Homeಕರ್ನಾಟಕSCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ...

SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

- Advertisement -
- Advertisement -

SCSP/TSP ಯೋಜನೆಯಲ್ಲಿ ಸುಮಾರು 3.37 ಲಕ್ಷ ಕೋಟಿಗೂ ಹೆಚ್ಚಿನ ದಲಿತರಿಗೆ ನೀಡಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇಷ್ಟೊಂದು ಬೃಹತ್ ಮೊತ್ತ ಎಲ್ಲಿ ಹೋಗಿದೆ. ಈ ಹಣವನ್ನು ಬಳಸಿ ದಲಿತರು ಉದ್ಧಾರವಾಗಿರುವಂತದ್ದು ಎಲ್ಲೂ ಕಾಣುತ್ತಿಲ್ಲ. ಈ ಹಣದ ಖರ್ಚಿನಲ್ಲಿ ಯಾವ ಬದಲಾವಣೆ ಆಗಿದೆ ಎಂದು ಚರ್ಚೆ ಮಾಡಲು ಒಂದು ಬಾರಿ ವಿಶೇಷ ಅಧಿವೇಶನ ಮಾಡಿ ಎಂದು ಅದಕ್ಕಾಗಿಯೆ ನಾವು ಕೇಳುತ್ತಿದ್ದೇವೆ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಬುಧವಾರ ಹೇಳಿದರು. SCSP/TPS ನಿಂದ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಾಮಾಜಿಕ ನ್ಯಾಯ ಮತ್ತು ಬಜೆಟ್ ಧೋರಣೆಗಳು’ ಎಂಬ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. “SCSP/TSP ಯೋಜನೆಯನ್ನು ಬಡತನ ನಿರ್ಮೂಲನೆಗಾಗಿ ಮಾಡಿರುವ ಯೋಜನೆ ಅಲ್ಲ, ಬದಲಾಗಿ ಬಡತನದ ಅಂತರ ಕಡಿಮೆ ಮಾಡಲು ಜಾರಿ ಮಾಡಲಾಗಿದೆ. ಈ ಹಣವನ್ನು ಗ್ಯಾರೆಂಟಿ ಯೋಜನೆ ಸೇರಿದಂತೆ ಇತರ ಯೋಜನೆಗಳಿಗೆ ಬಳಸಬಾರದು. ಹಾಗಾಗಿ ಹಣದ ಮೌಲ್ಯಮಾಪನ ಮಾಡಬೇಕಾಗಿದೆ” ಎಂದು ಅವರು ಆಗ್ರಹಿಸಿದರು. SCSP/TPS ನಿಂದ

“6 ತಿಂಗಳ ಒಳಗೆ ಬ್ಯಾಕ್‌ಲ್ಯಾಗ್ ಹುದ್ದೆಗಳನ್ನು ತುಂಬಿಸಬೇಕು ಎಂದು ಬಿಜೆಪಿ ಸರ್ಕಾರ ಇದ್ದಾಗಲೆ ಆದೇಶ ಬಂದಿತ್ತು. ಆದರೂ ಕಾಂಗ್ರೆಸ್ ಸರ್ಕಾರ ಬಂದು 2 ವರ್ಷಗಳಾದರೂ ಆ ಹುದ್ದೆಗಳನ್ನು ತುಂಬಿಲ್ಲ. ಬಿಎಡ್‌ ಓದುವ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮತ್ತು ಸ್ಕಾಲರ್‌ಶಿಪ್‌ಗಳು ಇಲ್ಲ. ಇದು ಯಾವ ಸಾಮಾಜಿಕ ನ್ಯಾಯ? ಇದಕ್ಕೆ ಸಿದ್ದರಾಮಯ್ಯ ಅವರು ಉತ್ತರಿಸಬೇಕು” ಎಂದು ಅವರು ಹೇಳಿದರು.

“ಸಿದ್ದರಾಮಯ್ಯ ಅವರು 2013ರಲ್ಲಿ ಸಿಎಂ ಆಗಿದ್ದ ಸಮಯದಲ್ಲಿ ಸಂವೇದನಶೀಲರಾಗಿದ್ದರು. ಆದರೆ ಈ ಬಾರಿ ಅವರಿಗೆ ಏನಾಗಿದೆ ಎಂದು ತಿಳಿಯುತ್ತಿಲ್ಲ. ಅವರಿಗೆ ಈಗ ಸಾಮಾಜಿಕ ನ್ಯಾಯ ಈಡೇರಿಸಬೇಕು ಎಂಬ ಮನಸ್ಥಿತಿ ಇಲ್ಲ. ಘೋಷಣೆ ಮಾಡುವುದು ಒಂದು ಮೊತ್ತ, ಹಂಚಿಕೆ ಮಾಡುವುದು ಒಂದು ಮೊತ್ತ, ಆದರೆ ಬಿಡುಗಡೆ ಮಾಡುವುದು ಒಂದು ಮೊತ್ತವಾಗಿದೆ” ಎಂದು ಅವರು ಹೇಳಿದರು. ಇವೆಲ್ಲಕ್ಕೂ ಪರಿಹಾರ ಎಂದರೆ ಎಲ್ಲರೂ ಒಗ್ಗಟ್ಟಾಗಿ ಸಾಂವಿಧಾನಿಕ ಮೌಲ್ಯಗಳನ್ನು ಇಟ್ಟುಕೊಂಡೆ ಮಿಲಿಟೆಂಟ್‌ ಯೋಜನೆಗಳನ್ನು ರೂಪಿಸಬೇಕಿದೆ ಎಂದು ಹೇಳಿದರು.

ದಲಿತರಿಗೆ ಭೂಮಿ ನೀಡಲ್ಲ ಎಂದು ಸರ್ಕಾರ ನೇರವಾಗಿ ಹೇಳುತ್ತಿದೆ: ದಲಿತ ಹಕ್ಕುಗಳ ಹೋರಾಟಗಾರ ಗೋಪಾಲಕೃಷ್ಣ ಹರಳಹಳ್ಳಿ

ಇದಕ್ಕೂ ಮೊದಲು ಬಗರ್‌ಹುಕುಂ ಭೂಮಿ ವಿಚಾರದ ಬಗ್ಗೆ ಮಾತನಾಡಿದ ದಲಿತ ಹಕ್ಕುಗಳ ಸಮಿತಿ ರಾಜ್ಯಾಧ್ಯಕ್ಷರಾದ ಗೋಪಾಲಕೃಷ್ಣ ಹರಳಹಳ್ಳಿ, “ನಮ್ಮ ದೇಶದಲ್ಲಿ ಸ್ವತಂತ್ರ ಬಂದ ನಂತರ ಸರ್ಕಾರಗಳು ಭೂ ಸುಧಾರಣೆ ಜಾರಿಗೆ ತಂದವು. ಆದರೆ ಭೂಮಿ ಜನರಿಗೆ ಸಿಕ್ಕಿಲ್ಲ. ಬಗರ್‌ಹುಕುಂ ಭೂಮಿಯ ಸಮಸ್ಯೆಯು ದಲಿತರು ಮತ್ತು ದಲಿತೇತರ ಬಡವರ ಬಗ್ಗೆ ಈಗಲೂ ಕಾಡುತ್ತಿದೆ. ಈ ವಿಚಾರದ ಬಗ್ಗೆ ಬಜೆಟ್‌ನಲ್ಲಿ ಸಿದ್ದರಾಮಯ್ಯ ಅವರು ಯಾವುದೆ ಘೋಷಣೆ ಮಾಡಿಲ್ಲ. ಈ ಸರ್ಕಾರ ದಲಿತರಿಗೆ ಭೂಮಿ ನೀಡಲ್ಲ ಎಂಬುವುದು ಇದರ ಅರ್ಥವಾಗಿದ್ದು, ಅಂತಹ ಇಚ್ಛಾಶಕ್ತಿ ತಮಗೆ ಇಲ್ಲ ಎಂದೆ ಸರ್ಕಾರ ಹೇಳುತ್ತಿದೆ” ಎಂದು ಅವರು ಹೇಳಿದರು.

ದಲಿತ ಹಕ್ಕುಗಳ ಸಮಿತಿ ರಾಜ್ಯಾಧ್ಯಕ್ಷರಾದ ಗೋಪಾಲಕೃಷ್ಣ ಹರಳಹಳ್ಳಿ

ದಲಿತರಿಗಾಗಿ 2 ಲಕ್ಷ ಕೋಟಿ ರೂ.ಗಳು ಖರ್ಚು ಮಾಡಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇದರ ಬಗ್ಗೆ ಯಾವುದಾದರು ಅಧ್ಯಯನ ಆಗಿದೆಯೆ? ಎಂದು ಅವರು ಹೇಳಿದರು. “ಜೀತಮುಕ್ತಿ ಕಾಯ್ದೆಯ ಪ್ರಕಾರ ದಲಿತರಿಗೆ ಭೂಮಿ ಕೊಡಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಇವತ್ತಿನವರೆಗೂ ಯಾವುದೆ ಭೂಮಿ ದಲಿತರಿಗೆ ನೀಡಿಲ್ಲ. ಭೂಮಿ ಕೇಳಿದ ದಲಿತರ ಮೇಲೆ ಸರ್ಕಾರ ಕೇಸು ಹಾಕುತ್ತಿದೆ. ದೇವದಾಸಿ ಮಹಿಳೆಯರಿಗೆ ಸರ್ಕಾರ ಬಜೆಟ್‌ನಲ್ಲಿ ಏನಾದರೂ ಘೋಷಣೆ ಮಾಡುತ್ತದೆ ಎಂದು ನಿರೀಕ್ಷಿಸಿದ್ದೆವು, ಆದರೆ ಸರ್ಕಾರ ಇದರ ಬಗ್ಗೆ ಏನೂ ಘೋಷಣೆ ಮಾಡಿಲ್ಲ” ಎಂದು ಹೇಳಿದರು.

“ಜಾತಿ ವ್ಯವಸ್ಥೆಯನ್ನು ಉಳಿಸುವ ಶಕ್ತಿಗಳು ಬಲವಾಗಿದ್ದು, ದಲಿತರಿಗೆ ನ್ಯಾಯ ಸಿಗಬೇಕು ಎಂದರೆ ದಲಿತರೊಂದಿಗೆ ದಲಿತೇತರರು ಕೂಡಾ ಸೇರಿ ಹೋರಾಟ ಮಾಡಬೇಕಿದೆ. ಈ ಸರ್ಕಾರ ಯಾವ ದಲಿತರಿಗೂ ಭೂಮಿ ಮತ್ತು ಸಮಾನತೆಯನ್ನು ನೀಡುವುದಿಲ್ಲ. ಅದಕ್ಕಾಗಿ ಜನಚಳವಳಿಗಳು ಪರ್ಯಾಯ ರಾಜಕೀಯ ಚಳವಳಿ ಕಟ್ಟಬೇಕಿದೆ” ಎಂದು ಗೋಪಾಲಕೃಷ್ಣ ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...