Homeಕರ್ನಾಟಕಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ - ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ...

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

- Advertisement -
- Advertisement -

ರಾಜ್ಯ ಸರ್ಕಾರ ಮಾರ್ಚ್ ವೇಳೆಗೆ ಮಂಡಿಸುವ ಬಜೆಟ್‌ನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಬಳಕೆ ಮಾಡಬಾರದು ಎಂದು ಅಧಿವೇಶನ ಪೂರ್ವ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ನಾವು ಈಗಾಗಲೇ ಎಚ್ಚರಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆಯನ್ನು ಒಪ್ಪಲ್ಲ ಎಂದು ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ ಹೇಳಿದರು. ಎಸ್‌‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಹಣದ ದುರ್ಬಳಕೆ ನಿಲ್ಲಿಸಲು ಮತ್ತು ಕಾಯ್ದೆಯ ಆಶಯದಂತೆ ಜಾರಿಗೆ ಒತ್ತಾಯಿಸಿ, ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ಮತ್ತು ಎಸ್‌ಸಿಎಸ್‌ಪಿ/ಟಿಎಸ್‌ಪಿ ಜಾಗೃತಿ ವೇದಿಕೆಯ ಅಡಿಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆ ಅವರು ಮಾತನಾಡುತ್ತಿದ್ದರು. ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ

ಸಮಾಜದ ಮುಖ್ಯವಾಹಿನಿಗೆ ಎಸ್ಸಿ ಮತ್ತು ಎಸ್ಟಿ ಸಮುದಾಯದ ಜನರು ಬರಬೇಕು ಎಂದಾದರೆ ಅವರಿಗೆ ಮೀಸಲಿಟ್ಟ ಹಣದ ದುರ್ಬಳಕೆ ನಿಲ್ಲಬೇಕು. ಮೀಸಲು ಅನುದಾವನ್ನು ಅವರಿಗಾಗಿ ವ್ಯಯಿಸಬೇಕು ಎಂದು ಅವರು ಹೇಳಿದರು. ದಲಿತ ಸಮುದಾಯದ ಅಂಕಿ ಅಂಶಗಳನ್ನು ಮಾತ್ರ ಸರ್ಕಾರ ಇಟ್ಟುಕೊಂಡಿದೆ, ಆದರೆ ಈ ಬೃಹತ್ ಸಮುದಾಯಕ್ಕೆ ಹೇಗೆ ಕಾರ್ಯಕ್ರಮ ರೂಪಿಸಬೇಕು ಎಂದು ಹೇಳುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.‌

“ಕಾಯ್ದೆ ಜಾರಿಯಾದ ನಂತರ ಎರಡು ಲಕ್ಷ ಕೋಟಿಗೂ ಹೆಚ್ಚು ಕೊಟ್ಟಿದ್ದೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಈ ಹಣ ಎಸ್ಸಿ ಎಸ್ಟಿ ಸಮುದಾಯಕ್ಕೆ ತಲುಪಿದ್ದರೆ, ಅವರು ಅಭಿವೃದ್ಧಿ ಆಗುತ್ತಿದ್ದರು. ಈ ಸಮುದಾಯದ ಪರವಾಗಿ ಮಾಡಿರುವ ಯಾವುದೇ ಯೋಜನೆ ಇನ್ನೂ ಸಮುದಾಯದ ಮನೆ ಬಾಗಿಲಿಗೂ ತಲುಪಿಲ್ಲ. ಹನ್ನೆರಡು ವರ್ಷಗಳಿಂದ ಈ ಸಮುದಾಯದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದಿಂದ ವಂಚಿತ ಆಗುತ್ತಿದೆ” ಎಂದು ಅವರು ಹೇಳಿದರು.

“ನಾವು ಹೆಚ್ಚಿನದೇನು ಕೇಳುತ್ತಿಲ್ಲ. ನಮ್ಮ ಹಣವನ್ನು ನಮ್ಮ ಸಮುದಾಯದ ಆರ್ಥಿಕ ಬಲಿಷ್ಠವಾಗಲು ಬಳಸಿ ಎನ್ನುತ್ತಿದ್ದೇವೆ. ಆದರೆ ಈ ಹಣ ಇದುವರೆಗೂ ಸಮುದಾಯದ 5% ಜನರಿಗೂ ತಲುಪಿಲ್ಲ. ಕಾಂಗ್ರೆಸ್ ನುಡಿದಂತೆ ನಡೆಯಬೇಕಿದ್ದು, ಮಾರ್ಚ್ ಬಜೆಟ್ ಅಧಿವೇಶನದಲ್ಲಿ ಗ್ಯಾರೆಂಟಿಗೆ ಈ ನಿಧಿಯ ಬಳಕೆ ನಿಲ್ಲಿಸಬೇಕು ಎಂದು ಒತ್ತಾಯ ಮಾಡುತ್ತಿದ್ದೇವೆ” ಎಂದು ನರಸಿಂಹಮೂರ್ತಿ ಅವರು ಹೇಳಿದರು.

ನಿವೃತ್ತ ಕೆಪಿಎಸ್‌ ಅಧಿಕಾರಿ ಭೀಮಾಶಂಕರ ಮಾತನಾಡಿ, “ಪ್ರತಿವರ್ಷ ಸರಾಸರಿ 22 ಸಾವಿರ ಕೋಟಿ ಹಣ ಇದಕ್ಕಾಗಿ ಮೀಸಲಿಡಲಾಗುತ್ತದೆ. ಈ ಹಣವನ್ನು ಸಮುದಾಯಕ್ಕೆ ಬಳಸಿದ್ಜರೆ ಸಮುದಾಯದ ಪ್ರತಿ ಕುಟುಂಬ ಇಷ್ಟು ಹೊತ್ತಿಗೆ ಅಭಿವೃದ್ಧಿ ಹೊಂದಬೇಕಿತ್ತು. ಸಮುದಾಯದ ಯುವಜನರು ಉದ್ಯಮಿಗಳು ಆಗಬೇಕಿತ್ತು.” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಯೋಜನೆಯ ಕೇವಲ 8% ಅಷ್ಟೇ ಸಮುದಾಯಕ್ಕೆ ಸಿಕ್ಕಿದೆ. ಉಳಿದವುಗಳು ರಸ್ತೆ, ಸೇತುವೆ, ಅಣೆಕಟ್ಟು ಸೇರಿದಂತೆ ಇತರ ಕಾರ್ಯಗಳಿಗೆ ಸರ್ಕಾರ ಬಳಸುತ್ತಿದೆ” ಎಂದು ಈ ಹಣವನ್ನು ಆರ್ಥಿಕ ಮತ್ತು ಶೈಕ್ಷಣಿಕ ಕಾರಣಗಳಿಗಾಗಿ ಖರ್ಚು ಮಾಡಬೇಕು ಎಂದು ಕಾನೂನು ಹೇಳುತ್ತದೆ.‌ ಹೆಚ್ಚಿನ ಅನುದಾನವನ್ನು ಸಾಮಾನ್ಯ ಯೋಜನೆಗೆ ಸರ್ಕಾರ ಬಳಸುತ್ತಿದೆ. ಇದು ಅನ್ಯಾಯ” ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ಚಿಂತಕ ಶಿವಸುಂದರ್ ಮಾತನಾಡಿ, ಬೇರೆ ಸಮುದಾಯದ ಬಡತನಕ್ಕೂ ಎಸ್ಸಿ ಎಸ್ಟಿ ಸಮುದಾಯದ ಬಡತನಕ್ಕೂ ಅಂತರವಿದೆ. ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರೆಂಟಿ ಯೋಜನೆಗಾಗಿ ಹಣ ಉಪಯೋಗ ಮಾಡುತ್ತೇವೆ ಎಂದು ಸಮರ್ಥನೆ ಮಾಡುವುದು ಈ ನಿಧಿಯ ಉದ್ದೇಶದ ಬಗ್ಗೆ ಏನೂ ತಿಳಿಯದವರು ಮಾತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವು ಎಸ್ಸಿ/ಎಸ್ಟಿ ಸಮುದಾಯಕ್ಕೆ ನೀಡುತ್ತಿರುವ ದಾನವಲ್ಲ. ಅದು ಅವರ ಹಕ್ಕು. ಗ್ಯಾರಂಟಿ ಯೋಜನೆಯನ್ನು ನಿಲ್ಲಿಸದೆ ಈ ಹಣವನ್ನು ಸಮುದಾಯಕ್ಕೆ ನೀಡಬೇಕು. ಸರ್ಕಾರದ ಬಳಿ ದುಡ್ಡು ಇಲ್ಲ ಎಂದರೆ ಶ್ರೀಮಂತರಿಗೆ ತೆರಿಗೆ ಹಾಕಿ ಹಣ ಸಂಗ್ರಹಿಸಬೇಕು. ಅದು ಬಿಟ್ಟು ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಬಳಸುವುದು ಸರಿಯಲ್ಲ. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯ 7ಸಿಯನ್ನು ಕೂಡಾ ಕಿತ್ತೊಗೆಯಬೇಕಿದೆ” ಎಂದು ಅವರು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಮ್ಮನ್ನು ಹಿಂದೂ ಧರ್ಮಕ್ಕೆ ಮತಾಂತರವಾಗಲು ತೀವ್ರ ಒತ್ತಡ ಹಾಕಲಾಗುತ್ತಿದೆ: ಮುಸ್ಲಿಮ್ ಸಮುದಾಯ ಆರೋಪ

ನಮ್ಮನ್ನು ಹಿಂದೂ ಧರ್ಮಕ್ಕೆ ಮತಾಂತರವಾಗಲು ತೀವ್ರ ಒತ್ತಡ ಹಾಕಲಾಗುತ್ತಿದೆ: ಮುಸ್ಲಿಮ್ ಸಮುದಾಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...