Homeಮುಖಪುಟಎಸ್‌ಸಿ, ಎಸ್‌ಟಿಗಳ ಕೋಟ್ಯಂತರ ರೂ. ವಿದ್ಯಾರ್ಥಿವೇತನ ದುರುಪಯೋಗ; ಯುಪಿಯ ವಿವಿಧೆಡೆ ಇ.ಡಿ. ಶೋಧನೆ

ಎಸ್‌ಸಿ, ಎಸ್‌ಟಿಗಳ ಕೋಟ್ಯಂತರ ರೂ. ವಿದ್ಯಾರ್ಥಿವೇತನ ದುರುಪಯೋಗ; ಯುಪಿಯ ವಿವಿಧೆಡೆ ಇ.ಡಿ. ಶೋಧನೆ

- Advertisement -
- Advertisement -

ಅಲ್ಪಸಂಖ್ಯಾತ, ದಲಿತ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್ಯುಲೇಷನ್ ನಂತರದ ಸರ್ಕಾರಿ ವಿದ್ಯಾರ್ಥಿವೇತನವನ್ನು ವಂಚನೆಯಿಂದ ಪಡೆದ ಕೆಲವು ಶಿಕ್ಷಣ ಸಂಸ್ಥೆಗಳ ವಿರುದ್ಧ ‘ಅಕ್ರಮ ಹಣ ವರ್ಗಾವಣೆ ಪ್ರಕರಣ’ಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಉತ್ತರ ಪ್ರದೇಶದ ಆರು ಜಿಲ್ಲೆಗಳ 22 ಸ್ಥಳಗಳಲ್ಲಿ ಶೋಧನೆ ನಡೆಸಿದೆ.

ಈ ಸಂಸ್ಥೆಗಳು 75 ಕೋಟಿ ರೂಪಾಯಿ ಮೌಲ್ಯದ ಸ್ಕಾಲರ್‌ಶಿಪ್‌ಗಳನ್ನು ಪಡೆದಿವೆ. ಕೆಲವು ಸ್ಕಾಲರ್‌ಶಿಪ್‌ಗಳನ್ನು ಏಳು ವರ್ಷದ ಮಕ್ಕಳ ಬ್ಯಾಂಕ್ ಖಾತೆಗಳ ಮೂಲಕ ತೆಗೆದುಕೊಳ್ಳಲಾಗಿದೆ ಎಂದು ತನಿಖೆಗಳು ಬಹಿರಂಗಪಡಿಸಿವೆ ಎಂದು ಇ.ಡಿ. ಹೇಳಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಸ್‌ಸಿ, ಎಸ್‌ಟಿ, ದೈಹಿಕ ವಿಕಲಚೇತನ ಅಭ್ಯರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಿವಿಧ ವಿದ್ಯಾರ್ಥಿವೇತನವನ್ನು ನೀಡುತ್ತವೆ. ಇದಲ್ಲದೆ, ಕೆಲವು ವಿದ್ಯಾರ್ಥಿವೇತನಗಳು ಅಲ್ಪಸಂಖ್ಯಾತ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳ (EWS) ವಿದ್ಯಾರ್ಥಿಗಳಿಗೆ ಮೀಸಲಾಗಿದೆ ಎಂದು ಇಡಿ ತಿಳಿಸಿದೆ.

“ಹೆಚ್ಚು ಹೆಚ್ಚು ವಿದ್ಯಾರ್ಥಿವೇತನ ನಿಧಿಯನ್ನು ಪಡೆಯುವುದಕ್ಕಾಗಿ ಈ ಕಾಲೇಜುಗಳು, ಸಂಸ್ಥೆಗಳು 7 ರಿಂದ 12 ವರ್ಷ ವಯಸ್ಸಿನ ಮಕ್ಕಳ, 45 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳ ಬ್ಯಾಂಕ್ ಖಾತೆಗಳನ್ನು ಬಳಸುತ್ತವೆ” ಎಂದು ಇ.ಡಿ. ತನ್ನ ತನಿಖೆಯಲ್ಲಿ ಕಂಡುಕೊಂಡಿದೆ.

ಈ ಸಂಸ್ಥೆಗಳು ವಿವಿಧ ವ್ಯಕ್ತಿಗಳ ದಾಖಲೆಗಳನ್ನು ಬಳಸಿಕೊಂಡು ಸುಮಾರು 3,000 ಖಾತೆಗಳನ್ನು ತೆರೆದಿರುವುದು ಇದುವರೆಗೆ ನಡೆಸಿದ ತನಿಖೆಯಿಂದ ತಿಳಿದುಬಂದಿದೆ. ಹೆಚ್ಚಿನ ಖಾತೆಗಳು ಸಾಮಾನ್ಯ ಹಳ್ಳಿಗರ ಹೆಸರಿನಲ್ಲಿವೆ, ಈ ಸಾಮಾನ್ಯರಿಗೆ ಈ ಬ್ಯಾಂಕ್ ಖಾತೆಗಳ ಬಗ್ಗೆ ತಿಳಿದಿಲ್ಲ. ಇಲ್ಲಿಯವರೆಗೆ ಯಾವುದೇ ವಿದ್ಯಾರ್ಥಿವೇತನವನ್ನು ಪಡೆದಿಲ್ಲ” ಎಂದು ಇಡಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರವಿ ಪ್ರಕಾಶ್ ಗುಪ್ತಾ ಸೇರಿದಂತೆ ವಿವಿಧ ಏಜೆಂಟ್‌ಗಳು ಇದರಲ್ಲಿ ಭಾಗಿಯಾಗಿರುವುದನ್ನು ಇ.ಡಿ. ಪತ್ತೆಹಚ್ಚಿದೆ. ಸಾಹಿಲ್ ಅಜೀಜ್, ಅಮಿತ್ ಕುಮಾರ್ ಮೌರ್ಯ, ತನ್ವೀರ್ ಅಹ್ಮದ್, ಜಿತೇಂದ್ರ ಸಿಂಗ್, ಮೊಹಮ್ಮದ್ ಸೇರಿದಂತೆ FINO ಪೇಮೆಂಟ್ ಬ್ಯಾಂಕ್‌ನ ಹಲವಾರು ಏಜೆಂಟ್‌ಗಳ ಸಹಾಯದಿಂದ ಹಗರಣವನ್ನು ನಡೆಸಲಾಗಿದೆ ಎಂದು ಶೋಧನೆಯಲ್ಲಿ ತಿಳಿದುಬಂದಿದೆ.

“FINO ಪೇಮೆಂಟ್‌ ಬ್ಯಾಂಕ್‌ನಲ್ಲಿ ಖಾತೆ ತೆರೆಯಲು ಅಳವಡಿಸಿಕೊಳ್ಳಲಾದ ಸಡಿಲವಾದ ವಿಧಾನಗಳನ್ನು ದುರುಪಯೋಗ ಮಾಡಿಕೊಂಡು ಹಗರಣವನ್ನು ಎಸಗಲಾಗಿದೆ. ಅಪರಾಧಿಗಳು FINO ಬ್ಯಾಂಕ್‌ನ ಲಕ್ನೋ ಮತ್ತು ಮುಂಬೈ ಶಾಖೆಗಳಲ್ಲಿ ಎಲ್ಲಾ ಬ್ಯಾಂಕ್ ಖಾತೆಗಳನ್ನು ತೆರೆದಿದ್ದರು. ವಿದ್ಯುನ್ಮಾನ ವರ್ಗಾವಣೆ ಮತ್ತು ವಿದ್ಯಾರ್ಥಿವೇತನ ನಿಧಿಯ ನಗದು ಹಿಂತೆಗೆದುಕೊಳ್ಳುವಿಕೆ ಎರಡರಲ್ಲೂ ಈ ಸಂಸ್ಥೆಗಳು FINO ಏಜೆಂಟ್‌ಗಳ ಸೇವೆ ಪಡೆದುಕೊಂಡಿವೆ”.

ನಿಯಮಗಳ ಅನುಸಾರ ವಿದ್ಯಾರ್ಥಿ ವೇತನದ ಹಣವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಾಗಿದೆ. ಆದರೆ ಡೀಫಾಲ್ಟ್ ಮಾಡಿದ ಸಂಸ್ಥೆಗಳು ನಿಯಮಗಳನ್ನು ಬೈಪಾಸ್ ಮಾಡಿ FINO ಬ್ಯಾಂಕ್‌ನ ಏಜೆಂಟ್‌ಗಳಿಂದ ಖಾತೆಯನ್ನು ದುರುಪಯೋಗ ಮಾಡಿಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...