Homeಕರ್ನಾಟಕಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ - ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ...

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

- Advertisement -
- Advertisement -

ರಾಜ್ಯ ಸರ್ಕಾರ ಮಾರ್ಚ್ ವೇಳೆಗೆ ಮಂಡಿಸುವ ಬಜೆಟ್‌ನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಬಳಕೆ ಮಾಡಬಾರದು ಎಂದು ಅಧಿವೇಶನ ಪೂರ್ವ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ನಾವು ಈಗಾಗಲೇ ಎಚ್ಚರಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆಯನ್ನು ಒಪ್ಪಲ್ಲ ಎಂದು ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ ಹೇಳಿದರು. ಎಸ್‌‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಹಣದ ದುರ್ಬಳಕೆ ನಿಲ್ಲಿಸಲು ಮತ್ತು ಕಾಯ್ದೆಯ ಆಶಯದಂತೆ ಜಾರಿಗೆ ಒತ್ತಾಯಿಸಿ, ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ಮತ್ತು ಎಸ್‌ಸಿಎಸ್‌ಪಿ/ಟಿಎಸ್‌ಪಿ ಜಾಗೃತಿ ವೇದಿಕೆಯ ಅಡಿಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆ ಅವರು ಮಾತನಾಡುತ್ತಿದ್ದರು. ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ

ಸಮಾಜದ ಮುಖ್ಯವಾಹಿನಿಗೆ ಎಸ್ಸಿ ಮತ್ತು ಎಸ್ಟಿ ಸಮುದಾಯದ ಜನರು ಬರಬೇಕು ಎಂದಾದರೆ ಅವರಿಗೆ ಮೀಸಲಿಟ್ಟ ಹಣದ ದುರ್ಬಳಕೆ ನಿಲ್ಲಬೇಕು. ಮೀಸಲು ಅನುದಾವನ್ನು ಅವರಿಗಾಗಿ ವ್ಯಯಿಸಬೇಕು ಎಂದು ಅವರು ಹೇಳಿದರು. ದಲಿತ ಸಮುದಾಯದ ಅಂಕಿ ಅಂಶಗಳನ್ನು ಮಾತ್ರ ಸರ್ಕಾರ ಇಟ್ಟುಕೊಂಡಿದೆ, ಆದರೆ ಈ ಬೃಹತ್ ಸಮುದಾಯಕ್ಕೆ ಹೇಗೆ ಕಾರ್ಯಕ್ರಮ ರೂಪಿಸಬೇಕು ಎಂದು ಹೇಳುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.‌

“ಕಾಯ್ದೆ ಜಾರಿಯಾದ ನಂತರ ಎರಡು ಲಕ್ಷ ಕೋಟಿಗೂ ಹೆಚ್ಚು ಕೊಟ್ಟಿದ್ದೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಈ ಹಣ ಎಸ್ಸಿ ಎಸ್ಟಿ ಸಮುದಾಯಕ್ಕೆ ತಲುಪಿದ್ದರೆ, ಅವರು ಅಭಿವೃದ್ಧಿ ಆಗುತ್ತಿದ್ದರು. ಈ ಸಮುದಾಯದ ಪರವಾಗಿ ಮಾಡಿರುವ ಯಾವುದೇ ಯೋಜನೆ ಇನ್ನೂ ಸಮುದಾಯದ ಮನೆ ಬಾಗಿಲಿಗೂ ತಲುಪಿಲ್ಲ. ಹನ್ನೆರಡು ವರ್ಷಗಳಿಂದ ಈ ಸಮುದಾಯದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದಿಂದ ವಂಚಿತ ಆಗುತ್ತಿದೆ” ಎಂದು ಅವರು ಹೇಳಿದರು.

“ನಾವು ಹೆಚ್ಚಿನದೇನು ಕೇಳುತ್ತಿಲ್ಲ. ನಮ್ಮ ಹಣವನ್ನು ನಮ್ಮ ಸಮುದಾಯದ ಆರ್ಥಿಕ ಬಲಿಷ್ಠವಾಗಲು ಬಳಸಿ ಎನ್ನುತ್ತಿದ್ದೇವೆ. ಆದರೆ ಈ ಹಣ ಇದುವರೆಗೂ ಸಮುದಾಯದ 5% ಜನರಿಗೂ ತಲುಪಿಲ್ಲ. ಕಾಂಗ್ರೆಸ್ ನುಡಿದಂತೆ ನಡೆಯಬೇಕಿದ್ದು, ಮಾರ್ಚ್ ಬಜೆಟ್ ಅಧಿವೇಶನದಲ್ಲಿ ಗ್ಯಾರೆಂಟಿಗೆ ಈ ನಿಧಿಯ ಬಳಕೆ ನಿಲ್ಲಿಸಬೇಕು ಎಂದು ಒತ್ತಾಯ ಮಾಡುತ್ತಿದ್ದೇವೆ” ಎಂದು ನರಸಿಂಹಮೂರ್ತಿ ಅವರು ಹೇಳಿದರು.

ನಿವೃತ್ತ ಕೆಪಿಎಸ್‌ ಅಧಿಕಾರಿ ಭೀಮಾಶಂಕರ ಮಾತನಾಡಿ, “ಪ್ರತಿವರ್ಷ ಸರಾಸರಿ 22 ಸಾವಿರ ಕೋಟಿ ಹಣ ಇದಕ್ಕಾಗಿ ಮೀಸಲಿಡಲಾಗುತ್ತದೆ. ಈ ಹಣವನ್ನು ಸಮುದಾಯಕ್ಕೆ ಬಳಸಿದ್ಜರೆ ಸಮುದಾಯದ ಪ್ರತಿ ಕುಟುಂಬ ಇಷ್ಟು ಹೊತ್ತಿಗೆ ಅಭಿವೃದ್ಧಿ ಹೊಂದಬೇಕಿತ್ತು. ಸಮುದಾಯದ ಯುವಜನರು ಉದ್ಯಮಿಗಳು ಆಗಬೇಕಿತ್ತು.” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಯೋಜನೆಯ ಕೇವಲ 8% ಅಷ್ಟೇ ಸಮುದಾಯಕ್ಕೆ ಸಿಕ್ಕಿದೆ. ಉಳಿದವುಗಳು ರಸ್ತೆ, ಸೇತುವೆ, ಅಣೆಕಟ್ಟು ಸೇರಿದಂತೆ ಇತರ ಕಾರ್ಯಗಳಿಗೆ ಸರ್ಕಾರ ಬಳಸುತ್ತಿದೆ” ಎಂದು ಈ ಹಣವನ್ನು ಆರ್ಥಿಕ ಮತ್ತು ಶೈಕ್ಷಣಿಕ ಕಾರಣಗಳಿಗಾಗಿ ಖರ್ಚು ಮಾಡಬೇಕು ಎಂದು ಕಾನೂನು ಹೇಳುತ್ತದೆ.‌ ಹೆಚ್ಚಿನ ಅನುದಾನವನ್ನು ಸಾಮಾನ್ಯ ಯೋಜನೆಗೆ ಸರ್ಕಾರ ಬಳಸುತ್ತಿದೆ. ಇದು ಅನ್ಯಾಯ” ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ಚಿಂತಕ ಶಿವಸುಂದರ್ ಮಾತನಾಡಿ, ಬೇರೆ ಸಮುದಾಯದ ಬಡತನಕ್ಕೂ ಎಸ್ಸಿ ಎಸ್ಟಿ ಸಮುದಾಯದ ಬಡತನಕ್ಕೂ ಅಂತರವಿದೆ. ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರೆಂಟಿ ಯೋಜನೆಗಾಗಿ ಹಣ ಉಪಯೋಗ ಮಾಡುತ್ತೇವೆ ಎಂದು ಸಮರ್ಥನೆ ಮಾಡುವುದು ಈ ನಿಧಿಯ ಉದ್ದೇಶದ ಬಗ್ಗೆ ಏನೂ ತಿಳಿಯದವರು ಮಾತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವು ಎಸ್ಸಿ/ಎಸ್ಟಿ ಸಮುದಾಯಕ್ಕೆ ನೀಡುತ್ತಿರುವ ದಾನವಲ್ಲ. ಅದು ಅವರ ಹಕ್ಕು. ಗ್ಯಾರಂಟಿ ಯೋಜನೆಯನ್ನು ನಿಲ್ಲಿಸದೆ ಈ ಹಣವನ್ನು ಸಮುದಾಯಕ್ಕೆ ನೀಡಬೇಕು. ಸರ್ಕಾರದ ಬಳಿ ದುಡ್ಡು ಇಲ್ಲ ಎಂದರೆ ಶ್ರೀಮಂತರಿಗೆ ತೆರಿಗೆ ಹಾಕಿ ಹಣ ಸಂಗ್ರಹಿಸಬೇಕು. ಅದು ಬಿಟ್ಟು ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಬಳಸುವುದು ಸರಿಯಲ್ಲ. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯ 7ಸಿಯನ್ನು ಕೂಡಾ ಕಿತ್ತೊಗೆಯಬೇಕಿದೆ” ಎಂದು ಅವರು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಮ್ಮನ್ನು ಹಿಂದೂ ಧರ್ಮಕ್ಕೆ ಮತಾಂತರವಾಗಲು ತೀವ್ರ ಒತ್ತಡ ಹಾಕಲಾಗುತ್ತಿದೆ: ಮುಸ್ಲಿಮ್ ಸಮುದಾಯ ಆರೋಪ

ನಮ್ಮನ್ನು ಹಿಂದೂ ಧರ್ಮಕ್ಕೆ ಮತಾಂತರವಾಗಲು ತೀವ್ರ ಒತ್ತಡ ಹಾಕಲಾಗುತ್ತಿದೆ: ಮುಸ್ಲಿಮ್ ಸಮುದಾಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...