Homeಕರ್ನಾಟಕSCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ...

SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

- Advertisement -
- Advertisement -

SCSP/TSP ಯೋಜನೆಯಲ್ಲಿ ಸುಮಾರು 3.37 ಲಕ್ಷ ಕೋಟಿಗೂ ಹೆಚ್ಚಿನ ದಲಿತರಿಗೆ ನೀಡಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇಷ್ಟೊಂದು ಬೃಹತ್ ಮೊತ್ತ ಎಲ್ಲಿ ಹೋಗಿದೆ. ಈ ಹಣವನ್ನು ಬಳಸಿ ದಲಿತರು ಉದ್ಧಾರವಾಗಿರುವಂತದ್ದು ಎಲ್ಲೂ ಕಾಣುತ್ತಿಲ್ಲ. ಈ ಹಣದ ಖರ್ಚಿನಲ್ಲಿ ಯಾವ ಬದಲಾವಣೆ ಆಗಿದೆ ಎಂದು ಚರ್ಚೆ ಮಾಡಲು ಒಂದು ಬಾರಿ ವಿಶೇಷ ಅಧಿವೇಶನ ಮಾಡಿ ಎಂದು ಅದಕ್ಕಾಗಿಯೆ ನಾವು ಕೇಳುತ್ತಿದ್ದೇವೆ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಬುಧವಾರ ಹೇಳಿದರು. SCSP/TPS ನಿಂದ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಾಮಾಜಿಕ ನ್ಯಾಯ ಮತ್ತು ಬಜೆಟ್ ಧೋರಣೆಗಳು’ ಎಂಬ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. “SCSP/TSP ಯೋಜನೆಯನ್ನು ಬಡತನ ನಿರ್ಮೂಲನೆಗಾಗಿ ಮಾಡಿರುವ ಯೋಜನೆ ಅಲ್ಲ, ಬದಲಾಗಿ ಬಡತನದ ಅಂತರ ಕಡಿಮೆ ಮಾಡಲು ಜಾರಿ ಮಾಡಲಾಗಿದೆ. ಈ ಹಣವನ್ನು ಗ್ಯಾರೆಂಟಿ ಯೋಜನೆ ಸೇರಿದಂತೆ ಇತರ ಯೋಜನೆಗಳಿಗೆ ಬಳಸಬಾರದು. ಹಾಗಾಗಿ ಹಣದ ಮೌಲ್ಯಮಾಪನ ಮಾಡಬೇಕಾಗಿದೆ” ಎಂದು ಅವರು ಆಗ್ರಹಿಸಿದರು. SCSP/TPS ನಿಂದ

“6 ತಿಂಗಳ ಒಳಗೆ ಬ್ಯಾಕ್‌ಲ್ಯಾಗ್ ಹುದ್ದೆಗಳನ್ನು ತುಂಬಿಸಬೇಕು ಎಂದು ಬಿಜೆಪಿ ಸರ್ಕಾರ ಇದ್ದಾಗಲೆ ಆದೇಶ ಬಂದಿತ್ತು. ಆದರೂ ಕಾಂಗ್ರೆಸ್ ಸರ್ಕಾರ ಬಂದು 2 ವರ್ಷಗಳಾದರೂ ಆ ಹುದ್ದೆಗಳನ್ನು ತುಂಬಿಲ್ಲ. ಬಿಎಡ್‌ ಓದುವ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮತ್ತು ಸ್ಕಾಲರ್‌ಶಿಪ್‌ಗಳು ಇಲ್ಲ. ಇದು ಯಾವ ಸಾಮಾಜಿಕ ನ್ಯಾಯ? ಇದಕ್ಕೆ ಸಿದ್ದರಾಮಯ್ಯ ಅವರು ಉತ್ತರಿಸಬೇಕು” ಎಂದು ಅವರು ಹೇಳಿದರು.

“ಸಿದ್ದರಾಮಯ್ಯ ಅವರು 2013ರಲ್ಲಿ ಸಿಎಂ ಆಗಿದ್ದ ಸಮಯದಲ್ಲಿ ಸಂವೇದನಶೀಲರಾಗಿದ್ದರು. ಆದರೆ ಈ ಬಾರಿ ಅವರಿಗೆ ಏನಾಗಿದೆ ಎಂದು ತಿಳಿಯುತ್ತಿಲ್ಲ. ಅವರಿಗೆ ಈಗ ಸಾಮಾಜಿಕ ನ್ಯಾಯ ಈಡೇರಿಸಬೇಕು ಎಂಬ ಮನಸ್ಥಿತಿ ಇಲ್ಲ. ಘೋಷಣೆ ಮಾಡುವುದು ಒಂದು ಮೊತ್ತ, ಹಂಚಿಕೆ ಮಾಡುವುದು ಒಂದು ಮೊತ್ತ, ಆದರೆ ಬಿಡುಗಡೆ ಮಾಡುವುದು ಒಂದು ಮೊತ್ತವಾಗಿದೆ” ಎಂದು ಅವರು ಹೇಳಿದರು. ಇವೆಲ್ಲಕ್ಕೂ ಪರಿಹಾರ ಎಂದರೆ ಎಲ್ಲರೂ ಒಗ್ಗಟ್ಟಾಗಿ ಸಾಂವಿಧಾನಿಕ ಮೌಲ್ಯಗಳನ್ನು ಇಟ್ಟುಕೊಂಡೆ ಮಿಲಿಟೆಂಟ್‌ ಯೋಜನೆಗಳನ್ನು ರೂಪಿಸಬೇಕಿದೆ ಎಂದು ಹೇಳಿದರು.

ದಲಿತರಿಗೆ ಭೂಮಿ ನೀಡಲ್ಲ ಎಂದು ಸರ್ಕಾರ ನೇರವಾಗಿ ಹೇಳುತ್ತಿದೆ: ದಲಿತ ಹಕ್ಕುಗಳ ಹೋರಾಟಗಾರ ಗೋಪಾಲಕೃಷ್ಣ ಹರಳಹಳ್ಳಿ

ಇದಕ್ಕೂ ಮೊದಲು ಬಗರ್‌ಹುಕುಂ ಭೂಮಿ ವಿಚಾರದ ಬಗ್ಗೆ ಮಾತನಾಡಿದ ದಲಿತ ಹಕ್ಕುಗಳ ಸಮಿತಿ ರಾಜ್ಯಾಧ್ಯಕ್ಷರಾದ ಗೋಪಾಲಕೃಷ್ಣ ಹರಳಹಳ್ಳಿ, “ನಮ್ಮ ದೇಶದಲ್ಲಿ ಸ್ವತಂತ್ರ ಬಂದ ನಂತರ ಸರ್ಕಾರಗಳು ಭೂ ಸುಧಾರಣೆ ಜಾರಿಗೆ ತಂದವು. ಆದರೆ ಭೂಮಿ ಜನರಿಗೆ ಸಿಕ್ಕಿಲ್ಲ. ಬಗರ್‌ಹುಕುಂ ಭೂಮಿಯ ಸಮಸ್ಯೆಯು ದಲಿತರು ಮತ್ತು ದಲಿತೇತರ ಬಡವರ ಬಗ್ಗೆ ಈಗಲೂ ಕಾಡುತ್ತಿದೆ. ಈ ವಿಚಾರದ ಬಗ್ಗೆ ಬಜೆಟ್‌ನಲ್ಲಿ ಸಿದ್ದರಾಮಯ್ಯ ಅವರು ಯಾವುದೆ ಘೋಷಣೆ ಮಾಡಿಲ್ಲ. ಈ ಸರ್ಕಾರ ದಲಿತರಿಗೆ ಭೂಮಿ ನೀಡಲ್ಲ ಎಂಬುವುದು ಇದರ ಅರ್ಥವಾಗಿದ್ದು, ಅಂತಹ ಇಚ್ಛಾಶಕ್ತಿ ತಮಗೆ ಇಲ್ಲ ಎಂದೆ ಸರ್ಕಾರ ಹೇಳುತ್ತಿದೆ” ಎಂದು ಅವರು ಹೇಳಿದರು.

ದಲಿತ ಹಕ್ಕುಗಳ ಸಮಿತಿ ರಾಜ್ಯಾಧ್ಯಕ್ಷರಾದ ಗೋಪಾಲಕೃಷ್ಣ ಹರಳಹಳ್ಳಿ

ದಲಿತರಿಗಾಗಿ 2 ಲಕ್ಷ ಕೋಟಿ ರೂ.ಗಳು ಖರ್ಚು ಮಾಡಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇದರ ಬಗ್ಗೆ ಯಾವುದಾದರು ಅಧ್ಯಯನ ಆಗಿದೆಯೆ? ಎಂದು ಅವರು ಹೇಳಿದರು. “ಜೀತಮುಕ್ತಿ ಕಾಯ್ದೆಯ ಪ್ರಕಾರ ದಲಿತರಿಗೆ ಭೂಮಿ ಕೊಡಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಇವತ್ತಿನವರೆಗೂ ಯಾವುದೆ ಭೂಮಿ ದಲಿತರಿಗೆ ನೀಡಿಲ್ಲ. ಭೂಮಿ ಕೇಳಿದ ದಲಿತರ ಮೇಲೆ ಸರ್ಕಾರ ಕೇಸು ಹಾಕುತ್ತಿದೆ. ದೇವದಾಸಿ ಮಹಿಳೆಯರಿಗೆ ಸರ್ಕಾರ ಬಜೆಟ್‌ನಲ್ಲಿ ಏನಾದರೂ ಘೋಷಣೆ ಮಾಡುತ್ತದೆ ಎಂದು ನಿರೀಕ್ಷಿಸಿದ್ದೆವು, ಆದರೆ ಸರ್ಕಾರ ಇದರ ಬಗ್ಗೆ ಏನೂ ಘೋಷಣೆ ಮಾಡಿಲ್ಲ” ಎಂದು ಹೇಳಿದರು.

“ಜಾತಿ ವ್ಯವಸ್ಥೆಯನ್ನು ಉಳಿಸುವ ಶಕ್ತಿಗಳು ಬಲವಾಗಿದ್ದು, ದಲಿತರಿಗೆ ನ್ಯಾಯ ಸಿಗಬೇಕು ಎಂದರೆ ದಲಿತರೊಂದಿಗೆ ದಲಿತೇತರರು ಕೂಡಾ ಸೇರಿ ಹೋರಾಟ ಮಾಡಬೇಕಿದೆ. ಈ ಸರ್ಕಾರ ಯಾವ ದಲಿತರಿಗೂ ಭೂಮಿ ಮತ್ತು ಸಮಾನತೆಯನ್ನು ನೀಡುವುದಿಲ್ಲ. ಅದಕ್ಕಾಗಿ ಜನಚಳವಳಿಗಳು ಪರ್ಯಾಯ ರಾಜಕೀಯ ಚಳವಳಿ ಕಟ್ಟಬೇಕಿದೆ” ಎಂದು ಗೋಪಾಲಕೃಷ್ಣ ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...