Homeಮುಖಪುಟಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ತನ್ನ ಘನತೆಯನ್ನು ಕಾಪಾಡುವ ಜವಾಬ್ದಾರಿಯಿದೆ: ಕಪಿಲ್‌ ಸಿಬಲ್

ಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ತನ್ನ ಘನತೆಯನ್ನು ಕಾಪಾಡುವ ಜವಾಬ್ದಾರಿಯಿದೆ: ಕಪಿಲ್‌ ಸಿಬಲ್

- Advertisement -
- Advertisement -

ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಪಡಿಸಲು ಎಸ್‌ಬಿಐ ಕಾಲಾವಕಾಶವನ್ನು ಕೋರಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯಸಭಾ ಸಂಸದ, ಹಿರಿಯ ವಕೀಲ ಕಪಿಲ್ ಸಿಬಲ್, ತನ್ನ ಘನತೆಯನ್ನು ಕಾಪಾಡುವುದು ಸುಪ್ರೀಂ ಕೋರ್ಟ್‌ನ ಜವಾಬ್ದಾರಿಯಾಗಿದೆ ಮತ್ತು ಬ್ಯಾಂಕ್‌ನ ಮನವಿಯನ್ನು ಸ್ವೀಕರಿಸುವುದು ಅಷ್ಟೊಂದು ಸುಲಭವಲ್ಲ ಎಂದು ಹೇಳಿದ್ದಾರೆ.

ಚುನಾವಣಾ ಬಾಂಡ್ ವಿರುದ್ಧದ ಪ್ರಕರಣದಲ್ಲಿ ಅರ್ಜಿದಾರರ ಪರ ವಾದ ಮಂಡಿಸಿದ್ದ ಕಪಿಲ್‌ ಸಿಬಲ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಡೇಟಾವನ್ನು ಸಾರ್ವಜನಿಕಗೊಳಿಸಲು ಹಲವಾರು ವಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದೆ. ಇದು ಯಾರೋ ಯಾರನ್ನೋ ರಕ್ಷಿಸಲು ಬಯಸಿದಂತಿದೆ ಎಂದು ಹೇಳಿದ್ದಾರೆ.

ಪಿಟಿಐಗೆ ನೀಡಿದ ವೀಡಿಯೊ ಸಂದರ್ಶನದಲ್ಲಿ ಮಾತನಾಡಿದ ಕಪಿಲ್‌ ಸಿಬಲ್‌, ಸರ್ಕಾರವನ್ನು ರಕ್ಷಿಸಲು ಎಸ್‌ಬಿಐ ಉದ್ದೇಶಿಸಿದೆ. ಇಲ್ಲವಾದರೆ ಏಪ್ರಿಲ್-ಮೇನಲ್ಲಿ ಚುನಾವಣೆಗಳು ನಡೆಯುವಾಗ ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಪಡಿಸಲು ಜೂನ್ 30ರವರೆಗೆ ವಿಸ್ತರಣೆ ಕೋರಿ ಬ್ಯಾಂಕ್ ಅರ್ಜಿ ಸಲ್ಲಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಕಳೆದ ತಿಂಗಳು ಯೋಜನೆಯನ್ನು ರದ್ದುಪಡಿಸಿದ್ದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಲು ವಿಸ್ತರಣೆಯನ್ನು ಕೋರಿ ಎಸ್‌ಬಿಐ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಂವಿಧಾನ ಪೀಠದ ವಿಚಾರಣೆ ಬಾಕಿ ಇರವಾಗ ಹಿರಿಯ ವಕೀಲರ ಈ ಹೇಳಿಕೆ ಮಹತ್ವವನ್ನು ಪಡೆದುಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು, ಚುನಾವಣಾ ಬಾಂಡ್‌ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ದೇಣಿಗೆಯ ವಿವರಗಳನ್ನು ಸಲ್ಲಿಸಲು ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ್ದಕ್ಕಾಗಿ ಬ್ಯಾಂಕ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿದ್ದ ಪ್ರತ್ಯೇಕ ಅರ್ಜಿಯನ್ನು ಆಲಿಸಲಿದೆ. ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳನ್ನು ಸಲ್ಲಿಸಬೇಕು ಎಂದು ಈ ಮೊದಲು ಸುಪ್ರೀಂಕೋರ್ಟ್‌ ಎಸ್‌ಬಿಐಗೆ ಹೇಳಿತ್ತು.

ಎಸ್‌ಬಿಐಗೆ ಚುನಾವಣೆಗಳು ಏಪ್ರಿಲ್-ಮೇ ತಿಂಗಳಲ್ಲಿ ಎಂದು ತಿಳಿದಿದೆ. ಚುನಾವಣಾ ಬಾಂಡ್‌ಗಳ ವಿವರಗಳನ್ನು ಸಾರ್ವಜನಿಕಗೊಳಿಸಿದರೆ ಅದು ಸಾರ್ವಜನಿಕ ಚರ್ಚೆಯ ವಿಷಯವಾಗಲಿದೆ ಎಂದು ಎಸ್‌ಬಿಐಗೆ ಗೊತ್ತಿದೆ. ಅವರು ಸಮಯವನ್ನು ಕೇಳುತ್ತಿದ್ದಾರೆ. ನ್ಯಾಯಾಲಯವು ಇದನ್ನು ಪರಿಗಣಿಸಲಿದೆ ಎಂದು ನಾನು ಬಯಸುತ್ತೇನೆ, ಯಾರು ಯಾರಿಗೆ ಹಣ ಕೊಟ್ಟಿದ್ದಾರೆ ಎಂಬುವುದನ್ನು ಪತ್ತೆ ಹಚ್ಚಲು ನಾವು ಮಾಹಿತಿಗಳನ್ನು ಒಟ್ಟುಗೂಡಿಸಬೇಕು, ಫೈಲ್‌ಗಳನ್ನು ಸಂಗ್ರಹಿಸಬೇಕು ಎಂದು ಎಸ್‌ಬಿಐ ಹೇಳುವುದು ಪುರಾತನವಾಗಿದೆ. ಇದು 21ನೇ ಶತಮಾನ ಮತ್ತು ನಮ್ಮ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿ ಎಲ್ಲವನ್ನೂ ಡಿಜಿಟಲೀಕರಣದ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

ಎಸ್‌ಬಿಐ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಕೇಳಲಾದ ಪ್ರಶ್ನೆಗೆ ಸಿಬಲ್, ಇವುಗಳು ನ್ಯಾಯಾಂಗ ನಿಂದನೆ ವಿಷಯಗಳಾಗಿವೆ. ಇದು ನ್ಯಾಯಾಲಯದ ಘನತೆಯ ಮೇಲೆ ಪರಿಣಾಮ ಬೀರುತ್ತದೆ. ಅದರ ಘನತೆಯನ್ನು ಕಾಪಾಡುವ ಜವಾಬ್ದಾರಿ ನ್ಯಾಯಾಲಯದ ಮೇಲಿದೆ. ಎಸ್‌ಬಿಐ ನೀಡಿದ ಈ ವಿಶೇಷವಾದ ವಿವರಣೆಯನ್ನು ನ್ಯಾಯಾಲಯವು ಒಪ್ಪಿಕೊಳ್ಳುತ್ತಿದೆ ಎಂದಾದರೆ, ಇದು ನಗುವ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಎಸ್‌ಬಿಐ ಸ್ವತಃ ಅರ್ಜಿಯನ್ನು ಸಲ್ಲಿಸಿರುವುದು ಬಹುಶಃ ನ್ಯಾಯಾಲಯವು ಮನವಿ ಸ್ವೀಕರಿಸುತ್ತದೆ ಎಂಬ ಭರವಸೆಯ ಕಾರಣದಿಂದಾಗಿರಬಹುದು, ಆದರೆ ನನ್ನ ತಿಳುವಳಿಕೆ ಏನೆಂದರೆ, ಒಮ್ಮೆ ಸಾಂವಿಧಾನಿಕ ಪೀಠವು ತೀರ್ಪು ನೀಡಿದ ನಂತರ, ನ್ಯಾಯಾಲಯವು ಆ ರೀತಿ ಹೇಳುವುದು ಸುಲಭವಲ್ಲ ಎಂದು ಸಿಬಲ್ ಹೇಳಿದ್ದಾರೆ.

ಇಡೀ ಯೋಜನೆಯನ್ನು ಬಿಜೆಪಿಯ ಆಸ್ತಿಯನ್ನು ಹೆಚ್ಚಿಸುವ ಮತ್ತು ವಿಶ್ವದ ಶ್ರೀಮಂತ ಪಕ್ಷವನ್ನಾಗಿ ಮಾಡುವ ರಾಜಕೀಯ ಉದ್ದೇಶದಿಂದ ರೂಪಿಸಲಾಗಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ಬೊಕ್ಕಸಕ್ಕೆ ಹಣ ಬರುವಂತೆ ನೋಡಿಕೊಳ್ಳುವುದು 2017ರಲ್ಲಿ ನಿಗದಿಪಡಿಸಿದ ಯೋಜನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳು ಕಳೆದ ಕೆಲವು ವರ್ಷಗಳಲ್ಲಿ ನಡೆದುಕೊಂಡ ರೀತಿಯಲ್ಲಿಯೇ ನಡೆದುಕೊಳ್ಳುತ್ತಿದೆ, ಜೂನ್‌ಗಿಂತ ಮೊದಲು ಚುನಾವಣಾ ಬಾಂಡ್‌ಗಳ ವಿವರಗಳು ಹೊರಬಂದ ನಂತರ ಅವರು ವಿರೋಧ ಪಕ್ಷಗಳು ಮತ್ತು ನಾಯಕರನ್ನು ಗುರಿಯಾಗಿಸುತ್ತಾರೆ ಎಂದು ಸಿಬಲ್ ಹೇಳಿದರು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ ವಿರೋಧ ಪಕ್ಷಗಳು ಒಟ್ಟಾಗಿ ಚುನಾವಣಾ ಬಾಂಡ್‌ಗಳ ವಿಷಯದ ಬಗ್ಗೆ ಧ್ವನಿ ಎತ್ತಬೇಕು ಎಂದು ಸಿಬಲ್ ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿಯಿಂದ ಸ್ಪರ್ಧಿಸಲು ಗೋಯಲ್‌ ರಾಜೀನಾಮೆ ನೀಡಿರಬಹುದು: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...