Homeಕರ್ನಾಟಕSCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ...

SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

- Advertisement -
- Advertisement -

SCSP/TSP ಯೋಜನೆಯಲ್ಲಿ ಸುಮಾರು 3.37 ಲಕ್ಷ ಕೋಟಿಗೂ ಹೆಚ್ಚಿನ ದಲಿತರಿಗೆ ನೀಡಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇಷ್ಟೊಂದು ಬೃಹತ್ ಮೊತ್ತ ಎಲ್ಲಿ ಹೋಗಿದೆ. ಈ ಹಣವನ್ನು ಬಳಸಿ ದಲಿತರು ಉದ್ಧಾರವಾಗಿರುವಂತದ್ದು ಎಲ್ಲೂ ಕಾಣುತ್ತಿಲ್ಲ. ಈ ಹಣದ ಖರ್ಚಿನಲ್ಲಿ ಯಾವ ಬದಲಾವಣೆ ಆಗಿದೆ ಎಂದು ಚರ್ಚೆ ಮಾಡಲು ಒಂದು ಬಾರಿ ವಿಶೇಷ ಅಧಿವೇಶನ ಮಾಡಿ ಎಂದು ಅದಕ್ಕಾಗಿಯೆ ನಾವು ಕೇಳುತ್ತಿದ್ದೇವೆ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಬುಧವಾರ ಹೇಳಿದರು. SCSP/TPS ನಿಂದ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಾಮಾಜಿಕ ನ್ಯಾಯ ಮತ್ತು ಬಜೆಟ್ ಧೋರಣೆಗಳು’ ಎಂಬ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. “SCSP/TSP ಯೋಜನೆಯನ್ನು ಬಡತನ ನಿರ್ಮೂಲನೆಗಾಗಿ ಮಾಡಿರುವ ಯೋಜನೆ ಅಲ್ಲ, ಬದಲಾಗಿ ಬಡತನದ ಅಂತರ ಕಡಿಮೆ ಮಾಡಲು ಜಾರಿ ಮಾಡಲಾಗಿದೆ. ಈ ಹಣವನ್ನು ಗ್ಯಾರೆಂಟಿ ಯೋಜನೆ ಸೇರಿದಂತೆ ಇತರ ಯೋಜನೆಗಳಿಗೆ ಬಳಸಬಾರದು. ಹಾಗಾಗಿ ಹಣದ ಮೌಲ್ಯಮಾಪನ ಮಾಡಬೇಕಾಗಿದೆ” ಎಂದು ಅವರು ಆಗ್ರಹಿಸಿದರು. SCSP/TPS ನಿಂದ

“6 ತಿಂಗಳ ಒಳಗೆ ಬ್ಯಾಕ್‌ಲ್ಯಾಗ್ ಹುದ್ದೆಗಳನ್ನು ತುಂಬಿಸಬೇಕು ಎಂದು ಬಿಜೆಪಿ ಸರ್ಕಾರ ಇದ್ದಾಗಲೆ ಆದೇಶ ಬಂದಿತ್ತು. ಆದರೂ ಕಾಂಗ್ರೆಸ್ ಸರ್ಕಾರ ಬಂದು 2 ವರ್ಷಗಳಾದರೂ ಆ ಹುದ್ದೆಗಳನ್ನು ತುಂಬಿಲ್ಲ. ಬಿಎಡ್‌ ಓದುವ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮತ್ತು ಸ್ಕಾಲರ್‌ಶಿಪ್‌ಗಳು ಇಲ್ಲ. ಇದು ಯಾವ ಸಾಮಾಜಿಕ ನ್ಯಾಯ? ಇದಕ್ಕೆ ಸಿದ್ದರಾಮಯ್ಯ ಅವರು ಉತ್ತರಿಸಬೇಕು” ಎಂದು ಅವರು ಹೇಳಿದರು.

“ಸಿದ್ದರಾಮಯ್ಯ ಅವರು 2013ರಲ್ಲಿ ಸಿಎಂ ಆಗಿದ್ದ ಸಮಯದಲ್ಲಿ ಸಂವೇದನಶೀಲರಾಗಿದ್ದರು. ಆದರೆ ಈ ಬಾರಿ ಅವರಿಗೆ ಏನಾಗಿದೆ ಎಂದು ತಿಳಿಯುತ್ತಿಲ್ಲ. ಅವರಿಗೆ ಈಗ ಸಾಮಾಜಿಕ ನ್ಯಾಯ ಈಡೇರಿಸಬೇಕು ಎಂಬ ಮನಸ್ಥಿತಿ ಇಲ್ಲ. ಘೋಷಣೆ ಮಾಡುವುದು ಒಂದು ಮೊತ್ತ, ಹಂಚಿಕೆ ಮಾಡುವುದು ಒಂದು ಮೊತ್ತ, ಆದರೆ ಬಿಡುಗಡೆ ಮಾಡುವುದು ಒಂದು ಮೊತ್ತವಾಗಿದೆ” ಎಂದು ಅವರು ಹೇಳಿದರು. ಇವೆಲ್ಲಕ್ಕೂ ಪರಿಹಾರ ಎಂದರೆ ಎಲ್ಲರೂ ಒಗ್ಗಟ್ಟಾಗಿ ಸಾಂವಿಧಾನಿಕ ಮೌಲ್ಯಗಳನ್ನು ಇಟ್ಟುಕೊಂಡೆ ಮಿಲಿಟೆಂಟ್‌ ಯೋಜನೆಗಳನ್ನು ರೂಪಿಸಬೇಕಿದೆ ಎಂದು ಹೇಳಿದರು.

ದಲಿತರಿಗೆ ಭೂಮಿ ನೀಡಲ್ಲ ಎಂದು ಸರ್ಕಾರ ನೇರವಾಗಿ ಹೇಳುತ್ತಿದೆ: ದಲಿತ ಹಕ್ಕುಗಳ ಹೋರಾಟಗಾರ ಗೋಪಾಲಕೃಷ್ಣ ಹರಳಹಳ್ಳಿ

ಇದಕ್ಕೂ ಮೊದಲು ಬಗರ್‌ಹುಕುಂ ಭೂಮಿ ವಿಚಾರದ ಬಗ್ಗೆ ಮಾತನಾಡಿದ ದಲಿತ ಹಕ್ಕುಗಳ ಸಮಿತಿ ರಾಜ್ಯಾಧ್ಯಕ್ಷರಾದ ಗೋಪಾಲಕೃಷ್ಣ ಹರಳಹಳ್ಳಿ, “ನಮ್ಮ ದೇಶದಲ್ಲಿ ಸ್ವತಂತ್ರ ಬಂದ ನಂತರ ಸರ್ಕಾರಗಳು ಭೂ ಸುಧಾರಣೆ ಜಾರಿಗೆ ತಂದವು. ಆದರೆ ಭೂಮಿ ಜನರಿಗೆ ಸಿಕ್ಕಿಲ್ಲ. ಬಗರ್‌ಹುಕುಂ ಭೂಮಿಯ ಸಮಸ್ಯೆಯು ದಲಿತರು ಮತ್ತು ದಲಿತೇತರ ಬಡವರ ಬಗ್ಗೆ ಈಗಲೂ ಕಾಡುತ್ತಿದೆ. ಈ ವಿಚಾರದ ಬಗ್ಗೆ ಬಜೆಟ್‌ನಲ್ಲಿ ಸಿದ್ದರಾಮಯ್ಯ ಅವರು ಯಾವುದೆ ಘೋಷಣೆ ಮಾಡಿಲ್ಲ. ಈ ಸರ್ಕಾರ ದಲಿತರಿಗೆ ಭೂಮಿ ನೀಡಲ್ಲ ಎಂಬುವುದು ಇದರ ಅರ್ಥವಾಗಿದ್ದು, ಅಂತಹ ಇಚ್ಛಾಶಕ್ತಿ ತಮಗೆ ಇಲ್ಲ ಎಂದೆ ಸರ್ಕಾರ ಹೇಳುತ್ತಿದೆ” ಎಂದು ಅವರು ಹೇಳಿದರು.

ದಲಿತ ಹಕ್ಕುಗಳ ಸಮಿತಿ ರಾಜ್ಯಾಧ್ಯಕ್ಷರಾದ ಗೋಪಾಲಕೃಷ್ಣ ಹರಳಹಳ್ಳಿ

ದಲಿತರಿಗಾಗಿ 2 ಲಕ್ಷ ಕೋಟಿ ರೂ.ಗಳು ಖರ್ಚು ಮಾಡಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇದರ ಬಗ್ಗೆ ಯಾವುದಾದರು ಅಧ್ಯಯನ ಆಗಿದೆಯೆ? ಎಂದು ಅವರು ಹೇಳಿದರು. “ಜೀತಮುಕ್ತಿ ಕಾಯ್ದೆಯ ಪ್ರಕಾರ ದಲಿತರಿಗೆ ಭೂಮಿ ಕೊಡಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಇವತ್ತಿನವರೆಗೂ ಯಾವುದೆ ಭೂಮಿ ದಲಿತರಿಗೆ ನೀಡಿಲ್ಲ. ಭೂಮಿ ಕೇಳಿದ ದಲಿತರ ಮೇಲೆ ಸರ್ಕಾರ ಕೇಸು ಹಾಕುತ್ತಿದೆ. ದೇವದಾಸಿ ಮಹಿಳೆಯರಿಗೆ ಸರ್ಕಾರ ಬಜೆಟ್‌ನಲ್ಲಿ ಏನಾದರೂ ಘೋಷಣೆ ಮಾಡುತ್ತದೆ ಎಂದು ನಿರೀಕ್ಷಿಸಿದ್ದೆವು, ಆದರೆ ಸರ್ಕಾರ ಇದರ ಬಗ್ಗೆ ಏನೂ ಘೋಷಣೆ ಮಾಡಿಲ್ಲ” ಎಂದು ಹೇಳಿದರು.

“ಜಾತಿ ವ್ಯವಸ್ಥೆಯನ್ನು ಉಳಿಸುವ ಶಕ್ತಿಗಳು ಬಲವಾಗಿದ್ದು, ದಲಿತರಿಗೆ ನ್ಯಾಯ ಸಿಗಬೇಕು ಎಂದರೆ ದಲಿತರೊಂದಿಗೆ ದಲಿತೇತರರು ಕೂಡಾ ಸೇರಿ ಹೋರಾಟ ಮಾಡಬೇಕಿದೆ. ಈ ಸರ್ಕಾರ ಯಾವ ದಲಿತರಿಗೂ ಭೂಮಿ ಮತ್ತು ಸಮಾನತೆಯನ್ನು ನೀಡುವುದಿಲ್ಲ. ಅದಕ್ಕಾಗಿ ಜನಚಳವಳಿಗಳು ಪರ್ಯಾಯ ರಾಜಕೀಯ ಚಳವಳಿ ಕಟ್ಟಬೇಕಿದೆ” ಎಂದು ಗೋಪಾಲಕೃಷ್ಣ ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...