Homeಕರ್ನಾಟಕಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ - ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ...

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

- Advertisement -
- Advertisement -

ರಾಜ್ಯ ಸರ್ಕಾರ ಮಾರ್ಚ್ ವೇಳೆಗೆ ಮಂಡಿಸುವ ಬಜೆಟ್‌ನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಬಳಕೆ ಮಾಡಬಾರದು ಎಂದು ಅಧಿವೇಶನ ಪೂರ್ವ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ನಾವು ಈಗಾಗಲೇ ಎಚ್ಚರಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆಯನ್ನು ಒಪ್ಪಲ್ಲ ಎಂದು ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ ಹೇಳಿದರು. ಎಸ್‌‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಹಣದ ದುರ್ಬಳಕೆ ನಿಲ್ಲಿಸಲು ಮತ್ತು ಕಾಯ್ದೆಯ ಆಶಯದಂತೆ ಜಾರಿಗೆ ಒತ್ತಾಯಿಸಿ, ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ಮತ್ತು ಎಸ್‌ಸಿಎಸ್‌ಪಿ/ಟಿಎಸ್‌ಪಿ ಜಾಗೃತಿ ವೇದಿಕೆಯ ಅಡಿಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆ ಅವರು ಮಾತನಾಡುತ್ತಿದ್ದರು. ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ

ಸಮಾಜದ ಮುಖ್ಯವಾಹಿನಿಗೆ ಎಸ್ಸಿ ಮತ್ತು ಎಸ್ಟಿ ಸಮುದಾಯದ ಜನರು ಬರಬೇಕು ಎಂದಾದರೆ ಅವರಿಗೆ ಮೀಸಲಿಟ್ಟ ಹಣದ ದುರ್ಬಳಕೆ ನಿಲ್ಲಬೇಕು. ಮೀಸಲು ಅನುದಾವನ್ನು ಅವರಿಗಾಗಿ ವ್ಯಯಿಸಬೇಕು ಎಂದು ಅವರು ಹೇಳಿದರು. ದಲಿತ ಸಮುದಾಯದ ಅಂಕಿ ಅಂಶಗಳನ್ನು ಮಾತ್ರ ಸರ್ಕಾರ ಇಟ್ಟುಕೊಂಡಿದೆ, ಆದರೆ ಈ ಬೃಹತ್ ಸಮುದಾಯಕ್ಕೆ ಹೇಗೆ ಕಾರ್ಯಕ್ರಮ ರೂಪಿಸಬೇಕು ಎಂದು ಹೇಳುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.‌

“ಕಾಯ್ದೆ ಜಾರಿಯಾದ ನಂತರ ಎರಡು ಲಕ್ಷ ಕೋಟಿಗೂ ಹೆಚ್ಚು ಕೊಟ್ಟಿದ್ದೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಈ ಹಣ ಎಸ್ಸಿ ಎಸ್ಟಿ ಸಮುದಾಯಕ್ಕೆ ತಲುಪಿದ್ದರೆ, ಅವರು ಅಭಿವೃದ್ಧಿ ಆಗುತ್ತಿದ್ದರು. ಈ ಸಮುದಾಯದ ಪರವಾಗಿ ಮಾಡಿರುವ ಯಾವುದೇ ಯೋಜನೆ ಇನ್ನೂ ಸಮುದಾಯದ ಮನೆ ಬಾಗಿಲಿಗೂ ತಲುಪಿಲ್ಲ. ಹನ್ನೆರಡು ವರ್ಷಗಳಿಂದ ಈ ಸಮುದಾಯದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದಿಂದ ವಂಚಿತ ಆಗುತ್ತಿದೆ” ಎಂದು ಅವರು ಹೇಳಿದರು.

“ನಾವು ಹೆಚ್ಚಿನದೇನು ಕೇಳುತ್ತಿಲ್ಲ. ನಮ್ಮ ಹಣವನ್ನು ನಮ್ಮ ಸಮುದಾಯದ ಆರ್ಥಿಕ ಬಲಿಷ್ಠವಾಗಲು ಬಳಸಿ ಎನ್ನುತ್ತಿದ್ದೇವೆ. ಆದರೆ ಈ ಹಣ ಇದುವರೆಗೂ ಸಮುದಾಯದ 5% ಜನರಿಗೂ ತಲುಪಿಲ್ಲ. ಕಾಂಗ್ರೆಸ್ ನುಡಿದಂತೆ ನಡೆಯಬೇಕಿದ್ದು, ಮಾರ್ಚ್ ಬಜೆಟ್ ಅಧಿವೇಶನದಲ್ಲಿ ಗ್ಯಾರೆಂಟಿಗೆ ಈ ನಿಧಿಯ ಬಳಕೆ ನಿಲ್ಲಿಸಬೇಕು ಎಂದು ಒತ್ತಾಯ ಮಾಡುತ್ತಿದ್ದೇವೆ” ಎಂದು ನರಸಿಂಹಮೂರ್ತಿ ಅವರು ಹೇಳಿದರು.

ನಿವೃತ್ತ ಕೆಪಿಎಸ್‌ ಅಧಿಕಾರಿ ಭೀಮಾಶಂಕರ ಮಾತನಾಡಿ, “ಪ್ರತಿವರ್ಷ ಸರಾಸರಿ 22 ಸಾವಿರ ಕೋಟಿ ಹಣ ಇದಕ್ಕಾಗಿ ಮೀಸಲಿಡಲಾಗುತ್ತದೆ. ಈ ಹಣವನ್ನು ಸಮುದಾಯಕ್ಕೆ ಬಳಸಿದ್ಜರೆ ಸಮುದಾಯದ ಪ್ರತಿ ಕುಟುಂಬ ಇಷ್ಟು ಹೊತ್ತಿಗೆ ಅಭಿವೃದ್ಧಿ ಹೊಂದಬೇಕಿತ್ತು. ಸಮುದಾಯದ ಯುವಜನರು ಉದ್ಯಮಿಗಳು ಆಗಬೇಕಿತ್ತು.” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಯೋಜನೆಯ ಕೇವಲ 8% ಅಷ್ಟೇ ಸಮುದಾಯಕ್ಕೆ ಸಿಕ್ಕಿದೆ. ಉಳಿದವುಗಳು ರಸ್ತೆ, ಸೇತುವೆ, ಅಣೆಕಟ್ಟು ಸೇರಿದಂತೆ ಇತರ ಕಾರ್ಯಗಳಿಗೆ ಸರ್ಕಾರ ಬಳಸುತ್ತಿದೆ” ಎಂದು ಈ ಹಣವನ್ನು ಆರ್ಥಿಕ ಮತ್ತು ಶೈಕ್ಷಣಿಕ ಕಾರಣಗಳಿಗಾಗಿ ಖರ್ಚು ಮಾಡಬೇಕು ಎಂದು ಕಾನೂನು ಹೇಳುತ್ತದೆ.‌ ಹೆಚ್ಚಿನ ಅನುದಾನವನ್ನು ಸಾಮಾನ್ಯ ಯೋಜನೆಗೆ ಸರ್ಕಾರ ಬಳಸುತ್ತಿದೆ. ಇದು ಅನ್ಯಾಯ” ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ಚಿಂತಕ ಶಿವಸುಂದರ್ ಮಾತನಾಡಿ, ಬೇರೆ ಸಮುದಾಯದ ಬಡತನಕ್ಕೂ ಎಸ್ಸಿ ಎಸ್ಟಿ ಸಮುದಾಯದ ಬಡತನಕ್ಕೂ ಅಂತರವಿದೆ. ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರೆಂಟಿ ಯೋಜನೆಗಾಗಿ ಹಣ ಉಪಯೋಗ ಮಾಡುತ್ತೇವೆ ಎಂದು ಸಮರ್ಥನೆ ಮಾಡುವುದು ಈ ನಿಧಿಯ ಉದ್ದೇಶದ ಬಗ್ಗೆ ಏನೂ ತಿಳಿಯದವರು ಮಾತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವು ಎಸ್ಸಿ/ಎಸ್ಟಿ ಸಮುದಾಯಕ್ಕೆ ನೀಡುತ್ತಿರುವ ದಾನವಲ್ಲ. ಅದು ಅವರ ಹಕ್ಕು. ಗ್ಯಾರಂಟಿ ಯೋಜನೆಯನ್ನು ನಿಲ್ಲಿಸದೆ ಈ ಹಣವನ್ನು ಸಮುದಾಯಕ್ಕೆ ನೀಡಬೇಕು. ಸರ್ಕಾರದ ಬಳಿ ದುಡ್ಡು ಇಲ್ಲ ಎಂದರೆ ಶ್ರೀಮಂತರಿಗೆ ತೆರಿಗೆ ಹಾಕಿ ಹಣ ಸಂಗ್ರಹಿಸಬೇಕು. ಅದು ಬಿಟ್ಟು ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಬಳಸುವುದು ಸರಿಯಲ್ಲ. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯ 7ಸಿಯನ್ನು ಕೂಡಾ ಕಿತ್ತೊಗೆಯಬೇಕಿದೆ” ಎಂದು ಅವರು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಮ್ಮನ್ನು ಹಿಂದೂ ಧರ್ಮಕ್ಕೆ ಮತಾಂತರವಾಗಲು ತೀವ್ರ ಒತ್ತಡ ಹಾಕಲಾಗುತ್ತಿದೆ: ಮುಸ್ಲಿಮ್ ಸಮುದಾಯ ಆರೋಪ

ನಮ್ಮನ್ನು ಹಿಂದೂ ಧರ್ಮಕ್ಕೆ ಮತಾಂತರವಾಗಲು ತೀವ್ರ ಒತ್ತಡ ಹಾಕಲಾಗುತ್ತಿದೆ: ಮುಸ್ಲಿಮ್ ಸಮುದಾಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...