Homeಕರ್ನಾಟಕSCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ...

SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

- Advertisement -
- Advertisement -

SCSP/TSP ಯೋಜನೆಯಲ್ಲಿ ಸುಮಾರು 3.37 ಲಕ್ಷ ಕೋಟಿಗೂ ಹೆಚ್ಚಿನ ದಲಿತರಿಗೆ ನೀಡಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇಷ್ಟೊಂದು ಬೃಹತ್ ಮೊತ್ತ ಎಲ್ಲಿ ಹೋಗಿದೆ. ಈ ಹಣವನ್ನು ಬಳಸಿ ದಲಿತರು ಉದ್ಧಾರವಾಗಿರುವಂತದ್ದು ಎಲ್ಲೂ ಕಾಣುತ್ತಿಲ್ಲ. ಈ ಹಣದ ಖರ್ಚಿನಲ್ಲಿ ಯಾವ ಬದಲಾವಣೆ ಆಗಿದೆ ಎಂದು ಚರ್ಚೆ ಮಾಡಲು ಒಂದು ಬಾರಿ ವಿಶೇಷ ಅಧಿವೇಶನ ಮಾಡಿ ಎಂದು ಅದಕ್ಕಾಗಿಯೆ ನಾವು ಕೇಳುತ್ತಿದ್ದೇವೆ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಬುಧವಾರ ಹೇಳಿದರು. SCSP/TPS ನಿಂದ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಾಮಾಜಿಕ ನ್ಯಾಯ ಮತ್ತು ಬಜೆಟ್ ಧೋರಣೆಗಳು’ ಎಂಬ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. “SCSP/TSP ಯೋಜನೆಯನ್ನು ಬಡತನ ನಿರ್ಮೂಲನೆಗಾಗಿ ಮಾಡಿರುವ ಯೋಜನೆ ಅಲ್ಲ, ಬದಲಾಗಿ ಬಡತನದ ಅಂತರ ಕಡಿಮೆ ಮಾಡಲು ಜಾರಿ ಮಾಡಲಾಗಿದೆ. ಈ ಹಣವನ್ನು ಗ್ಯಾರೆಂಟಿ ಯೋಜನೆ ಸೇರಿದಂತೆ ಇತರ ಯೋಜನೆಗಳಿಗೆ ಬಳಸಬಾರದು. ಹಾಗಾಗಿ ಹಣದ ಮೌಲ್ಯಮಾಪನ ಮಾಡಬೇಕಾಗಿದೆ” ಎಂದು ಅವರು ಆಗ್ರಹಿಸಿದರು. SCSP/TPS ನಿಂದ

“6 ತಿಂಗಳ ಒಳಗೆ ಬ್ಯಾಕ್‌ಲ್ಯಾಗ್ ಹುದ್ದೆಗಳನ್ನು ತುಂಬಿಸಬೇಕು ಎಂದು ಬಿಜೆಪಿ ಸರ್ಕಾರ ಇದ್ದಾಗಲೆ ಆದೇಶ ಬಂದಿತ್ತು. ಆದರೂ ಕಾಂಗ್ರೆಸ್ ಸರ್ಕಾರ ಬಂದು 2 ವರ್ಷಗಳಾದರೂ ಆ ಹುದ್ದೆಗಳನ್ನು ತುಂಬಿಲ್ಲ. ಬಿಎಡ್‌ ಓದುವ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮತ್ತು ಸ್ಕಾಲರ್‌ಶಿಪ್‌ಗಳು ಇಲ್ಲ. ಇದು ಯಾವ ಸಾಮಾಜಿಕ ನ್ಯಾಯ? ಇದಕ್ಕೆ ಸಿದ್ದರಾಮಯ್ಯ ಅವರು ಉತ್ತರಿಸಬೇಕು” ಎಂದು ಅವರು ಹೇಳಿದರು.

“ಸಿದ್ದರಾಮಯ್ಯ ಅವರು 2013ರಲ್ಲಿ ಸಿಎಂ ಆಗಿದ್ದ ಸಮಯದಲ್ಲಿ ಸಂವೇದನಶೀಲರಾಗಿದ್ದರು. ಆದರೆ ಈ ಬಾರಿ ಅವರಿಗೆ ಏನಾಗಿದೆ ಎಂದು ತಿಳಿಯುತ್ತಿಲ್ಲ. ಅವರಿಗೆ ಈಗ ಸಾಮಾಜಿಕ ನ್ಯಾಯ ಈಡೇರಿಸಬೇಕು ಎಂಬ ಮನಸ್ಥಿತಿ ಇಲ್ಲ. ಘೋಷಣೆ ಮಾಡುವುದು ಒಂದು ಮೊತ್ತ, ಹಂಚಿಕೆ ಮಾಡುವುದು ಒಂದು ಮೊತ್ತ, ಆದರೆ ಬಿಡುಗಡೆ ಮಾಡುವುದು ಒಂದು ಮೊತ್ತವಾಗಿದೆ” ಎಂದು ಅವರು ಹೇಳಿದರು. ಇವೆಲ್ಲಕ್ಕೂ ಪರಿಹಾರ ಎಂದರೆ ಎಲ್ಲರೂ ಒಗ್ಗಟ್ಟಾಗಿ ಸಾಂವಿಧಾನಿಕ ಮೌಲ್ಯಗಳನ್ನು ಇಟ್ಟುಕೊಂಡೆ ಮಿಲಿಟೆಂಟ್‌ ಯೋಜನೆಗಳನ್ನು ರೂಪಿಸಬೇಕಿದೆ ಎಂದು ಹೇಳಿದರು.

ದಲಿತರಿಗೆ ಭೂಮಿ ನೀಡಲ್ಲ ಎಂದು ಸರ್ಕಾರ ನೇರವಾಗಿ ಹೇಳುತ್ತಿದೆ: ದಲಿತ ಹಕ್ಕುಗಳ ಹೋರಾಟಗಾರ ಗೋಪಾಲಕೃಷ್ಣ ಹರಳಹಳ್ಳಿ

ಇದಕ್ಕೂ ಮೊದಲು ಬಗರ್‌ಹುಕುಂ ಭೂಮಿ ವಿಚಾರದ ಬಗ್ಗೆ ಮಾತನಾಡಿದ ದಲಿತ ಹಕ್ಕುಗಳ ಸಮಿತಿ ರಾಜ್ಯಾಧ್ಯಕ್ಷರಾದ ಗೋಪಾಲಕೃಷ್ಣ ಹರಳಹಳ್ಳಿ, “ನಮ್ಮ ದೇಶದಲ್ಲಿ ಸ್ವತಂತ್ರ ಬಂದ ನಂತರ ಸರ್ಕಾರಗಳು ಭೂ ಸುಧಾರಣೆ ಜಾರಿಗೆ ತಂದವು. ಆದರೆ ಭೂಮಿ ಜನರಿಗೆ ಸಿಕ್ಕಿಲ್ಲ. ಬಗರ್‌ಹುಕುಂ ಭೂಮಿಯ ಸಮಸ್ಯೆಯು ದಲಿತರು ಮತ್ತು ದಲಿತೇತರ ಬಡವರ ಬಗ್ಗೆ ಈಗಲೂ ಕಾಡುತ್ತಿದೆ. ಈ ವಿಚಾರದ ಬಗ್ಗೆ ಬಜೆಟ್‌ನಲ್ಲಿ ಸಿದ್ದರಾಮಯ್ಯ ಅವರು ಯಾವುದೆ ಘೋಷಣೆ ಮಾಡಿಲ್ಲ. ಈ ಸರ್ಕಾರ ದಲಿತರಿಗೆ ಭೂಮಿ ನೀಡಲ್ಲ ಎಂಬುವುದು ಇದರ ಅರ್ಥವಾಗಿದ್ದು, ಅಂತಹ ಇಚ್ಛಾಶಕ್ತಿ ತಮಗೆ ಇಲ್ಲ ಎಂದೆ ಸರ್ಕಾರ ಹೇಳುತ್ತಿದೆ” ಎಂದು ಅವರು ಹೇಳಿದರು.

ದಲಿತ ಹಕ್ಕುಗಳ ಸಮಿತಿ ರಾಜ್ಯಾಧ್ಯಕ್ಷರಾದ ಗೋಪಾಲಕೃಷ್ಣ ಹರಳಹಳ್ಳಿ

ದಲಿತರಿಗಾಗಿ 2 ಲಕ್ಷ ಕೋಟಿ ರೂ.ಗಳು ಖರ್ಚು ಮಾಡಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇದರ ಬಗ್ಗೆ ಯಾವುದಾದರು ಅಧ್ಯಯನ ಆಗಿದೆಯೆ? ಎಂದು ಅವರು ಹೇಳಿದರು. “ಜೀತಮುಕ್ತಿ ಕಾಯ್ದೆಯ ಪ್ರಕಾರ ದಲಿತರಿಗೆ ಭೂಮಿ ಕೊಡಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಇವತ್ತಿನವರೆಗೂ ಯಾವುದೆ ಭೂಮಿ ದಲಿತರಿಗೆ ನೀಡಿಲ್ಲ. ಭೂಮಿ ಕೇಳಿದ ದಲಿತರ ಮೇಲೆ ಸರ್ಕಾರ ಕೇಸು ಹಾಕುತ್ತಿದೆ. ದೇವದಾಸಿ ಮಹಿಳೆಯರಿಗೆ ಸರ್ಕಾರ ಬಜೆಟ್‌ನಲ್ಲಿ ಏನಾದರೂ ಘೋಷಣೆ ಮಾಡುತ್ತದೆ ಎಂದು ನಿರೀಕ್ಷಿಸಿದ್ದೆವು, ಆದರೆ ಸರ್ಕಾರ ಇದರ ಬಗ್ಗೆ ಏನೂ ಘೋಷಣೆ ಮಾಡಿಲ್ಲ” ಎಂದು ಹೇಳಿದರು.

“ಜಾತಿ ವ್ಯವಸ್ಥೆಯನ್ನು ಉಳಿಸುವ ಶಕ್ತಿಗಳು ಬಲವಾಗಿದ್ದು, ದಲಿತರಿಗೆ ನ್ಯಾಯ ಸಿಗಬೇಕು ಎಂದರೆ ದಲಿತರೊಂದಿಗೆ ದಲಿತೇತರರು ಕೂಡಾ ಸೇರಿ ಹೋರಾಟ ಮಾಡಬೇಕಿದೆ. ಈ ಸರ್ಕಾರ ಯಾವ ದಲಿತರಿಗೂ ಭೂಮಿ ಮತ್ತು ಸಮಾನತೆಯನ್ನು ನೀಡುವುದಿಲ್ಲ. ಅದಕ್ಕಾಗಿ ಜನಚಳವಳಿಗಳು ಪರ್ಯಾಯ ರಾಜಕೀಯ ಚಳವಳಿ ಕಟ್ಟಬೇಕಿದೆ” ಎಂದು ಗೋಪಾಲಕೃಷ್ಣ ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...