Homeಕರ್ನಾಟಕಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ - ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ...

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

- Advertisement -
- Advertisement -

ರಾಜ್ಯ ಸರ್ಕಾರ ಮಾರ್ಚ್ ವೇಳೆಗೆ ಮಂಡಿಸುವ ಬಜೆಟ್‌ನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಬಳಕೆ ಮಾಡಬಾರದು ಎಂದು ಅಧಿವೇಶನ ಪೂರ್ವ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ನಾವು ಈಗಾಗಲೇ ಎಚ್ಚರಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆಯನ್ನು ಒಪ್ಪಲ್ಲ ಎಂದು ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ ಹೇಳಿದರು. ಎಸ್‌‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಹಣದ ದುರ್ಬಳಕೆ ನಿಲ್ಲಿಸಲು ಮತ್ತು ಕಾಯ್ದೆಯ ಆಶಯದಂತೆ ಜಾರಿಗೆ ಒತ್ತಾಯಿಸಿ, ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ಮತ್ತು ಎಸ್‌ಸಿಎಸ್‌ಪಿ/ಟಿಎಸ್‌ಪಿ ಜಾಗೃತಿ ವೇದಿಕೆಯ ಅಡಿಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆ ಅವರು ಮಾತನಾಡುತ್ತಿದ್ದರು. ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ

ಸಮಾಜದ ಮುಖ್ಯವಾಹಿನಿಗೆ ಎಸ್ಸಿ ಮತ್ತು ಎಸ್ಟಿ ಸಮುದಾಯದ ಜನರು ಬರಬೇಕು ಎಂದಾದರೆ ಅವರಿಗೆ ಮೀಸಲಿಟ್ಟ ಹಣದ ದುರ್ಬಳಕೆ ನಿಲ್ಲಬೇಕು. ಮೀಸಲು ಅನುದಾವನ್ನು ಅವರಿಗಾಗಿ ವ್ಯಯಿಸಬೇಕು ಎಂದು ಅವರು ಹೇಳಿದರು. ದಲಿತ ಸಮುದಾಯದ ಅಂಕಿ ಅಂಶಗಳನ್ನು ಮಾತ್ರ ಸರ್ಕಾರ ಇಟ್ಟುಕೊಂಡಿದೆ, ಆದರೆ ಈ ಬೃಹತ್ ಸಮುದಾಯಕ್ಕೆ ಹೇಗೆ ಕಾರ್ಯಕ್ರಮ ರೂಪಿಸಬೇಕು ಎಂದು ಹೇಳುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.‌

“ಕಾಯ್ದೆ ಜಾರಿಯಾದ ನಂತರ ಎರಡು ಲಕ್ಷ ಕೋಟಿಗೂ ಹೆಚ್ಚು ಕೊಟ್ಟಿದ್ದೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಈ ಹಣ ಎಸ್ಸಿ ಎಸ್ಟಿ ಸಮುದಾಯಕ್ಕೆ ತಲುಪಿದ್ದರೆ, ಅವರು ಅಭಿವೃದ್ಧಿ ಆಗುತ್ತಿದ್ದರು. ಈ ಸಮುದಾಯದ ಪರವಾಗಿ ಮಾಡಿರುವ ಯಾವುದೇ ಯೋಜನೆ ಇನ್ನೂ ಸಮುದಾಯದ ಮನೆ ಬಾಗಿಲಿಗೂ ತಲುಪಿಲ್ಲ. ಹನ್ನೆರಡು ವರ್ಷಗಳಿಂದ ಈ ಸಮುದಾಯದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದಿಂದ ವಂಚಿತ ಆಗುತ್ತಿದೆ” ಎಂದು ಅವರು ಹೇಳಿದರು.

“ನಾವು ಹೆಚ್ಚಿನದೇನು ಕೇಳುತ್ತಿಲ್ಲ. ನಮ್ಮ ಹಣವನ್ನು ನಮ್ಮ ಸಮುದಾಯದ ಆರ್ಥಿಕ ಬಲಿಷ್ಠವಾಗಲು ಬಳಸಿ ಎನ್ನುತ್ತಿದ್ದೇವೆ. ಆದರೆ ಈ ಹಣ ಇದುವರೆಗೂ ಸಮುದಾಯದ 5% ಜನರಿಗೂ ತಲುಪಿಲ್ಲ. ಕಾಂಗ್ರೆಸ್ ನುಡಿದಂತೆ ನಡೆಯಬೇಕಿದ್ದು, ಮಾರ್ಚ್ ಬಜೆಟ್ ಅಧಿವೇಶನದಲ್ಲಿ ಗ್ಯಾರೆಂಟಿಗೆ ಈ ನಿಧಿಯ ಬಳಕೆ ನಿಲ್ಲಿಸಬೇಕು ಎಂದು ಒತ್ತಾಯ ಮಾಡುತ್ತಿದ್ದೇವೆ” ಎಂದು ನರಸಿಂಹಮೂರ್ತಿ ಅವರು ಹೇಳಿದರು.

ನಿವೃತ್ತ ಕೆಪಿಎಸ್‌ ಅಧಿಕಾರಿ ಭೀಮಾಶಂಕರ ಮಾತನಾಡಿ, “ಪ್ರತಿವರ್ಷ ಸರಾಸರಿ 22 ಸಾವಿರ ಕೋಟಿ ಹಣ ಇದಕ್ಕಾಗಿ ಮೀಸಲಿಡಲಾಗುತ್ತದೆ. ಈ ಹಣವನ್ನು ಸಮುದಾಯಕ್ಕೆ ಬಳಸಿದ್ಜರೆ ಸಮುದಾಯದ ಪ್ರತಿ ಕುಟುಂಬ ಇಷ್ಟು ಹೊತ್ತಿಗೆ ಅಭಿವೃದ್ಧಿ ಹೊಂದಬೇಕಿತ್ತು. ಸಮುದಾಯದ ಯುವಜನರು ಉದ್ಯಮಿಗಳು ಆಗಬೇಕಿತ್ತು.” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಯೋಜನೆಯ ಕೇವಲ 8% ಅಷ್ಟೇ ಸಮುದಾಯಕ್ಕೆ ಸಿಕ್ಕಿದೆ. ಉಳಿದವುಗಳು ರಸ್ತೆ, ಸೇತುವೆ, ಅಣೆಕಟ್ಟು ಸೇರಿದಂತೆ ಇತರ ಕಾರ್ಯಗಳಿಗೆ ಸರ್ಕಾರ ಬಳಸುತ್ತಿದೆ” ಎಂದು ಈ ಹಣವನ್ನು ಆರ್ಥಿಕ ಮತ್ತು ಶೈಕ್ಷಣಿಕ ಕಾರಣಗಳಿಗಾಗಿ ಖರ್ಚು ಮಾಡಬೇಕು ಎಂದು ಕಾನೂನು ಹೇಳುತ್ತದೆ.‌ ಹೆಚ್ಚಿನ ಅನುದಾನವನ್ನು ಸಾಮಾನ್ಯ ಯೋಜನೆಗೆ ಸರ್ಕಾರ ಬಳಸುತ್ತಿದೆ. ಇದು ಅನ್ಯಾಯ” ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ಚಿಂತಕ ಶಿವಸುಂದರ್ ಮಾತನಾಡಿ, ಬೇರೆ ಸಮುದಾಯದ ಬಡತನಕ್ಕೂ ಎಸ್ಸಿ ಎಸ್ಟಿ ಸಮುದಾಯದ ಬಡತನಕ್ಕೂ ಅಂತರವಿದೆ. ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರೆಂಟಿ ಯೋಜನೆಗಾಗಿ ಹಣ ಉಪಯೋಗ ಮಾಡುತ್ತೇವೆ ಎಂದು ಸಮರ್ಥನೆ ಮಾಡುವುದು ಈ ನಿಧಿಯ ಉದ್ದೇಶದ ಬಗ್ಗೆ ಏನೂ ತಿಳಿಯದವರು ಮಾತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವು ಎಸ್ಸಿ/ಎಸ್ಟಿ ಸಮುದಾಯಕ್ಕೆ ನೀಡುತ್ತಿರುವ ದಾನವಲ್ಲ. ಅದು ಅವರ ಹಕ್ಕು. ಗ್ಯಾರಂಟಿ ಯೋಜನೆಯನ್ನು ನಿಲ್ಲಿಸದೆ ಈ ಹಣವನ್ನು ಸಮುದಾಯಕ್ಕೆ ನೀಡಬೇಕು. ಸರ್ಕಾರದ ಬಳಿ ದುಡ್ಡು ಇಲ್ಲ ಎಂದರೆ ಶ್ರೀಮಂತರಿಗೆ ತೆರಿಗೆ ಹಾಕಿ ಹಣ ಸಂಗ್ರಹಿಸಬೇಕು. ಅದು ಬಿಟ್ಟು ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಬಳಸುವುದು ಸರಿಯಲ್ಲ. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯ 7ಸಿಯನ್ನು ಕೂಡಾ ಕಿತ್ತೊಗೆಯಬೇಕಿದೆ” ಎಂದು ಅವರು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಮ್ಮನ್ನು ಹಿಂದೂ ಧರ್ಮಕ್ಕೆ ಮತಾಂತರವಾಗಲು ತೀವ್ರ ಒತ್ತಡ ಹಾಕಲಾಗುತ್ತಿದೆ: ಮುಸ್ಲಿಮ್ ಸಮುದಾಯ ಆರೋಪ

ನಮ್ಮನ್ನು ಹಿಂದೂ ಧರ್ಮಕ್ಕೆ ಮತಾಂತರವಾಗಲು ತೀವ್ರ ಒತ್ತಡ ಹಾಕಲಾಗುತ್ತಿದೆ: ಮುಸ್ಲಿಮ್ ಸಮುದಾಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...