Homeಕರ್ನಾಟಕSCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ...

SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

- Advertisement -
- Advertisement -

SCSP/TSP ಯೋಜನೆಯಲ್ಲಿ ಸುಮಾರು 3.37 ಲಕ್ಷ ಕೋಟಿಗೂ ಹೆಚ್ಚಿನ ದಲಿತರಿಗೆ ನೀಡಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇಷ್ಟೊಂದು ಬೃಹತ್ ಮೊತ್ತ ಎಲ್ಲಿ ಹೋಗಿದೆ. ಈ ಹಣವನ್ನು ಬಳಸಿ ದಲಿತರು ಉದ್ಧಾರವಾಗಿರುವಂತದ್ದು ಎಲ್ಲೂ ಕಾಣುತ್ತಿಲ್ಲ. ಈ ಹಣದ ಖರ್ಚಿನಲ್ಲಿ ಯಾವ ಬದಲಾವಣೆ ಆಗಿದೆ ಎಂದು ಚರ್ಚೆ ಮಾಡಲು ಒಂದು ಬಾರಿ ವಿಶೇಷ ಅಧಿವೇಶನ ಮಾಡಿ ಎಂದು ಅದಕ್ಕಾಗಿಯೆ ನಾವು ಕೇಳುತ್ತಿದ್ದೇವೆ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಬುಧವಾರ ಹೇಳಿದರು. SCSP/TPS ನಿಂದ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಾಮಾಜಿಕ ನ್ಯಾಯ ಮತ್ತು ಬಜೆಟ್ ಧೋರಣೆಗಳು’ ಎಂಬ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. “SCSP/TSP ಯೋಜನೆಯನ್ನು ಬಡತನ ನಿರ್ಮೂಲನೆಗಾಗಿ ಮಾಡಿರುವ ಯೋಜನೆ ಅಲ್ಲ, ಬದಲಾಗಿ ಬಡತನದ ಅಂತರ ಕಡಿಮೆ ಮಾಡಲು ಜಾರಿ ಮಾಡಲಾಗಿದೆ. ಈ ಹಣವನ್ನು ಗ್ಯಾರೆಂಟಿ ಯೋಜನೆ ಸೇರಿದಂತೆ ಇತರ ಯೋಜನೆಗಳಿಗೆ ಬಳಸಬಾರದು. ಹಾಗಾಗಿ ಹಣದ ಮೌಲ್ಯಮಾಪನ ಮಾಡಬೇಕಾಗಿದೆ” ಎಂದು ಅವರು ಆಗ್ರಹಿಸಿದರು. SCSP/TPS ನಿಂದ

“6 ತಿಂಗಳ ಒಳಗೆ ಬ್ಯಾಕ್‌ಲ್ಯಾಗ್ ಹುದ್ದೆಗಳನ್ನು ತುಂಬಿಸಬೇಕು ಎಂದು ಬಿಜೆಪಿ ಸರ್ಕಾರ ಇದ್ದಾಗಲೆ ಆದೇಶ ಬಂದಿತ್ತು. ಆದರೂ ಕಾಂಗ್ರೆಸ್ ಸರ್ಕಾರ ಬಂದು 2 ವರ್ಷಗಳಾದರೂ ಆ ಹುದ್ದೆಗಳನ್ನು ತುಂಬಿಲ್ಲ. ಬಿಎಡ್‌ ಓದುವ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮತ್ತು ಸ್ಕಾಲರ್‌ಶಿಪ್‌ಗಳು ಇಲ್ಲ. ಇದು ಯಾವ ಸಾಮಾಜಿಕ ನ್ಯಾಯ? ಇದಕ್ಕೆ ಸಿದ್ದರಾಮಯ್ಯ ಅವರು ಉತ್ತರಿಸಬೇಕು” ಎಂದು ಅವರು ಹೇಳಿದರು.

“ಸಿದ್ದರಾಮಯ್ಯ ಅವರು 2013ರಲ್ಲಿ ಸಿಎಂ ಆಗಿದ್ದ ಸಮಯದಲ್ಲಿ ಸಂವೇದನಶೀಲರಾಗಿದ್ದರು. ಆದರೆ ಈ ಬಾರಿ ಅವರಿಗೆ ಏನಾಗಿದೆ ಎಂದು ತಿಳಿಯುತ್ತಿಲ್ಲ. ಅವರಿಗೆ ಈಗ ಸಾಮಾಜಿಕ ನ್ಯಾಯ ಈಡೇರಿಸಬೇಕು ಎಂಬ ಮನಸ್ಥಿತಿ ಇಲ್ಲ. ಘೋಷಣೆ ಮಾಡುವುದು ಒಂದು ಮೊತ್ತ, ಹಂಚಿಕೆ ಮಾಡುವುದು ಒಂದು ಮೊತ್ತ, ಆದರೆ ಬಿಡುಗಡೆ ಮಾಡುವುದು ಒಂದು ಮೊತ್ತವಾಗಿದೆ” ಎಂದು ಅವರು ಹೇಳಿದರು. ಇವೆಲ್ಲಕ್ಕೂ ಪರಿಹಾರ ಎಂದರೆ ಎಲ್ಲರೂ ಒಗ್ಗಟ್ಟಾಗಿ ಸಾಂವಿಧಾನಿಕ ಮೌಲ್ಯಗಳನ್ನು ಇಟ್ಟುಕೊಂಡೆ ಮಿಲಿಟೆಂಟ್‌ ಯೋಜನೆಗಳನ್ನು ರೂಪಿಸಬೇಕಿದೆ ಎಂದು ಹೇಳಿದರು.

ದಲಿತರಿಗೆ ಭೂಮಿ ನೀಡಲ್ಲ ಎಂದು ಸರ್ಕಾರ ನೇರವಾಗಿ ಹೇಳುತ್ತಿದೆ: ದಲಿತ ಹಕ್ಕುಗಳ ಹೋರಾಟಗಾರ ಗೋಪಾಲಕೃಷ್ಣ ಹರಳಹಳ್ಳಿ

ಇದಕ್ಕೂ ಮೊದಲು ಬಗರ್‌ಹುಕುಂ ಭೂಮಿ ವಿಚಾರದ ಬಗ್ಗೆ ಮಾತನಾಡಿದ ದಲಿತ ಹಕ್ಕುಗಳ ಸಮಿತಿ ರಾಜ್ಯಾಧ್ಯಕ್ಷರಾದ ಗೋಪಾಲಕೃಷ್ಣ ಹರಳಹಳ್ಳಿ, “ನಮ್ಮ ದೇಶದಲ್ಲಿ ಸ್ವತಂತ್ರ ಬಂದ ನಂತರ ಸರ್ಕಾರಗಳು ಭೂ ಸುಧಾರಣೆ ಜಾರಿಗೆ ತಂದವು. ಆದರೆ ಭೂಮಿ ಜನರಿಗೆ ಸಿಕ್ಕಿಲ್ಲ. ಬಗರ್‌ಹುಕುಂ ಭೂಮಿಯ ಸಮಸ್ಯೆಯು ದಲಿತರು ಮತ್ತು ದಲಿತೇತರ ಬಡವರ ಬಗ್ಗೆ ಈಗಲೂ ಕಾಡುತ್ತಿದೆ. ಈ ವಿಚಾರದ ಬಗ್ಗೆ ಬಜೆಟ್‌ನಲ್ಲಿ ಸಿದ್ದರಾಮಯ್ಯ ಅವರು ಯಾವುದೆ ಘೋಷಣೆ ಮಾಡಿಲ್ಲ. ಈ ಸರ್ಕಾರ ದಲಿತರಿಗೆ ಭೂಮಿ ನೀಡಲ್ಲ ಎಂಬುವುದು ಇದರ ಅರ್ಥವಾಗಿದ್ದು, ಅಂತಹ ಇಚ್ಛಾಶಕ್ತಿ ತಮಗೆ ಇಲ್ಲ ಎಂದೆ ಸರ್ಕಾರ ಹೇಳುತ್ತಿದೆ” ಎಂದು ಅವರು ಹೇಳಿದರು.

ದಲಿತ ಹಕ್ಕುಗಳ ಸಮಿತಿ ರಾಜ್ಯಾಧ್ಯಕ್ಷರಾದ ಗೋಪಾಲಕೃಷ್ಣ ಹರಳಹಳ್ಳಿ

ದಲಿತರಿಗಾಗಿ 2 ಲಕ್ಷ ಕೋಟಿ ರೂ.ಗಳು ಖರ್ಚು ಮಾಡಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇದರ ಬಗ್ಗೆ ಯಾವುದಾದರು ಅಧ್ಯಯನ ಆಗಿದೆಯೆ? ಎಂದು ಅವರು ಹೇಳಿದರು. “ಜೀತಮುಕ್ತಿ ಕಾಯ್ದೆಯ ಪ್ರಕಾರ ದಲಿತರಿಗೆ ಭೂಮಿ ಕೊಡಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಇವತ್ತಿನವರೆಗೂ ಯಾವುದೆ ಭೂಮಿ ದಲಿತರಿಗೆ ನೀಡಿಲ್ಲ. ಭೂಮಿ ಕೇಳಿದ ದಲಿತರ ಮೇಲೆ ಸರ್ಕಾರ ಕೇಸು ಹಾಕುತ್ತಿದೆ. ದೇವದಾಸಿ ಮಹಿಳೆಯರಿಗೆ ಸರ್ಕಾರ ಬಜೆಟ್‌ನಲ್ಲಿ ಏನಾದರೂ ಘೋಷಣೆ ಮಾಡುತ್ತದೆ ಎಂದು ನಿರೀಕ್ಷಿಸಿದ್ದೆವು, ಆದರೆ ಸರ್ಕಾರ ಇದರ ಬಗ್ಗೆ ಏನೂ ಘೋಷಣೆ ಮಾಡಿಲ್ಲ” ಎಂದು ಹೇಳಿದರು.

“ಜಾತಿ ವ್ಯವಸ್ಥೆಯನ್ನು ಉಳಿಸುವ ಶಕ್ತಿಗಳು ಬಲವಾಗಿದ್ದು, ದಲಿತರಿಗೆ ನ್ಯಾಯ ಸಿಗಬೇಕು ಎಂದರೆ ದಲಿತರೊಂದಿಗೆ ದಲಿತೇತರರು ಕೂಡಾ ಸೇರಿ ಹೋರಾಟ ಮಾಡಬೇಕಿದೆ. ಈ ಸರ್ಕಾರ ಯಾವ ದಲಿತರಿಗೂ ಭೂಮಿ ಮತ್ತು ಸಮಾನತೆಯನ್ನು ನೀಡುವುದಿಲ್ಲ. ಅದಕ್ಕಾಗಿ ಜನಚಳವಳಿಗಳು ಪರ್ಯಾಯ ರಾಜಕೀಯ ಚಳವಳಿ ಕಟ್ಟಬೇಕಿದೆ” ಎಂದು ಗೋಪಾಲಕೃಷ್ಣ ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...