Homeಮುಖಪುಟಎಸ್‌ಸಿ, ಎಸ್‌ಟಿಗಳ ಕೋಟ್ಯಂತರ ರೂ. ವಿದ್ಯಾರ್ಥಿವೇತನ ದುರುಪಯೋಗ; ಯುಪಿಯ ವಿವಿಧೆಡೆ ಇ.ಡಿ. ಶೋಧನೆ

ಎಸ್‌ಸಿ, ಎಸ್‌ಟಿಗಳ ಕೋಟ್ಯಂತರ ರೂ. ವಿದ್ಯಾರ್ಥಿವೇತನ ದುರುಪಯೋಗ; ಯುಪಿಯ ವಿವಿಧೆಡೆ ಇ.ಡಿ. ಶೋಧನೆ

- Advertisement -
- Advertisement -

ಅಲ್ಪಸಂಖ್ಯಾತ, ದಲಿತ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್ಯುಲೇಷನ್ ನಂತರದ ಸರ್ಕಾರಿ ವಿದ್ಯಾರ್ಥಿವೇತನವನ್ನು ವಂಚನೆಯಿಂದ ಪಡೆದ ಕೆಲವು ಶಿಕ್ಷಣ ಸಂಸ್ಥೆಗಳ ವಿರುದ್ಧ ‘ಅಕ್ರಮ ಹಣ ವರ್ಗಾವಣೆ ಪ್ರಕರಣ’ಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಉತ್ತರ ಪ್ರದೇಶದ ಆರು ಜಿಲ್ಲೆಗಳ 22 ಸ್ಥಳಗಳಲ್ಲಿ ಶೋಧನೆ ನಡೆಸಿದೆ.

ಈ ಸಂಸ್ಥೆಗಳು 75 ಕೋಟಿ ರೂಪಾಯಿ ಮೌಲ್ಯದ ಸ್ಕಾಲರ್‌ಶಿಪ್‌ಗಳನ್ನು ಪಡೆದಿವೆ. ಕೆಲವು ಸ್ಕಾಲರ್‌ಶಿಪ್‌ಗಳನ್ನು ಏಳು ವರ್ಷದ ಮಕ್ಕಳ ಬ್ಯಾಂಕ್ ಖಾತೆಗಳ ಮೂಲಕ ತೆಗೆದುಕೊಳ್ಳಲಾಗಿದೆ ಎಂದು ತನಿಖೆಗಳು ಬಹಿರಂಗಪಡಿಸಿವೆ ಎಂದು ಇ.ಡಿ. ಹೇಳಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಸ್‌ಸಿ, ಎಸ್‌ಟಿ, ದೈಹಿಕ ವಿಕಲಚೇತನ ಅಭ್ಯರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಿವಿಧ ವಿದ್ಯಾರ್ಥಿವೇತನವನ್ನು ನೀಡುತ್ತವೆ. ಇದಲ್ಲದೆ, ಕೆಲವು ವಿದ್ಯಾರ್ಥಿವೇತನಗಳು ಅಲ್ಪಸಂಖ್ಯಾತ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳ (EWS) ವಿದ್ಯಾರ್ಥಿಗಳಿಗೆ ಮೀಸಲಾಗಿದೆ ಎಂದು ಇಡಿ ತಿಳಿಸಿದೆ.

“ಹೆಚ್ಚು ಹೆಚ್ಚು ವಿದ್ಯಾರ್ಥಿವೇತನ ನಿಧಿಯನ್ನು ಪಡೆಯುವುದಕ್ಕಾಗಿ ಈ ಕಾಲೇಜುಗಳು, ಸಂಸ್ಥೆಗಳು 7 ರಿಂದ 12 ವರ್ಷ ವಯಸ್ಸಿನ ಮಕ್ಕಳ, 45 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳ ಬ್ಯಾಂಕ್ ಖಾತೆಗಳನ್ನು ಬಳಸುತ್ತವೆ” ಎಂದು ಇ.ಡಿ. ತನ್ನ ತನಿಖೆಯಲ್ಲಿ ಕಂಡುಕೊಂಡಿದೆ.

ಈ ಸಂಸ್ಥೆಗಳು ವಿವಿಧ ವ್ಯಕ್ತಿಗಳ ದಾಖಲೆಗಳನ್ನು ಬಳಸಿಕೊಂಡು ಸುಮಾರು 3,000 ಖಾತೆಗಳನ್ನು ತೆರೆದಿರುವುದು ಇದುವರೆಗೆ ನಡೆಸಿದ ತನಿಖೆಯಿಂದ ತಿಳಿದುಬಂದಿದೆ. ಹೆಚ್ಚಿನ ಖಾತೆಗಳು ಸಾಮಾನ್ಯ ಹಳ್ಳಿಗರ ಹೆಸರಿನಲ್ಲಿವೆ, ಈ ಸಾಮಾನ್ಯರಿಗೆ ಈ ಬ್ಯಾಂಕ್ ಖಾತೆಗಳ ಬಗ್ಗೆ ತಿಳಿದಿಲ್ಲ. ಇಲ್ಲಿಯವರೆಗೆ ಯಾವುದೇ ವಿದ್ಯಾರ್ಥಿವೇತನವನ್ನು ಪಡೆದಿಲ್ಲ” ಎಂದು ಇಡಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರವಿ ಪ್ರಕಾಶ್ ಗುಪ್ತಾ ಸೇರಿದಂತೆ ವಿವಿಧ ಏಜೆಂಟ್‌ಗಳು ಇದರಲ್ಲಿ ಭಾಗಿಯಾಗಿರುವುದನ್ನು ಇ.ಡಿ. ಪತ್ತೆಹಚ್ಚಿದೆ. ಸಾಹಿಲ್ ಅಜೀಜ್, ಅಮಿತ್ ಕುಮಾರ್ ಮೌರ್ಯ, ತನ್ವೀರ್ ಅಹ್ಮದ್, ಜಿತೇಂದ್ರ ಸಿಂಗ್, ಮೊಹಮ್ಮದ್ ಸೇರಿದಂತೆ FINO ಪೇಮೆಂಟ್ ಬ್ಯಾಂಕ್‌ನ ಹಲವಾರು ಏಜೆಂಟ್‌ಗಳ ಸಹಾಯದಿಂದ ಹಗರಣವನ್ನು ನಡೆಸಲಾಗಿದೆ ಎಂದು ಶೋಧನೆಯಲ್ಲಿ ತಿಳಿದುಬಂದಿದೆ.

“FINO ಪೇಮೆಂಟ್‌ ಬ್ಯಾಂಕ್‌ನಲ್ಲಿ ಖಾತೆ ತೆರೆಯಲು ಅಳವಡಿಸಿಕೊಳ್ಳಲಾದ ಸಡಿಲವಾದ ವಿಧಾನಗಳನ್ನು ದುರುಪಯೋಗ ಮಾಡಿಕೊಂಡು ಹಗರಣವನ್ನು ಎಸಗಲಾಗಿದೆ. ಅಪರಾಧಿಗಳು FINO ಬ್ಯಾಂಕ್‌ನ ಲಕ್ನೋ ಮತ್ತು ಮುಂಬೈ ಶಾಖೆಗಳಲ್ಲಿ ಎಲ್ಲಾ ಬ್ಯಾಂಕ್ ಖಾತೆಗಳನ್ನು ತೆರೆದಿದ್ದರು. ವಿದ್ಯುನ್ಮಾನ ವರ್ಗಾವಣೆ ಮತ್ತು ವಿದ್ಯಾರ್ಥಿವೇತನ ನಿಧಿಯ ನಗದು ಹಿಂತೆಗೆದುಕೊಳ್ಳುವಿಕೆ ಎರಡರಲ್ಲೂ ಈ ಸಂಸ್ಥೆಗಳು FINO ಏಜೆಂಟ್‌ಗಳ ಸೇವೆ ಪಡೆದುಕೊಂಡಿವೆ”.

ನಿಯಮಗಳ ಅನುಸಾರ ವಿದ್ಯಾರ್ಥಿ ವೇತನದ ಹಣವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಾಗಿದೆ. ಆದರೆ ಡೀಫಾಲ್ಟ್ ಮಾಡಿದ ಸಂಸ್ಥೆಗಳು ನಿಯಮಗಳನ್ನು ಬೈಪಾಸ್ ಮಾಡಿ FINO ಬ್ಯಾಂಕ್‌ನ ಏಜೆಂಟ್‌ಗಳಿಂದ ಖಾತೆಯನ್ನು ದುರುಪಯೋಗ ಮಾಡಿಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...