Homeಮುಖಪುಟಎಸ್‌ಸಿ, ಎಸ್‌ಟಿಗಳ ಕೋಟ್ಯಂತರ ರೂ. ವಿದ್ಯಾರ್ಥಿವೇತನ ದುರುಪಯೋಗ; ಯುಪಿಯ ವಿವಿಧೆಡೆ ಇ.ಡಿ. ಶೋಧನೆ

ಎಸ್‌ಸಿ, ಎಸ್‌ಟಿಗಳ ಕೋಟ್ಯಂತರ ರೂ. ವಿದ್ಯಾರ್ಥಿವೇತನ ದುರುಪಯೋಗ; ಯುಪಿಯ ವಿವಿಧೆಡೆ ಇ.ಡಿ. ಶೋಧನೆ

- Advertisement -
- Advertisement -

ಅಲ್ಪಸಂಖ್ಯಾತ, ದಲಿತ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್ಯುಲೇಷನ್ ನಂತರದ ಸರ್ಕಾರಿ ವಿದ್ಯಾರ್ಥಿವೇತನವನ್ನು ವಂಚನೆಯಿಂದ ಪಡೆದ ಕೆಲವು ಶಿಕ್ಷಣ ಸಂಸ್ಥೆಗಳ ವಿರುದ್ಧ ‘ಅಕ್ರಮ ಹಣ ವರ್ಗಾವಣೆ ಪ್ರಕರಣ’ಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಉತ್ತರ ಪ್ರದೇಶದ ಆರು ಜಿಲ್ಲೆಗಳ 22 ಸ್ಥಳಗಳಲ್ಲಿ ಶೋಧನೆ ನಡೆಸಿದೆ.

ಈ ಸಂಸ್ಥೆಗಳು 75 ಕೋಟಿ ರೂಪಾಯಿ ಮೌಲ್ಯದ ಸ್ಕಾಲರ್‌ಶಿಪ್‌ಗಳನ್ನು ಪಡೆದಿವೆ. ಕೆಲವು ಸ್ಕಾಲರ್‌ಶಿಪ್‌ಗಳನ್ನು ಏಳು ವರ್ಷದ ಮಕ್ಕಳ ಬ್ಯಾಂಕ್ ಖಾತೆಗಳ ಮೂಲಕ ತೆಗೆದುಕೊಳ್ಳಲಾಗಿದೆ ಎಂದು ತನಿಖೆಗಳು ಬಹಿರಂಗಪಡಿಸಿವೆ ಎಂದು ಇ.ಡಿ. ಹೇಳಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಸ್‌ಸಿ, ಎಸ್‌ಟಿ, ದೈಹಿಕ ವಿಕಲಚೇತನ ಅಭ್ಯರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಿವಿಧ ವಿದ್ಯಾರ್ಥಿವೇತನವನ್ನು ನೀಡುತ್ತವೆ. ಇದಲ್ಲದೆ, ಕೆಲವು ವಿದ್ಯಾರ್ಥಿವೇತನಗಳು ಅಲ್ಪಸಂಖ್ಯಾತ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳ (EWS) ವಿದ್ಯಾರ್ಥಿಗಳಿಗೆ ಮೀಸಲಾಗಿದೆ ಎಂದು ಇಡಿ ತಿಳಿಸಿದೆ.

“ಹೆಚ್ಚು ಹೆಚ್ಚು ವಿದ್ಯಾರ್ಥಿವೇತನ ನಿಧಿಯನ್ನು ಪಡೆಯುವುದಕ್ಕಾಗಿ ಈ ಕಾಲೇಜುಗಳು, ಸಂಸ್ಥೆಗಳು 7 ರಿಂದ 12 ವರ್ಷ ವಯಸ್ಸಿನ ಮಕ್ಕಳ, 45 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳ ಬ್ಯಾಂಕ್ ಖಾತೆಗಳನ್ನು ಬಳಸುತ್ತವೆ” ಎಂದು ಇ.ಡಿ. ತನ್ನ ತನಿಖೆಯಲ್ಲಿ ಕಂಡುಕೊಂಡಿದೆ.

ಈ ಸಂಸ್ಥೆಗಳು ವಿವಿಧ ವ್ಯಕ್ತಿಗಳ ದಾಖಲೆಗಳನ್ನು ಬಳಸಿಕೊಂಡು ಸುಮಾರು 3,000 ಖಾತೆಗಳನ್ನು ತೆರೆದಿರುವುದು ಇದುವರೆಗೆ ನಡೆಸಿದ ತನಿಖೆಯಿಂದ ತಿಳಿದುಬಂದಿದೆ. ಹೆಚ್ಚಿನ ಖಾತೆಗಳು ಸಾಮಾನ್ಯ ಹಳ್ಳಿಗರ ಹೆಸರಿನಲ್ಲಿವೆ, ಈ ಸಾಮಾನ್ಯರಿಗೆ ಈ ಬ್ಯಾಂಕ್ ಖಾತೆಗಳ ಬಗ್ಗೆ ತಿಳಿದಿಲ್ಲ. ಇಲ್ಲಿಯವರೆಗೆ ಯಾವುದೇ ವಿದ್ಯಾರ್ಥಿವೇತನವನ್ನು ಪಡೆದಿಲ್ಲ” ಎಂದು ಇಡಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರವಿ ಪ್ರಕಾಶ್ ಗುಪ್ತಾ ಸೇರಿದಂತೆ ವಿವಿಧ ಏಜೆಂಟ್‌ಗಳು ಇದರಲ್ಲಿ ಭಾಗಿಯಾಗಿರುವುದನ್ನು ಇ.ಡಿ. ಪತ್ತೆಹಚ್ಚಿದೆ. ಸಾಹಿಲ್ ಅಜೀಜ್, ಅಮಿತ್ ಕುಮಾರ್ ಮೌರ್ಯ, ತನ್ವೀರ್ ಅಹ್ಮದ್, ಜಿತೇಂದ್ರ ಸಿಂಗ್, ಮೊಹಮ್ಮದ್ ಸೇರಿದಂತೆ FINO ಪೇಮೆಂಟ್ ಬ್ಯಾಂಕ್‌ನ ಹಲವಾರು ಏಜೆಂಟ್‌ಗಳ ಸಹಾಯದಿಂದ ಹಗರಣವನ್ನು ನಡೆಸಲಾಗಿದೆ ಎಂದು ಶೋಧನೆಯಲ್ಲಿ ತಿಳಿದುಬಂದಿದೆ.

“FINO ಪೇಮೆಂಟ್‌ ಬ್ಯಾಂಕ್‌ನಲ್ಲಿ ಖಾತೆ ತೆರೆಯಲು ಅಳವಡಿಸಿಕೊಳ್ಳಲಾದ ಸಡಿಲವಾದ ವಿಧಾನಗಳನ್ನು ದುರುಪಯೋಗ ಮಾಡಿಕೊಂಡು ಹಗರಣವನ್ನು ಎಸಗಲಾಗಿದೆ. ಅಪರಾಧಿಗಳು FINO ಬ್ಯಾಂಕ್‌ನ ಲಕ್ನೋ ಮತ್ತು ಮುಂಬೈ ಶಾಖೆಗಳಲ್ಲಿ ಎಲ್ಲಾ ಬ್ಯಾಂಕ್ ಖಾತೆಗಳನ್ನು ತೆರೆದಿದ್ದರು. ವಿದ್ಯುನ್ಮಾನ ವರ್ಗಾವಣೆ ಮತ್ತು ವಿದ್ಯಾರ್ಥಿವೇತನ ನಿಧಿಯ ನಗದು ಹಿಂತೆಗೆದುಕೊಳ್ಳುವಿಕೆ ಎರಡರಲ್ಲೂ ಈ ಸಂಸ್ಥೆಗಳು FINO ಏಜೆಂಟ್‌ಗಳ ಸೇವೆ ಪಡೆದುಕೊಂಡಿವೆ”.

ನಿಯಮಗಳ ಅನುಸಾರ ವಿದ್ಯಾರ್ಥಿ ವೇತನದ ಹಣವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಾಗಿದೆ. ಆದರೆ ಡೀಫಾಲ್ಟ್ ಮಾಡಿದ ಸಂಸ್ಥೆಗಳು ನಿಯಮಗಳನ್ನು ಬೈಪಾಸ್ ಮಾಡಿ FINO ಬ್ಯಾಂಕ್‌ನ ಏಜೆಂಟ್‌ಗಳಿಂದ ಖಾತೆಯನ್ನು ದುರುಪಯೋಗ ಮಾಡಿಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...