Homeಮುಖಪುಟಎಸ್‌ಸಿ, ಎಸ್‌ಟಿಗಳ ಕೋಟ್ಯಂತರ ರೂ. ವಿದ್ಯಾರ್ಥಿವೇತನ ದುರುಪಯೋಗ; ಯುಪಿಯ ವಿವಿಧೆಡೆ ಇ.ಡಿ. ಶೋಧನೆ

ಎಸ್‌ಸಿ, ಎಸ್‌ಟಿಗಳ ಕೋಟ್ಯಂತರ ರೂ. ವಿದ್ಯಾರ್ಥಿವೇತನ ದುರುಪಯೋಗ; ಯುಪಿಯ ವಿವಿಧೆಡೆ ಇ.ಡಿ. ಶೋಧನೆ

- Advertisement -
- Advertisement -

ಅಲ್ಪಸಂಖ್ಯಾತ, ದಲಿತ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್ಯುಲೇಷನ್ ನಂತರದ ಸರ್ಕಾರಿ ವಿದ್ಯಾರ್ಥಿವೇತನವನ್ನು ವಂಚನೆಯಿಂದ ಪಡೆದ ಕೆಲವು ಶಿಕ್ಷಣ ಸಂಸ್ಥೆಗಳ ವಿರುದ್ಧ ‘ಅಕ್ರಮ ಹಣ ವರ್ಗಾವಣೆ ಪ್ರಕರಣ’ಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಉತ್ತರ ಪ್ರದೇಶದ ಆರು ಜಿಲ್ಲೆಗಳ 22 ಸ್ಥಳಗಳಲ್ಲಿ ಶೋಧನೆ ನಡೆಸಿದೆ.

ಈ ಸಂಸ್ಥೆಗಳು 75 ಕೋಟಿ ರೂಪಾಯಿ ಮೌಲ್ಯದ ಸ್ಕಾಲರ್‌ಶಿಪ್‌ಗಳನ್ನು ಪಡೆದಿವೆ. ಕೆಲವು ಸ್ಕಾಲರ್‌ಶಿಪ್‌ಗಳನ್ನು ಏಳು ವರ್ಷದ ಮಕ್ಕಳ ಬ್ಯಾಂಕ್ ಖಾತೆಗಳ ಮೂಲಕ ತೆಗೆದುಕೊಳ್ಳಲಾಗಿದೆ ಎಂದು ತನಿಖೆಗಳು ಬಹಿರಂಗಪಡಿಸಿವೆ ಎಂದು ಇ.ಡಿ. ಹೇಳಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಸ್‌ಸಿ, ಎಸ್‌ಟಿ, ದೈಹಿಕ ವಿಕಲಚೇತನ ಅಭ್ಯರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಿವಿಧ ವಿದ್ಯಾರ್ಥಿವೇತನವನ್ನು ನೀಡುತ್ತವೆ. ಇದಲ್ಲದೆ, ಕೆಲವು ವಿದ್ಯಾರ್ಥಿವೇತನಗಳು ಅಲ್ಪಸಂಖ್ಯಾತ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳ (EWS) ವಿದ್ಯಾರ್ಥಿಗಳಿಗೆ ಮೀಸಲಾಗಿದೆ ಎಂದು ಇಡಿ ತಿಳಿಸಿದೆ.

“ಹೆಚ್ಚು ಹೆಚ್ಚು ವಿದ್ಯಾರ್ಥಿವೇತನ ನಿಧಿಯನ್ನು ಪಡೆಯುವುದಕ್ಕಾಗಿ ಈ ಕಾಲೇಜುಗಳು, ಸಂಸ್ಥೆಗಳು 7 ರಿಂದ 12 ವರ್ಷ ವಯಸ್ಸಿನ ಮಕ್ಕಳ, 45 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳ ಬ್ಯಾಂಕ್ ಖಾತೆಗಳನ್ನು ಬಳಸುತ್ತವೆ” ಎಂದು ಇ.ಡಿ. ತನ್ನ ತನಿಖೆಯಲ್ಲಿ ಕಂಡುಕೊಂಡಿದೆ.

ಈ ಸಂಸ್ಥೆಗಳು ವಿವಿಧ ವ್ಯಕ್ತಿಗಳ ದಾಖಲೆಗಳನ್ನು ಬಳಸಿಕೊಂಡು ಸುಮಾರು 3,000 ಖಾತೆಗಳನ್ನು ತೆರೆದಿರುವುದು ಇದುವರೆಗೆ ನಡೆಸಿದ ತನಿಖೆಯಿಂದ ತಿಳಿದುಬಂದಿದೆ. ಹೆಚ್ಚಿನ ಖಾತೆಗಳು ಸಾಮಾನ್ಯ ಹಳ್ಳಿಗರ ಹೆಸರಿನಲ್ಲಿವೆ, ಈ ಸಾಮಾನ್ಯರಿಗೆ ಈ ಬ್ಯಾಂಕ್ ಖಾತೆಗಳ ಬಗ್ಗೆ ತಿಳಿದಿಲ್ಲ. ಇಲ್ಲಿಯವರೆಗೆ ಯಾವುದೇ ವಿದ್ಯಾರ್ಥಿವೇತನವನ್ನು ಪಡೆದಿಲ್ಲ” ಎಂದು ಇಡಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರವಿ ಪ್ರಕಾಶ್ ಗುಪ್ತಾ ಸೇರಿದಂತೆ ವಿವಿಧ ಏಜೆಂಟ್‌ಗಳು ಇದರಲ್ಲಿ ಭಾಗಿಯಾಗಿರುವುದನ್ನು ಇ.ಡಿ. ಪತ್ತೆಹಚ್ಚಿದೆ. ಸಾಹಿಲ್ ಅಜೀಜ್, ಅಮಿತ್ ಕುಮಾರ್ ಮೌರ್ಯ, ತನ್ವೀರ್ ಅಹ್ಮದ್, ಜಿತೇಂದ್ರ ಸಿಂಗ್, ಮೊಹಮ್ಮದ್ ಸೇರಿದಂತೆ FINO ಪೇಮೆಂಟ್ ಬ್ಯಾಂಕ್‌ನ ಹಲವಾರು ಏಜೆಂಟ್‌ಗಳ ಸಹಾಯದಿಂದ ಹಗರಣವನ್ನು ನಡೆಸಲಾಗಿದೆ ಎಂದು ಶೋಧನೆಯಲ್ಲಿ ತಿಳಿದುಬಂದಿದೆ.

“FINO ಪೇಮೆಂಟ್‌ ಬ್ಯಾಂಕ್‌ನಲ್ಲಿ ಖಾತೆ ತೆರೆಯಲು ಅಳವಡಿಸಿಕೊಳ್ಳಲಾದ ಸಡಿಲವಾದ ವಿಧಾನಗಳನ್ನು ದುರುಪಯೋಗ ಮಾಡಿಕೊಂಡು ಹಗರಣವನ್ನು ಎಸಗಲಾಗಿದೆ. ಅಪರಾಧಿಗಳು FINO ಬ್ಯಾಂಕ್‌ನ ಲಕ್ನೋ ಮತ್ತು ಮುಂಬೈ ಶಾಖೆಗಳಲ್ಲಿ ಎಲ್ಲಾ ಬ್ಯಾಂಕ್ ಖಾತೆಗಳನ್ನು ತೆರೆದಿದ್ದರು. ವಿದ್ಯುನ್ಮಾನ ವರ್ಗಾವಣೆ ಮತ್ತು ವಿದ್ಯಾರ್ಥಿವೇತನ ನಿಧಿಯ ನಗದು ಹಿಂತೆಗೆದುಕೊಳ್ಳುವಿಕೆ ಎರಡರಲ್ಲೂ ಈ ಸಂಸ್ಥೆಗಳು FINO ಏಜೆಂಟ್‌ಗಳ ಸೇವೆ ಪಡೆದುಕೊಂಡಿವೆ”.

ನಿಯಮಗಳ ಅನುಸಾರ ವಿದ್ಯಾರ್ಥಿ ವೇತನದ ಹಣವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಾಗಿದೆ. ಆದರೆ ಡೀಫಾಲ್ಟ್ ಮಾಡಿದ ಸಂಸ್ಥೆಗಳು ನಿಯಮಗಳನ್ನು ಬೈಪಾಸ್ ಮಾಡಿ FINO ಬ್ಯಾಂಕ್‌ನ ಏಜೆಂಟ್‌ಗಳಿಂದ ಖಾತೆಯನ್ನು ದುರುಪಯೋಗ ಮಾಡಿಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...