Homeಮುಖಪುಟಎಸ್‌ಸಿ, ಎಸ್‌ಟಿಗಳ ಕೋಟ್ಯಂತರ ರೂ. ವಿದ್ಯಾರ್ಥಿವೇತನ ದುರುಪಯೋಗ; ಯುಪಿಯ ವಿವಿಧೆಡೆ ಇ.ಡಿ. ಶೋಧನೆ

ಎಸ್‌ಸಿ, ಎಸ್‌ಟಿಗಳ ಕೋಟ್ಯಂತರ ರೂ. ವಿದ್ಯಾರ್ಥಿವೇತನ ದುರುಪಯೋಗ; ಯುಪಿಯ ವಿವಿಧೆಡೆ ಇ.ಡಿ. ಶೋಧನೆ

- Advertisement -
- Advertisement -

ಅಲ್ಪಸಂಖ್ಯಾತ, ದಲಿತ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್ಯುಲೇಷನ್ ನಂತರದ ಸರ್ಕಾರಿ ವಿದ್ಯಾರ್ಥಿವೇತನವನ್ನು ವಂಚನೆಯಿಂದ ಪಡೆದ ಕೆಲವು ಶಿಕ್ಷಣ ಸಂಸ್ಥೆಗಳ ವಿರುದ್ಧ ‘ಅಕ್ರಮ ಹಣ ವರ್ಗಾವಣೆ ಪ್ರಕರಣ’ಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಉತ್ತರ ಪ್ರದೇಶದ ಆರು ಜಿಲ್ಲೆಗಳ 22 ಸ್ಥಳಗಳಲ್ಲಿ ಶೋಧನೆ ನಡೆಸಿದೆ.

ಈ ಸಂಸ್ಥೆಗಳು 75 ಕೋಟಿ ರೂಪಾಯಿ ಮೌಲ್ಯದ ಸ್ಕಾಲರ್‌ಶಿಪ್‌ಗಳನ್ನು ಪಡೆದಿವೆ. ಕೆಲವು ಸ್ಕಾಲರ್‌ಶಿಪ್‌ಗಳನ್ನು ಏಳು ವರ್ಷದ ಮಕ್ಕಳ ಬ್ಯಾಂಕ್ ಖಾತೆಗಳ ಮೂಲಕ ತೆಗೆದುಕೊಳ್ಳಲಾಗಿದೆ ಎಂದು ತನಿಖೆಗಳು ಬಹಿರಂಗಪಡಿಸಿವೆ ಎಂದು ಇ.ಡಿ. ಹೇಳಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಸ್‌ಸಿ, ಎಸ್‌ಟಿ, ದೈಹಿಕ ವಿಕಲಚೇತನ ಅಭ್ಯರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಿವಿಧ ವಿದ್ಯಾರ್ಥಿವೇತನವನ್ನು ನೀಡುತ್ತವೆ. ಇದಲ್ಲದೆ, ಕೆಲವು ವಿದ್ಯಾರ್ಥಿವೇತನಗಳು ಅಲ್ಪಸಂಖ್ಯಾತ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳ (EWS) ವಿದ್ಯಾರ್ಥಿಗಳಿಗೆ ಮೀಸಲಾಗಿದೆ ಎಂದು ಇಡಿ ತಿಳಿಸಿದೆ.

“ಹೆಚ್ಚು ಹೆಚ್ಚು ವಿದ್ಯಾರ್ಥಿವೇತನ ನಿಧಿಯನ್ನು ಪಡೆಯುವುದಕ್ಕಾಗಿ ಈ ಕಾಲೇಜುಗಳು, ಸಂಸ್ಥೆಗಳು 7 ರಿಂದ 12 ವರ್ಷ ವಯಸ್ಸಿನ ಮಕ್ಕಳ, 45 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳ ಬ್ಯಾಂಕ್ ಖಾತೆಗಳನ್ನು ಬಳಸುತ್ತವೆ” ಎಂದು ಇ.ಡಿ. ತನ್ನ ತನಿಖೆಯಲ್ಲಿ ಕಂಡುಕೊಂಡಿದೆ.

ಈ ಸಂಸ್ಥೆಗಳು ವಿವಿಧ ವ್ಯಕ್ತಿಗಳ ದಾಖಲೆಗಳನ್ನು ಬಳಸಿಕೊಂಡು ಸುಮಾರು 3,000 ಖಾತೆಗಳನ್ನು ತೆರೆದಿರುವುದು ಇದುವರೆಗೆ ನಡೆಸಿದ ತನಿಖೆಯಿಂದ ತಿಳಿದುಬಂದಿದೆ. ಹೆಚ್ಚಿನ ಖಾತೆಗಳು ಸಾಮಾನ್ಯ ಹಳ್ಳಿಗರ ಹೆಸರಿನಲ್ಲಿವೆ, ಈ ಸಾಮಾನ್ಯರಿಗೆ ಈ ಬ್ಯಾಂಕ್ ಖಾತೆಗಳ ಬಗ್ಗೆ ತಿಳಿದಿಲ್ಲ. ಇಲ್ಲಿಯವರೆಗೆ ಯಾವುದೇ ವಿದ್ಯಾರ್ಥಿವೇತನವನ್ನು ಪಡೆದಿಲ್ಲ” ಎಂದು ಇಡಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರವಿ ಪ್ರಕಾಶ್ ಗುಪ್ತಾ ಸೇರಿದಂತೆ ವಿವಿಧ ಏಜೆಂಟ್‌ಗಳು ಇದರಲ್ಲಿ ಭಾಗಿಯಾಗಿರುವುದನ್ನು ಇ.ಡಿ. ಪತ್ತೆಹಚ್ಚಿದೆ. ಸಾಹಿಲ್ ಅಜೀಜ್, ಅಮಿತ್ ಕುಮಾರ್ ಮೌರ್ಯ, ತನ್ವೀರ್ ಅಹ್ಮದ್, ಜಿತೇಂದ್ರ ಸಿಂಗ್, ಮೊಹಮ್ಮದ್ ಸೇರಿದಂತೆ FINO ಪೇಮೆಂಟ್ ಬ್ಯಾಂಕ್‌ನ ಹಲವಾರು ಏಜೆಂಟ್‌ಗಳ ಸಹಾಯದಿಂದ ಹಗರಣವನ್ನು ನಡೆಸಲಾಗಿದೆ ಎಂದು ಶೋಧನೆಯಲ್ಲಿ ತಿಳಿದುಬಂದಿದೆ.

“FINO ಪೇಮೆಂಟ್‌ ಬ್ಯಾಂಕ್‌ನಲ್ಲಿ ಖಾತೆ ತೆರೆಯಲು ಅಳವಡಿಸಿಕೊಳ್ಳಲಾದ ಸಡಿಲವಾದ ವಿಧಾನಗಳನ್ನು ದುರುಪಯೋಗ ಮಾಡಿಕೊಂಡು ಹಗರಣವನ್ನು ಎಸಗಲಾಗಿದೆ. ಅಪರಾಧಿಗಳು FINO ಬ್ಯಾಂಕ್‌ನ ಲಕ್ನೋ ಮತ್ತು ಮುಂಬೈ ಶಾಖೆಗಳಲ್ಲಿ ಎಲ್ಲಾ ಬ್ಯಾಂಕ್ ಖಾತೆಗಳನ್ನು ತೆರೆದಿದ್ದರು. ವಿದ್ಯುನ್ಮಾನ ವರ್ಗಾವಣೆ ಮತ್ತು ವಿದ್ಯಾರ್ಥಿವೇತನ ನಿಧಿಯ ನಗದು ಹಿಂತೆಗೆದುಕೊಳ್ಳುವಿಕೆ ಎರಡರಲ್ಲೂ ಈ ಸಂಸ್ಥೆಗಳು FINO ಏಜೆಂಟ್‌ಗಳ ಸೇವೆ ಪಡೆದುಕೊಂಡಿವೆ”.

ನಿಯಮಗಳ ಅನುಸಾರ ವಿದ್ಯಾರ್ಥಿ ವೇತನದ ಹಣವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಾಗಿದೆ. ಆದರೆ ಡೀಫಾಲ್ಟ್ ಮಾಡಿದ ಸಂಸ್ಥೆಗಳು ನಿಯಮಗಳನ್ನು ಬೈಪಾಸ್ ಮಾಡಿ FINO ಬ್ಯಾಂಕ್‌ನ ಏಜೆಂಟ್‌ಗಳಿಂದ ಖಾತೆಯನ್ನು ದುರುಪಯೋಗ ಮಾಡಿಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...