Homeಕರ್ನಾಟಕಎಸ್‌ಸಿಎಸ್‌ಪಿ/ಟಿಎಸ್‌ಪಿ| ರೂ. 38,717 ಕೋಟಿ ವೆಚ್ಚ, ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ

ಎಸ್‌ಸಿಎಸ್‌ಪಿ/ಟಿಎಸ್‌ಪಿ| ರೂ. 38,717 ಕೋಟಿ ವೆಚ್ಚ, ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಳೆದ ವರ್ಷ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ 38,793 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, 38,717 ಕೋಟಿ ರೂಪಾಯಿ ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಸಭಾಂಗಣದಲ್ಲಿ ಶನಿವಾರ (ಆ.16) ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಸಿಎಂ ಈ ವಿಷಯ ತಿಳಿಸಿದರು.

ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ 880 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ, ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ. ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಕಾಯ್ದೆ ಪ್ರಕಾರ ಪ್ರತಿವರ್ಷ ಕನಿಷ್ಠ ಶೇ.24.1 ರಷ್ಟು ಅನುದಾನ ನೀಡಬೇಕಾಗಿದೆ. ಆದರೆ, 2019-20ರ ಅವಧಿಯಲ್ಲಿ ನಿಗದಿತ ಶೇಕಡಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಯ್ದೆ ಜಾರಿ ಬಳಿಕ ಒಟ್ಟು ರೂ.2.97 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.

ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ವಿನಿಯೋಗ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಜೀವನ ಮಟ್ಟ ಮತ್ತು ವಾಸಸ್ಥಳಗಳ ಅಭಿವೃದ್ಧಿಪಡಿಸುವುದು ಕಾಯ್ದೆಯ ಉದ್ದೇಶ. ಯಾವುದೇ ಕಾರಣಕ್ಕೂ ಕಾಯ್ದೆಯ ಆಶಯಕ್ಕೆ ಭಂಗ ಬರಬಾರದು. ಆಯಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಅನುಷ್ಠಾನ ಇಲಾಖೆಗೆ ಬದ್ಧತೆ ಬೇಕು. ಕಳೆದ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ ಎಂದರು.

ವಿವಿಧ ಕಲ್ಯಾಣ ಯೋಜನೆಗಳಡಿ ಬ್ಯಾಂಕ್‌ಗಳು ಸಕಾಲದಲ್ಲಿ ಹಣಕಾಸು ನೆರವು ಒದಗಿಸುವುದನ್ನು ಖಾತ್ರಿಪಡಿಸಬೇಕು. ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನಸಂಖ್ಯೆಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಈ ವರ್ಷ ರೂ. 42017.51 ಕೋಟಿ ಹಂಚಿಕೆ ಮಾಡಿದ್ದೇವೆ. ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ಅದಷ್ಟು ಬೇಗನೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಬಾಕಿಯುಳಿಯಬಾರದು. ಶೇ.100ರಷ್ಟು ಪ್ರಗತಿ ಸಾಧಿಸಲೇ ಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಕಾರ್ಯ ಆಗಬೇಕು ಎಂದು ಹೇಳಿದರು.

ದೇವದಾಸಿ ಪುನರ್‌ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಸೆಪ್ಟಂಬರ್‌ ಮೊದಲ ವಾರದಿಂದ ಪುನರ್‌ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವದಾಸಿ ಪದ್ಧತಿಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ದೇವದಾಸಿ ಪದ್ಧತಿ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದೇವದಾಸಿ ಪದ್ಧತಿಯನ್ನು ತೊಡೆದು ಹಾಕಲು ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ನಾವೆಲ್ಲರೂ ತಲೆತಗ್ಗಿಸಬೇಕಾಗಿದೆ ಎಂದರು.

ದೇವದಾಸಿಯರೂ ಸೇರಿದಂತೆ, ಸಫಾಯಿ ಕರ್ಮಚಾರಿಗಳು ಮುಂತಾದ ಸಮಾಜದಿಂದ ನಿರ್ಲಕ್ಷಿತ ವರ್ಗಗಳ ಜೀವನಮಟ್ಟ ಸುಧಾರಣೆಗೆ ಸರಿಯಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಾರ್ಯಕ್ರಮಗಳು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರದೇ ಹೋದರೆ ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಯೋಜನೆಗಳಿಗೆ ರೂಪಾಯಿ 2.97 ಲಕ್ಷ ಕೋಟಿಯಷ್ಟು ಹಣ ಈವರೆಗೆ ಖರ್ಚು ಮಾಡಲಾಗಿದೆ. ಇಷ್ಟೆಲ್ಲಾ ಖರ್ಚು ಮಾಡಿಯೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜೀವನಮಟ್ಟ ಸುಧಾರಣೆ ಆಗದಿದ್ದರೆ ನಾಚಿಕೆಗೇಡು ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಸಾಲಿನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ವಸತಿ ಯೋಜನೆಗಳಿಗೆ ರೂ.1086 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಬ್ಬ ಅರ್ಹ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ ಸುಧಾಕರ್,‌ ಸತೀಶ್‌ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಆರ್‌ಎಸ್‌ಎಸ್‌ ಹೊಗಳಿರುವುದು ಸಂವಿಧಾನದ ಆಶಯಗಳಿಗೆ ಮಾಡಿರುವ ಅವಮಾನ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...