Homeಮುಖಪುಟಎಸ್‌ಸಿ, ಎಸ್‌ಟಿಗಳ ಕೋಟ್ಯಂತರ ರೂ. ವಿದ್ಯಾರ್ಥಿವೇತನ ದುರುಪಯೋಗ; ಯುಪಿಯ ವಿವಿಧೆಡೆ ಇ.ಡಿ. ಶೋಧನೆ

ಎಸ್‌ಸಿ, ಎಸ್‌ಟಿಗಳ ಕೋಟ್ಯಂತರ ರೂ. ವಿದ್ಯಾರ್ಥಿವೇತನ ದುರುಪಯೋಗ; ಯುಪಿಯ ವಿವಿಧೆಡೆ ಇ.ಡಿ. ಶೋಧನೆ

- Advertisement -
- Advertisement -

ಅಲ್ಪಸಂಖ್ಯಾತ, ದಲಿತ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್ಯುಲೇಷನ್ ನಂತರದ ಸರ್ಕಾರಿ ವಿದ್ಯಾರ್ಥಿವೇತನವನ್ನು ವಂಚನೆಯಿಂದ ಪಡೆದ ಕೆಲವು ಶಿಕ್ಷಣ ಸಂಸ್ಥೆಗಳ ವಿರುದ್ಧ ‘ಅಕ್ರಮ ಹಣ ವರ್ಗಾವಣೆ ಪ್ರಕರಣ’ಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಉತ್ತರ ಪ್ರದೇಶದ ಆರು ಜಿಲ್ಲೆಗಳ 22 ಸ್ಥಳಗಳಲ್ಲಿ ಶೋಧನೆ ನಡೆಸಿದೆ.

ಈ ಸಂಸ್ಥೆಗಳು 75 ಕೋಟಿ ರೂಪಾಯಿ ಮೌಲ್ಯದ ಸ್ಕಾಲರ್‌ಶಿಪ್‌ಗಳನ್ನು ಪಡೆದಿವೆ. ಕೆಲವು ಸ್ಕಾಲರ್‌ಶಿಪ್‌ಗಳನ್ನು ಏಳು ವರ್ಷದ ಮಕ್ಕಳ ಬ್ಯಾಂಕ್ ಖಾತೆಗಳ ಮೂಲಕ ತೆಗೆದುಕೊಳ್ಳಲಾಗಿದೆ ಎಂದು ತನಿಖೆಗಳು ಬಹಿರಂಗಪಡಿಸಿವೆ ಎಂದು ಇ.ಡಿ. ಹೇಳಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಸ್‌ಸಿ, ಎಸ್‌ಟಿ, ದೈಹಿಕ ವಿಕಲಚೇತನ ಅಭ್ಯರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಿವಿಧ ವಿದ್ಯಾರ್ಥಿವೇತನವನ್ನು ನೀಡುತ್ತವೆ. ಇದಲ್ಲದೆ, ಕೆಲವು ವಿದ್ಯಾರ್ಥಿವೇತನಗಳು ಅಲ್ಪಸಂಖ್ಯಾತ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳ (EWS) ವಿದ್ಯಾರ್ಥಿಗಳಿಗೆ ಮೀಸಲಾಗಿದೆ ಎಂದು ಇಡಿ ತಿಳಿಸಿದೆ.

“ಹೆಚ್ಚು ಹೆಚ್ಚು ವಿದ್ಯಾರ್ಥಿವೇತನ ನಿಧಿಯನ್ನು ಪಡೆಯುವುದಕ್ಕಾಗಿ ಈ ಕಾಲೇಜುಗಳು, ಸಂಸ್ಥೆಗಳು 7 ರಿಂದ 12 ವರ್ಷ ವಯಸ್ಸಿನ ಮಕ್ಕಳ, 45 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳ ಬ್ಯಾಂಕ್ ಖಾತೆಗಳನ್ನು ಬಳಸುತ್ತವೆ” ಎಂದು ಇ.ಡಿ. ತನ್ನ ತನಿಖೆಯಲ್ಲಿ ಕಂಡುಕೊಂಡಿದೆ.

ಈ ಸಂಸ್ಥೆಗಳು ವಿವಿಧ ವ್ಯಕ್ತಿಗಳ ದಾಖಲೆಗಳನ್ನು ಬಳಸಿಕೊಂಡು ಸುಮಾರು 3,000 ಖಾತೆಗಳನ್ನು ತೆರೆದಿರುವುದು ಇದುವರೆಗೆ ನಡೆಸಿದ ತನಿಖೆಯಿಂದ ತಿಳಿದುಬಂದಿದೆ. ಹೆಚ್ಚಿನ ಖಾತೆಗಳು ಸಾಮಾನ್ಯ ಹಳ್ಳಿಗರ ಹೆಸರಿನಲ್ಲಿವೆ, ಈ ಸಾಮಾನ್ಯರಿಗೆ ಈ ಬ್ಯಾಂಕ್ ಖಾತೆಗಳ ಬಗ್ಗೆ ತಿಳಿದಿಲ್ಲ. ಇಲ್ಲಿಯವರೆಗೆ ಯಾವುದೇ ವಿದ್ಯಾರ್ಥಿವೇತನವನ್ನು ಪಡೆದಿಲ್ಲ” ಎಂದು ಇಡಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರವಿ ಪ್ರಕಾಶ್ ಗುಪ್ತಾ ಸೇರಿದಂತೆ ವಿವಿಧ ಏಜೆಂಟ್‌ಗಳು ಇದರಲ್ಲಿ ಭಾಗಿಯಾಗಿರುವುದನ್ನು ಇ.ಡಿ. ಪತ್ತೆಹಚ್ಚಿದೆ. ಸಾಹಿಲ್ ಅಜೀಜ್, ಅಮಿತ್ ಕುಮಾರ್ ಮೌರ್ಯ, ತನ್ವೀರ್ ಅಹ್ಮದ್, ಜಿತೇಂದ್ರ ಸಿಂಗ್, ಮೊಹಮ್ಮದ್ ಸೇರಿದಂತೆ FINO ಪೇಮೆಂಟ್ ಬ್ಯಾಂಕ್‌ನ ಹಲವಾರು ಏಜೆಂಟ್‌ಗಳ ಸಹಾಯದಿಂದ ಹಗರಣವನ್ನು ನಡೆಸಲಾಗಿದೆ ಎಂದು ಶೋಧನೆಯಲ್ಲಿ ತಿಳಿದುಬಂದಿದೆ.

“FINO ಪೇಮೆಂಟ್‌ ಬ್ಯಾಂಕ್‌ನಲ್ಲಿ ಖಾತೆ ತೆರೆಯಲು ಅಳವಡಿಸಿಕೊಳ್ಳಲಾದ ಸಡಿಲವಾದ ವಿಧಾನಗಳನ್ನು ದುರುಪಯೋಗ ಮಾಡಿಕೊಂಡು ಹಗರಣವನ್ನು ಎಸಗಲಾಗಿದೆ. ಅಪರಾಧಿಗಳು FINO ಬ್ಯಾಂಕ್‌ನ ಲಕ್ನೋ ಮತ್ತು ಮುಂಬೈ ಶಾಖೆಗಳಲ್ಲಿ ಎಲ್ಲಾ ಬ್ಯಾಂಕ್ ಖಾತೆಗಳನ್ನು ತೆರೆದಿದ್ದರು. ವಿದ್ಯುನ್ಮಾನ ವರ್ಗಾವಣೆ ಮತ್ತು ವಿದ್ಯಾರ್ಥಿವೇತನ ನಿಧಿಯ ನಗದು ಹಿಂತೆಗೆದುಕೊಳ್ಳುವಿಕೆ ಎರಡರಲ್ಲೂ ಈ ಸಂಸ್ಥೆಗಳು FINO ಏಜೆಂಟ್‌ಗಳ ಸೇವೆ ಪಡೆದುಕೊಂಡಿವೆ”.

ನಿಯಮಗಳ ಅನುಸಾರ ವಿದ್ಯಾರ್ಥಿ ವೇತನದ ಹಣವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಾಗಿದೆ. ಆದರೆ ಡೀಫಾಲ್ಟ್ ಮಾಡಿದ ಸಂಸ್ಥೆಗಳು ನಿಯಮಗಳನ್ನು ಬೈಪಾಸ್ ಮಾಡಿ FINO ಬ್ಯಾಂಕ್‌ನ ಏಜೆಂಟ್‌ಗಳಿಂದ ಖಾತೆಯನ್ನು ದುರುಪಯೋಗ ಮಾಡಿಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...