Homeಕರ್ನಾಟಕSCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ...

SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

- Advertisement -
- Advertisement -

SCSP/TSP ಯೋಜನೆಯಲ್ಲಿ ಸುಮಾರು 3.37 ಲಕ್ಷ ಕೋಟಿಗೂ ಹೆಚ್ಚಿನ ದಲಿತರಿಗೆ ನೀಡಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇಷ್ಟೊಂದು ಬೃಹತ್ ಮೊತ್ತ ಎಲ್ಲಿ ಹೋಗಿದೆ. ಈ ಹಣವನ್ನು ಬಳಸಿ ದಲಿತರು ಉದ್ಧಾರವಾಗಿರುವಂತದ್ದು ಎಲ್ಲೂ ಕಾಣುತ್ತಿಲ್ಲ. ಈ ಹಣದ ಖರ್ಚಿನಲ್ಲಿ ಯಾವ ಬದಲಾವಣೆ ಆಗಿದೆ ಎಂದು ಚರ್ಚೆ ಮಾಡಲು ಒಂದು ಬಾರಿ ವಿಶೇಷ ಅಧಿವೇಶನ ಮಾಡಿ ಎಂದು ಅದಕ್ಕಾಗಿಯೆ ನಾವು ಕೇಳುತ್ತಿದ್ದೇವೆ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಬುಧವಾರ ಹೇಳಿದರು. SCSP/TPS ನಿಂದ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಾಮಾಜಿಕ ನ್ಯಾಯ ಮತ್ತು ಬಜೆಟ್ ಧೋರಣೆಗಳು’ ಎಂಬ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. “SCSP/TSP ಯೋಜನೆಯನ್ನು ಬಡತನ ನಿರ್ಮೂಲನೆಗಾಗಿ ಮಾಡಿರುವ ಯೋಜನೆ ಅಲ್ಲ, ಬದಲಾಗಿ ಬಡತನದ ಅಂತರ ಕಡಿಮೆ ಮಾಡಲು ಜಾರಿ ಮಾಡಲಾಗಿದೆ. ಈ ಹಣವನ್ನು ಗ್ಯಾರೆಂಟಿ ಯೋಜನೆ ಸೇರಿದಂತೆ ಇತರ ಯೋಜನೆಗಳಿಗೆ ಬಳಸಬಾರದು. ಹಾಗಾಗಿ ಹಣದ ಮೌಲ್ಯಮಾಪನ ಮಾಡಬೇಕಾಗಿದೆ” ಎಂದು ಅವರು ಆಗ್ರಹಿಸಿದರು. SCSP/TPS ನಿಂದ

“6 ತಿಂಗಳ ಒಳಗೆ ಬ್ಯಾಕ್‌ಲ್ಯಾಗ್ ಹುದ್ದೆಗಳನ್ನು ತುಂಬಿಸಬೇಕು ಎಂದು ಬಿಜೆಪಿ ಸರ್ಕಾರ ಇದ್ದಾಗಲೆ ಆದೇಶ ಬಂದಿತ್ತು. ಆದರೂ ಕಾಂಗ್ರೆಸ್ ಸರ್ಕಾರ ಬಂದು 2 ವರ್ಷಗಳಾದರೂ ಆ ಹುದ್ದೆಗಳನ್ನು ತುಂಬಿಲ್ಲ. ಬಿಎಡ್‌ ಓದುವ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮತ್ತು ಸ್ಕಾಲರ್‌ಶಿಪ್‌ಗಳು ಇಲ್ಲ. ಇದು ಯಾವ ಸಾಮಾಜಿಕ ನ್ಯಾಯ? ಇದಕ್ಕೆ ಸಿದ್ದರಾಮಯ್ಯ ಅವರು ಉತ್ತರಿಸಬೇಕು” ಎಂದು ಅವರು ಹೇಳಿದರು.

“ಸಿದ್ದರಾಮಯ್ಯ ಅವರು 2013ರಲ್ಲಿ ಸಿಎಂ ಆಗಿದ್ದ ಸಮಯದಲ್ಲಿ ಸಂವೇದನಶೀಲರಾಗಿದ್ದರು. ಆದರೆ ಈ ಬಾರಿ ಅವರಿಗೆ ಏನಾಗಿದೆ ಎಂದು ತಿಳಿಯುತ್ತಿಲ್ಲ. ಅವರಿಗೆ ಈಗ ಸಾಮಾಜಿಕ ನ್ಯಾಯ ಈಡೇರಿಸಬೇಕು ಎಂಬ ಮನಸ್ಥಿತಿ ಇಲ್ಲ. ಘೋಷಣೆ ಮಾಡುವುದು ಒಂದು ಮೊತ್ತ, ಹಂಚಿಕೆ ಮಾಡುವುದು ಒಂದು ಮೊತ್ತ, ಆದರೆ ಬಿಡುಗಡೆ ಮಾಡುವುದು ಒಂದು ಮೊತ್ತವಾಗಿದೆ” ಎಂದು ಅವರು ಹೇಳಿದರು. ಇವೆಲ್ಲಕ್ಕೂ ಪರಿಹಾರ ಎಂದರೆ ಎಲ್ಲರೂ ಒಗ್ಗಟ್ಟಾಗಿ ಸಾಂವಿಧಾನಿಕ ಮೌಲ್ಯಗಳನ್ನು ಇಟ್ಟುಕೊಂಡೆ ಮಿಲಿಟೆಂಟ್‌ ಯೋಜನೆಗಳನ್ನು ರೂಪಿಸಬೇಕಿದೆ ಎಂದು ಹೇಳಿದರು.

ದಲಿತರಿಗೆ ಭೂಮಿ ನೀಡಲ್ಲ ಎಂದು ಸರ್ಕಾರ ನೇರವಾಗಿ ಹೇಳುತ್ತಿದೆ: ದಲಿತ ಹಕ್ಕುಗಳ ಹೋರಾಟಗಾರ ಗೋಪಾಲಕೃಷ್ಣ ಹರಳಹಳ್ಳಿ

ಇದಕ್ಕೂ ಮೊದಲು ಬಗರ್‌ಹುಕುಂ ಭೂಮಿ ವಿಚಾರದ ಬಗ್ಗೆ ಮಾತನಾಡಿದ ದಲಿತ ಹಕ್ಕುಗಳ ಸಮಿತಿ ರಾಜ್ಯಾಧ್ಯಕ್ಷರಾದ ಗೋಪಾಲಕೃಷ್ಣ ಹರಳಹಳ್ಳಿ, “ನಮ್ಮ ದೇಶದಲ್ಲಿ ಸ್ವತಂತ್ರ ಬಂದ ನಂತರ ಸರ್ಕಾರಗಳು ಭೂ ಸುಧಾರಣೆ ಜಾರಿಗೆ ತಂದವು. ಆದರೆ ಭೂಮಿ ಜನರಿಗೆ ಸಿಕ್ಕಿಲ್ಲ. ಬಗರ್‌ಹುಕುಂ ಭೂಮಿಯ ಸಮಸ್ಯೆಯು ದಲಿತರು ಮತ್ತು ದಲಿತೇತರ ಬಡವರ ಬಗ್ಗೆ ಈಗಲೂ ಕಾಡುತ್ತಿದೆ. ಈ ವಿಚಾರದ ಬಗ್ಗೆ ಬಜೆಟ್‌ನಲ್ಲಿ ಸಿದ್ದರಾಮಯ್ಯ ಅವರು ಯಾವುದೆ ಘೋಷಣೆ ಮಾಡಿಲ್ಲ. ಈ ಸರ್ಕಾರ ದಲಿತರಿಗೆ ಭೂಮಿ ನೀಡಲ್ಲ ಎಂಬುವುದು ಇದರ ಅರ್ಥವಾಗಿದ್ದು, ಅಂತಹ ಇಚ್ಛಾಶಕ್ತಿ ತಮಗೆ ಇಲ್ಲ ಎಂದೆ ಸರ್ಕಾರ ಹೇಳುತ್ತಿದೆ” ಎಂದು ಅವರು ಹೇಳಿದರು.

ದಲಿತ ಹಕ್ಕುಗಳ ಸಮಿತಿ ರಾಜ್ಯಾಧ್ಯಕ್ಷರಾದ ಗೋಪಾಲಕೃಷ್ಣ ಹರಳಹಳ್ಳಿ

ದಲಿತರಿಗಾಗಿ 2 ಲಕ್ಷ ಕೋಟಿ ರೂ.ಗಳು ಖರ್ಚು ಮಾಡಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇದರ ಬಗ್ಗೆ ಯಾವುದಾದರು ಅಧ್ಯಯನ ಆಗಿದೆಯೆ? ಎಂದು ಅವರು ಹೇಳಿದರು. “ಜೀತಮುಕ್ತಿ ಕಾಯ್ದೆಯ ಪ್ರಕಾರ ದಲಿತರಿಗೆ ಭೂಮಿ ಕೊಡಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಇವತ್ತಿನವರೆಗೂ ಯಾವುದೆ ಭೂಮಿ ದಲಿತರಿಗೆ ನೀಡಿಲ್ಲ. ಭೂಮಿ ಕೇಳಿದ ದಲಿತರ ಮೇಲೆ ಸರ್ಕಾರ ಕೇಸು ಹಾಕುತ್ತಿದೆ. ದೇವದಾಸಿ ಮಹಿಳೆಯರಿಗೆ ಸರ್ಕಾರ ಬಜೆಟ್‌ನಲ್ಲಿ ಏನಾದರೂ ಘೋಷಣೆ ಮಾಡುತ್ತದೆ ಎಂದು ನಿರೀಕ್ಷಿಸಿದ್ದೆವು, ಆದರೆ ಸರ್ಕಾರ ಇದರ ಬಗ್ಗೆ ಏನೂ ಘೋಷಣೆ ಮಾಡಿಲ್ಲ” ಎಂದು ಹೇಳಿದರು.

“ಜಾತಿ ವ್ಯವಸ್ಥೆಯನ್ನು ಉಳಿಸುವ ಶಕ್ತಿಗಳು ಬಲವಾಗಿದ್ದು, ದಲಿತರಿಗೆ ನ್ಯಾಯ ಸಿಗಬೇಕು ಎಂದರೆ ದಲಿತರೊಂದಿಗೆ ದಲಿತೇತರರು ಕೂಡಾ ಸೇರಿ ಹೋರಾಟ ಮಾಡಬೇಕಿದೆ. ಈ ಸರ್ಕಾರ ಯಾವ ದಲಿತರಿಗೂ ಭೂಮಿ ಮತ್ತು ಸಮಾನತೆಯನ್ನು ನೀಡುವುದಿಲ್ಲ. ಅದಕ್ಕಾಗಿ ಜನಚಳವಳಿಗಳು ಪರ್ಯಾಯ ರಾಜಕೀಯ ಚಳವಳಿ ಕಟ್ಟಬೇಕಿದೆ” ಎಂದು ಗೋಪಾಲಕೃಷ್ಣ ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...