Homeಮುಖಪುಟಎಸ್‌ಸಿ, ಎಸ್‌ಟಿಗಳ ಕೋಟ್ಯಂತರ ರೂ. ವಿದ್ಯಾರ್ಥಿವೇತನ ದುರುಪಯೋಗ; ಯುಪಿಯ ವಿವಿಧೆಡೆ ಇ.ಡಿ. ಶೋಧನೆ

ಎಸ್‌ಸಿ, ಎಸ್‌ಟಿಗಳ ಕೋಟ್ಯಂತರ ರೂ. ವಿದ್ಯಾರ್ಥಿವೇತನ ದುರುಪಯೋಗ; ಯುಪಿಯ ವಿವಿಧೆಡೆ ಇ.ಡಿ. ಶೋಧನೆ

- Advertisement -
- Advertisement -

ಅಲ್ಪಸಂಖ್ಯಾತ, ದಲಿತ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್ಯುಲೇಷನ್ ನಂತರದ ಸರ್ಕಾರಿ ವಿದ್ಯಾರ್ಥಿವೇತನವನ್ನು ವಂಚನೆಯಿಂದ ಪಡೆದ ಕೆಲವು ಶಿಕ್ಷಣ ಸಂಸ್ಥೆಗಳ ವಿರುದ್ಧ ‘ಅಕ್ರಮ ಹಣ ವರ್ಗಾವಣೆ ಪ್ರಕರಣ’ಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಉತ್ತರ ಪ್ರದೇಶದ ಆರು ಜಿಲ್ಲೆಗಳ 22 ಸ್ಥಳಗಳಲ್ಲಿ ಶೋಧನೆ ನಡೆಸಿದೆ.

ಈ ಸಂಸ್ಥೆಗಳು 75 ಕೋಟಿ ರೂಪಾಯಿ ಮೌಲ್ಯದ ಸ್ಕಾಲರ್‌ಶಿಪ್‌ಗಳನ್ನು ಪಡೆದಿವೆ. ಕೆಲವು ಸ್ಕಾಲರ್‌ಶಿಪ್‌ಗಳನ್ನು ಏಳು ವರ್ಷದ ಮಕ್ಕಳ ಬ್ಯಾಂಕ್ ಖಾತೆಗಳ ಮೂಲಕ ತೆಗೆದುಕೊಳ್ಳಲಾಗಿದೆ ಎಂದು ತನಿಖೆಗಳು ಬಹಿರಂಗಪಡಿಸಿವೆ ಎಂದು ಇ.ಡಿ. ಹೇಳಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಸ್‌ಸಿ, ಎಸ್‌ಟಿ, ದೈಹಿಕ ವಿಕಲಚೇತನ ಅಭ್ಯರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಿವಿಧ ವಿದ್ಯಾರ್ಥಿವೇತನವನ್ನು ನೀಡುತ್ತವೆ. ಇದಲ್ಲದೆ, ಕೆಲವು ವಿದ್ಯಾರ್ಥಿವೇತನಗಳು ಅಲ್ಪಸಂಖ್ಯಾತ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳ (EWS) ವಿದ್ಯಾರ್ಥಿಗಳಿಗೆ ಮೀಸಲಾಗಿದೆ ಎಂದು ಇಡಿ ತಿಳಿಸಿದೆ.

“ಹೆಚ್ಚು ಹೆಚ್ಚು ವಿದ್ಯಾರ್ಥಿವೇತನ ನಿಧಿಯನ್ನು ಪಡೆಯುವುದಕ್ಕಾಗಿ ಈ ಕಾಲೇಜುಗಳು, ಸಂಸ್ಥೆಗಳು 7 ರಿಂದ 12 ವರ್ಷ ವಯಸ್ಸಿನ ಮಕ್ಕಳ, 45 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳ ಬ್ಯಾಂಕ್ ಖಾತೆಗಳನ್ನು ಬಳಸುತ್ತವೆ” ಎಂದು ಇ.ಡಿ. ತನ್ನ ತನಿಖೆಯಲ್ಲಿ ಕಂಡುಕೊಂಡಿದೆ.

ಈ ಸಂಸ್ಥೆಗಳು ವಿವಿಧ ವ್ಯಕ್ತಿಗಳ ದಾಖಲೆಗಳನ್ನು ಬಳಸಿಕೊಂಡು ಸುಮಾರು 3,000 ಖಾತೆಗಳನ್ನು ತೆರೆದಿರುವುದು ಇದುವರೆಗೆ ನಡೆಸಿದ ತನಿಖೆಯಿಂದ ತಿಳಿದುಬಂದಿದೆ. ಹೆಚ್ಚಿನ ಖಾತೆಗಳು ಸಾಮಾನ್ಯ ಹಳ್ಳಿಗರ ಹೆಸರಿನಲ್ಲಿವೆ, ಈ ಸಾಮಾನ್ಯರಿಗೆ ಈ ಬ್ಯಾಂಕ್ ಖಾತೆಗಳ ಬಗ್ಗೆ ತಿಳಿದಿಲ್ಲ. ಇಲ್ಲಿಯವರೆಗೆ ಯಾವುದೇ ವಿದ್ಯಾರ್ಥಿವೇತನವನ್ನು ಪಡೆದಿಲ್ಲ” ಎಂದು ಇಡಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರವಿ ಪ್ರಕಾಶ್ ಗುಪ್ತಾ ಸೇರಿದಂತೆ ವಿವಿಧ ಏಜೆಂಟ್‌ಗಳು ಇದರಲ್ಲಿ ಭಾಗಿಯಾಗಿರುವುದನ್ನು ಇ.ಡಿ. ಪತ್ತೆಹಚ್ಚಿದೆ. ಸಾಹಿಲ್ ಅಜೀಜ್, ಅಮಿತ್ ಕುಮಾರ್ ಮೌರ್ಯ, ತನ್ವೀರ್ ಅಹ್ಮದ್, ಜಿತೇಂದ್ರ ಸಿಂಗ್, ಮೊಹಮ್ಮದ್ ಸೇರಿದಂತೆ FINO ಪೇಮೆಂಟ್ ಬ್ಯಾಂಕ್‌ನ ಹಲವಾರು ಏಜೆಂಟ್‌ಗಳ ಸಹಾಯದಿಂದ ಹಗರಣವನ್ನು ನಡೆಸಲಾಗಿದೆ ಎಂದು ಶೋಧನೆಯಲ್ಲಿ ತಿಳಿದುಬಂದಿದೆ.

“FINO ಪೇಮೆಂಟ್‌ ಬ್ಯಾಂಕ್‌ನಲ್ಲಿ ಖಾತೆ ತೆರೆಯಲು ಅಳವಡಿಸಿಕೊಳ್ಳಲಾದ ಸಡಿಲವಾದ ವಿಧಾನಗಳನ್ನು ದುರುಪಯೋಗ ಮಾಡಿಕೊಂಡು ಹಗರಣವನ್ನು ಎಸಗಲಾಗಿದೆ. ಅಪರಾಧಿಗಳು FINO ಬ್ಯಾಂಕ್‌ನ ಲಕ್ನೋ ಮತ್ತು ಮುಂಬೈ ಶಾಖೆಗಳಲ್ಲಿ ಎಲ್ಲಾ ಬ್ಯಾಂಕ್ ಖಾತೆಗಳನ್ನು ತೆರೆದಿದ್ದರು. ವಿದ್ಯುನ್ಮಾನ ವರ್ಗಾವಣೆ ಮತ್ತು ವಿದ್ಯಾರ್ಥಿವೇತನ ನಿಧಿಯ ನಗದು ಹಿಂತೆಗೆದುಕೊಳ್ಳುವಿಕೆ ಎರಡರಲ್ಲೂ ಈ ಸಂಸ್ಥೆಗಳು FINO ಏಜೆಂಟ್‌ಗಳ ಸೇವೆ ಪಡೆದುಕೊಂಡಿವೆ”.

ನಿಯಮಗಳ ಅನುಸಾರ ವಿದ್ಯಾರ್ಥಿ ವೇತನದ ಹಣವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಾಗಿದೆ. ಆದರೆ ಡೀಫಾಲ್ಟ್ ಮಾಡಿದ ಸಂಸ್ಥೆಗಳು ನಿಯಮಗಳನ್ನು ಬೈಪಾಸ್ ಮಾಡಿ FINO ಬ್ಯಾಂಕ್‌ನ ಏಜೆಂಟ್‌ಗಳಿಂದ ಖಾತೆಯನ್ನು ದುರುಪಯೋಗ ಮಾಡಿಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...