವರಗಳು ಹೊರಬಂದ ನಂತರ ಅವರು ವಿರೋಧ ಪಕ್ಷಗಳು ಮತ್ತು ನಾಯಕರನ್ನು ಗುರಿಯಾಗಿಸುತ್ತಾರೆ ಎಂದು ಸಿಬಲ್ ಹೇಳಿದರು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ ವಿರೋಧ ಪಕ್ಷಗಳು ಒಟ್ಟಾಗಿ ಚುನಾವಣಾ ಬಾಂಡ್‌ಗಳ ವಿಷಯದ ಬಗ್ಗೆ ಧ್ವನಿ ಎತ್ತಬೇಕು ಎಂದು ಸಿಬಲ್ ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿಯಿಂದ ಸ್ಪರ್ಧಿಸಲು ಗೋಯಲ್‌ ರಾಜೀನಾಮೆ ನೀಡಿರಬಹುದು: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು

ಶಾಸಕರೇ ಮುಂದೆ ನಿಂತು ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನು ಪ್ರೋತ್ಸಾಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿ ಶನಿವಾರ (ಡಿ.20) ನಡೆದಿದೆ. ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ...

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...